Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಎಂಆರ್‌ಪಿಎಲ್‌ನಲ್ಲಿ ತುರ್ತು ಅಣಕು...

ಎಂಆರ್‌ಪಿಎಲ್‌ನಲ್ಲಿ ತುರ್ತು ಅಣಕು ಕಾರ್ಯಾಚರಣೆ

ವಾರ್ತಾಭಾರತಿವಾರ್ತಾಭಾರತಿ19 Sept 2020 10:28 PM IST
share
ಎಂಆರ್‌ಪಿಎಲ್‌ನಲ್ಲಿ ತುರ್ತು ಅಣಕು ಕಾರ್ಯಾಚರಣೆ

ಮಂಗಳೂರು, ಸೆ.19: ಪೆಟ್ರೋಲಿಯಂ ಸಂಸ್ಕರಣಾಗಾರ ಎಂಆರ್‌ಪಿಎಲ್ ತನ್ನ ಆವರಣದಲ್ಲಿ ಆನ್-ಸೈಟ್ ತುರ್ತು ಅಣಕು ಕಾರ್ಯಚರಣೆ ಯನ್ನು ಶನಿವಾರ ನಡೆಸಿತು.

ತುರ್ತು ಅಣಕು ಕಾರ್ಯಾಚರಣೆಯನ್ನು ಎಂಆರ್‌ಪಿಎಲ್‌ನ ಕಚ್ಚಾ ತೈಲ ಬಟ್ಟಿ ಇಳಿಸುವಿಕೆಯ (ಸಿಡಿಯು) ಘಟಕದಲ್ಲಿ (ಹಂತ -1) ಹಮ್ಮಿಕೊಳ್ಳ ಲಾಯಿತು. ಅಣಕು ಕಾರ್ಯಾಚರಣೆಯಲ್ಲಿ ಎಲ್‌ಪಿಜಿ ಸೋರಿಕೆಯ ಸನ್ನಿವೇಶದಲ್ಲಿ ನಡೆಸಲಾಯಿತು.

ಈ ಚಟುವಟಿಕೆಯು ಜಿಲ್ಲಾ ವಿಪತ್ತು ನಿರ್ವಹಣಾ ಯೋಜನೆಯಡಿ ಬರುತ್ತದೆ. ಇದು ಕೈಗಾರಿಕೆಗಳ ತುರ್ತು ಸಿದ್ಧತೆಯನ್ನು ಮೌಲ್ಯಮಾಪನ ಮಾಡಲು ಆಡಳಿತ ಮತ್ತು ಸರಕಾರಿ ಸಂಸ್ಥೆಗಳಿಗೆ ಸಹಾಯ ಮಾಡುತ್ತದೆ. ಎಂಎರ್‌ಪಿಎಲ್ ತನ್ನ ಅಗ್ನಿಶಾಮಕ ನಿರ್ವಹಣಾ ಸಾಮರ್ಥ್ಯ ಮತ್ತು ಸಂಪನ್ಮೂಲಗಳನ್ನು ಈ ಸಮಯದಲ್ಲಿ ಪ್ರದರ್ಶಿಸಿತು. ಅಗ್ನಿಶಾಮಕ ಮತ್ತು ಸುರಕ್ಷತೆ, ಎಚ್.ಎಸ್.ಇ, ಕಾರ್ಯಾಚರಣೆ ಮತ್ತು ನಿರ್ವಹಣೆ ಮುಂತಾದ ವಿವಿಧ ವಿಭಾಗಗಳು ಉತ್ಸಾಹದಿಂದ ಚಟುವಟಿಕೆಯಲ್ಲಿ ಭಾಗವಹಿಸಿದ್ದವು.

