Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೋವಿಡ್‌ಗೆ ಉಚಿತ ಚಿಕಿತ್ಸೆ; ಜನರಲ್ಲಿ...

ಕೋವಿಡ್‌ಗೆ ಉಚಿತ ಚಿಕಿತ್ಸೆ; ಜನರಲ್ಲಿ ಅರಿವು ಮೂಡಿಸಲು ನಿರ್ಧಾರ

ಉಡುಪಿ ಜಿಪಂ ಸಾಮಾನ್ಯ ಸಭೆ

ವಾರ್ತಾಭಾರತಿವಾರ್ತಾಭಾರತಿ15 Sept 2020 7:45 PM IST
share
ಕೋವಿಡ್‌ಗೆ ಉಚಿತ ಚಿಕಿತ್ಸೆ; ಜನರಲ್ಲಿ ಅರಿವು ಮೂಡಿಸಲು ನಿರ್ಧಾರ

ಉಡುಪಿ, ಸೆ.15: ಕೋವಿಡ್-19 ಸೋಂಕಿತರಿಗೆ ಆಯುಷ್ಮಾನ್ ಭಾರತ್ ಯೋಜನೆಯಡಿ ಎಪಿಎಲ್, ಬಿಪಿಎಲ್ ಬೇಧವಿಲ್ಲದೇ ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಸಂಪೂರ್ಣ ಉಚಿತ ಚಿಕಿತ್ಸೆ ನೀಡಲಾಗುತ್ತಿದೆ. ಕೋವಿಡ್ ರೋಗಿಗಳು ಯಾವುದೇ ಸುಳ್ಳು ಸುದ್ದಿಗಳನ್ನು ನಂಬಬಾರದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್‌ಚಂದ್ರ ಸೂಡಾ ತಿಳಿಸಿದ್ದಾರೆ.

ಮಣಿಪಾಲದಲ್ಲಿರುವ ಉಡುಪಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ಜಿಪಂ ಅಧ್ಯಕ್ಷ ದಿನಕರಬಾಬು ಅಧ್ಯಕ್ಷತೆಯಲ್ಲಿ ನಡೆದ ಜಿಪಂ ಸಾಮಾನ್ಯ ಸಭೆ ಯಲ್ಲಿ ಅವರು ಮಾತನಾಡುತಿದ್ದರು.

ಕೋವಿಡ್ ಪರೀಕ್ಷೆ, ಚಿಕಿತ್ಸೆ, ಬಿಲ್ ಕುರಿತಂತೆ ಜನಸಾಮಾನ್ಯರಲ್ಲಿ ಹಲವು ಸಂಶಯ, ಗೊಂದಲಗಳಿದ್ದು, ಇವುಗಳನ್ನು ನಿವಾರಿಸುವಂತೆ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರತಾಪ್ ಹೆಗ್ಡೆ ಮಾರಾಳಿ ಮತ್ತು ಇತರ ಸದಸ್ಯರ ಪ್ರಶ್ನೆಗಳಿಗೆ ಉತ್ತರಿಸಿದ ಡಿಹೆಚ್‌ಓ, ಕೋವಿಡ್‌ನ್ನು ಬೇಗ ಗುರುತಿಸಿದಲ್ಲಿ ಅದು ಇತರರಿಗೆ ಹರಡುವುದನ್ನು ತಡೆಯಲು ಸಾಧ್ಯವಿದೆ ಎಂದರು.

