Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಶಾಂತಿಯುತ ಪ್ರತಿಭಟನಕಾರರ ಅಪರಾಧೀಕರಣ:...

ಶಾಂತಿಯುತ ಪ್ರತಿಭಟನಕಾರರ ಅಪರಾಧೀಕರಣ: ದಿಲ್ಲಿ ಪೊಲೀಸರ ಪೂರಕ ಆರೋಪ ಪಟ್ಟಿ ಕುರಿತು ಸಿಪಿಎಂ

ವಾರ್ತಾಭಾರತಿವಾರ್ತಾಭಾರತಿ13 Sept 2020 11:29 PM IST
share
ಶಾಂತಿಯುತ ಪ್ರತಿಭಟನಕಾರರ ಅಪರಾಧೀಕರಣ: ದಿಲ್ಲಿ ಪೊಲೀಸರ ಪೂರಕ ಆರೋಪ ಪಟ್ಟಿ ಕುರಿತು ಸಿಪಿಎಂ

 ಹೊಸದಿಲ್ಲಿ, ಸೆ. 13: ಫೆಬ್ರವರಿಯಲ್ಲಿ ದಿಲ್ಲಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ದಿಲ್ಲಿ ಪೊಲೀಸರು ಸಲ್ಲಿಸಿದ ಪೂರಕ ಆರೋಪ ಪಟ್ಟಿಯಲ್ಲಿ ಸೀತಾರಾಮ ಯೆಚೂರಿ ಹಾಗೂ ನಾಗರಿಕ ಹಕ್ಕು ಹೋರಾಟ ಸಂಘಟನೆಗಳ ಕೆಲವು ಸದಸ್ಯರನ್ನು ಉಲ್ಲೇಖಿಸಿರುವುದರ ಕುರಿತು ಸಿಪಿಎಂ ರವಿವಾರ ಕೇಂದ್ರ ಸರಕಾರವನ್ನು ತರಾಟೆಗೆ ತೆಗೆದುಕೊಂಡಿದೆ.

ರಾಜಕೀಯ ನಾಯಕರ ಸಲಹೆಯಂತೆ ದಿಲ್ಲಿ ಪೊಲೀಸರು ಪ್ರಕರಣವನ್ನು ನಿರೂಪಿಸುತ್ತಿರುವುದು ಅಸಹ್ಯಕರ ನಡೆ ಎಂದು ಸಿಪಿಎಂ ಹೇಳಿದೆ. ಅಲ್ಲದೆ, ಶಾಂತಿಯುತ ರಾಜಕೀಯ ಪ್ರತಿಭಟನೆಯನ್ನು ಅಪರಾಧೀಕರಣಗೊಳಿಸುವ ಇಂತಹ ಕ್ರಮಗಳಿಂದ ದೂರವಿರಿ ಎಂದು ಸರಕಾರವನ್ನು ಸಿಪಿಐ ಪಾಲಿಟ್ ಬ್ಯೂರೊ ರವಿವಾರ ತನ್ನ ಹೇಳಿಕೆಯಲ್ಲಿ ಆಗ್ರಹಿಸಿದೆ.

ಫೆಬ್ರವರಿಯಲ್ಲಿ ನಡೆದ ದಿಲ್ಲಿ ಗಲಭೆ ಪ್ರಕರಣದ ಪೂರಕ ಆರೋಪ ಪಟ್ಟಿಯಲ್ಲಿ ಸಿಪಿಎಂನ ಪ್ರಧಾನ ಕಾರ್ಯದರ್ಶಿ ಸೀತಾರಾಮ ಯೆಚೂರಿ, ಸ್ವರಾಜ್ ಅಭಿಯಾನದ ನಾಯಕ ಯೋಗೇಂದ್ರ ಯಾದವ್, ಆರ್ಥಿಕ ತಜ್ಞೆ ಜಯತಿ ಘೋಷ್ ಹಾಗೂ ದಿಲ್ಲಿ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ ಅಪೂರ್ವಾನಂದ ಅವರ ಹೆಸರನ್ನು ಉಲ್ಲೇಖಿಸಿರುವುದು ವರದಿಯಾದ ಒಂದು ದಿನದ ಬಳಿಕ ಸಿಪಿಎಂ ಈ ಪ್ರತಿಕ್ರಿಯೆ ನೀಡಿದೆ.

ಈಶಾನ್ಯ ದಿಲ್ಲಿಯಲ್ಲಿ ನಡೆದ ಬರ್ಬರ ಕೋಮು ಹಿಂಸಾಚಾರ ಪ್ರಕರಣದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನಿರ್ದೇಶನದಂತೆ ರಾಜಕೀಯ ನಾಯಕರು, ಶಿಕ್ಷಣ ತಜ್ಞರು, ಸಾಂಸ್ಕೃತಿಕ ಗಣ್ಯರು ಹಾಗೂ ಸಾಮಾಜಿಕ ಹೋರಾಟಗಾರರನ್ನು ಸಿಲುಕಿಸುವ ದಿಲ್ಲಿ ಪೊಲೀಸರ ಲಜ್ಜೆಗೇಡಿತನ ತಮಗೆ ಆಘಾತ ಉಂಟು ಮಾಡಿದೆ ಎಂದು ಹೇಳಿಕೆ ತಿಳಿಸಿದೆ.

 ದಿಲ್ಲಿ ಗಲಭೆ ಪೌರತ್ವ ತಿದ್ದುಪಡಿ ವಿರೋಧಿ ಪ್ರತಿಭಟನಕಾರರ ನಿಗೂಢ ಸಂಚು ಎಂದು ನಿರೂಪಿಸಲು ಬಿಜೆಪಿ ಹಾಗೂ ಆರ್‌ಎಸ್‌ಎಸ್ ಪ್ರಯತ್ನ ನಡೆಸುತ್ತಿರುವುದು ಸ್ಪಷ್ಟ ಎಂದು ಅದು ಆರೋಪಿಸಿದೆ.

  ಪ್ರಮುಖ ವಿರೋಧಿಗಳ ವಿರುದ್ಧ ಆರೋಪ ರೂಪಿಸಲು ಹಾಗೂ ಅವರನ್ನು ರಾಕ್ಷಸರರನ್ನಾಗಿಸಲು ಪೊಲೀಸರು ಹಾಗೂ ಸಿಬಿಐ, ಎನ್‌ಐಎ, ಇಡಿಯಂತಹ ಕೇಂದ್ರದ ಏಜೆನ್ಸಿಗಳನ್ನು ಬಳಸಿಕೊಳ್ಳುವ ಅತ್ಯಂತ ನಿರ್ದಯ ಕಿರುಕುಳದ ರೀತಿಯಲ್ಲೇ ಇದು ಕೂಡ ಕಂಡು ಬರುತ್ತಿದೆ ಎಂದು ಅದು ಹೇಳಿದೆ.

ಹುಸಿ ಆರೋಪಗಳ ಅಡಿಯ ಪ್ರಕರಣಗಳಲ್ಲಿ ಕಾರಾಗೃಹ ವಾಸ ಅನುಭವಿಸುತ್ತಿರುವ ರಾಜಕೀಯ ಕೈದಿಗಳನ್ನು ಭೇಷರತ್ತಾಗಿ ಬಿಡುಗಡೆ ಮಾಡುವಂತೆ ಸಿಪಿಎಂ ಆಗ್ರಹಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X