Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆರ್ಥಿಕ ಪರಿಸ್ಥಿತಿ ಬಗ್ಗೆ ಜನತೆ...

ಆರ್ಥಿಕ ಪರಿಸ್ಥಿತಿ ಬಗ್ಗೆ ಜನತೆ ನಿರ್ಲಕ್ಷ್ಯ ತಾಳಿದಲ್ಲಿ ದೇಶಕ್ಕೆ ಸಂಕಷ್ಟ: ಅಂಕಣಕಾರ ಚೇತನ್ ಭಗತ್ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ14 Sept 2020 11:13 PM IST
share
ಆರ್ಥಿಕ ಪರಿಸ್ಥಿತಿ ಬಗ್ಗೆ ಜನತೆ ನಿರ್ಲಕ್ಷ್ಯ ತಾಳಿದಲ್ಲಿ ದೇಶಕ್ಕೆ ಸಂಕಷ್ಟ: ಅಂಕಣಕಾರ ಚೇತನ್ ಭಗತ್ ಎಚ್ಚರಿಕೆ

 ಹೊಸದಿಲ್ಲಿ,ಸೆ.15: ಪ್ರಸಕ್ತ ಆರ್ಥಿಕ ಪರಿಸ್ಥಿತಿಯ ಬಗ್ಗೆ ಪ್ರಜೆಗಳು ನಿರ್ಲಕ್ಷ್ಯ ವಹಿಸಿದ್ದಲ್ಲಿ ದೇಶವು ಇನ್ನೂ ಹೆಚ್ಚು ಸಂಕಷ್ಟಕ್ಕೀಡಾಗಲಿದೆ ಎಂದು ಖ್ಯಾತ ಬರಹಗಾರ ಹಾಗೂ ಅಂಕಣಕಾರ ಚೇತನ್ ಭಗತ್ ಎಚ್ಚರಿಕೆ ನೀಡಿದ್ದಾರೆ.

   ‘ಇಂಡಿಯಾ ಟುಡೆ’ ಟಿವಿ ವಾಹಿನಿಗೆ ಸೋಮವಾರ ನೀಡಿದ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಅವರು, ‘‘ಯುವಜನತೆ ಸೇರಿದಂತೆ ದೇಶದ ಪ್ರಜೆಗಳು ಬಾಲಿವುಡ್ ಪ್ರಕರಣಗಳನ್ನು ಬಗೆಹರಿಸುವಲ್ಲಿ ತಲ್ಲೀನರಾಗಿದ್ದಾರೆಯೇ ಹೊರತು ಆರ್ಥಿಕ ಸಂಕಷ್ಟದ ಬಗ್ಗೆ ಅವರು ಎಳ್ಳಷ್ಟೂ ತಲೆಕೆಡಿಸಿಕೊಳ್ಳುತ್ತಿಲ್ಲ’ ಎೆಂದು ವಿಷಾದಿಸಿದರು.

  ದೇಶದ ಜನತೆ ಆರ್ಥಿಕತೆಯ ಬಗ್ಗೆ ಚಿಂತಿಸುತ್ತಿಲ್ಲವೆಂದು ಯಾವುದೇ ಸರಕಾರಕ್ಕೆ ಮನದಟ್ಟಾದಲ್ಲಿ ಅದು ಆ ಬಿಕ್ಕಟ್ಟನ್ನು ಬಗೆಹರಿಸುವುದಕ್ಕೆ ಸಮಯವನ್ನು ವಿನಿಯೋಗಿಸುವುದಿಲ್ಲವೆಂದು ಚೇತನ್ ವ್ಯಂಗ್ಯವಾಡಿದರು. ದೇಶದ ಜನತೆಗೆ ಆರ್ಥಿಕತೆಯ ಬಗ್ಗೆ ಕಾಳಜಿಯಿಲ್ಲದಿರುವಾಗ ರಾಜಕಾರಣಿಗಳೇಕೇ ಮುತುವರ್ಜಿ ವಹಿಸುತ್ತಾರೆ ಭಗತ್ ಪ್ರಶ್ನಿಸಿದ್ದಾರೆ.

 ದೇಶದ ಆರ್ಥಿಕತೆಯನ್ನು ಕಾಡುತ್ತಿರುವ ಸಮಸ್ಯೆಗಳನ್ನು ಸರಿಪಡಿಸಬೇಕೆಂದು ದೇಶದ ಜನತೆ ಸರಕಾರದ ಮೇಲೆ ಒತ್ತಡ ಹೇರದೆ ಹೋದಲ್ಲಿ ಆರ್ಥಿಕತೆಯು ಜಡ್ಡುಗಟ್ಟಿ ನಿಲ್ಲಲಿದೆ ಎಂದು ಅವರು ಹೇಳಿದರು.

