Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕನಿಷ್ಠ ವೇತನವಿಲ್ಲದೆ ಸಾರ್ವಜನಿಕ...

ಕನಿಷ್ಠ ವೇತನವಿಲ್ಲದೆ ಸಾರ್ವಜನಿಕ ಗ್ರಂಥಾಲಯಗಳ ಶುಚಿಗಾರರ ಪರದಾಟ: ಆರೋಪ

ವಾರ್ತಾಭಾರತಿವಾರ್ತಾಭಾರತಿ12 Sept 2020 10:42 PM IST
share
ಕನಿಷ್ಠ ವೇತನವಿಲ್ಲದೆ ಸಾರ್ವಜನಿಕ ಗ್ರಂಥಾಲಯಗಳ ಶುಚಿಗಾರರ ಪರದಾಟ: ಆರೋಪ

ಬೆಂಗಳೂರು, ಸೆ.12: ರಾಜಧಾನಿಯಲ್ಲಿರುವ ಸಾರ್ವಜನಿಕ ಗ್ರಂಥಾಲಯಗಳಲ್ಲಿ ಕೆಲಸ ಮಾಡುತ್ತಿರುವ ಶುಚಿಗಾರರು ಹತ್ತಾರು ವರ್ಷಗಳಿಂದ ಕನಿಷ್ಠ ವೇತನವಿಲ್ಲದೆ ಪರದಾಡುವಂತಾಗಿದೆ. ಆದರೂ, ಸರಕಾರ ಇವರ ಕಡೆ ಕಣ್ಣೆತ್ತಿ ನೋಡುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ.

ನೂರಾರು ಶುಚಿಗಾರರು ಕನಿಷ್ಠ ವೇತನದ ಕನಸು ಕಾಣುತ್ತಲೇ ನಿವೃತ್ತಿಯಾಗಿದ್ದು, ಮತ್ತಷ್ಟು ಜನರು ನಿವೃತ್ತಿಯಾಗುವ ಅಂತಿಮ ಘಟ್ಟದಲ್ಲಿದ್ದಾರೆ. ಆದರೆ, ಇವರ ಬಗ್ಗೆ ಯಾರೊಬ್ಬರೂ ಧ್ವನಿ ಎತ್ತುವವರಿಲ್ಲ.

ನಗರದಲ್ಲಿರುವ ಐದು ವಲಯಗಳಲ್ಲಿನ ಗ್ರಂಥಾಲಯಗಳಲ್ಲಿ 350 ಕ್ಕೂ ಅಧಿಕ ಶುಚಿಗಾರರಿದ್ದಾರೆ. ಗ್ರಂಥಾಲಯ ಆರಂಭವಾದಾಗಿಂದ ಇಂದಿನವರೆಗೂ 250 ರಿಂದ 6500 ವರೆಗೆ ಸಂಬಳ ಪಡೆಯುತ್ತಿದ್ದಾರೆ. ಕೈ ಬರಹದಲ್ಲಿರುವ ಒಪ್ಪಂದ ಪತ್ರವನ್ನು ಹೊರತುಪಡಿಸಿದರೆ ಇವರ ಬಳಿ ಅಲ್ಲಿ ಕೆಲಸ ಮಾಡುತ್ತಿರುವುದಕ್ಕೆ ಬೇರೆ ಯಾವುದೇ ದಾಖಲಾತಿಗಳೂ ಇಲ್ಲ. ಗೌರವಧನವನ್ನು ನಗದು ರೂಪದಲ್ಲಿ ನೀಡಲಾಗುತ್ತಿದ್ದು, ಅದು ಕೂಡ ತಿಂಗಳ ಮೊದಲ ವಾರದಲ್ಲಿ ಕೈಸೇರುತ್ತಿಲ್ಲ ಎಂದು ಶುಚಿಗಾರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಾರ್ಮಿಕ ಇಲಾಖೆ ಹಾಗೂ ಸರಕಾರಕ್ಕೆ ಹಲವು ಭಾರಿ ಶುಚಿಗಾರರಿಗೆ ಕನಿಷ್ಠ ವೇತನ ನೀಡಿ ಹಾಗೂ ಉದ್ಯೋಗ ಭದ್ರತೆ ಕಲ್ಪಿಸಬೇಕು ಎಂದು ಮನವಿ ಮಾಡಲಾಗಿದ್ದರೂ, ಅದು ಯಾವುದೇ ಪ್ರಯೋಜನವಾಗಿಲ್ಲ. ಗ್ರಂಥಾಲಯಗಳನ್ನು ಸ್ವಚ್ಛಪಡಿಸುವ ಜತೆಗೆ ಪುಸ್ತಕಗಳನ್ನು ಜೋಡಿಸುವುದು, ಸಂಖ್ಯೆ ದಾಖಲಿಸುವುದು, ಮುದ್ರೆ ಹಾಕುವುದು, ಪುಸ್ತಕಗಳ ವಿತರಣೆ ಸೇರಿದಂತೆ ಹಲವು ಕೆಲಸಗಳನ್ನು ಅವರು ಮಾಡುತ್ತಿದ್ದಾರೆ.

