Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೇಂದ್ರದ ಅನುಮತಿ ಬಳಿಕ ಮೇಕೆದಾಟು...

ಕೇಂದ್ರದ ಅನುಮತಿ ಬಳಿಕ ಮೇಕೆದಾಟು ಅಣೆಕಟ್ಟು ನಿರ್ಮಾಣ: ರಮೇಶ್ ಜಾರಕಿಹೊಳಿ

ವಾರ್ತಾಭಾರತಿವಾರ್ತಾಭಾರತಿ14 Sept 2020 6:39 PM IST
share
ಕೇಂದ್ರದ ಅನುಮತಿ ಬಳಿಕ ಮೇಕೆದಾಟು ಅಣೆಕಟ್ಟು ನಿರ್ಮಾಣ: ರಮೇಶ್ ಜಾರಕಿಹೊಳಿ

ರಾಮನಗರ, ಸೆ.14: ಪ್ರಸ್ತಾಪಿತ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕಾಗಿ ಕೇಂದ್ರ ಸರಕಾರಕ್ಕೆ ಸಲ್ಲಿಸಿರುವ 9 ಸಾವಿರ ಕೋಟಿ ರೂ.ಗಳ ವೆಚ್ಚದ ವಿಸ್ತೃತ ಯೋಜನಾ ವರದಿಗೆ (ಡಿಪಿಆರ್) ಅನುಮೋದನೆ ಪಡೆದುಕೊಂಡ ಬಳಿಕ ನಿರ್ಮಾಣಕ್ಕೆ ಚಾಲನೆ ನೀಡಲಾಗುವುದು ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದರು.

ಯೋಜನೆಗೆ ಸಂಬಂಧಿಸಿದಂತೆ ಅರ್ಕಾವತಿ ಮತ್ತು ಕಾವೇರಿ ಸೇರುವ ಸಂಗಮ ಹಾಗೂ ಜಲಾಶಯ ನಿರ್ಮಿಸಲಾಗುವ ಉದ್ದೇಶಿತ ಒಂಟಿಗುಂಡ್ಲು ಪ್ರದೇಶಕ್ಕೆ ಸೋಮವಾರ ಭೇಟಿ ನೀಡಿ, ಸ್ಥಳ ಪರಿಶೀಲಿಸಿದ ಬಳಿಕ ಮಾತನಾಡಿದ ಅವರು, ಅಣೆಕಟ್ಟು ನಿರ್ಮಾಣವಾಗುವುದರಿಂದ ಸುಮಾರು 5051 ಹೆಕ್ಟೇರ್ ಅರಣ್ಯ ಭೂಮಿ ಮುಳುಗಡೆಯಾಗಲಿದೆ. ಹೀಗಾಗಿ, ಕೇಂದ್ರ ಪರಿಸರ ಮತ್ತು ಅರಣ್ಯ ಇಲಾಖೆಯ ಅನುಮೋದನೆ ಪಡೆದುಕೊಳ್ಳುವುದು ಅಗತ್ಯವಾಗಿದೆ ಎಂದರು.

ಪ್ರಸ್ತಾಪಿತ ಯೋಜನೆಗಾಗಿ ಒಟ್ಟಾರೆಯಾಗಿ 5252 ಹೆಕ್ಟೇರ್ ಪ್ರದೇಶದ ಅವಶ್ಯಕತೆ ಇದೆ. ಇದರಲ್ಲಿ 3181 ಹೆಕ್ಟೇರ್(ಶೇ. 63ರಷ್ಟು) ವನ್ಯಜೀವಿ ಪ್ರದೇಶವಾಗಿದೆ. 1870 ಹೆಕ್ಟೇರ್(ಶೇ. 37) ಮೀಸಲು ಅರಣ್ಯ ಪ್ರದೇಶವಾಗಿದ್ದರೆ 201 ಹೆಕ್ಟೇರ್ ಕಂದಾಯ ಪ್ರದೇಶವಾಗಿದೆ. ಈ ಪೈಕಿ ಶೇ. 63ರಷ್ಟು ಪ್ರದೇಶ ವನ್ಯಜೀವಿ ಪ್ರದೇಶವಾಗಿರುವುದರಿಂದ ಕೇಂದ್ರದ ಪರಿಸರ ಸಚಿವಾಲಯದಿಂದ ಅನುಮತಿ ಪಡೆದುಕೊಳ್ಳವುದು ಅಗತ್ಯವಾಗಿದೆ ಎಂದು ಅವರು ವಿವರಿಸಿದರು.

