Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಜಾಧವ್ ಪರ ವಾದಕ್ಕೆ ಭಾರತೀಯ ವಕೀಲರ ನೇಮಕ:...

ಜಾಧವ್ ಪರ ವಾದಕ್ಕೆ ಭಾರತೀಯ ವಕೀಲರ ನೇಮಕ: ಭಾರತದ ಬೇಡಿಕೆ ತಿರಸ್ಕರಿಸಿದ ಪಾಕ್

ವಾರ್ತಾಭಾರತಿವಾರ್ತಾಭಾರತಿ19 Sept 2020 11:13 PM IST
share
ಜಾಧವ್ ಪರ ವಾದಕ್ಕೆ ಭಾರತೀಯ ವಕೀಲರ ನೇಮಕ: ಭಾರತದ ಬೇಡಿಕೆ ತಿರಸ್ಕರಿಸಿದ ಪಾಕ್

ಇಸ್ಲಾಮಾಬಾದ್,ಸೆ.19: ಬೇಹುಗಾರಿಕೆಯ ಆರೋಪದಲ್ಲಿ ಮರಣದಂಡನೆಯನ್ನು ಎದುರಿಸುತ್ತಿರುವ ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿ ಕುಲಭೂಷಣ್ ಜಾಧವ್ ಅವರ ಪರವಾಗಿ ವಾದಿಸಲು ಭಾರತೀಯ ನ್ಯಾಯವಾದಿ ಅಥವಾ ಬ್ರಿಟನ್ ರಾಣಿಯ ಅಧಿಕೃತ ವಕೀಲರನ್ನು ನೇಮಿಸಲು ಅವಕಾಶ ನೀಡಬೇಕೆಂಬ ಭಾರತದ ಬೇಡಿಕೆಯನ್ನು ಪಾಕಿಸ್ತಾನವು ಶನಿವಾರ ತಿರಸ್ಕರಿಸಿದೆ.

   ಇಸ್ಲಾಮಾಬಾದ್‌ನಲ್ಲಿ ಸುದ್ದಿಗೋಷ್ಠಿಯೊಂದರಲ್ಲಿ ಮಾತನಾಡಿದ ಪಾಕ್‌ನ ವಿದೇಶಾಂಗ ವಕ್ತಾರ ಝಾಹಿದ್ ಹಾಫೀಝ್ ಚೌಧರಿ ಅವರು ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ಜಾಧವ್ ಪರವಾಗಿ ವಾದಿಸಲು ಪಾಕಿಸ್ತಾನದಿಂದ ಹೊರಗಿನ ನ್ಯಾಯವಾದಿಗೆ ಅವಕಾಶ ನೀಡಬೇಕೆಂಬ ಅವಾಸ್ತವಿಕ ಬೇಡಿಕೆಯನ್ನು ಭಾರತವು ನಿರಂತರವಾಗಿ ಮುಂದಿಡುತ್ತಾ ಬಂದಿದೆ ಎಂದು ಹೇಳಿದರು.

 ‘‘ಪಾಕಿಸ್ತಾನದ ನ್ಯಾಯಾಲಯಗಳಲ್ಲಿ ವಕೀಲವೃತ್ತಿ ಮಾಡುವ ಪರವಾನಗಿ ಹೊಂದಿರುವ ನ್ಯಾಯವಾದಿಗಳಿಗೆ ಮಾತ್ರವೇ ವಾದ ಮಾಡಲು ಅನುಮತಿ ನೀಡಲಾಗುವುದೆಂದು ನಾವು ಭಾರತಕ್ಕೆ ಮಾಹಿತಿ ನೀಡಿದ್ದೇವೆ. ಈ ನಿಯಮವು ಅಂತಾರಾಷ್ಟ್ರೀಯ ವಕೀಲ ವೃತ್ತಿಯ ನಿಯಮಗಳಿಗೆ ಅನುಗುಣವಾಗಿದೆ. ಈ ನಿಲುವಿನಲ್ಲಿ ಯಾವುದೇ ಬದಲಾವಣೆಯಿರುವುದಿಲ್ಲ’’ ಎಂದವರು ತಿಳಿಸಿದ್ದಾರೆ.

