ಬಂಡೀಪುರ: ಅಭಯಾರಣ್ಯದಲ್ಲಿ ಟ್ರ್ಯಾಕ್ಟರ್ ಮಗುಚಿ ನೌಕರ ಸಾವು
ಗುಂಡ್ಲುಪೇಟೆ,ಸೆ12: ಬಂಡೀಪುರ ಅಭಯಾರಣ್ಯದಲ್ಲಿ ಟ್ರ್ಯಾಕ್ಟರ್ ಮಗುಚಿ ದಿನಗೂಲಿ ನೌಕರನೊಬ್ಬ ಸಾವಿಗೀಡಾಗಿರುವ ಘಟನೆ ನಡೆದಿದೆ.
ಬಂಡೀಪುರದಲ್ಲಿ ದಿನಗೂಲಿ ನೌಕರನಾಗಿ ಕಾರ್ಯನಿರ್ವಹಿಸುತ್ತಿದ್ದ ಪಳನಿ(52) ಸಾವಿಗೀಡಾದ ವ್ಯಕ್ತಿ.
ಬಂಡೀಪುರದಿಂದ ಪಳನಿ ತನ್ನ ಬೀಟಿಗೆ ಹೋಗುತ್ತಿದ್ದಾಗ ಒಳಕಲ್ಲಾರೆ ಕಳ್ಳಬೇಟೆ ನಿಗ್ರಹ ಶಿಬಿರಕ್ಕೆ ನೀರು ಕೊಂಡೊಯ್ಯುತ್ತಿದ್ದ ಟ್ರ್ಯಾಕ್ಟರ್ ಏರಿದ್ದಾರೆ. ಕೆಕ್ಕನಹಳ್ಳ ಸಮೀಪ ಸಾಗುತ್ತಿದ್ದಾಗ ಟ್ರ್ಯಾಕ್ಟರ್ ಮಗುಚಿಬಿದ್ದಿದೆ. ಪರಿಣಾಮ ಪಳನಿ ತೀವ್ರ ಗಾಯಗೊಂಡಿದ್ದಾರೆ. ಕೂಡಲೇ ಗುಂಡ್ಲುಪೇಟೆ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗದಲ್ಲಿ ಸಾವಿಗೀಡಾಗಿದ್ದಾರೆ.
ಚಾಲಕ ಸೇರಿ ಇತರ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಚಿಕಿತ್ಸೆ ಕೊಡಿಸಲಾಗಿದೆ ಎಂದು ತಿಳಿದು ಬಂದಿದೆ.
Next Story