Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬೆಳ್ತಂಗಡಿ: ವಿವಿಧ ಕಾಮಗಾರಿಗಳಿಗೆ...

ಬೆಳ್ತಂಗಡಿ: ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ

ವಾರ್ತಾಭಾರತಿವಾರ್ತಾಭಾರತಿ14 Sept 2020 6:51 PM IST
share
ಬೆಳ್ತಂಗಡಿ: ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ

ಬೆಳ್ತಂಗಡಿ: ಕ್ರೀಯಾಶೀಲತೆಯ, ಸದಾ ಚಟುವಟಿಕೆಯುಳ್ಳ, ಇಚ್ಛಾಶಕ್ತಿಯ ಶಾಸಕರು ಸಿಕ್ಕಿರುವುದರಿಂದ ಬೆಳ್ತಂಗಡಿ ಪರಿವರ್ತನೆಯ ಹಾದಿಯಲ್ಲಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ಪ್ರಶಂಸಿಸಿದ್ದಾರೆ. ಬೆಳ್ತಂಗಡಿಗೆ ಪ್ರಧಾನಮಂತ್ರಿ ಸಡಕ್ ಯೋಜನೆಯಲ್ಲಿ ಮಂಜೂರಾದ ವಿವಿದೆಡೆಯ ನಾಲ್ಕು ರಸ್ತೆಗಳಿಗೆ ರೂ. 52 ಕೋಟಿಯ 61 ಲಕ್ಷದ 36 ಸಾವಿರದ ಕಾಮಗಾರಿಗಳಿಗೆ ಸೋಮವಾರ ಉಜಿರೆಯಲ್ಲಿ ಚಾಲನೆ ನೀಡಿ‌ ಅವರು ಮಾತನಾಡಿದರು. 

"ದಿ. ಅಟಲ್ ಜಿ ಅವರ ಕನಸಾಗಿದ್ದ ಈ ಯೋಜನೆಗೆ 2009 ರಿಂದ 2014 ರವರೆಗೆ ಯುಪಿಎ ಸರಕಾರ ಒಂದು ರೂ.ಗಳನ್ನೂ ಕರ್ನಾಟಕಕ್ಕೆ ನೀಡಿಲ್ಲ. ಇದೀಗ ಮೋದಿ ಸರಕಾರ ಮತ್ತೆ ಸಡಕ್ ಯೋಜನೆಯನ್ನು ಪ್ರಾರಂಭಿಸಿದ್ದು ಮೊದಲ ಹಂತದಲ್ಲಿ ದ.ಕ. ಕ್ಕೆ 150 ಕೋಟಿ ರೂ. ಅನುದಾನ ದೊರಕಿದೆ" ಎಂದರು.

ಕಳೆದ 30 ವರ್ಷಗಳಲ್ಲಿ ಕಾಣದ ಅಭಿವೃದ್ದಿ ಹರೀಶ್ ಪೂಂಜ ಅವರಿಂದ ಆಗುತ್ತಿದೆ. ಗ್ರಾಮೀಣ ಅಭಿವೃದ್ಧಿಯಲ್ಲಿ, ಮೂಲಭೂತ ಸೌಕರ್ಯದಲ್ಲಿ ಬೆಳ್ತಂಗಡಿ ಮೊದಲ ಸ್ಥಾನದಲ್ಲಿದೆ. ತಾಲೂಕಿಗೆ ಶಾಶ್ವತ ಕೊಡುಗೆ ಏನು ಎಂಬುದು ಮುಖ್ಯವೇ ಹೊರತು ಚುನಾವಣೆಯಲ್ಲಿ ನಾಲ್ಕೈದು ಬಾರಿ ಗೆಲ್ಲುವುದು ಸಾಧನೆಯಾಗುವುದಿಲ್ಲ. ತಾಲೂಕಿಗೆ ಶಾಶ್ವತ ವಾಗಿರಗಿರುವ ಯಾವ ಯೋಜನೆ ತಂದಿದ್ದೀರಿ ಎಂದು ಮಾಜಿ ಶಾಸಕರನ್ನು ಪರೋಕ್ಷವಾಗಿ ಟೀಕಿಸಿದರು.

ರಾಷ್ಟ್ರೀಯ ಹೆದ್ದಾರಿ ಪುಂಜಾಲಕಟ್ಟೆಯಿಂದ ಚಾರ್ಮಾಡಿವರೆಗಿನ ಚತುಷ್ಪಥ ರಸ್ತೆಗೆ ಎರಡನೇ ಹಂತದ ಕಾಮಗಾರಿಗೆ ಅನಮೋದನೆ ಸಿಕ್ಕಿದೆ. ಅದು ಶೀಘ್ರವಾಗಿ ಆರಂಭವಾಗಲಿದೆ. ಕೇಂದ್ರ ಸರಕಾರವು ಕುಡಿಯುವ ನೀರಿನ ಯೋಜನೆಗಳಿಗೆ, ನರೇಗಾಕ್ಕೆ ಗ್ರಾ .ಪಂ.ಗೇ ನೇರ ಅನುದಾನ ನೀಡಲಿದ್ದು, ಆತ್ಮನಿರ್ಭರ ಭಾರತವನ್ನು ಗ್ರಾಮಗಳ ಮೂಲಕ ನಿರ್ಮಿಸಲು ಕೇಂದ್ರ ಸರಕಾರ ಸಂಕಲ್ಪಿಸಿದೆ ಎಂದು ಅವರು ಹೇಳಿದರು

ಶಾಸಕ ಪೂಂಜ ಮಾತನಾಡಿ, ತಾಲೂಕಿನ ನವ ನಿರ್ಮಾಣಕ್ಕೆ ನಳಿನ್ ಅವರು ವಿವಿಧ ರೀತಿಯಲ್ಲಿ ಸಹಕಾರ ನೀಡಿರುವುದನ್ನು ಸ್ಮರಿಸಿದರು. 

ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಜಿ.ಪಂ.ಸ್ಥಾಯಿ ಸಮಿತಿ ಅಧ್ಯಕ್ಷೆ ಮಮತಾ ಶೆಟ್ಟಿ, ಸದಸ್ಯೆ ಸೌಮ್ಯಲತಾ, ತಾ.ಪಂ.ಸದಸ್ಯ ಶಶಿಧರ ಕಲ್ಮಂಜ, ಕೃಷ್ಣಯ್ಯ ಆಚಾರ್,ಸುಧೀರ ಸುವರ್ಣ, ವಸಂತಿ, ಸುಶೀಲಾ, ಬಿಜೆಪಿ ಮಂಡಲಾಧ್ಯಕ್ಷ ಜಯಂತ ಕೋಟ್ಯಾನ್ ಮತ್ತಿತರರು ಉಪಸ್ಥಿತರಿದ್ದರು.

ಇಂಜಿನಿಯರ್ ಪ್ರಭಾಕರ ಸ್ವಾಗತಿಸಿದರು. ಜಿ.ಪಂ.ಸದಸ್ಯ ಕೊರಗಪ್ಪ ನಾಯ್ಕ ವಂದಿಸಿದರು. ಶ್ರೀನಿವಾಸ ರಾವ್ ಕಾರ್ಯಕ್ರಮ ನಿರ್ವಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X