Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿಮಾನಯಾನ ಸಂಸ್ಥೆಗಳ ಆದಾಯ 85 ಶೇ....

ವಿಮಾನಯಾನ ಸಂಸ್ಥೆಗಳ ಆದಾಯ 85 ಶೇ. ಕುಸಿತ: ಕೇಂದ್ರ ಸರಕಾರ

ವಾರ್ತಾಭಾರತಿವಾರ್ತಾಭಾರತಿ16 Sept 2020 9:50 PM IST
share
ವಿಮಾನಯಾನ ಸಂಸ್ಥೆಗಳ ಆದಾಯ 85 ಶೇ. ಕುಸಿತ: ಕೇಂದ್ರ ಸರಕಾರ

ಹೊಸದಿಲ್ಲಿ, ಸೆ.16: ಕೊರೋನ ಸೋಂಕಿನ ಕಾರಣದಿಂದ 2020-21ರ ಆರ್ಥಿಕ ವರ್ಷದ ಪ್ರಥಮ ತ್ರೈಮಾಸಿಕ ಅವಧಿಯಲ್ಲಿ ಭಾರತದ ವಿಮಾನಯಾನ ಸಂಸ್ಥೆಗಳ ಆದಾಯದಲ್ಲಿ 85.7ರಷ್ಟು % ಕುಸಿತವಾಗಿದೆ ಎಂದು ನಾಗರಿಕ ವಿಮಾನಯಾನ ಸಚಿವ ಹರ್ದೀಪ್‌ಸಿಂಗ್ ಪುರಿ ಹೇಳಿದ್ದಾರೆ.

ಭಾರತದ ವಿಮಾನಯಾನ ಸಂಸ್ಥೆಗಳು 2019ರ ಎಪ್ರಿಲ್-ಜೂನ್ ಅವಧಿಯಲ್ಲಿ 25,517 ಕೋಟಿ ಆದಾಯ ದಾಖಲಿಸಿದ್ದರೆ, 2020ರ ಎಪ್ರಿಲ್‌ನಿಂದ ಜೂನ್‌ವರೆಗಿನ ಅವಧಿಯಲ್ಲಿ ಆದಾಯ 3,651 ಕೋಟಿ ರೂ.ಗೆ ಕುಸಿದಿದೆ. ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಇದು 85.7% ಕಡಿಮೆಯಾಗಿದೆ ಎಂದು ಸಚಿವ ಸಿಂಗ್ ರಾಜ್ಯಸಭೆಯಲ್ಲಿ ಲಿಖಿತ ಉತ್ತರದ ಮೂಲಕ ತಿಳಿಸಿದರು.

ಭಾರತದ ವಿಮಾನಯಾನ ಸಂಸ್ಥೆಗಳ ಉದ್ಯೋಗಿಗಳ ಸಂಖ್ಯೆಯಲ್ಲೂ 7.07% ಇಳಿಕೆಯಾಗಿದ್ದು ಈ ವರ್ಷದ ಮಾರ್ಚ್ 31ರಂದು ಒಟ್ಟು 74,887 ಉದ್ಯೋಗಿಗಳಿದ್ದರೆ ಜುಲೈ 31ಕ್ಕೆ ಇದು 69,589ಕ್ಕೆ ಕುಸಿದಿದೆ. ಜೊತೆಗೆ, ವಿಮಾನನಿಲ್ದಾಣ ನಿರ್ವಾಹಕರ ಆದಾಯದಲ್ಲೂ ಇಳಿಕೆಯಾಗಿದ್ದು 2019ರ ಎಪ್ರಿಲ್-ಜೂನ್ ಅವಧಿಯಲ್ಲಿ 5,745 ಕೋಟಿ ರೂ. ಇದ್ದ ಆದಾಯ 2020ರ ಎಪ್ರಿಲ್-ಜೂನ್‌ನಲ್ಲಿ 894 ಕೋಟಿ ರೂ.ಗೆ ಇಳಿದಿದೆ. ವಿಮಾನ ನಿಲ್ದಾಣಗಳಲ್ಲಿನ ಉದ್ಯೋಗಿಗಳ ಸಂಖ್ಯೆಯೂ ಕಡಿಮೆಯಾಗಿದ್ದು ಮಾರ್ಚ್ 31ಕ್ಕೆ 67,760 ಉದ್ಯೋಗಿಗಳಿದ್ದರೆ ಜುಲೈ 31ಕ್ಕೆ ಇದು 64,514ಕ್ಕೆ ಇಳಿದಿದೆ. ಕೊರೋನ ಸೋಂಕಿನ ಹಿನ್ನೆಲೆಯಲ್ಲಿ ದೇಶದಲ್ಲಿ ವಿಮಾನಸೇವೆಯನ್ನು ಮಾರ್ಚ್ 25ರಿಂದ ಮೇ 24ರವರೆಗೆ ಸ್ಥಗಿತಗೊಳಿಸಿರುವುದು ಆದಾಯ ಕುಸಿತಕ್ಕೆ ಪ್ರಮುಖ ಕಾರಣವಾಗಿದೆ.

2019ರ ಎಪ್ರಿಲ್-ಜೂನ್ ಅವಧಿಯಲ್ಲಿ ಏರ್‌ಇಂಡಿಯಾದ ಒಟ್ಟು ಆದಾಯ 7,066 ಕೋಟಿ ರೂ. ಆಗಿತ್ತು. 2020ರ ಎಪ್ರಿಲ್-ಜೂನ್ ಅವಧಿಯಲ್ಲಿ ಇದು 1,531 ಕೋಟಿ ರೂ.ಗೆ ಇಳಿಕೆಯಾಗಿದೆ. 2019-20ರ ಅವಧಿಯಲ್ಲಿ ದೇಶದಲ್ಲಿ 5.85 ಕೋಟಿ ದೇಶೀಯ ವಾಯುಸಂಚಾರದ ಪ್ರಮಾಣ 5.85 ಕೋಟಿಯಿದ್ದರೆ 2020ರ ಎಪ್ರಿಲ್-ಜೂನ್ ಅವಧಿಯಲ್ಲಿ ಇದು 1.2 ಕೋಟಿಗೆ ಇಳಿದಿದೆ. ಇದೇ ಅವಧಿಯಲ್ಲಿ ಅಂತರಾಷ್ಟ್ರೀಯ ವಾಯುಸಂಚಾರದ ಪ್ರಮಾಣವೂ ಕುಸಿದಿದೆ (2019ರಲ್ಲಿ 93.45 ಲಕ್ಷ, 2020ರಲ್ಲಿ 11.55 ಲಕ್ಷ) ಎಂದವರು ವಿವರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X