Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಒಳ ಮೀಸಲಾತಿ ಮೂಲಕ ದಲಿತ ಸಮುದಾಯವನ್ನು...

ಒಳ ಮೀಸಲಾತಿ ಮೂಲಕ ದಲಿತ ಸಮುದಾಯವನ್ನು ಒಡೆಯುವ ಯತ್ನ: ದಲಿತ ಮುಖಂಡ ಪುರುಷೋತ್ತಮ್

ವಾರ್ತಾಭಾರತಿವಾರ್ತಾಭಾರತಿ14 Sept 2020 5:34 PM IST
share
ಒಳ ಮೀಸಲಾತಿ ಮೂಲಕ ದಲಿತ ಸಮುದಾಯವನ್ನು ಒಡೆಯುವ ಯತ್ನ: ದಲಿತ ಮುಖಂಡ ಪುರುಷೋತ್ತಮ್

ಮೈಸೂರು,ಸೆ.14: ಒಳಮೀಸಲಾತಿಯ ಗುಮ್ಮವನ್ನು ಹರಿ ಬಿಟ್ಟು ರಾಜಕೀಯ ಪಕ್ಷಗಳು ದಲಿತ ಸಮುದಾಯವನ್ನು ಒಡೆಯಲು ಯತ್ನಿಸುತ್ತಿವೆ ಎಂದು ಮಾಜಿ ಮಹಾಪೌರ ಹಾಗೂ ರಾಜ್ಯ ಅದಿಕರ್ನಾಟಕ ಮಹಾಸಭಾದ ದಲಿತ ಮುಖಂಡ ಪುರುಷೋತ್ತಮ್ ಆಕ್ರೋಶ ವ್ಯಕ್ತಪಡಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಸೋಮವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಮೀಸಲಾತಿ ನಮ್ಮ ಹಕ್ಕು. ದಲಿತ ಸಮುದಾಯದ ಎಡ ಬಲ ಒಂದೇ ತಾಯಿ ಮಕ್ಕಳು ಇದ್ದ ಹಾಗೆ. ಆದರೆ ರಾಜಕೀಯ ಪಕ್ಷಗಳು ಮತ ಬ್ಯಾಂಕ್‍ಗಾಗಿ ಒಳಮೀಸಲಾತಿ ಹೆಸರಿನಲ್ಲಿ ಬೇರ್ಪಡಿಸಲು ಸಂಚು ನಡೆಸುತ್ತಿವೆ ಎಂದು ಹೇಳಿದರು.

ಸದಾಶಿವ ಆಯೋಗದ ವರದಿ ಜಾರಿಗೂ ಮುನ್ನ ಅದು ಸಾರ್ವಜನಿಕ ಚರ್ಚೆಯಾಗಬೇಕು. ನಂತರ ಇದರ ಸಾಧಕ ಭಾದಕಗಳನ್ನು ಚರ್ಚಿಸಿ ಅಂತಿಮ ತಿರ್ಮಾನ ಕೈಗೊಳ್ಳಬೇಕು. ಆದರೆ ಬಿಜೆಪಿ ಸರ್ಕಾರ ತರಾತುರಿಯಲ್ಲಿ ಸದಾಶಿವ ಆಯೋಗದ ವರಿ ಜಾರಿ ಮಾಡಲು ನಿಂತಿದೆ ಎಂದು ಕಿಡಿಕಾರಿದರು. 

ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿ ಕುರಿತು ಹಾಗೂ ಒಳ ಮೀಸಲಾತಿ ಜಾರಿ ಕುರಿತು ಮೈಸೂರಿನ ಉರಿಲಿಂಗ ಪೆದ್ದಿ ಮಠದಲ್ಲಿ ರಾಜ್ಯ ಆದಿಕರ್ನಾಟಕ ಮಹಾಸಭಾ ಪದಾಧಿಕಾರಿಗಳು, ರಾಜ್ಯದ ಹಿರಿಯ ಮುಖಂಡರು, ಸಾಹಿತಿಗಳು, ಚಿಂತಕರು, ವಿದ್ಯಾರ್ಥಿ ಮುಖಂಡರು ಸಭೆ ಸೇರಿ ಭಂತೆ ಬೋದಿದತ್ತ ಹಾಗೂ ಜ್ಞಾನಪ್ರಕಾಶ ಸ್ವಾಮಿಗಳ ಸಮ್ಮುಖದಲ್ಲಿ ಕೆಲವು ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.

ನಿರ್ಣಯಗಳು: ಸದಾಶಿವ ಆಯೋಗದ ವರದಿಯನ್ನು ಮೊದಲು ಅಧಿಕೃತವಾಗಿ ಸರ್ಕಾರಿ ದಾಖಲೆಯನ್ನಾಗಿ ಮಾಡಬೇಕು. ಸದಾಶಿವ ಆಯೋಗದ ವರದಿಯನ್ನು ಜಾರಿಗೆ ತರಲು ಹಾಗೂ ಸಾರ್ವಜನಿಕ ಚರ್ಚೆಗೆ ತಂದು ಜನಾಭಿಪ್ರಾಯವನ್ನು ಮೂಡಿಸಬೇಕು. ಪ್ರಸಕ್ತ ಜನಸಂಖ್ಯೆ ಹಾಗೂ ಉದ್ಯೋಗ ವಿದ್ಯಾರ್ಹತೆ ಅನ್ವಯ ಸೌಲಭ್ಯಗಳ ಅಂಕಿ ಅಂಶಗಳನ್ನು ವರದಿಯಲ್ಲಿ ಸೇರಿಸುವ ಬಗ್ಗೆ ಹಾಗೂ ಜಾತಿ ಜನ ಸಂಖ್ಯೆವಾರು ಮೀಸಲಾತಿಯನ್ನು ನೀಡಬೇಕು. ಜನಸಂಖ್ಯೆಗೆ ಅನುಗುಣವಾಗಿ ಹಾಗೂ ಸಾರ್ವಜನಿಕ ಚರ್ಚೆಯಾದ ಒಳಮೀಸಲಾತಿಗೆ ಸಚಿವ ಸಂಪುಟ ಅನುಮೋದನೆ ನೀಡಬೇಕು ಎಂದು ಒತ್ತಾಯಿಸಲಾಯಿತು.

ಒಳಮೀಸಲಾತಿ ಸಂವಿಧಾನಬದ್ಧವಾಗಿದೆಯೇ ಎಂದು ಕಾನೂನು ತಜ್ಞರ ಅಭಿಪ್ರಾಯ ಹಾಗೂ ವಿಚಾರ ಸಂಕಿರಣ ಏರ್ಪಡಿಸಿ, ನಂತರ ಜಾರಿಗೊಳಿಸಲು ಸರ್ಕಾರ ನಿರ್ಧಾರ ಮಾಡಬೇಕು ಎಂದು ನಿರ್ಣಯ ಕೈಗೊಳ್ಳಲಾಯಿತು ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಎಪಿಎಂಸಿ ಮಾಜಿ ಉಪಾಧ್ಯಕ್ಷ ಜವರಪ್ಪ, ಸಂಶೋಧಕರ ಸಂಘದ ಅಧ್ಯಕ್ಷ ಮರಿದೇವಯ್ಯ, ಸಂಚಾಲಕ ಸೋಮಯ್ಯ ಮಲೆಯೂರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X