Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉ.ಪ್ರದೇಶ ಸರಕಾರದ ವಿರುದ್ಧ ಕೊರೋನ ಕಿಟ್...

ಉ.ಪ್ರದೇಶ ಸರಕಾರದ ವಿರುದ್ಧ ಕೊರೋನ ಕಿಟ್ ಹಗರಣ ಆರೋಪ: ಬಿಜೆಪಿ ಶಾಸಕನಿಂದ ಆದಿತ್ಯನಾಥ್ ಗೆ ಪತ್ರ

ಉನ್ನತ ಮಟ್ಟದ ತನಿಖೆಗೆ ಪ್ರತಿಪಕ್ಷಗಳ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ14 Sept 2020 11:11 PM IST
share
ಉ.ಪ್ರದೇಶ ಸರಕಾರದ ವಿರುದ್ಧ ಕೊರೋನ ಕಿಟ್ ಹಗರಣ ಆರೋಪ: ಬಿಜೆಪಿ ಶಾಸಕನಿಂದ ಆದಿತ್ಯನಾಥ್ ಗೆ ಪತ್ರ

ಹೊಸದಿಲ್ಲಿ,ಸೆ.14: ಆದಿತ್ಯನಾಥ್ ನೇತೃತ್ವದ ಉತ್ತರಪ್ರದೇಶದ ಬಿಜೆಪಿ ಸರಕಾರದ ವಿರುದ್ಧ ಕೋವಿಡ್-19 ಕಿಟ್ ಹಗರಣದ ಆರೋಪ ಕೇಳಿಬಂದಿದ್ದು, ಎಸ್ಪಿ, ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳ ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿವೆ.

ಆಕ್ಸಿಮೀಟರ್, ಥರ್ಮಲ್ ಸ್ಕ್ಯಾನರ್ ಹಾಗೂ ನಾಡಿ ಪರಿಶೋಧಕಯಂತ್ರಗನ್ನು ಒಳಗೊಂಡ ಕೋವಿಡ್-19 ಕಿಟ್‌ಗಳ ಖರೀದಿಯಲ್ಲಿ ಭಾರೀ ಅಕ್ರಮಗಳು ನಡೆದಿವೆಯೆಂದು ಆರೋಪಿಸಿ, ಸುಲ್ತಾನ್‌ಪುರದ ಬಿಜೆಪಿ ಶಾಸಕ ದೇವಮಣಿ ದ್ವಿವೇದಿ ಸೆಪ್ಟೆಂಬರ್ 4ರಂದು ಪತ್ರ ಬರೆದಿದ್ದರು. ತನ್ನ ಜಿಲ್ಲೆಯಲ್ಲಿ, ತಲಾ 2800 ರೂ. ಮೌಲ್ಯದ ಕೋವಿಡ್-19 ಕಿಟ್‌ನ್ನು 9,950 ರೂ.ನಂತೆ ಖರೀದಿಸಲಾಗಿದೆ ಎಂದು ದ್ವಿವೇದಿ ಪತ್ರದಲ್ಲಿ ದೂರಿದ್ದರು.

 ರಾಜ್ಯದಲ್ಲಿ ಮನೆಮನೆಗಳಲ್ಲಿ ಕೊರೋನ ಸೋಂಕಿನ ತಪಾಸಣೆ ನಡೆಸುವುದಕ್ಕಾಗಿ ಉತ್ತರಪ್ರದೇಶದ ಆರೋಗ್ಯ ಕಾರ್ಯಕರ್ತರಿಗೆ ಕೋವಿಡ್-19 ಕಿಟ್‌ಗಳನ್ನು ಒದಗಿಸಲಾಗಿತ್ತು. ಜ್ವರದ ತಪಾಸಣೆಗಾಗಿ ಥರ್ಮಲ್ ಸ್ಕ್ಯಾನರ್, ಆಮ್ಲಜನಕದ ಮಟ್ಟವನ್ನು ಅಳೆಯಲು ಆಕ್ಸಿಮೀಟರ್ ಹಾಗೂ ನಾಡಿಬಡಿತದ ತಪಾಸಣೆಗೆ ನಾಡಿ ವಿಶ್ಲೇಷಕ ಇವನ್ನು ಕಿಟ್ ಒಳಗೊಂಡಿದೆ.

   ಕೋವಿಡ್-19 ಕಿಟ್‌ಗಳ ಖರೀದಿಯಲ್ಲಿನ ಹಗರಣವು ಕೇವಲ ಸುಲ್ತಾನ್‌ ಪುರದಲ್ಲಿ ಮಾತ್ರವಲ್ಲ, ಉತ್ತರಪ್ರದೇಶದ ಎಲ್ಲಾ 65 ಜಿಲ್ಲೆಗಳಲ್ಲಿ ನಡೆದಿದೆಯೆಂದು ಪ್ರತಿಪಕ್ಷಗಳು ಆಪಾದಿಸಿವೆ.

   ಪ್ರತಿಪಕ್ಷಗಳ ಒತ್ತಡಕ್ಕೆ ಮಣಿದಿರುವ ರಾಜ್ಯ ಸರಕಾರವು, ಕೋವಿಡ್-19 ಕಿಟ್ ಖರೀದಿ ಹಗರಣದ ಬಗ್ಗೆ ತನಿಖೆ ನಡೆಸಲು ಮೂವರು ಸದಸ್ಯರ ವಿಶೇಷ ತನಿಖಾ ತಂಡವೊಂದನ್ನು ನೇಮಿಸಿದೆ ಹಾಗೂ 10 ದಿನಗಳೊಳಗೆ ವರದಿ ಸಲ್ಲಿಸುವಂತೆ ಸೂಚಿಸಿದೆ.

  ಆದರೆ ಪ್ರತಿಪಕ್ಷಗಳಾದ ಎಎಪಿ, ಸಮಾಜವಾದಿ ಪಾರ್ಟಿ ಹಾಗೂ ಕಾಂಗ್ರೆಸ್ ಸೇರಿದಂತೆ ವಿವಿಧ ಪ್ರತಿಪಕ್ಷಗಳ ಹಗರಣದ ಬಗ್ಗೆ ಸಿಬಿಐ ಅಥವಾ ಹೈಕೋರ್ಟ್‌ನ ಹಾಲಿ ನ್ಯಾಯಾಧೀಶರ ನೇತೃತ್ವದ ಸಿಟ್‌ನಿಂದ ವಿಸ್ತೃತ ತನಿಖೆಗೆ ಆಗ್ರಹಿಸಿವೆ.

 ಹಗರಣಕ್ಕೆ ಸಂಬಂಧಿಸಿ ಆದಿತ್ಯನಾಥ್ ಸರಕಾರವು ಸುಲ್ತಾನ್‌ಪುರ ಹಾಗೂ ಗಾಜಿಯಾಬಾದ್ ಜಿಲ್ಲಾ ಪಂಚಾಯತ್ ರಾಜ್ ಅಧಿಕಾರಿಗಳನ್ನು ಅಮಾನತುಗೊಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X