Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು...

ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ಅಧಿವೇಶನದಲ್ಲಿ ಚರ್ಚಿಸಲು ವಿಪಕ್ಷಗಳಿಗೆ ಮನವಿ

ವಾರ್ತಾಭಾರತಿವಾರ್ತಾಭಾರತಿ19 Sept 2020 11:39 PM IST
share

ಬೆಂಗಳೂರು, ಸೆ.19: ಅಸಂವಿಧಾನಿಕವಾದ ಮತ್ತು ವಿದ್ಯಾರ್ಥಿ ವಿರೋಧಿ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ -2020 ವಿಧಾನ ಸಭೆಯ ಅಧಿವೇಶನದಲ್ಲಿ ಚರ್ಚೆ ಮಾಡಬೇಕು ಎಂದು ಆಗ್ರಹಿಸಿ ಶಿಕ್ಷಣ ಸಂರಕ್ಷಿಸಿ ಭಾರತ ಉಳಿಸಿ ಸಮಿತಿಯ ಪದಾಧಿಕಾರಿಗಳು ವಿರೋಧ ಪಕ್ಷದ ನಾಯಕರುಗಳಿಗೆ ಮನವಿ ಸಲ್ಲಿಸಿದ್ದಾರೆ.

ಶನಿವಾರ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಅನೇಕರನ್ನು ಭೇಟಿ ಮಾಡಿ ಮನವಿ ಸಲ್ಲಿಸಿ, ರಾಜ್ಯದಲ್ಲಿ ಎನ್‍ಇಪಿಯನ್ನು ತಿರಸ್ಕರಿಸಬೇಕೆಂದು ಒತ್ತಡ ಹೇರುವಂತೆ ಆಗ್ರಹಿಸಿ ಮನವಿ ಸಲ್ಲಿಸಿದರು.

ಕೇಂದ್ರ ಸರಕಾರ ಜಾರಿಗೆ ತರಲು ಹೊರಟಿರುವ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ-2020ರ ಪ್ರತಿ ಹಿಂದಿ ಮತ್ತು ಇಂಗ್ಲಿಷ್ ಭಾಷೆಯನ್ನು ಹೊರತುಪಡಿಸಿ ದೇಶದ ಯಾವ ಪ್ರಾದೇಶಿಕ ಭಾಷೆಯಲ್ಲೂ ಇಂದಿಗೂ ಸಿಗುತ್ತಿಲ್ಲ. ಶಿಕ್ಷಣವು ಸಮವರ್ತಿ ಪಟ್ಟಿಯಲ್ಲಿದೆ. ಇದು ರಾಜ್ಯ ಮತ್ತು ಕೇಂದ್ರಕ್ಕೆ ಸಂಬಂಧಿಸಿದ ವಿಷಯ. ಆದರೆ ಯಾವ ರಾಜ್ಯ ಸರಕಾರದ ಸಹಮತ ಪಡೆಯದೆ ಶಾಸನ ಸಭೆಯಲ್ಲಿ ಚರ್ಚೆ ಮಾಡಿ ಅಭಿಪ್ರಾಯ ಕ್ರೋಢೀಕರಣ ಮಾಡದೆ ಜಾರಿ ಮಾಡಲು ಹೊರಟಿರುವುದು ಅಪ್ರಜಾಸತ್ತಾತ್ಮಕ ನಡೆಯಾಗಿದೆ ಎಂಬ ಅಂಶವನ್ನು ಪತ್ರದಲ್ಲಿ ಉಲ್ಲೇಖಸಿದ್ದಾರೆ.

ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ರಾಜ್ಯ ಸರಕಾರಗಳಿಗೆ ಇರುವ ಶಿಕ್ಷಣ ಕ್ಷೇತ್ರ ಅಧಿಕಾರ, ಹಕ್ಕುಗಳನ್ನು ಮೊಟಕುಗೊಳಿಸಿ ಶಿಕ್ಷಣವನ್ನು ನೀತಿ ನಿರೂಪಣೆಯ ಅಧಿಕಾರಿಗಳನ್ನು ಕೇಂದ್ರೀಕರಣಗೊಳಿಸುವ ಅಂಶಗಳನ್ನು ನಮ್ಮ ರಾಜ್ಯ ಸರಕಾರ ವಿರೋಧಿಸಬೇಕು. ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಸರಕಾರಕ್ಕಿರುವ ಅಧಿಕಾರ, ಹಕ್ಕುಗಳನ್ನು ಕಾಯ್ದಿರಿಸಲು ಕೇಂದ್ರ ಸರಕಾರವನ್ನು ಆಗ್ರಹಿಸಿ ಒಕ್ಕೂಟ ವ್ಯವಸ್ಥೆಯ ಆಶಯಗಳ ಉಳಿಸಲು ಮುಂದಾಗಬೇಕು.

ಸರಕಾರವೇ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ-2020 ಸಂವಿಧಾನದ ಮಾನ್ಯತೆ ಪಡೆದ ಎಲ್ಲ ಭಾಷೆಗಳಿಗೆ ಅನುವಾದಿಸಿ ಅಧ್ಯಯನಕ್ಕೆ ಅವಕಾಶ ನೀಡಿ. ಶಿಕ್ಷಣ ತಜ್ಞರು, ವಿದ್ಯಾರ್ಥಿ ಸಂಘಟನೆಗಳು, ಅಂಗನವಾಡಿ, ಬಿಸಿಯೂಟ, ಹಾಗೂ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಎಲ್ಲರೂ ಚರ್ಚಿಸಿ ತಿದ್ದುಪಡಿ ಸಲಹೆಗಳನ್ನು ನೀಡಲು ಅಗತ್ಯವಾದ ಕಾಲಾವಕಾಶ ನೀಡಬೇಕು.

ಕೇಂದ್ರ ಸರಕಾರದ ಸಚಿವ ಸಂಪುಟ ಅನುಮೋದಿತ ಹೊಸ ರಾಷ್ಟೀಯ ಶಿಕ್ಷಣ ನೀತಿಯ ಕುರಿತು ರಾಜ್ಯ ವಿಧಾನಸಭೆ, ವಿಧಾನ ಪರಿಷತ್ತಿನ ಉಭಯ ಸದನಗಳಲ್ಲಿ ಸಮಗ್ರ ಚರ್ಚೆ ನಡೆಸಬೇಕು. ಈ ಸದನದಲ್ಲಿ ಈ ಕುರಿತು ಜನಪ್ರತಿನಿಧಿಗಳು ಮಾತನಾಡಬೇಕು. ಮತ್ತು ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಪ್ರಸ್ತಾಪಿಸಿರುವ ತ್ರಿಭಾಷಾ ಸೂತ್ರವನ್ನು ತಮಿಳುನಾಡು ರಾಜ್ಯ ಸರಕಾರದ ಮಾದರಿಯಲ್ಲಿ ರಾಜ್ಯ ಸರಕಾರ ವಿರೋಧಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಈ ಸಂದರ್ಭದಲ್ಲಿ ಎಸ್‍ಎಫ್‍ಐನ ಅಧ್ಯಕ್ಷ ಅಮರೇಶ್ ಕಡಗದ, ಎಐಎಸ್‍ಎಫ್‍ನ ಅಧ್ಯಕ್ಷೆ ಕೆ.ಜ್ಯೋತಿ, ವಿಜೆಡಿಎಸ್‍ನ ಉಮೇಶ್‍ಗೌಡ, ಎನ್‍ಎಸ್‍ಯುಐನ ಮನೀಷ್ ರಾಜ್ ಸೇರಿದಂತೆ ಹಲವರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X