Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೇಂದ್ರ ಸರಕಾರವು ಒಕ್ಕೂಟ ವ್ಯವಸ್ಥೆಯನ್ನು...

ಕೇಂದ್ರ ಸರಕಾರವು ಒಕ್ಕೂಟ ವ್ಯವಸ್ಥೆಯನ್ನು ನಾಶ ಮಾಡಲು ಮುಂದಾಗಿದೆ: ವೈಎಸ್‍ವಿ ದತ್ತ

ವಾರ್ತಾಭಾರತಿವಾರ್ತಾಭಾರತಿ16 Sept 2020 8:07 PM IST
share
ಕೇಂದ್ರ ಸರಕಾರವು ಒಕ್ಕೂಟ ವ್ಯವಸ್ಥೆಯನ್ನು ನಾಶ ಮಾಡಲು ಮುಂದಾಗಿದೆ: ವೈಎಸ್‍ವಿ ದತ್ತ

ಬೆಂಗಳೂರು, ಸೆ.16: ಕೇಂದ್ರ ಸರಕಾರ ಜಾರಿಗೆ ಮುಂದಾಗಿರುವ ನೂತನ ಶಿಕ್ಷಣ ನೀತಿ(ಎನ್‍ಇಪಿ) ಒಕ್ಕೂಟ ವ್ಯವಸ್ಥೆಗೆ ಮಾರಕವಾಗಿದ್ದು, ಈ ನೀತಿಯ ಸಂಬಂಧ ಸಂಸತ್ತು ಹಾಗೂ ವಿಧಾನಸಭೆಗಳಲ್ಲಿ ಚರ್ಚಿಸುವ ವ್ಯವದಾನ ಅಧಿಕಾರದಲ್ಲಿರುವವರಿಗೆ ಇಲ್ಲ ಎಂದು ಮಾಜಿ ಶಾಸಕ ವೈಎಸ್‍ವಿ ದತ್ತ ಅಭಿಪ್ರಾಯಪಟ್ಟಿದ್ದಾರೆ.

ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಎನ್‍ಇಪಿ 2020 ವಿರೋಧಿಸಿ ವಿವಿಧ ವಿದ್ಯಾರ್ಥಿ ಸಂಘಟನೆಗಳಿಂದ ಜಂಟಿಯಾಗಿ ಆಯೋಜಿಸಿದ್ದ ಆನ್‍ಲೈನ್ ವೆಬಿನಾರ್ ನಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಶಿಕ್ಷಣ ಕ್ಷೇತ್ರವು ಕೇಂದ್ರ ಸರಕಾರಕ್ಕೆ ಮಾತ್ರ ಸೇರಿದ್ದಲ್ಲ. ಈ ಕ್ಷೇತ್ರವು ಕೇಂದ್ರ ಮತ್ತು ರಾಜ್ಯ ಎರಡಕ್ಕೂ ಸೇರಿದ್ದಾಗಿದೆ ಎಂದು ಹೇಳಿದರು.

ಕೇಂದ್ರ ಸರಕಾರವು ಒಕ್ಕೂಟ ವ್ಯವಸ್ಥೆಯನ್ನು ನಾಶ ಮಾಡಲು ಮುಂದಾಗಿದೆ. ಸರಕಾರವು ಎನ್‍ಇಪಿ ಜಾರಿ ಮಾಡುವ ಮುನ್ನ ಜನಾಭಿಪ್ರಾಯ ಪಡೆಯಬೇಕಿತ್ತು. ಆದರೆ, ಯಾವುದೇ ಅಭಿಪ್ರಾಯ ಪಡೆಯಲು ಮುಂದಾಗುತ್ತಿಲ್ಲ ಹಾಗೂ ಸಂಘ-ಸಂಸ್ಥೆಗಳು ನೀಡಿರುವ ಅಭಿಪ್ರಾಯವನ್ನು ಸರಕಾರ ಪರಿಗಣಿಸುತ್ತಿಲ್ಲ ಎಂದು ಅವರು ಆಪಾದಿಸಿದರು.

ಭಾರತ ಬಹುತ್ವವನ್ನು ಅಳವಡಿಸಿಕೊಂಡಿರುವ ದೇಶವಾಗಿದ್ದು, ಒಕ್ಕೂಟ ವ್ಯವಸ್ಥೆಯನ್ನು ಒಪ್ಪಿಕೊಂಡಿದ್ದೇವೆ. ಈ ವ್ಯವಸ್ಥೆಯಲ್ಲಿ ಕೇಂದ್ರವು ಯಜಮಾನನಲ್ಲ, ಮುಖ್ಯಸ್ಥ ಮಾತ್ರ. ಕೇಂದ್ರ ಸರಕಾರವು ಪ್ರಾದೇಶಿಕತೆಗೆ ಮಾನ್ಯತೆ ನೀಡಬೇಕು ಎಂದು ಅವರು ಪ್ರತಿಪಾದಿಸಿದರು.