ಈ ತಿಂಗಳ ಆರಂಭದಲ್ಲಿ ಇಸ್ಲಾಮಾಬಾದ್ ಹೈಕೋರ್ಟ್ ಪಾಕ್ ಸರಕಾರಕ್ಕೆ ನೀಡಿದ ಆದೇಶವೊಂದರಲ್ಲಿ, ಜಾಧವ್ ಪರವಾಗಿ ವಾದಿಸಲು ನ್ಯಾಯವಾದಿಯನ್ನು ನೇಮಿಸಲು ಭಾರತಕ್ಕೆ ಇನ್ನೊಂದು ಅವಕಾಶ ನೀಡುವಂತೆ ತಿಳಿಸಿತ್ತು ಹಾಗೂ ಪ್ರಕರಣ ದ ಆಲಿಕೆಯನ್ನು ಒಂದು ತಿಂಗಳ ಮಟ್ಟಿಗೆ ಮಂದೂಡಿತ್ತು.

 ಜಾಧವ್ ಪ್ರಕರಣಕ್ಕೆ ಸಂಬಂಧಿಸಿ ಅಂತಾರಾಷ್ಟ್ರೀಯ ನ್ಯಾಯಾಲಯ ನೀಡಿದ ತೀರ್ಪನ್ನು ಮಾತು ಮತ್ತು ಕೃತಿಯಲ್ಲಿ ಜಾರಿಗೆ ತರುವ ತನ್ನ ಬಾಧ್ಯತೆಯನ್ನು ಈಡೇರಿಸಲು ಪಾಕ್‌ಗೆ ಸಾಧ್ಯವಾಗಿಲ್ಲವೆಂದು ಭಾರತದ ವಿದೇಶಾಂಗ ಖಾತೆಯ ವಕ್ತಾರ ಅನುರಾಗ್ ಶ್ರೀವಾಸ್ತವ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

 ಭಾರತೀಯ ರಾಯಭಾರಿ ಕಚೇರಿಗೆ ಜಾಧವ್ ಅವರನ್ನು ಸಂಪರ್ಕಿಸಲು ಪಾಕ್ ಅವಕಾಶ ನೀಡದೆ ಇರುವುದನ್ನು ಹಾಗೂ ಅವರಿಗೆ ಪಾಕ್ ಮಿಲಿಟರಿ ನ್ಯಾಯಾಲಯ ಮರಣದಂಡನೆ ವಿಧಿಸಿರುವುದನ್ನು ಪ್ರಶ್ನಿಸಿ ಭಾರತವು 2017ರಲ್ಲಿ ಅಂತಾರಾಷ್ಟ್ರೀಯ ನ್ಯಾಯಾಲಯ ಮೆಟ್ಟಲೇರಿತ್ತು.

2019ರ ಜುಲೈನಲ್ಲಿ ನೀಡಿದ ತೀರ್ಪಿನಲ್ಲಿ ಹೇಗ್ ಮೂಲದ ಅಂತಾರಾಷ್ಟ್ರೀಯ ನ್ಯಾಯಾಲಯವು ಜಾಧವ್ ವಿಧಿಸಲಾದ ಮರಣದಂಡನೆ ತೀರ್ಪನ್ನು ಪಾಕಿಸ್ತಾನವು ಪರಿಣಾಮಕಾರಿಯಾಗಿ ಪರಾಮರ್ಶಿಸಬೇಕು ಹಾಗೂ ಮರುಪರಿಶೀಲಿಸಬೇಕೆಂದು ತಿಳಿಸಿತ್ತು.

 50 ವರ್ಷದ ಜಾಧವ್ ಅವರನ್ನು ಪಾಕಿಸ್ತಾನದ ಸೇನಾ ನ್ಯಾಯಾಲಯವು 2017ರ ಎಪ್ರಿಲ್‌ನಲ್ಲಿ ಬೇಹುಗಾರಿಕೆ ಹಾಗೂ ಭಯೋತ್ಪಾದನೆಯ ಪ್ರಕರಣದಲ್ಲಿ ದೋಷಿಯೆಂದು ಪರಿಗಣಿಸಿ ಮರಣದಂಡನೆ ವಿಧಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X