ಸಚಿವ ಸಂಪುಟದಲ್ಲಿ ಅನುಮತಿ: ಪ್ರಸ್ತಾಪಿತ ಜಲಾಶಯಕ್ಕಾಗಿ ಈಗಾಗಲೇ ಪರಿಷ್ಕೃತ ವಿಸ್ತ್ರತಯೋಜನಾ ವರದಿಯನ್ನು (ಡಿಟೈಲ್ಡ್ ಪ್ರಾಜೆಕ್ಟ್ ರಿಪೋರ್ಟ್-ಡಿಪಿಆರ್) ಸಿದ್ದಪಡಿಸಿ 2019ರ ಜನವರಿ ತಿಂಗಳಲ್ಲಿ ಕೇಂದ್ರಕ್ಕೆ ಸಲ್ಲಿಸಲಾಗಿತ್ತು. ಇದಕ್ಕೆ ಕೇಂದ್ರದ ಜಲ ಆಯೋಗದ ವಿವಿಧ ನಿರ್ದೇಶನಾಲಯಗಳಲ್ಲಿ ಪರಿಶೀಲನೆಯಲ್ಲಿದೆ. ಇವುಗಳಿಂದ ಅನುಮೋದನೆ ದೊರೆತ ತಕ್ಷಣವೆ ಡಿಪಿಆರ್ ಅನ್ನು ಸಚಿವ ಸಂಪುಟದ ಮುಂದಿರಿಸಿ, ಅನುಮೋದನೆ ಪಡೆದುಕೊಂಡ ಬಳಿಕ ಟೆಂಡರ್ ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು ಎಂದು ಅವರು ತಿಳಿಸಿದರು.

ಅಣೆಕಟ್ಟು ನಿರ್ಮಾಣಕ್ಕಾಗಿ ಈಗಾಗಲೆ 2019ರ ನವೆಂಬರ್ ಮತ್ತು ಕಳೆದ ಜುಲೈ 14ರಂದು ಕೇಂದ್ರದ ಜಲಶಕ್ತಿ ಸಚಿವರನ್ನು ಖುದ್ದು ಭೇಟಿಮಾಡಿ ಚರ್ಚಿಸಲಾಗಿದೆ. ಹಾಗೆಯೇ, ಕೇಂದ್ರ ಪರಿಸರ ಸಚಿವ ಪ್ರಕಾಶ್ ಜಾವೇಡ್ಕರ್ ಅವರನ್ನು ದಿಲ್ಲಿಯಲ್ಲಿ ಭೇಟಿ ಮಾಡಿದ್ದನ್ನು ಸ್ಮರಿಸಿದ ಅವರು, ಮುಂದಿನ ಬುಧವಾರ ಇಲ್ಲವೆ ಗುರುವಾರ (ಸೆ. 16/17) ಮತ್ತೊಮ್ಮೆ ಪರಿಸರ ಸಚಿವರನ್ನು ಭೇಟಿಮಾಡಿ ಯೋಜನೆಯ ಅಗತ್ಯತೆಯನ್ನು ಮನವರಿಕೆ ಮಾಡಿಕೊಟ್ಟು ಅನುಮೋದನೆ ಪಡೆದುಕೊಳ್ಳಲು ಪ್ರಯತ್ನಿಸಲಾಗುವುದು ಎಂದು ತಿಳಿಸಿದರು.