ಇದಕ್ಕಾಗಿ ರ್ಯಾಪಿಡ್ ಆಂಟಿಜಿನ್ ಟೆಸ್ಟ್ ಮಾಡಲಾಗುತ್ತಿದೆ. ಇದರಿಂದ ಒಂದು ಗಂಟೆಯಲ್ಲಿ ಫಲಿತಾಂಶ ದೊರಕುತ್ತದೆ. ಈ ಫಲಿತಾಂಶ ನೆಗೆಟಿವ್ ಬಂದಲ್ಲಿ, ರೋಗ ಲಕ್ಷಣಗಳಿರುವ ವ್ಯಕ್ತಿಗಳಿಗೆ ಆರ್‌ಟಿಪಿಸಿಆರ್ ಪರೀಕ್ಷೆ ಮಾಡಲಾಗುತ್ತದೆ. ಪಾಸಿಟಿವ್ ಬಂದ ಯಾವುದೇ ವ್ಯಕ್ತಿಗೆ ಕೂಡಲೇ ಚಿಕಿತ್ಸೆ ಆರಂಭಿಸಲಾಗುವುದು. ಸರಕಾರಿ ಆಸ್ಪತ್ರೆಗಳಲ್ಲಿ ಕೋವಿಡ್ ಪರೀಕ್ಷೆ ಉಚಿತವಾಗಿದೆ. ಪಾಸಿಟಿವ್ ಬಂದ ವ್ಯಕ್ತಿ ಜಿಲ್ಲಾಡಳಿತದ ಶಿಫಾರಸ್ಸಿನೊಂದಿಗೆ ಖಾಸಗಿ ಆಸ್ಪತ್ರೆಗೆ ದಾಖಲಾದರೆ ಅಲ್ಲೂ ಸಹ ಸಂಪೂರ್ಣ ಉಚಿತ ಚಿಕಿತ್ಸೆ ದೊರೆಯುತ್ತದೆ. ಒಂದು ವೇಳೆ ರೋಗಿ ಅಲ್ಲಿ ಸಾಮಾನ್ಯ ವಾರ್ಡ್ ಬಿಟ್ಟು ಹೆಚ್ಚಿನ ಸೌಲಭ್ಯಗಳನ್ನು ಪಡೆದಲ್ಲಿ, ಅದಕ್ಕೆ ಮಾತ್ರ ಬಿಲ್ ಭರಿಸಬೇಕಾಗುತ್ತದೆ. ಮತ್ತು ನೇರವಾಗಿ ಖಾಸಗಿ ಆಸ್ಪತ್ರೆಗೆ ದಾಖಲಾದರೆ ಸಂಪೂರ್ಣ ಬಿಲ್ ಭರಿಸಬೇಕಾಗುತ್ತದೆ. ಆದುದರಿಂದ ಸಾರ್ವಜನಿಕರು ಯಾವುದೇ ಸುಳ್ಳು ಸುದ್ದಿಗಳನ್ನು ನಂಬದೇ, ರೋಗ ಲಕ್ಷಣಗಳಿದ್ದಲ್ಲಿ ಕೂಡಲೇ ಪರೀಕ್ಷೆ ಮಾಡಿಸಿಕೊಳ್ಳುವಂತೆ ಮನವಿ ಮಾಡಿದರು.

ಕೋವಿಡ್ ಪರೀಕ್ಷೆ, ಚಿಕಿತ್ಸೆ ವಿಧಾನಗಳ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸಬೇಕಿದ್ದು, ಜನಪ್ರತಿನಿಧಿಗಳು ತಮ್ಮ ವ್ಯಾಪ್ತಿಯಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು. ಹಾಗೂ ಜಿಪಂನಿಂದ ಎಲ್ಲಾ ಗ್ರಾಪಂಗಳ ವ್ಯಾಪ್ತಿಯಲ್ಲಿ ಅರಿವು ಮೂಡಿಸಬೇಕು. ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ಕೋವಿಡ್ ವಿರುದ್ದ ಅವಿರತವಾಗಿ ಹೋರಾಡುತ್ತಿದೆ.ಖಾಸಗಿ ಆಸ್ಪತೆಗಳು ಸಹ ತಮ್ಮಲ್ಲಿ ದಾಖಲಾಗುವ ರೋಗಿಗಳಿಗೆ ಈ ಬಗ್ಗೆ ವಿವರ ವಾದ ಮಾಹಿತಿ ನೀಡಬೇಕು ಎಂದು ಪ್ರತಾಪ್ ಹೆಗ್ಡೆ ಮಾರಾಳಿ ಹೇಳಿದರು.

ಕೋವಿಡ್ ಪರೀಕ್ಷೆ, ಚಿಕಿತ್ಸಾ ವಿಧಾನಗಳ ಕುರಿತ ವಿವರವುಳ್ಳ ಕರಪತ್ರಗಳನ್ನು ಮುದ್ರಿಸಿ, ಗ್ರಾಮ ಪಂಚಾಯತ್‌ಗಳ ಮೂಲಕ ಪ್ರತೀ ಮನೆ ಮನೆಗೆ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಿಇಓ ಪ್ರೀತಿ ಗೆಹ್ಲೋಟ್ ತಿಳಿಸಿದರು.

ಐಟಿ ಕಚೇರಿ ವರ್ಗಾವಣೆಗೆ ವಿರೋಧ:  ಮಂಗಳೂರಿನ ಐಟಿ ಕಚೇರಿಯನ್ನು ಗೋವಾ ರಾಜ್ಯಕ್ಕೆ ಸ್ಥಳಾಂತರಿಸುವುದರಿಂದ ಅವಿಭಜಿತ ದ.ಕ. ಜಿಲ್ಲೆಯ ಸುಮಾರು 4 ಲಕ್ಷಕ್ಕೂ ಅಧಿಕ ತೆರಿಗೆದಾರರಿಗೆ ಅನಾನುಕೂಲವಾಗಲಿದ್ದು, ಈ ಆದೇಶವನ್ನು ಹಿಂಪಡೆಯುವ ಕುರಿತಂತೆ ನಿರ್ಣಯ ಕೈಗೊಳ್ಳುವಂತೆ ಸದಸ್ಯ ಜನಾರ್ದನ ತೋನ್ಸೆ ಆಗ್ರಹಿಸಿದರು.