ದ.ಕ. ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಕಾರ್ಯಾಚರಣೆಯನ್ನು ಆಸಕ್ತಿಯಿಂದ ವೀಕ್ಷಿಸಿದರು. ಪೆಟ್ರೋಲಿಯಂ ಸಂಸ್ಕರಣಾಗಾರಗಳ ಕಾರ್ಯವೈಖರಿಗೆ ಸಂಬಂಧಿಸಿದ ವಿವಿಧ ತಾಂತ್ರಿಕ ಮತ್ತು ಸುರಕ್ಷತಾ ಅಂಶಗಳ ಬಗ್ಗೆ ಚರ್ಚಿಸಿದರು. ಸಂಸ್ಕರಣಾಗಾರದೊಳಗಿನ ವಿಪತ್ತು ತಗ್ಗಿಸುವಿಕೆ ಮತ್ತು ಸುರಕ್ಷತಾ ನಿರ್ವಹಣೆಯ ಬಗ್ಗೆ ಎಂಆರ್‌ಪಿಎಲ್‌ನಿಂದ ವಿವಿಧ ತಾಂತ್ರಿಕ ವಿವರ ಹಾಗೂ ಕಾನೂನಾತ್ಮಕ ನಿಬಂಧನೆಗಳನ್ನು ಚರ್ಚಿಸಿದರು. ಉತ್ತಮವಾಗಿ ಪ್ರದರ್ಶಿಸಿದ ತುರ್ತುಪರಿಸ್ಥಿತಿ ನಿರ್ವಹಣೆಗಾಗಿ ಅವರು ಎಂಆರ್‌ಪಿಎಲ್‌ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭ ಎಂಆರ್‌ಪಿಎಲ್‌ನ ವ್ಯವಸ್ಥಾಪಕ ನಿರ್ದೇಶಕ ಎಂ.ವೆಂಕಟೇಶ್, ಸಂಜಯ್ ವರ್ಮಾ, ರಾಜೀವ್ ಕುಶ್ವಾ, ಬಿಎಚ್‌ವಿ ಪ್ರಸಾದ್ (ಇಡಿ-ಪ್ರಾಜೆಕ್ಟ್ಸ್) ಮತ್ತು ಇಲಾಂಗೋ (ಇ.ಡಿ-ತೈಲಾಗಾರ) ಮತ್ತು ಎಂಆರ್‌ಪಿಎಲ್‌ನ ವಿವಿಧ ವಿಭಾಗಗಳ ಅಧಿಕಾರಿಗಳು ಉಪಸ್ಥಿತರಿದ್ದರು. ನೆರೆಹೊರೆಯ ಕೈಗಾರಿಕೆಗಳ ತಜ್ಞರು ವೀಕ್ಷಕರಾಗಿ ಭಾಗವಹಿಸಿದರು. ತುರ್ತುಸ್ಥಿತಿ ನಿರ್ವಹಣಾ ಸಾಮರ್ಥ್ಯಗಳನ್ನು ಪ್ರದರ್ಶಿಸುವಲ್ಲಿ ಎಂಆರ್‌ಪಿಎಲ್‌ನ ಪ್ರಯತ್ನಕ್ಕೆ ಕೈಜೋಡಿಸಿದರು.

ಈ ಸಂದರ್ಭ ಕಾರ್ಖಾನೆಗಳ ಉಪನಿರ್ದೇಶಕ ರಾಜೇಶ್ ಮಿಶ್ರಿಕೋಟಿ ಅವರು ಮೌಲ್ಯಮಾಪನ ವಿಭಾಗದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾಧಿಕಾರಿ ಕಚೇರಿಯ ವಿಜಯ್ ಕುಮಾರ್, ದ.ಕ. ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಮುಹಮ್ಮದ್ ಜುಲ್ಫಿಕರ್ ನವಾಝ್, ಸುರತ್ಕಲ್ ಪೊಲೀಸ್ ಠಾಣೆ ಪೊಲೀಸ್ ಇನ್‌ಸ್ಪೆಕ್ಟರ್ ಚಂದ್ರಪ್ಪ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X