Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸೆ.18 ರಿಂದ 21ರವರೆಗೆ ‘ಕರ್ನಾಟಕ...

ಸೆ.18 ರಿಂದ 21ರವರೆಗೆ ‘ಕರ್ನಾಟಕ ಕಲ್ಯಾಣ’ ಯಾತ್ರೆ: ಸಂಯುಕ್ತ ಜನತಾದಳ ರಾಜ್ಯಾಧ್ಯಕ್ಷ ಮಹಿಮಾ ಪಟೇಲ್

ವಾರ್ತಾಭಾರತಿವಾರ್ತಾಭಾರತಿ16 Sept 2020 5:59 PM IST
share
ಸೆ.18 ರಿಂದ 21ರವರೆಗೆ ‘ಕರ್ನಾಟಕ ಕಲ್ಯಾಣ’ ಯಾತ್ರೆ: ಸಂಯುಕ್ತ ಜನತಾದಳ ರಾಜ್ಯಾಧ್ಯಕ್ಷ ಮಹಿಮಾ ಪಟೇಲ್

ಬೆಂಗಳೂರು, ಸೆ.16: ಸಂಯುಕ್ತ ಜನತಾದಳ ಪಕ್ಷ ಮತ್ತು ಜನತಾ ಪರಿವಾರದ ಸಹಭಾಗಿತ್ವದಲ್ಲಿ ಪಕ್ಷ ಮತ್ತು ಪುನರ್ ಸಂಘಟನೆಗಾಗಿ ‘ಕರ್ನಾಟಕದ ಕಲ್ಯಾಣ’ ಯಾತ್ರೆಯನ್ನು ಸೆ.18ರಿಂದ 21ರವರೆಗೆ ಕೋಲಾರದಿಂದ ಬೆಂಗಳೂರಿನವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಸಂಯುಕ್ತ ಜನತಾದಳ ಪಕ್ಷದ ರಾಜ್ಯಾಧ್ಯಕ್ಷ ಮಹಿಮಾ ಪಟೇಲ್ ತಿಳಿಸಿದ್ದಾರೆ.

ಸೆ.18ರಂದು ಬೆಳಗ್ಗೆ 10 ಗಂಟೆಗೆ ಕೋಲಾರ ನಗರದಲ್ಲಿ ರಾಷ್ಟ್ರಪಿತ ಮಹಾತ್ಮಗಾಂಧೀಜಿಯವರ ಪ್ರತಿಮೆಗೆ ಮಾಲಾರ್ಪಣೆ ಮಾಡುವುದರ ಮುಖಾಂತರ ನಮ್ಮ ಪಕ್ಷದ ಕಾರ್ಯಕರ್ತರು, ಮುಖಂಡರು, ಚಿಂತಕರು ಹಾಗೂ ಸಾರ್ವಜನಿಕರೊಂದಿಗೆ ಆರಂಭಗೊಳ್ಳುವ ಪಾದಯಾತ್ರೆ ಬೆಂಗಳೂರಿನ ಗಾಂಧಿ ನಗರದ ಮೌರ್ಯ ವೃತ್ತದಲ್ಲಿ ಇರುವ ಮಹಾತ್ಮಗಾಂಧೀಜಿಯವರ ಪ್ರತಿಮೆ ಮುಂದೆ ಸೆ.21ರಂದು ಸಮಾಪ್ತಿಯಾಗಲಿದೆ ಎಂದು ಅವರು ತಿಳಿಸಿದ್ದಾರೆ.

ರಾಜ್ಯ ಸರಕಾರ ಆತುರಾತುರದಲ್ಲಿ ಎಪಿಎಂಸಿ ಕಾಯ್ದೆ ಹಾಗೂ ಭೂಸುಧಾರಣೆ ಕಾಯ್ದೆಗೆ ಸುಗ್ರೀವಾಜ್ಞೆ ತರುವುದರ ಮೂಲಕ ತಾನು ಉಳ್ಳವರು ಮತ್ತು ಉದ್ಯಮಿಗಳ ಪರವಾಗಿ ತನ್ನ ಧೋರಣೆಯನ್ನು ಪ್ರಚುರಪಡಿಸಿದೆ. ಎಪಿಎಂಸಿಗಳ ಸ್ಥಾನವನ್ನು ದೊಡ್ಡ ದೊಡ್ಡ ಉದ್ಯಮಿಗಳು ಹಾಗೂ ಕಾರ್ಪೋರೇಟ್ ಸಂಸ್ಥೆಗಳು ಆಕ್ರಮಿಸಿಕೊಳ್ಳುವುದರ ಮುಖಾಂತರ ಎಪಿಎಂಸಿ ಮಳಿಗೆಗಳು ಶಾಶ್ವತವಾಗಿ ಮುಚ್ಚಲ್ಪಡುತ್ತವೆ. ಎಪಿಎಂಸಿ ಗಳಲ್ಲಿ ಕೆಲಸ ಮಾಡುತ್ತಿದ್ದ ಸಹಸ್ರಾರು ಕೃಷಿ ಕಾರ್ಮಿಕರ ಬದುಕು ದುರ್ಬರವಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಭೂಸುಧಾರಣೆ ಕಾಯ್ದೆಯಿಂದಾಗಿ ರೈತರ ಜಮೀನು ಯಾರೂ ಬೇಕಾದರೂ ಕ್ರಯಕ್ಕೆ ಪಡೆಯಬಹುದು, ಇಂತಹ ಕಾಯ್ದೆಯಿಂದಾಗಿ ತನ್ನ ಜಮೀನನ್ನು ಮಾರಿಕೊಂಡ ರೈತ ಅದೇ ಜಮೀನಿನಲ್ಲಿ ಕೃಷಿ ಕಾರ್ಮಿಕನಾಗಿ ದುಡಿಯುವಂತ ದೈನೇಷಿ ಪರಿಸ್ಥಿತಿ ನಿರ್ಮಾಣವಾಗುತ್ತದೆ ಎಂದು ಅವರು ಆರೋಪಿಸಿದ್ದಾರೆ.