ಕೇಂದ್ರದ ಪರಿಸರ ಸಚಿವರಿಗೆ ಮನವರಿಕೆ ಮಾಡಿಕೊಡುವುದರ ಜೊತೆಗೆ, ಅಗತ್ಯ ಬಿದ್ದರೆ ಕೇಂದ್ರದ ಮೇಲೆ ಮತ್ತಷ್ಟು ಒತ್ತಡ ಹೇರಿ ಶೀಘ್ರ ಅನುಮೋದನೆಗಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಿಯೋಗವನ್ನು ದೆಹಲಿಗೆ ಕರೆದುಕೊಂಡು ಹೋಗುವ ಬಗ್ಗೆಯೂ ಚಿಂತನೆ ನಡೆಸಿರುವುದಾಗಿ ರಮೇಶ್ ಜಾರಕಿಹೊಳಿ ತಿಳಿಸಿದರು.

ಕುಡಿಯುವ ನೀರಿನ ಯೋಜನೆ: ವ್ಯರ್ಥವಾಗಿ ಹರಿದು ಹೋಗುತ್ತಿದ್ದ ಕಾವೇರಿ ನದಿ ನೀರನ್ನು ಸದ್ಭಳಕೆ ಮಾಡಿಕೊಳ್ಳುವ ಉದ್ದೇಶದಿಂದ ಇಲ್ಲಿ ಅಣೆಕಟ್ಟು ನಿರ್ಮಿಸುವ ಉದ್ದೇಶವನ್ನು ಹೊಂದಲಾಗಿದೆ. ಸಮಗ್ರ ಕುಡಿಯುವ ನೀರಿನ ಯೋಜನೆಗಾಗಿ ಅರ್ಕಾವತಿ ಮತ್ತು ಕಾವೇರಿ ನದಿಯ ಸಂಗಮದ ಸಮೀಪದಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ಸಮತೋಲನ ಜಲಾಶಯವನ್ನು ನಿರ್ಮಿಸಲಾಗುತ್ತಿದೆ. ಭವಿಷ್ಯದಲ್ಲಿ ಬೆಂಗಳೂರು ನಗರಕ್ಕೆ ಇಲ್ಲಿಂದ ಕುಡಿಯುವ ನೀರನ್ನು ಪೂರೈಸಲಾಗುವುದು ಎಂದು ಅವರು ಹೇಳಿದರು.

ತಮಿಳುನಾಡಿಗೂ ನೀರು: ಕಾವೇರಿ ನ್ಯಾಯಾಧೀಕರಣದ ಅಂತಿಮ ತೀರ್ಪು ಹಾಗೂ ಸುಪ್ರೀಂ ಕೋರ್ಟ್ ಆದೇಶದಂತೆ ತಮಿಳುನಾಡಿಗೆ ಸಾಮಾನ್ಯ ಮಳೆ ವರ್ಷದಲ್ಲಿ 177.25 ಟಿಎಂಸಿ ನೀರನ್ನು ಮಾಸಿಕವಾಗಿ ಹರಿಸಲಾಗುವುದು. ಅದೇ ರೀತಿ ಬೆಂಗಳೂರಿಗೆ ಹಂಚಿಕೆಯಾಗಿರುವ 4.75 ಟಿಎಂಸಿ ನೀರನ್ನು ಉಪಯೋಗಿಸಿಕೊಳ್ಳಲಾಗುವುದು ಎಂದು ರಮೇಶ್ ಜಾರಕಿಹೊಳಿ ಮಾಹಿತಿ ನೀಡಿದರು.

