Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. 4 ವರ್ಷಗಳಲ್ಲಿ ರಾಜ್ಯದ ಸಾಂಸ್ಕೃತಿಕ ವಲಯ...

4 ವರ್ಷಗಳಲ್ಲಿ ರಾಜ್ಯದ ಸಾಂಸ್ಕೃತಿಕ ವಲಯ ಸಂಪನ್ನ: ಸಚಿವ ಎ.ಕೆ.ಬಾಲನ್

ಕೇರಳ ತುಳುಭವನ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ18 Sept 2020 10:27 PM IST
share
4 ವರ್ಷಗಳಲ್ಲಿ ರಾಜ್ಯದ ಸಾಂಸ್ಕೃತಿಕ ವಲಯ ಸಂಪನ್ನ: ಸಚಿವ ಎ.ಕೆ.ಬಾಲನ್

ಕಾಸರಗೋಡು : ವೈವಿಧ್ಯಮಯ ಯೋಜನೆಗಳ ಜಾರಿಯ ಮೂಲಕ ರಾಜ್ಯದ ಸಾಂಸ್ಕೃತಿಕ ವಲಯವನ್ನು ಸಂಪನ್ನಗೊಳಿಸಲು ಸಾಧ್ಯವಾಗಿದೆ ಎಂದು ಸಂಸ್ಕೃತಿ ಸಚಿವ ಎ.ಕೆ.ಬಾಲನ್ ಅಭಿಪ್ರಾಯಪಟ್ಟರು.

ಕೇರಳ ತುಳು ಅಕಾಡೆಮಿಗಾಗಿ ರಾಜ್ಯ ಸರಕಾರ ಹೊಸಂಗಡಿ ಬಳಿಯ ದುರ್ಗಿಪಳ್ಳದಲ್ಲಿ ನಿರ್ಮಿಸಲಾದ ಕೇರಳ ತುಳುಭವನವನ್ನು ಶುಕ್ರವಾರ ಸಂಜೆ ಆನ್ ಲೈನ್ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಎಲ್ಲ ವಲಯಗಳನ್ನೂ ಸ್ಪರ್ಶಿಸುವ ಯೋಜನೆಗಳ ಮೂಲಕ ರಾಜ್ಯದ ಸಾಂಸ್ಕೃತಿಕ ರಂಗ ದೊಡ್ಡ ಸಂಚಲನ ಸೃಷ್ಟಿಸಿದೆ. ನವೋತ್ಥಾನ ಮೌಲ್ಯಗಳನ್ನು ಮರಳಿ ತರುವ ನಿಟ್ಟಿನಲ್ಲಿ ಅನೇಕ ಪ್ರತಿಬಂಧಕಗಳನ್ನು ದಾಟಿ ಅನೇಕ ಯೋಜನೆಗಳು ಇಲ್ಲಿ ಅನುಷ್ಠಾನಗೊಂಡಿವೆ. ಪ್ರತಿ ಜಿಲ್ಲೆ ಗಳಲ್ಲೂ ಕೋಟಿಗಟ್ಟಲೆ ರೂ. ವೆಚ್ಚಗೊಳಿಸಿ ಸಾಮಸ್ಕೃತಿಕ ನಾಯಕರ ಹೆಸರಲ್ಲಿ ಭವ್ಯ ಕಟ್ಟಡಗಳು ತಲೆಎತ್ತುತ್ತಿವೆ. ಇದರ ಅಂಗವಾಗಿ ಕಾಸರಗೋಡು ಜಿಲ್ಲೆಯಲ್ಲಿ ಕಳೆದ ದಿನ 42 ಕೊಟಿ ರೂ. ವೆಚ್ಚದಲ್ಲಿ ಸುಬ್ರಹ್ಮಣ್ಯಂ ತಿರುಮುಂಬ್ ಅವರ ನಾಮಧೇಯದಲ್ಲಿ ಸಂಸ್ಕೃತಿ ನಿಲಯ ಉದ್ಘಾಟನೆ ನಡೆಸಲು ಸಾಧ್ಯವಾಗಿದೆ ಎಂದವರು ತಿಳಿಸಿದರು.

ತುಳು ನಾಡಿನ ಜನತೆಯ ಸ್ವಂತಿಕೆಯ ಪ್ರತೀಕ ತುಳು ಭವನ: ಸಚಿವ ಎ.ಕೆ.ಬಾಲನ್ 

ತುಳುಭವನ ತುಳು ಜನತೆಯ ಸ್ವಂತಿಕೆಯ ಪ್ರತೀಕ ಎಂದು ಸಂಸ್ಕೃತಿ ಸಚಿವ ಎ.ಕೆ.ಬಾಲನ್ ನುಡಿದರು. ತುಳು ಭಾಷೆ ಸಂಸ್ಕೃತಿಗೆ ಮಹತ್ವಿಕೆ ನೀಡುವ ಅನೇಕ ಕಾರ್ಯಕ್ರಮಗಳನ್ನು ಇಲ್ಲಿ ನಡೆಸಲಾಗುವುದು ಎಂದರು.