ದೇಶದಲ್ಲಿ ಕುಸಿಯುತ್ತಿರುವ ಉದ್ಯೋಗಾವಕಾಶಗಳ ಬಗ್ಗೆ ತೀವ್ರ ಆತಂಕ ವ್ಯಕ್ತಪಡಿಸಿದ ಅವರು, ಮುಂದಿನ ವರ್ಷ ಪದವೀಧರರಾಗಲಿರುವ ಎಷ್ಟು ಮಂದಿಗೆ ಉದ್ಯೋಗ ಲಭ್ಯವಾಗಲಿದೆ ಎಂದು ಪ್ರಶ್ನಿಸಿದರು. ‘‘ ಯುವಜನತೆ ಬಾಲಿವುಡ್ ಹಗರಣಗಳನ್ನು ಬಗೆಹರಿಸುತ್ತಲೇ ಇರಬೇಕೇ ಅಥವಾ ಉದ್ಯೋಗವನ್ನು ಗಳಿಸುವ ಬಗ್ಗೆ ಮಾರ್ಗೋಪಾಯಗಳನ್ನು ಹುಡುಕಲು ಸಮಯವನ್ನು ವಿನಿಯೋಗಿಸಬೇಕೇ’’ ಎಂದವರು ಪ್ರಶ್ನಿಸಿದರು.

 ದೇಶದ ಪ್ರಸಕ್ತ ಆರ್ಥಿಕ ಬಿಕ್ಕಟ್ಟನ್ನು ಸರಿಪಡಿಸದೇ ಹೋದಲ್ಲಿ ಶ್ರೀಸಾಮಾನ್ಯ ಭಾರತೀಯರು, ಬಡತನದಂಚಿಗೆ ಜಾರಲಿದ್ದಾರೆಂದು ಚೇತನ್ ಭಗತ್ ಸಂದರ್ಶನದಲ್ಲಿ ಎಚ್ಚರಿಕೆ ನೀಡಿದ್ದಾರೆೆ.

  ಯುವಜನರು ತಮ್ಮ ಮೊಬೈಲ್‌ ಫೋನ್‌ಗಳಲ್ಲಿ ಕಾಲಕಳೆಯುವ ಬದಲು ಆರ್ಥಿಕತೆಯ ಬಗ್ಗೆ ಮಾತನಾಡಬೇಕೆಂದು ಚೇತನ್ ಭಗತ್ ಕರೆ ನೀಡಿದರು. ಕೋವಿಡ್ -19 ತಡೆಗೆ ದೇಶಾದ್ಯಂತ ಹೇರಲಾದ ಕಟ್ಟುನಿಟ್ಟಿನ ಲಾಕ್‌ಡೌನ್‌ನಿಂದಾಗಿ ಭಾರತದ ಆರ್ಥಿಕತೆಯನ್ನು ಕುಂಠಿತಗೊಂಡಿರುವುದಾಗಿ ಚೇತನ್‌ಭಗತ್ ಅಭಿಪ್ರಾಯಿಸಿದರು.

ಲಾಕ್‌ಡೌನ್ ಹೇರಿದಲ್ಲಿ, ಒಬ್ಬ ಸಿರಿವಂತನಿಗೆ ಕೆಲಸ ಮಾಡದೆ ಆರು ತಿಂಗಳು ಕಳೆಯಲು ಸಾಧ್ಯವಿದೆ.ಆದರೆ ಬಡವ್ಯಕ್ತಿಗೆ ಅದು ಅಸಾಧ್ಯ ಎಂದರು. ‘ಇಂತಹ ಹುಚ್ಚುಹುಚ್ಚಾದ ಲಾಕ್‌ಡೌನ್ ಅನ್ನು ತಾಳಿಕೊಳ್ಳಲು ನಮಗೆ ಸಾಧ್ಯವಾಗದು’ ಎಂದು ಹೇಳಿದ ಭಗತ್, ಲಾಕ್‌ಡೌನ್‌ನಿಂದಾಗಿ ದೇಶದ ಜಿಡಿಪಿಯು 23.9 ಶೇಕಡದಷ್ಟು ಸಂಕುಚಿತಗೊಂಡಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X