ಯೋಜನಾ ಸ್ಥಳ: ಮುಗ್ಗೂರು ಮತ್ತು ಹನೂರು ಅರಣ್ಯ ವಲಯದ ನಡುವಿನ ಒಂಟಿಗುಂಡ್ಲು ಬಳಿ ಪ್ರಸ್ತಾಪಿತ ಮೇಕೆದಾಟು ಅಣೆಕಟ್ಟನ್ನು ನಿರ್ಮಿಸಲು ಸ್ಥಳ ಗುರುತಿಸಲಾಗಿದೆ. ಸುಮಾರು 441.20 ಮೀಟರ್ ಎತ್ತರ ಹಾಗೂ ಸರಿಸುಮಾರು 674.5 ಮೀಟರ್ ನಷ್ಟು ಅಗಲವಿರುವ ಈ ಉದ್ದೇಶಿತ ಅಣೆಕಟ್ಟೆಯಲ್ಲಿ 67.16 ಟಿಎಂಸಿ ನೀರನ್ನು ಶೇಖರಿಸಿಟ್ಟುಕೊಳ್ಳುವ ಸಾಮರ್ಥ್ಯ ಹೊಂದಿರುತ್ತದೆ. 17 ಕ್ರಸ್ಟ್ ಗೇಟ್ ಹೊಂದಿರುವ ಜಲಾಶಯದಲ್ಲಿ 7.7  ಟಿಎಂಸಿಯಷ್ಟು ನೀರು ಡೆಡ್ ಸ್ಟೊರೇಜ್ ನಲ್ಲಿ ಸಂಗ್ರಹವಾಗಿರುತ್ತದೆ ಎಂದು ಅವರು ಹೇಳಿದರು.

ವಿದ್ಯುತ್‍ ಘಟಕ: ಒಂಟಿಗುಂಡ್ಲುವಿನಿಂದ  3.5. ಕಿ.ಮೀ ದೂರದಲ್ಲಿ ತಮಿಳುನಾಡಿಗೆ ಬಿಡುವ ನೀರಿನಿಂದ ಸುಮಾರು 400 ಮೆಗಾ ವಾಟ್ ವಿದ್ಯುತ್ ಉತ್ಪಾದಿಸುವ ಉದ್ದೇಶವಿದೆ. ಇಂಧನ ಇಲಾಖೆಯ ವತಿಯಿಂದ ಇಲ್ಲಿ ವಿದ್ಯುತ್ ಘಟಕವನ್ನು ಸ್ಥಾಪಿಸಲಾಗುವುದು ಎಂದು ಅವರು ಹೇಳಿದರು.

ನ್ಯಾಯಾಲಯದಲ್ಲಿ ಪ್ರಕರಣ: ಪ್ರಸ್ತಾಪಿತ ಮೇಕೆದಾಟುಯೋಜನೆಗೆ ಸಂಬಂಧಿಸಿದಂತೆ ಕರ್ನಾಟಕ ಸರಕಾರ ಕೇಂದ್ರ ಸರಕಾರ ನೀಡಿದ ಅನುಮತಿಯಂತೆ ಸಲ್ಲಿಸಿರುವ ವಿಸ್ತೃತ ಯೋಜನಾ ವರದಿಯನ್ನು ತಡೆಹಿಡಿಯುವಂತೆ ಕೋರಿ ತಮಿಳುನಾಡು ಸರಕಾರ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದೆ. ಇದಕ್ಕೆ ಕೇಂದ್ರ ಮತ್ತು ರಾಜ್ಯ ಸರಕಾರಗಳು ಪ್ರತ್ಯುತ್ತರ ಸಲ್ಲಿಸಿವೆ ಅವರು ತಿಳಿಸಿದರು.

ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್, ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಜಯಪ್ರಕಾಶ್, ಮುಖ್ಯ ಇಂಜಿನಿಯರ್ ಶಂಕರೇಗೌಡ, ಸೂಪರಿಟೆಂಡ್ ಇಂಜಿನಿಯರ್ ವಿಜಯ್‍ಕುಮಾರ್ ಮತ್ತು ಕಾರ್ಯನಿರ್ವಾಹಕ ಇಂಜಿನಿಯರ್ ವೆಂಕಟೇಗೌಡ ಸೇರಿದಂತೆ ಹಲವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X