Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರಾಜ್ಯ ರಾಜಧಾನಿಯ ವಾಯು ಜೇನು ನೊಣಗಳ...

ರಾಜ್ಯ ರಾಜಧಾನಿಯ ವಾಯು ಜೇನು ನೊಣಗಳ ಪಾಲಿಗೆ ಮಾರಕ

ಗಾಳಿಯಲ್ಲಿರುವ ವಿಷದಿಂದ ಉಸಿರಾಟ, ಹೃದಯ ಬಡಿತದ ಸಮಸ್ಯೆ

ವಾರ್ತಾಭಾರತಿವಾರ್ತಾಭಾರತಿ15 Sept 2020 10:23 PM IST
share
ರಾಜ್ಯ ರಾಜಧಾನಿಯ ವಾಯು ಜೇನು ನೊಣಗಳ ಪಾಲಿಗೆ ಮಾರಕ

ಬೆಂಗಳೂರು, ಸೆ.15: ನಗರದ ಗಾಳಿಯಲ್ಲಿರುವ ವಿಷ ಪದಾರ್ಥಗಳಿಂದ ಜೇನು ಹುಳುಗಳ ಉಸಿರಾಟ ಮತ್ತು ಹೃದಯ ಬಡಿತದ ಮೇಲೆ ಮಾರಕ ಪರಿಣಾಮ ಉಂಟಾಗಿರುವುದು ‘ನ್ಯಾಷನಲ್ ಸೆಂಟರ್ ಫಾರ್ ಬಯೋಲಾಜಿಕಲ್ ಸೈನ್ಸಸ್ ಹಾಗೂ ಟಾಟಾ ಇನ್ಸ್‍ಟಿಟ್ಯೂಟ್ ಆಫ್ ಫಂಡಮೆಂಟಲ್ ರಿಸರ್ಚ್' ಸಂಸ್ಥೆಗಳು ನಡೆಸಿರುವ ಅಧ್ಯಯನದಿಂದ ತಿಳಿದುಬಂದಿದೆ.

ಹೆಜ್ಜೇನುಗಳ ಮೇಲೆ ವಾಯು ಮಾಲಿನ್ಯ ಉಂಟು ಮಾಡಿರುವ ಪರಿಣಾಮ ಕುರಿತು ‘ನ್ಯಾಷನಲ್ ಸೆಂಟರ್ ಫಾರ್ ಬಯೋಲಾಜಿಕಲ್ ಸೈನ್ಸಸ್' ಸಂಸ್ಥೆಯಲ್ಲಿ ಸಂಶೋಧನಾ ವಿದ್ಯಾರ್ಥಿ ಡಾ.ಗೀತಾ ಜಿ.ತಿಮ್ಮೇಗೌಡ ನೇತೃತ್ವದ ತಂಡ 2017 ರಿಂದ 2019 ರವರೆಗೆ ಪ್ರೊ.ಶನ್ನೋನ್ ಬಿ. ಓಲ್ಸನ್ ಅವರ ಮಾರ್ಗದರ್ಶನದಲ್ಲಿ ಸುದೀರ್ಘ ಅಧ್ಯಯನ ನಡೆಸಿದೆ.

ಈ ಅಧ್ಯಯನಕ್ಕೆ ನಗರದ ಪೀಣ್ಯ, ಲಾಲ್‍ಬಾಗ್ ಹಾಗೂ ಹೆಸರಘಟ್ಟ ಪ್ರದೇಶದಲ್ಲಿದ್ದ ಒಟ್ಟು 1,820 ಜೀವಂತ ಜೇನು ನೊಣಗಳನ್ನು ಆಯ್ಕೆ ಮಾಡಿಕೊಳ್ಳಲಾಗಿತ್ತು. ಈ ನೊಣಗಳ ಉಸಿರಾಟ, ರಕ್ತ ಪರಿಚಲನೆ, ಹೃದಯ ಬಡಿತದ ಬಗ್ಗೆ ಅಧ್ಯಯನ ನಡೆಸಲಾಯಿತು. ಆದರೆ, ನಗರದ ಹೊರ ವಲಯದ ಹೆಸರಘಟ್ಟ ಪ್ರದೇಶದ ಜೇನು ನೊಣಗಳ ಉಸಿರಾಟ ಮತ್ತು ಹೃದಯ ಬಡಿತಕ್ಕೆ ಹೋಲಿಸಿದರೆ, ಪೀಣ್ಯ ಪ್ರದೇಶದ ಜೇನು ನೊಣಗಳ ಉಸಿರಾಟ ಮತ್ತು ಹೃದಯ ಬಡಿತ ಪ್ರಕ್ರಿಯೆ ಅಸಹಜವಾಗಿತ್ತು.

ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಹೆಚ್ಚು ವಾಯುಮಾಲಿನ್ಯವಿದ್ದ ಕಾರಣ, ಇಲ್ಲಿನ ಜೇನು ನೊಣಗಳು ಉಸಿರಾಟದ ತೊಂದರೆ ಎದುರಿಸುತ್ತಿದ್ದವು. ಇದು ಜೇನು ನೊಣಗಳ ಹೃದಯ ಬಡಿತದ ಮೇಲೂ ಪರಿಣಾಮ ಬೀರಿತ್ತು ಎಂದು ವರದಿಯಲ್ಲಿ ಪ್ರಸ್ತಾಪಿಸಲಾಗಿದೆ. ಪ್ರಯೋಗಾಲಯಕ್ಕೆ ತಂದ ಹೆಸರಘಟ್ಟ ಮತ್ತು ಲಾಲ್‍ಬಾಗ್‍ನ ಜೇನು ನೊಣಗಳು ಆರೇಳು ದಿನಗಳ ಕಾಲ ಬದುಕಿದರೆ, ಪೀಣ್ಯ ಪ್ರದೇಶದ ನೊಣಗಳು ಕೇವಲ 24 ಗಂಟೆಯೊಳಗೆ ಸಾವನ್ನಪ್ಪುತ್ತಿದ್ದವು.

ವಾಯು ಗುಣಮಟ್ಟ ಕಳಪೆ: ಮಾನವನ ಆರೋಗ್ಯಕ್ಕೆ ಸೊನ್ನೆಯಿಂದ 50ರ ವರೆಗಿನ ಎಕ್ಯೂಐ ಉತ್ತಮವಾಗಿರುತ್ತದೆ. 51ರಿಂದ 100ರ ವರೆಗಿನ ಎಕ್ಯೂಐ ಮಧ್ಯಮ, 101-150 ಎಕ್ಯೂಐ ಸೂಕ್ಷ್ಮ ದೇಹಾರೋಗ್ಯದ ಜನರಿಗೆ ಅನಾರೋಗ್ಯಕರ, 151-200 ಅನಾರೋಗ್ಯಕರ, 201-300 ತೀವ್ರ ಅನಾರೋಗ್ಯಕರ ಹಾಗೂ 301-500 ಎಕ್ಯೂಐ ಮಾರಣಾಂತಿಕ ಎಂದು ವಿಭಾಗಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X