ರಾಜ್ಯ ಸರಕಾರ ಈ ಕಾಯ್ದೆಯ ಮೂಲಕ ಮತ್ತೊಮ್ಮೆ ಜಮೀನ್ದಾರಿ ಪದ್ದತಿಯನ್ನು ಬೆಂಬಲಿಸುತ್ತಿದೆ. ರಾಜ್ಯ ಸರಕಾರದ ಮತ್ತೊಂದು ಅವಗಡ ಎಂದರೆ ಸ್ಥಳೀಯ ಸಂಸ್ಥೆಯ ವ್ಯಾಪ್ತಿಗೆ ಬರುವ ಆಸ್ತಿಗಳನ್ನು ಪರಬಾರೆ ಮಾಡುವ ತೀರ್ಮಾನಕ್ಕೆ ಬಂದಿರುವುದು ನಿಜಕ್ಕೂ ದುರಂತವೇ ಸರಿ ಎಂದು ಅವರು ತಿಳಿಸಿದ್ದಾರೆ.

ರಾಜ್ಯವು ಕೈಗಾರಿಕ ರಂಗದಲ್ಲಿ 8ನೇ ಸ್ಥಾನದಿಂದ 17ನೇ ಸ್ಥಾನಕ್ಕೆ ಇಳಿದಿದ್ದು ಆತಂತಕ್ಕೆ ದೂಡಿದೆ. ದುಡಿಯುವ ಕೈಗಳಿಗೆ ಕೆಲಸವೇ ಇಲ್ಲದಂತಾಗಿದೆ. ಒಟ್ಟಾರೆಯಾಗಿ ಇನ್ನು ಅನೇಕ ಜ್ವಲಂತ ಸಮಸ್ಯೆಗಳಿಂದ ಕರ್ನಾಟಕ ರಾಜ್ಯ ಮತ್ತು ರಾಜ್ಯದ ಜನತೆ ತತ್ತರಿಸಿದೆ. ಈ ಎಲ್ಲ ಸಮಸ್ಯೆಗಳಿಂದ ರಾಜ್ಯವನ್ನು ಮುಕ್ತಗೊಳಿಸುವ ನಿಟ್ಟಿನಲ್ಲಿ ಸಂಯುಕ್ತ ಜನತಾದಳ ಪಕ್ಷ ಹಾಗೂ ಜನತಾ ಪರಿವಾರ ಹಲವು ಕಾರ್ಯಕ್ರಮಗಳನ್ನು ಹಾಕಿಕೊಳ್ಳುವುದರ ಮುಖಾಂತರ ಕಾರ್ಯ ತತ್ಪರವಾಗಿದೆ ಎಂದು ಮಹಿಮ ಪಟೇಲ್ ತಿಳಿಸಿದ್ದಾರೆ.

ರಾಜ್ಯದ ಜನತೆ ಶಾಂತಿ, ಸಹಬಾಳ್ವೆ, ಕೋಮು ಸಾಮರಸ್ಯ, ಭಯ ಮುಕ್ತ ವಾತಾವಣದಲ್ಲಿ ಜೀವಿಸಲು ಅವಕಾಶ ಕಲ್ಪಸುವುದು. ಒಟ್ಟಾರೆಯಾಗಿ ‘ಸಮರಸವೇ ಜೀವನ’ ಮತ್ತು ‘ಸರ್ವೇಜನಾ ಸುಖೀನೋಭವಂತು’ ಎಂಬ ಸಂಕಲ್ಪದೊಂದಿಗೆ ನಾವು ಮತ್ತು ನಮ್ಮ ಪಕ್ಷ ಸಮಗ್ರ ಕರ್ನಾಟಕದ ಅಭಿವೃದ್ಧಿ ದೃಷ್ಠಿಯಿಂದ ‘ಕರ್ನಾಟಕದ ಕಲ್ಯಾಣ’ ಯಾತ್ರೆಯನ್ನು ಹಮ್ಮಿಕೊಂಡಿದ್ದೇವೆ ಎಂದು ಮಹಿಮಾ ಪಟೇಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X