Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೃಷಿ, ಕೃಷಿಯೇತರ ಕ್ಷೇತ್ರಕ್ಕೆ 39,300...

ಕೃಷಿ, ಕೃಷಿಯೇತರ ಕ್ಷೇತ್ರಕ್ಕೆ 39,300 ಕೋಟಿ ರೂ. ಸಾಲ: ಸಿಎಂ ಯಡಿಯೂರಪ್ಪ

ಆರ್ಥಿಕ ಸ್ಪಂದನ ಕಾರ್ಯಕ್ಕೆ ಮುಖ್ಯಮಂತ್ರಿ ಚಾಲನೆ

ವಾರ್ತಾಭಾರತಿವಾರ್ತಾಭಾರತಿ16 Sept 2020 5:13 PM IST
share
ಕೃಷಿ, ಕೃಷಿಯೇತರ ಕ್ಷೇತ್ರಕ್ಕೆ 39,300 ಕೋಟಿ ರೂ. ಸಾಲ: ಸಿಎಂ ಯಡಿಯೂರಪ್ಪ

ಬೆಂಗಳೂರು, ಸೆ. 16: ಭಾರತದಲ್ಲಿ ಸಹಕಾರಿ ಚಳುವಳಿ ಹೆಮ್ಮರವಾಗಿ ಬೆಳೆದಿದೆ. ಬಡವರಿಗೆ, ಹೆಣ್ಣುಮಕ್ಕಳಿಗೆ, ರೈತರಿಗೆ ಸಹಕಾರಿಯಾಗಿ ನಿಂತಿದೆ. ಕೃಷಿ ಹಾಗೂ ಕೃಷಿಯೇತರ ಕ್ಷೇತ್ರಕ್ಕೆ 39,300 ಕೋಟಿ ರೂಪಾಯಿ ಸಾಲವನ್ನು ನೀಡಲು ಮುಂದಾಗಿದ್ದೇವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದಿಲ್ಲಿ ಪ್ರಕಟಿಸಿದ್ದಾರೆ.

ಬುಧವಾರ ಸಹಕಾರ ಇಲಾಖೆ ವತಿಯಿಂದ ಕೋವಿಡ್-19 ಹಿನ್ನೆಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರಗಳ ವಿವಿಧ ಯೋಜನೆಗಳ ಆರ್ಥಿಕ ಸ್ಪಂದನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕೋವಿಡ್-19ರ ಸಂಕಷ್ಟಗಳ ಕಾಲದಲ್ಲಿ ಸಹಕಾರ ಇಲಾಖೆ ವತಿಯಿಂದ 53 ಕೋಟಿ ರೂ.ದೇಣಿಗೆ ನೀಡಿರುವುದಕ್ಕೆ ಸಹಕಾರ ಸಚಿವರಾದ ಸೋಮಶೇಖರ್ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಹೈನುಗಾರಿಕೆ, ಮೀನುಗಾರಿಕೆ ಸಾಲಕ್ಕಾಗಿ 2020-21ನೆ ಸಾಲಿನಲ್ಲಿ 38 ಸಾವಿರ ಜನರಿಗೆ 100 ಕೋಟಿ ರೂ.ಸಾಲ ವಿತರಣೆ ಗುರಿ ಹೊಂದಲಾಗಿದ್ದು, ಈವರೆಗೆ 34,927 ಜನರಿಗೆ 60.30 ಕೋಟಿ ರೂ.ವಿತರಿಸಲಾಗಿದೆ ಎಂದ ಅವರು, ಕೃಷಿ ಮತ್ತು ಕೃಷಿಯೇತರರು ಸೇರಿದಂತೆ ಅಶಕ್ತ ವಲಯದ ಜನರಿಗೆ ಆರ್ಥಿಕ ನೆರವು ಕಲ್ಪಿಸಲು ರಾಜ್ಯ ಸರಕಾರ ಬದ್ಧವಾಗಿದೆ ಎಂದು ಯಡಿಯೂರಪ್ಪ ತಿಳಿಸಿದರು.

ಇದೇ ವೇಳೆ ಮಾತನಾಡಿದ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್, ಕೋವಿಡ್-19ರ ಸನ್ನಿವೇಶದಲ್ಲಿ ದೇಶದ ಸಮಗ್ರ ಅಭಿವೃದ್ಧಿಗೆ ಆತ್ಮನಿರ್ಭರ ಭಾರತ ಯೋಜನೆಯಡಿ 20 ಲಕ್ಷ ಕೋಟಿ ರೂ.ಗಳನ್ನು ನೀಡಿದ್ದಾರೆ. ಇನ್ನು ಸಣ್ಣ, ಮಧ್ಯಮ ಹಾಗೂ ಅತಿಸಣ್ಣ ರೈತರಿಗೆ ಸಾಲ ನೀಡಬೇಕು ಎಂಬ ನಿಟ್ಟಿನಲ್ಲಿ ಈಗ ಆರ್ಥಿಕ ಸ್ಪಂದನ ಕಾರ್ಯಕ್ರಮದಡಿ ಸುಮಾರು 39 ಸಾವಿರ ಕೋಟಿ ರೂ.ನೀಡುವ ಯೋಜನೆಗೆ ಸಿಎಂ ಚಾಲನೆ ನೀಡಿದ್ದಾರೆಂದು ತಿಳಿಸಿದರು.