ನಾಡಿಗಾಗಿ ಅಪಾರ ಸೇವೆ ಸಲ್ಲಿಸಿದ್ದ ಅನೇಕ ಹಿರಿಯ ಸಾಧಕರ ಕುರಿತು ನೂತನ ಜನಾಂಗಕ್ಕೆ ಮಾಹಿತಿಯೇ ಇಲ್ಲ. ಅಂಥವರ ಹೆಜ್ಜೆಗಾರಿಕೆ ಗಳನ್ನು ಹೊಸ ತಲೆಮಾರಿಗೆ ಪರಿಚಯಿಸುವ ಬಲುದೊಡ್ಡ ಗುರಿಯೊಂದಿಗೆ ಸಂಸ್ಕೃತಿ ಇಲಾಖೆ ರಂಗದಲ್ಲಿದೆ. ಕಲಾವಿದರ, ಸಾಹಿತಿಗಳ ಹೆಸರಲ್ಲಿ ಗಮನಾರ್ಹ ಕೇಂದ್ರಗಳು ತಲೆಎತ್ತುತ್ತಿವೆ. ಇವುಗಳಲ್ಲಿ ಕೆಲವು ಈಗಾಗಲೇ ನಿರ್ಮಾಣ ಪೂರ್ತಿಗೊಂಡಿವೆ. ಮಹಾತ್ಮಾ ಗಾಂಧಿ ಅವರ ಬಲಿದಾ ನದ 70 ನೇ ವರ್ಷಾಚರಣೆ ಅಂಗವಾಗಿ ಒಂದಿಡೀ ವರ್ಷದ ಆಚರಣೆ ನಡೆಸಲಾಗಿದೆ. ಬಾಪೂಜಿ ಅವರು 3 ಬಾರಿ ಸಂದರ್ಶಿಸಿದ್ದ ಪಾಲಕ್ಕಾಡಿನ ಶಬರಿ ಆಶ್ರಮದ ನವೀಕರಣಕ್ಕೆ 4 ಕೋಟಿ ರೂ. ವೆಚ್ಚ ದಲ್ಲಿ ಚಟುವಟಿಕೆ ನಡೆಸಲಾಗುವುದು ಎಂದರು.

ಎಲ್ಲ ಪ್ರಶಸ್ತಿಗಳ ನಗದು ಬಹುಮಾನಗಳನ್ನು ಏರಿಕೆಗೊಳಿಸಲಾಗಿದೆ. ಆದರೆ ಕೋವಿಡ್ ಸೋಂಕಿನ ಹಾವಳಿ ಆತಂಕ ಸೃಸ್ಟಿಸಿದೆ. ಅನೇಕ ಮುಗಟ್ಟುಗಳ ನಡುವೆಯೂ ಯೋಜನೆಗಳನ್ನು ಯಥಾ ಸಮಯಕ್ಕೆ ಜಾರಿಗೊಳಿಸಲು ಸತತ ಯತ್ನ ನಡೆಸಲಾಗುತ್ತಿದೆ ಎಂದವರು ತಿಳಿಸಿದರು.

ಕಂದಾಯ ಸಚಿವ ಇ.ಚಂದ್ರಶೇಖರನ್ ಅಧ್ಯಕ್ಷತೆ ವಹಿಸಿದ್ದರು. ಸಂಸದ ರಾಜ್ ಮೋಹನ್ ಉಣ್ಣಿತ್ತಾನ್ ಮುಖ್ಯ ಅತಿಥಿಯಾಗಿದ್ದರು. ತ್ರೈಮಾಸ ಪತ್ರಿಕೆ "ತೆಂಬೆರೆ" ಯ ವಿಶೇಷ ಸಂಚಿಕೆಯನ್ನು ಸಂಸದ ಕೇರಳ ತುಳು ಅಕಾಡೆಮಿ ಅಧ್ಯಕ್ಷ ಉಮೇಶ್ ಎಂ.ಸಾಲ್ಯಾನ್ ಅವರಿಗೆ ಹಸ್ತಾಂತರಿಸುವ ಮೂಲಕ ಬಿಡುಗಡೆಗೊಳಿಸಿದರು. ಅಕಾಡೆಮಿಯ ಸ್ಥಾಪಕಾಧ್ಯಕ್ಷ ಡಾ.ವೆಂಕಟರಾಜ ಪುಣಿಂಚತ್ತಾಯ ಅವರ ನಾಮಧೇಯದ ಗ್ರಂಥಾಲಯವನ್ನು ಶಾಸಕ ಎಂ.ಸಿ.ಕಮರುದ್ದೀನ್ ಉದ್ಘಾಟಿಸಿದರು. ಎಕ್ಸಿಕ್ಯೂಟಿವ್ ಸಬಾಂಗಣವನ್ನು ಜಿಲ್ಲಾ ಪಂಚಾಯತ್ ಅಧ್ಯಕ್ಷ ಎ.ಜಿ.ಸಿ.ಬಶೀರ್ ಉದ್ಘಾಟಿಸಿದರು. ಮಂಜೇಶ್ವರ ಬ್ಲಾಕ್ ಪಂಚಾಯತ್ ಅಧ್ಯಕ್ಷ ಎ.ಕೆ.ಎಂ.ಅಶ್ರಫ್ ಆನ್ ಲೈನ್ ತುಳು ಲಿಪಿ ಕಲಿಕೆ ತರಬೇತಿಯನ್ನು ಉದ್ಘಾಟಿಸಿ ದರು. ಕೋವಿಡ್ ಪ್ರತಿರೋಧ ಅಂಗವಾಗಿ ನಿರ್ಮಿಸಲಾದ ತುಳು ಕಿರುಚಿತ್ರವನ್ನು ಗೋವಿಂದ ಪೈ ಸ್ಮಾರಕ ಸಮಿತಿ ಕಾರ್ಯದರ್ಶಿ ಕೆ.ಆರ್. ಜಯಾನಂದ ಬಿಡುಗಡೆಗೊಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X