Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೋಲಾರ ಜಿಲ್ಲೆಯಲ್ಲಿ ಜೀತ ಪದ್ಧತಿ ಇನ್ನೂ...

ಕೋಲಾರ ಜಿಲ್ಲೆಯಲ್ಲಿ ಜೀತ ಪದ್ಧತಿ ಇನ್ನೂ ಜೀವಂತ: 25 ವರ್ಷಗಳಿಂದ ಬಿಡುಗಡೆಗೆ ಕಾಯುತ್ತಿರುವ ಕುಟುಂಬ

ವಾರ್ತಾಭಾರತಿವಾರ್ತಾಭಾರತಿ15 Sept 2020 11:28 PM IST
share
ಕೋಲಾರ ಜಿಲ್ಲೆಯಲ್ಲಿ ಜೀತ ಪದ್ಧತಿ ಇನ್ನೂ ಜೀವಂತ: 25 ವರ್ಷಗಳಿಂದ ಬಿಡುಗಡೆಗೆ ಕಾಯುತ್ತಿರುವ ಕುಟುಂಬ

ಕೋಲಾರ, ಸೆ.15: ಸುಮಾರು 25 ವರ್ಷಗಳಿಂದ ಒಂಟಿ ಮನೆ ಎಸ್ಟೇಟ್‌ನಲ್ಲಿ ಖೈದಿಗಳಂತೆ ಜೀತಕ್ಕಿದ್ದ ಕುಟುಂಬವೊಂದು ತಮ್ಮ ಬಿಡುಗಡೆಗಾಗಿ ಅಲವತ್ತುಕೊಂಡ ಪ್ರಕರಣ ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಹುದುಕುಳ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.

ಬಂಗಾರಪೇಟೆ ತಾಲೂಕಿನ ಬೂದಿಕೋಟೆ ಹೋಬಳಿಯ ದೊಡ್ಡಪನ್ನಾಂಡಹಳ್ಳಿ ಗ್ರಾಮದ ಕೃಷ್ಣಪ್ಪ(65) ಎಂಬವರು ಪತ್ನಿ ರುಕ್ಕಮ್ಮ (55) ಹಾಗೂ ಮಗಳು ಸಂಜನಾ (13) ಜೊತೆ ಕೋಲಾರ ರಸ್ತೆಯಲ್ಲಿರುವ ಹುದುಕುಳ ಗ್ರಾಮದ ಶಿವಾನಂದ ಎಂಬವವರ ಗಂಗಾ ಎಸ್ಟೇಟ್‌ನಲ್ಲಿ ಜೀತ ಮಾಡುತ್ತಿರುವುದು ತಿಳಿದುಬಂದಿದೆ.

ಈ ಕುಟುಂಬದ ಬಗ್ಗೆ ಮಾಹಿತಿ ಕಲೆ ಹಾಕಿದ ಬಂಗಾರಪೇಟೆ ಜೀವಿಕ ಸಂಘಟನೆ ಕಾರ್ಯಕರ್ತರು, ಸದರಿ ವಿಷಯವನ್ನು ಮಾನ್ಯ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದಿದ್ದರು. ಈ ಮಾಹಿತಿಯನ್ನು ಖಚಿತ ಪಡಿಸಿಕೊಳ್ಳಲು ಜಿಲ್ಲಾಧಿಕಾರಿ ಸಿ.ಸತ್ಯಬಾಮ, ಜಿಪಂ ಉಪಕಾರ್ಯದರ್ಶಿ ಸಂಜೀವಪ್ಪ ಅವರಿಗೆ ಗ್ರೌಂಡ್ ರಿಪೋರ್ಟ್ ನೀಡುವಂತೆ ಸೂಚಿಸಿದ್ದರು.

ಈ ಹಿನ್ನಲೆಯಲ್ಲಿ ಮಂಗಳವಾರ ಸಂಜೆ ಜಿಪಂ ಉಪ ಕಾರ್ಯದರ್ಶಿ ಕೆ. ಸಂಜೀವಪ್ಪ, ಹಲವು ಅಧಿಕಾರಿಗಳೊಂದಿಗೆ ಸತ್ಯಾಂಶ ತಿಳಿಯಲು ಗಂಗಾ ಎಸ್ಟೇಟ್‌ಗೆ ಭೇಟಿ ನೀಡಿ ಜೀತಕ್ಕಿದ್ದ ಕುಟುಂಬದವರ ಜೊತೆ ವಾತನಾಡಿ, ಮಾಹಿತಿ ಪಡೆದುಕೊಂಡರು.