ಈ ಯೋಜನೆಯಡಿ ನಾಲ್ಕು ವಲಯಗಳಲ್ಲಿ ವಿತರಣೆ ಮಾಡಲಾಗುತ್ತಿದ್ದು, ಮೊದಲಿಗೆ ಬೆಂಗಳೂರು ವಲಯದಲ್ಲಿ ವಿತರಣೆ ಮಾಡಲಾಗುತ್ತಿದೆ. ಈ ಮೂಲಕ ರೈತರನ್ನು ಆರ್ಥಿಕ ಸಬಲರನ್ನಾಗಿ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಉಳಿದ ಮೂರು ವಲಯಗಳಿಗೆ ಈ ಯೋಜನೆಯಡಿ ಸಾಲವನ್ನು ವಿತರಣೆ ಮಾಡಲಾಗುತ್ತದೆ. ಕೋವಿಡ್ ಸಂದರ್ಭದಲ್ಲಿ ಬಡವರಿಗೆ ಕುಡಿಯುವ ಹಾಲು ವಿತರಣೆ ಮಾಡಲು 79 ಕೋಟಿಯನ್ನು ಕೆಎಂಎಫ್‍ಗೆ ಬಿಡುಗಡೆ ಮಾಡಿದ್ದೇವೆ. ಇನ್ನು ರೈತರಿಗೂ ಸಾಲ ಕೊಡುವ ಕೆಲಸವನ್ನು ಮಾಡುತ್ತಿದ್ದೇವೆ. 15,300 ಕೋಟಿ ರೂ.ಬೆಳೆ ಸಾಲ ನೀಡುವ ಗುರಿ ಇದ್ದು, ಈವರೆಗೆ 12.11 ಲಕ್ಷ ರೈತರಿಗೆ 7929.30 ಕೋಟಿ ರೂ.ಸಾಲವನ್ನು ಶೂನ್ಯ ಹಾಗೂ ಶೇ.3ರ ಬಡ್ಡಿದರದಲ್ಲಿ ವಿತರಣೆ ಮಾಡಲಾಗಿದೆ ಎಂದು ತಿಳಿಸಿದರು.

ಇನ್ನು ಮುಖ್ಯಮಂತ್ರಿಗಳ ಕೋವಿಡ್ ಪರಿಹಾರ ನಿಧಿಗೆ 53 ಕೋಟಿ ರೂ.ದೇಣಿಗೆಯನ್ನು ಸಹಕಾರ ವಲಯ ಹಾಗೂ ಎಪಿಎಂಸಿಗಳ ಮೂಲಕ ಸಂಗ್ರಹಿಸಿ ಕೊಟ್ಟಿದ್ದೇನೆ. ಜೊತೆಗೆ ಕೊರೋನ ವಾರಿಯರ್ಸ್ ಗಳಾದ 12,608 ಆಶಾ ಕಾರ್ಯಕರ್ತೆಯರಿಗೆ 12.75 ಕೋಟಿ ರೂ. ಪ್ರೋತ್ಸಾಹಧನವನ್ನು ವಿತರಣೆ ಮಾಡಿದ್ದೇವೆ ಎಂದು ಸಚಿವರಾದ ಸೋಮಶೇಖರ್ ತಿಳಿಸಿದರು.

1,885 ಕೋಟಿ ರೂ.ಅನುದಾನವನ್ನು ಕೆಎಂಎಫ್‍ನಡಿ ತಲಾ 5 ರೂ.ನಂತೆ ಪ್ರೋತ್ಸಾಹಧನ ಕೊಡುವ ಕೆಲಸವನ್ನು ಸಿಎಂ ಮಾಡಿದ್ದಾರೆ. ರೈತರ ಹಾಗೂ ಜನರ ಅಭ್ಯುದಯಕ್ಕೆ ದುಡಿಯುತ್ತಿದ್ದಾರೆ ಎಂದ ಅವರು, ಹೈನುಗಾರರಿಗೆ ಹಾಗೂ ಮೀನುಗಾರರಿಗೆ ಶೂನ್ಯ ಬಡ್ಡಿದರದಲ್ಲಿ 2 ಲಕ್ಷ ರೂ.ಸಾಲ ಕೊಡುವ ಯೋಜನೆಯನ್ನು ಹೊಸದಾಗಿ ಪ್ರಾರಂಭಿಸಲಾಗಿದೆ. ಈ ಎಲ್ಲ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸುವ ಪ್ರಾಮಾಣಿಕ ಪ್ರಯತ್ನವನ್ನು ಸಿಎಂ ನೇತೃತ್ವದಲ್ಲಿ ಮಾಡುತ್ತೇವೆ ಎಂದು ತಿಳಿಸಿದರು.

ಸಾಂಕೇತಿಕ ಸಾಲ ವಿತರಣೆ: ಆರ್ಥಿಕ ಸ್ಪಂದನ ಕಾರ್ಯಕ್ರಮದಡಿ ವಿವಿಧ ಯೋಜನೆಯಲ್ಲಿ 50 ಫಲಾನುಭವಿಗಳಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಸಾಂಕೇತಿಕವಾಗಿ ಸಾಲದ ಚೆಕ್ ಅನ್ನು ವಿತರಣೆ ಮಾಡಿದರು. ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಲಕ್ಷ್ಮಣ ಸಂಗಪ್ಪ ಸವದಿ, ಡಾ.ಅಶ್ವಥ್ ನಾರಾಯಣ, ಪರಿಷತ್ ಸದಸ್ಯ ರಮೇಶ್ ಗೌಡ, ಸಹಕಾರ ಇಲಾಖೆಯ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ್, ರಾಜ್ಯ ಸಹಕಾರಿ ಮಾರಾಟ ಮಹಾಮಂಡಳದ ಅಧ್ಯಕ್ಷ ಡಾ. ರಾಜೇಂದ್ರ ಕುಮಾರ್, ಸಹಕಾರ ಸಂಘಗಳ ನಿಬಂಧಕ ಎಸ್.ಜಿಯಾವುಲ್ಲ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X