''20 ವರ್ಷಗಳಿಂದ ಗ್ರಂಥಾಲಯದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಒಪ್ಪಂದದ ಪ್ರಕಾರ ಎರಡು ಗಂಟೆ ಕೆಲಸ ಮಾಡಬೇಕಾದರೂ 8 ಗಂಟೆಗಳು ದುಡಿಸಿಕೊಳ್ಳಲಾಗುತ್ತಿದೆ. ಬೆಳಗ್ಗೆಯಿಂದ ಸಂಜೆಯವರೆಗೆ ವಿವಿಧ ಕೆಲಸಗಳನ್ನು ನಿರ್ವಹಿಸಬೇಕಾಗಿದೆ. ಯಾವುದೇ ಸೌಲಭ್ಯಗಳನ್ನು ನಮಗೆ ನೀಡುತ್ತಿಲ್ಲ. ನಮ್ಮ ಕೆಲಸವನ್ನು ಗುರುತಿಸಿ, ಕನಿಷ್ಠ ವೇತನವನ್ನು ನೀಗದಿಪಡಿಸಬಹುದು ಎಂಬ ಭರವಸೆಯಲ್ಲಿದ್ದೆವು. ಆದರೆ, ನಮ್ಮ ಸಮಸ್ಯೆಗಳಿಗೆ ಸ್ಪಂದನೆ ದೊರೆಯಲಿಲ್ಲ'' ಎಂದು ಶುಚಿಗಾರರೊಬ್ಬರು ಹೇಳಿದ್ದಾರೆ.

ಜೀವನ ನಿರ್ವಹಣೆ ಕಷ್ಟ

‘1994ರಿಂದ ಇದೇ ಕೆಲಸ ಮಾಡುತ್ತಿದ್ದೇನೆ. ಆರಂಭದಲ್ಲಿ ತಿಂಗಳಿಗೆ 300 ಗೌರವಧನ ನೀಡಲಾಗುತ್ತಿತ್ತು. ಈಗ 6,500 ಗೌರವಧನ ಸಿಗುತ್ತಿದೆ. ನಮ್ಮ ಬಗ್ಗೆ ಯಾರೂ ಅನುಕಂಪ ತೋರಿಸುತ್ತಿಲ್ಲ. ಜೀವನ ನಿರ್ವಹಣೆಯೂ ಕಷ್ಟವಾಗಿದೆ ಎಂದು ಶುಚಿಗಾರರಾಗಿರುವ ಮಹಿಳೆಯೊಬ್ಬರು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

ಗ್ರಂಥಾಲಯಗಳಲ್ಲಿ ದುಡಿಯುವ ಶುಚಿಗಾರರಿಗೆ ಕನಿಷ್ಠ ವೇತನವಿಲ್ಲದಿರುವುದು ಗಮನಕ್ಕೆ ಬಂದಿದೆ. ಈ ಸಂಬಂಧ ಗ್ರಂಥಾಲಯ ಇಲಾಖೆಯಿಂದ ಶೀಘ್ರದಲ್ಲಿಯೇ ಸರಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸುತ್ತೇವೆ.

–ಡಾ. ಸತೀಶ ಕುಮಾರ್ ಎಸ್. ಹೊಸಮನಿ, ಸಾರ್ವಜನಿಕ ಗ್ರಂಥಾಲಯ ಇಲಾಖೆ ನಿರ್ದೇಶಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X