ಈ ಸಂದಭರ್ದಲ್ಲಿ ಬಂಗಾರಪೇಟೆ ತಾಪಂ ಕಾರ್ಯನಿರ್ವಹಣಾಧಿಕಾರಿ ಎನ್.ವೆಂಕಟೇಶಪ್ಪ, ಚಿಕ್ಕಅಂಕಂಡಹಳ್ಳಿ ಪಿಡಿಒ ಚಿತ್ರಾವತಿ, ಕಸಬಾ ಕಂದಾಯ ವೃತ್ತದ ರಾಜಸ್ವ ನಿರೀಕ್ಷಕ ಅಜ್, ಜೀವಿಕ ಒಕ್ಕೂಟದ ಅಧ್ಯಕ್ಷ ಹಿರೇಕರಪನಹಳ್ಳಿ ವಿ.ಯಲ್ಲಪ್ಪ, ಜೀವಿಕ ಗ್ರಾಮ ಅಭಿವೃದ್ಧಿ ಸಂಸ್ಥೆ ಅಧ್ಯಕ್ಷ ಡಾ.ರಾಮಚಂದ್ರಪ್ಪ, ಜೀವಿಕ ಒಕ್ಕೂಟದ ತಾಲೂಕು ಅಧ್ಯಕ್ಷ ಕಳ್ಳಿಕುಪ್ಪ ತಿಪ್ಪಣ್ಣ, ಒಕ್ಕೂಟದ ಮುಖಂಡ ಆನಂದ್ ಸೇರಿದಂತೆ ಹುದುಕುಳ ಕಂದಾಯ ವ್ಯಾಪ್ತಿಯ ಉಪಸ್ಥಿತರಿದ್ದರು.

25 ವರ್ಷಗಳ ಹಿಂದೆ ನಾರಾಯಣಪ್ಪ ಎಂಬವರು ಇಲ್ಲಿ ಕೆಲಸಕ್ಕೆ ಸೇರಿಸಿದ್ದರು. ಪ್ರಾರಂಭದಲ್ಲಿ ಕೆಲವು ದಿನ ಕೂಲಿಯನ್ನು ನೀಡಿದ್ದರು. ಬಳಿಕ ಕೂಲಿ ಕೊಡಲೇ ಇಲ್ಲ. ಊಟಕ್ಕೆ ದಿನಸಿಯನ್ನೂ ಸಹ ಕೊಡಲಿಲ್ಲ. ಎಸ್ಟೇಟ್ ಮಾಲಕ ಮರಿಯಪ್ಪ (ಉ) ಶಿವಾನಂದ ಅವರ ಮನಸ್ಸಿಗೆ ತೋಚಿದಾಗ ಒಂದಿಷ್ಟು ದಿನಸಿ ಅಥವಾ ಕಾಸು ಕೊಡ್ತಾ ಇದ್ದರು. ಕೆಲವು ವರ್ಷಗಳಿಂದ ಅದೂ ಕೂಡ ಕೊಡುತ್ತಿಲ್ಲ. ವಾಪಸ್ ಹೋಗಲು ಗ್ರಾಮದಲ್ಲೂ ಏನೂ ಇಲ್ಲ. ಇಷ್ಟು ವರ್ಷಗಳ ಕಾಲ ದುಡಿದ ನಮ್ಮ ಕುಟುಂಬಕ್ಕೆ ಈಗಲಾದರೂ ದುಡಿದಿರುವ ಕೂಲಿ ಹಣ ಕೊಟ್ಟು ಕಳಿಸಿಕೊಟ್ಟರೆ ನಮ್ಮೂರಿಗೆ ವಾಪಸ್ ಹೋಗಲು ಸಿದ್ಧರಿದ್ದೇವೆ.
-ಕೃಷ್ಣಪ್ಪ, ಗಂಗಾ ಎಸ್ಟೇಟ್‌ನಲ್ಲಿ ಜೀತಕ್ಕಿದ್ದವರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X