Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪರಿಷ್ಕೃತ ಮಹಿಷಿ ವರದಿಯನ್ನು ಸದನದಲ್ಲಿ...

ಪರಿಷ್ಕೃತ ಮಹಿಷಿ ವರದಿಯನ್ನು ಸದನದಲ್ಲಿ ಮಂಡಿಸಲು ಆಗ್ರಹಿಸಿ ಸಿಎಂ, ವಿಪಕ್ಷ ನಾಯಕರಿಗೆ ಪತ್ರ

ವಾರ್ತಾಭಾರತಿವಾರ್ತಾಭಾರತಿ18 Sept 2020 10:38 PM IST
share

ಬೆಂಗಳೂರು, ಸೆ.18: ಖಾಸಗಿ ವಲಯದಲ್ಲಿನ ನೇಮಕಾತಿಗಳಲ್ಲಿ ಸ್ಥಳೀಯರಿಗೆ(ಕನ್ನಡಿಗರಿಗೆ) ನ್ಯಾಯಯುತ ಪಾಲು ದೊರೆಯಲು, ಕನ್ನಡಿಗರ ಉದ್ಯೋಗ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ಸಲುವಾಗಿ ಪರಿಷ್ಕೃತ ಮಹಿಷಿ ವರದಿಯನ್ನು ಸದನದಲ್ಲಿ ಮಂಡಿಸಿ, ಕಾಯ್ದೆ ರೂಪಿಸಬೇಕು ಎಂದು ಕನ್ನಡ ಗೆಳೆಯರ ಬಳಗ ಆಡಳಿತ ಮತ್ತು ವಿಪಕ್ಷ ನಾಯಕರುಗಳನ್ನು ಆಗ್ರಹಿಸಿದೆ.

ಈ ಸಂಬಂಧ ಮುಖ್ಯಮಂತ್ರಿ ಯಡಿಯೂರಪ್ಪ, ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಜೆಡಿಎಸ್ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿಗೆ ಪತ್ರ ಬರೆದಿರುವ ಬಳಗವು, ಇಂದಿನ ಕಾಲ ಮಾನಕ್ಕೆ ಹೊಂದುವ ರೀತಿಯಲ್ಲಿ ಮಹಿಷಿ ವರದಿಯನ್ನು ಪರಿಷ್ಕರಿಸಲು ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ವೇಳೆ ಕನ್ನಡ ಅಭಿವೃದ್ಧಿ ಪ್ರಾದಿಕಾರದ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ.

ಆ ಸಮಿತಿಯು ಪರಿಷ್ಕರಿಸಿ ಐ.ಟಿ/ಬಿ.ಟಿ ಸೇರಿದಂತೆ ಎಲ್ಲ ಹೊಸ ಕ್ಷೇತ್ರಗಳನ್ನು ಪರಿಗಣಿಸಿ ‘ಪರಿಷ್ಕೃತ ಮಹಿಷಿ ವರದಿಯನ್ನು 2017ರಲ್ಲಿ ಮುಖ್ಯಮಂತ್ರ್ರಿಗಳಿಗೆ ಸಲ್ಲಿಸಿದೆ. ಪರಿಷ್ಕೃತ ವರದಿಯನ್ನು ಸಲ್ಲಿಸಿ 3 ವರ್ಷಗಳಾದರು ಅದನ್ನು ಅನುಷ್ಠಾನಗೊಳಿಸಲು ಅಗತ್ಯವಾದ ಕಾನೂನು ಪ್ರಕ್ರಿಯೆಯೇ ಆರಂಭವಾಗಿಲ್ಲ. ಹಾಗಾಗಿ ಕನ್ನಡಿಗರಿಗೆ ಸಿಗಬೇಕಾದ ಪಾಲು ಸಿಗುತ್ತಿಲ್ಲ ಎಂದು ಬಳಗದ ಬರೆದಿರುವ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಆಂಧ್ರ ಪ್ರದೇಶದ ವಿಧಾನಸಭೆಯು ‘ಆಂಧ್ರಪ್ರದೇಶ ಸ್ಥಳೀಯ ಅಭ್ಯರ್ಥಿಗಳಿಗೆ ಉದ್ಯೋಗ ಕಲ್ಪಿಸುವ ಕಾಯ್ದೆ- 2019’ ರೂಪಿಸಿ ಒಂದು ವರ್ಷವಾಯಿತು. ಮಹಾರಾಷ್ಟ್ರದ ಉದ್ಧವ್ ಠಾಕ್ರೆ ಸರಕಾರವು ಉದ್ಯೋಗದಲ್ಲಿ ಶೇ.80ರಷ್ಟು ಸ್ಥಳೀಯರಿಗೆ ಮೀಸಲು ಸಂಬಂಧ ಸದನದಲ್ಲಿ ಮಂಡಿಸಲು ಕಾಯಿದೆ ಕರಡು ರೂಪಿಸಿದೆ. ಈಗ ಸರಕಾರಿ ನೌಕರಿಯಲ್ಲಿ ಶೇ.100 ಸ್ಥಳೀಯರಿಗೆ ಮೀಸಲಿಡುವ ಮಹತ್ವದ ತೀರ್ಮಾನವನ್ನು ಮಧ್ಯಪ್ರದೇಶ ಸರಕಾರ ತೆಗೆದು ಕೊಂಡಿದೆ ಎಂದು ಪತ್ರದ ಮೂಲಕ ತಿಳಿಸಿದ್ದಾರೆ.

ಕರ್ನಾಟಕ ಸರಕಾರವು ‘ಕರ್ನಾಟಕ ನೂತನ ಕೈಗಾರಿಕಾ ನೀತಿ 2020-25’ರಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡುವ ಬಗ್ಗೆ ಷರತ್ತು ವಿಧಿಸಿರುವುದು ಸ್ವಾಗತಾರ್ಹ. ಈ ಷರತ್ತಿನಿಂದ ಹೊಸದಾಗಿ ಸ್ಥಾಪನೆಯಾಗುವ ಉದ್ದಿಮೆಗಳಲ್ಲಿ ಕನ್ನಡಿಗರಿಗೆ ಕೆಲಸ ಸಿಗುವ ಸಾಧ್ಯತೆಯಿದೆ. ಆದರೆ, ರಾಜ್ಯದಲ್ಲಿರುವ ಕೇಂದ್ರ ಸ್ವಾಮ್ಯದ ಮತ್ತು ಖಾಸಗಿ ಉದ್ದಿಮೆ/ ಸಂಸ್ಥೆ /ಬ್ಯಾಂಕ್/ ಕೈಗಾರಿಕೆ/ ಕಛೇರಿಗಳ ನೇಮಕಾತಿಯಲ್ಲಿ ಕನ್ನಡಿಗರಿಗೆ(ಸ್ಥಳೀಯರಿಗೆ) ಮಹಿಷಿ ವರದಿಯಲ್ಲಿ ಸೂಚಿಸಿರುವ ಪ್ರಮಾಣದಲ್ಲಿ ಉದ್ಯೋಗ ಸಿಗುತ್ತಿಲ್ಲ. ಹೀಗಾಗಿ, ಪರಿಷ್ಕೃತ ಮಹಿಷಿ ವರದಿಯನ್ನು ಅಧಿವೇಶದಲ್ಲಿ ಮಂಡಿಸಿ ಅನುಷ್ಠಾನಕ್ಕೆ ಮುಂದಾಗಬೇಕು ಎಂದು ಬಳಗದಿಂದ ಆಗ್ರಹಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X