ಇತ್ತೀಚೆಗೆ ಸುರಿದ ಗಾಳಿ-ಮಳೆಯಿಂದ ರಸ್ತೆ ಮೇಲೆ ಮರ ಬಿದ್ದು, ಬೈಕ್ ಸವಾರ ಯುವಕನೊಬ್ಬ ಮೃತಪಟ್ಟ ಬಗ್ಗೆ ಪ್ರಸ್ತಾಪಿಸಿದ ಸದಸ್ಯೆ ಜ್ಯೋತಿ ಹರೀಶ್, ಇಂತಹ ಅಪಾಯಕಾರಿ ಮರಗಳನ್ನು ಮಳೆಗಾಲದ ಮುಂಚೆಯೆ ಗುರುತಿಸಿ ಕಟಾವು ಮಾಡಬೇಕು ಎಂದರು.

ಅರಣ್ಯ ವ್ಯಾಪ್ತಿಯಲ್ಲಿ ಈಗಾಗಲೇ ರಸ್ತೆ ಇದ್ದು ಅದನ್ನು ಅಭಿವೃದ್ಧಿಗೊಳಿಸಲು ಅರಣ್ಯ ಇಲಾಖೆ ಆಕ್ಷೇಪ ವ್ಯಕ್ತಪಡಿಸುತ್ತಿರುವ ಕುರಿತಂತೆ ಹಲವು ಸದಸ್ಯರು ಅಸಮಧಾನ ವ್ಯಕ್ತಪಡಿಸಿದರು. ಇಂತಹ ರಸ್ತೆ ಕಾಮಗಾರಿಗಳ ಕುರಿತು ಸ್ಥಳ ಪರಿಶೀಲನೆ ನಡೆಸುವುದಾಗಿ ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿ ಆಶೀಶ್ ರೆಡ್ಡಿ ತಿಳಿಸಿದರು.

ಪಡುಬಿದ್ರೆಯಲ್ಲಿ ರಸ್ತೆ ಮತ್ತು ಸೇತುವೆ ಕಾಮಗಾರಿ ವಿಳಂಬ ಕುರಿತಂತೆ ಸದಸ್ಯ ಶಶಿಕಾಂತ ಪಡುಬಿದ್ರೆ ಆಕ್ಷೇಪ ವ್ಯಕ್ತಪಡಿಸಿದರು. ಈ ಕುರಿತು ಉತ್ತರಿಸಲು ಅಧಿಕಾರಿಗಳ ಅನುಪಸ್ಥಿತಿ ಸದಸ್ಯರ ಆಕ್ರೋಶಕ್ಕೆ ಕಾರಣವಾಯಿತು. ಅಧಿಕಾರಿಗಳು ಪದೇ ಪದೇ ಗೈರಾಗುತ್ತಿದ್ದು ಕ್ರಮ ಕೈಗೊಳ್ಳು ವಂತೆ ಸದಸ್ಯೆ ಶಿಲ್ಪಾ ಸುವರ್ಣ ಒತ್ತಾಯಿಸಿದರು. ಇತ್ತಿಚೆಗೆ ಕಾಪು ಸಮೀಪ ಅಪಘಾತ ಸಂಭವಿಸಿ ಯುವತಿ ಸಾವನ್ನಪ್ಪಿದ್ದಾರೆ. ರಸ್ತೆಯಲ್ಲಿ ನಿಂತ ನೀರು ಕಾರಿಗೆ ಬಡಿದು ನಿಯಂತ್ರಣ ತಪ್ಪಿ ಈ ಅಪಘಾತವಾಗಿದ್ದು, ನೀರು ನಿಲ್ಲದಂತೆ ಅಗತ್ಯ ಕ್ರಮಕೈಗೊಳ್ಳುವಂತೆ ಗೀತಾಂಜಲಿ ಸುವರ್ಣ ಹೇಳಿದರು.