ಕೇಂದ್ರ ಸರಕಾರವು ಸವಾರ್ಧಿಕಾರಿಯಂತೆ ತನ್ನ ನಿಲುವನ್ನು ಬಲವಂತವಾಗಿ ಹೇರಲು ಮುಂದಾಗಿದೆ. ಅದರ ಭಾಗವಾಗಿಯೇ ಈ ಶಿಕ್ಷಣ ನೀತಿಯಾಗಿದೆ. ಆದುದರಿಂದಾಗಿ ಸರಕಾರ ಯಾವುದೇ ಚರ್ಚೆಗಳಿಲ್ಲದೆ ಶಿಕ್ಷಣ ನೀತಿ ಮಾಡಿದ್ದು, ಅದರಲ್ಲಿ ಹಿಂದಿ ಮತ್ತು ಸಂಸ್ಕೃತವನ್ನು ತುರುಕಲಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ, ವಿವಿಧತೆಯಲ್ಲಿ ಏಕತೆ ಎಂದು ಪ್ರತಿಪಾದಿಸುವ ದೇಶದಲ್ಲಿ ಇದು ಅಪ್ರಜಾಸತ್ತಾತ್ಮಕ ನಡೆಯಾಗಿದೆ ಎಂದು ದತ್ತ ಹೇಳಿದರು.

ನೂತನ ಶಿಕ್ಷಣ ನೀತಿಯು ಅಂಗನವಾಡಿಗಳು, ಬಾಲವಾಡಿಗಳನ್ನು ಇಲ್ಲದಂತೆ ಮಾಡುತ್ತದೆ. ಅದರಿಂದ ಅಲ್ಲಿ ದುಡಿಯುವ ಲಕ್ಷಾಂತರ ಕಾರ್ಮಿಕರ ಪರಿಸ್ಥಿತಿ ಏನಾಗಬೇಕು ಎಂದ ಅವರು, ಗ್ರಾಮೀಣ ಪ್ರದೇಶದ ಶಿಕ್ಷಣವನ್ನು ಕೇಂದ್ರೀಕರಿಸಲು ಹೊರಟಿದ್ದಾರೆ. ಇಡೀ ಶಿಕ್ಷಣ ಕ್ಷೇತ್ರವನ್ನು ಖಾಸಗೀಕರಣ ಮಾಡುವ ಹುನ್ನಾರದ ಭಾಗವಾಗಿ ಈ ನೀತಿಯಾಗಿದ್ದು, ಇದನ್ನು ಕೇಂದ್ರ ಸರಕಾರ ತಿರಸ್ಕರಿಸಬೇಕು ಎಂದರು.

ಕಾರ್ಮಿಕ ಮುಖಂಡ ಸಿದ್ದನಗೌಡ ಪಾಟೀಲ ಮಾತನಾಡಿ, ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರಕಾರವು ಈ ನೀತಿಯ ಮೂಲಕ ಶಿಕ್ಷಣದ ಖಾಸಗೀಕರಣ, ಕೇಸರೀಕರಣ ಹಾಗೂ ಕಾರ್ಪೋರೇಟರೀಕರಣ ಮಾಡಲು ಮುಂದಾಗಿದ್ದಾರೆ. ಅದಕ್ಕೆ ಮುಖವಾಡ ತೊಡಿಸಿ ಸಾಮಾನ್ಯ ಜನರಿಗೆ ತೋರಿಸುತ್ತಿದ್ದಾರೆ ಎಂದು ದೂರಿದರು.

ವೆಬಿನಾರ್ ನಲ್ಲಿ ಎನ್‍ಇಪಿ ಮತ್ತು ಹೆಣ್ಣು ಮಕ್ಕಳ ಶಿಕ್ಷಣ ಕುರಿತು ಚಿಂತಕಿ ಕೆ.ನೀಲಾ, ಉನ್ನತ ಶಿಕ್ಷಣದ ಮೇಲೆ ಎನ್‍ಇಪಿಯ ಪರಿಣಾಮಗಳು ಮತ್ತು ಪ್ರತಿರೋಧ ಕುರಿತು ಪ್ರೊ.ಡಿ.ಡೊಮೆನಿಕ್, ಎನ್‍ಇಪಿ ಮತ್ತು ಸಾಮಾಜಿಕ ನ್ಯಾಯ ಕುರಿತು ವಕೀಲ ಅನಂತ್‍ ನಾಯ್ಕ್, ಎನ್‍ಇಪಿ ವಿರುದ್ಧ ಐಕ್ಯ ಹೋರಾಟದ ಕುರಿತು ಚಿಂತಕ ಕ್ಲಿಪ್ಟಾನ್ ಡಿ’ರೋಜಾರಿಯೋ ಮಾತನಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X