ಬೆಳೆ ಸಮೀಕ್ಷೆ: ಜಿಲ್ಲೆಯಲ್ಲಿ ಮೊಬೈಲ್ ಮೂಲಕ ನಡೆಯುತ್ತಿರುವ ಬೆಳೆ ಸಮೀಕ್ಷೆಯಲ್ಲಿ ಶೇ.20ರಷ್ಟು ಮಾತ್ರ ಪ್ರಗತಿಯಾಗಿದೆ. ಶೇ.100ರಷ್ಟು ಸಾಧನೆಗೆ ಗುರಿ ಇದೆ. ರೈತರು ವರದಿ ದಾಖಲಿಸಲು ಸೆಪ್ಟಂಬರ್ 23ರವರೆಗೆ ಕಾಲಾವಕಾಶವಿದೆ. ಪ್ರಸ್ತುತ ಖಾಸಗಿ ನಿವಾಸಿಗಳಿಗೂ ವರದಿ ದಾಖಲಿಸಲು ಅನುಮತಿ ನೀಡಲಾಗಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಕೆಂಪೇಗೌಡ ಮಾಹಿತಿ ನೀಡಿದರು.

ಉಡುಪಿ ಸೀರೆ: ಉಡುಪಿ ಸೀರೆಗಳ ಉತ್ಪಾದನೆ, ಬಳಕೆಗೆ ಹೆಚ್ಚಿನ ಪ್ರೋತ್ಸಾಹ, ಬೆಂಬಲ ನೀಡುವ ನಿಟ್ಟಿನಲ್ಲಿ ಮೈಸೂರು ದಸರಾ ಸೇರಿದಂತೆ ವಿವಿದೆಡೆಗಳಲ್ಲಿ ಇಲಾಖೆ ಆಯೋಜಿಸುವ ವಸ್ತುಪ್ರದರ್ಶನದಲ್ಲಿ ಉಡುಪಿ ಸೀರೆಗಳ ಪ್ರದರ್ಶನ ಮತ್ತು ಮಾರಾಟಕ್ಕೆ ಮಳಿಗೆ ತೆರೆಯಲು ಅವಕಾಶ ಮಾಡಿಕೊಡುವಂತೆ ಸದಸ್ಯೆ ರೇಷ್ಮಾ ಉದಯ ಶೆಟ್ಟಿ ಹೇಳಿದರು. ಈ ಕುರಿತಂತೆ ಎಲ್ಲಾ ಇಲಾಖೆಗಳು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧ್ಯಕ್ಷ ದಿನಕರ ಬಾಬು ಹೇಳಿದರು.

ಸಭೆಯಲ್ಲಿ ಉಪಾಧ್ಯಕ್ಷೆ ಶೀಲಾ ಕೆ ಶೆಟ್ಟಿ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷೆ ಶೋಭಾ ಜಿ ಪುತ್ರನ್, ಉಪ ಕಾರ್ಯದರ್ಶಿ ಕಿರಣ್ ಫೆಡ್ನೇಕರ್, ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್ ಉಪಸ್ಥಿತರಿದ್ದರು.

ಡಯಾಲಿಸಿಸ್ ಯಂತ್ರಕ್ಕೆ ಬೇಡಿಕೆ

ಜಿಲ್ಲೆಯಲ್ಲಿ ಡಯಾಲಿಸಿಸ್ ಯಂತ್ರಕ್ಕೆ ಹೆಚ್ಚಿನ ಬೇಡಿಕೆ ಇದ್ದು, ಜಿಲ್ಲಾಸ್ಪತ್ರೆಯಲ್ಲಿ ಹೆಚ್ಚಿನ ಯಂತ್ರಗಳನ್ನು ಅಳವಡಿಸುವಂತೆ ಕೃಷಿ ಮತ್ತು ಕೈಗಾರಿಕ ಸ್ಥಾಯಿ ಸಮಿತಿ ಅಧ್ಯಕ್ಷ ಸುಮಿತ್ ಶೆಟ್ಟಿ ಹೇಳಿದರು.

ಇದಕ್ಕೆ ಜಿಲ್ಲಾಸ್ಪತ್ರೆಯಲ್ಲಿ ಸ್ಥಳಾವಕಾಶದ ಕೊರತೆಯಿದ್ದು, ಬೈಂದೂರು ಮತ್ತು ಬ್ರಹ್ಮಾವರ ಆಸ್ಪತ್ರೆಯಲ್ಲಿ ಹೊಸ ಯಂತ್ರ ಅಳವಡಿಸುವಂತೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ. ಹೆಬ್ರಿ, ಕಾಪು ಆಸ್ಪತ್ರೆಗಳಲ್ಲೂ ಸಹ ಡಯಾಲಿಸಿಸ್ ಯಂತ್ರ ಅಳವಡಿಕೆಗೆ ಪ್ರಸ್ತಾವನೆ ಸಲ್ಲಿಸುವುದಾಗಿ ಜಿಲ್ಲಾ ಸರ್ಜನ್ ಡಾ. ಮಧುಸೂಧನ್ ನಾಯಕ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X