Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕ್ರಿಶ್ಚಿಯನ್ ಮಿಷೆಲ್, ರಾಜೀವ ಸಕ್ಸೇನಾ,...

ಕ್ರಿಶ್ಚಿಯನ್ ಮಿಷೆಲ್, ರಾಜೀವ ಸಕ್ಸೇನಾ, 15 ಜನರ ವಿರುದ್ಧ ಪೂರಕ ಆರೋಪಪಟ್ಟಿ ದಾಖಲು

ವಿವಿಐಪಿ ಹೆಲಿಕಾಪ್ಟರ್ ಹಗರಣ

ವಾರ್ತಾಭಾರತಿವಾರ್ತಾಭಾರತಿ19 Sept 2020 11:43 PM IST
share

 ಹೊಸದಿಲ್ಲಿ,ಸೆ.19: ಸಿಬಿಐ 3,727 ಕೋ.ರೂಗಳ ಆಗಸ್ಟಾ ವೆಸ್ಟ್‌ಲ್ಯಾಂಡ್ ಹೆಲಿಕಾಪ್ಟರ್ ಹಗರಣದಲ್ಲಿ ಪೂರಕ ಆರೋಪಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದು,ಬ್ರಿಟಿಷ್ ಮಧ್ಯವರ್ತಿ ಕ್ರಿಶ್ಚಿಯನ್ ಮಿಷೆಲ್ ಜೇಮ್ಸ್,ರಾಜಕಾರಣಿಗಳು,ಸರಕಾರಿ ಅಧಿಕಾರಿಗಳು ಮತ್ತು ಭಾರತೀಯ ವಾಯುಪಡೆ (ಐಎಎಫ್)ಯ ಅಧಿಕಾರಿಗಳಿಗೆ ಕಮಿಷನ್ ಹಣ ತಲುಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದನೆನ್ನಲಾದ ರಾಜೀವ ಸಕ್ಸೇನಾ ಸೇರಿದಂತೆ 15 ವ್ಯಕ್ತಿಗಳು ಮತ್ತು ಸಂಸ್ಥೆಗಳನ್ನು ಆರೋಪಿಗಳನ್ನಾಗಿ ಹೆಸರಿಸಲಾಗಿದೆ.

ಶುಕ್ರವಾರ ಸಲ್ಲಿಸಲಾದ ಈ ಎರಡನೇ ಆರೋಪಪಟ್ಟಿಯಲ್ಲಿ ಯಾವುದೇ ರಾಜಕಾರಣಿ ಅಥವಾ ಹಿರಿಯ ಅಧಿಕಾರಿಗಳನ್ನು ಈವರೆಗೆ ಹೆಸರಿಸಲಾಗಿಲ್ಲ. ಸೆಪ್ಟಂಬರ್ 2017ರಲ್ಲಿ ಸಲ್ಲಿಸಲಾದ ಮೊದಲ ಆರೋಪಪಟ್ಟಿಯಲ್ಲಿ ಮಾಜಿ ಐಎಎಫ್ ಮುಖ್ಯಸ್ಥ ಎಸ್.ಪಿ.ತ್ಯಾಗಿಯವರನ್ನು ಆರೋಪಿಯೆಂದು ಹೆಸರಿಸಲಾಗಿತ್ತು.

ಪ್ರಕರಣದಲ್ಲಿ ಮಾಜಿ ರಕ್ಷಣಾ ಕಾರ್ಯದರ್ಶಿ ಹಾಗೂ ಮಾಜಿ ಸಿಎಜಿ ಶಶಿಕಾಂತ ಶರ್ಮಾ,ಏರ್ ವೈಸ್ ಮಾರ್ಷಲ್ (ನಿವೃತ್ತ)ಜಸ್ಬೀರ್ ಸಿಂಗ್ ಪನೇಸರ್ ಮತ್ತು ಇತರ ಮೂವರು ಐಎಎಫ್ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಲು ಸಿಬಿಐ ಕಳೆದ ಮಾರ್ಚ್‌ನಲ್ಲಿ ಸರಕಾರದ ಅನುಮತಿಯನ್ನು ಕೋರಿತ್ತು. ಆದರೆ ರಕ್ಷಣಾ ಸಚಿವಾಲಯದಿಂದ ಅನುಮತಿ ಇನ್ನೂ ಲಭಿಸದ ಹಿನ್ನೆಲೆಯಲ್ಲಿ ಸಿಬಿಐ ಪ್ರಸಕ್ತ ಆರೋಪ ಪಟ್ಟಿಯಲ್ಲಿ ಅವರನ್ನು ಆರೋಪಿಗಳೆಂದು ಹೆಸರಿಸಿಲ್ಲ. ಅನುಮತಿ ಲಭಿಸಿದ ಬಳಿಕ ಶರ್ಮಾ ಮತ್ತು ಇತರರ ವಿರುದ್ಧ ಇನ್ನೊಂದು ಆರೋಪಪಟ್ಟಿಯನ್ನು ಸಲ್ಲಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

2019 ಜನವರಿಯಲ್ಲಿ ದುಬೈನಿಂದ ಭಾರತಕ್ಕೆ ಗಡಿಪಾರಾಗಿದ್ದ ಸಕ್ಸೇನಾನನ್ನು ಜಾರಿ ನಿರ್ದೇಶನಾಲಯ (ಈ.ಡಿ)ವು ಪ್ರಕರಣದಲ್ಲಿ ಮಾಫಿ ಸಾಕ್ಷಿದಾರನಾಗಿಸಿತ್ತು. ಆದರೆ ಆತ ತನಿಖಾ ಅಧಿಕಾರಿಗಳ ದಾರಿ ತಪ್ಪಿಸಿದ್ದಾನೆ ಎಂಬ ಕಾರಣ ನೀಡಿ ಬಳಿಕ ಅದರಿಂದ ಹಿಂದೆ ಸರಿದಿತ್ತು. ಆತ ಹವಾಲಾ ದಲ್ಲಾಳಿಯಾಗಿದ್ದಾನೆ ಮತ್ತು ಪ್ರಮುಖ ಮಾಹಿತಿಗಳನ್ನು ಬಚ್ಚಿಟ್ಟಿದ್ದಾನೆ ಎಂದು ಅದು ಆರೋಪಿಸಿತ್ತು.

 ಮಿಷೆಲ್‌ನನ್ನು ಡಿಸೆಂಬರ್ 2018ರಲ್ಲಿ ದುಬೈನಿಂದ ಭಾರತಕ್ಕೆ ಗಡಿಪಾರು ಮಾಡಲಾಗಿತ್ತು. ಭಾರತೀಯ ವಾಯುಪಡೆಗೆ 12 ವಿವಿಐಪಿ ಹೆಲಿಕಾಪ್ಟರ್‌ಗಳ ಮಾರಾಟ ವ್ಯವಹಾರವನ್ನು ಕುದುರಿಸಲು ರಾಜಕಾರಣಿಗಳು,ಸರಕಾರಿ ಅಧಿಕಾರಿಗಳು ಮತ್ತು ಐಎಎಫ್ ಅಧಿಕಾರಿಗಳಿಗೆ ಲಂಚ ನೀಡಲು ಆಂಗ್ಲೋ-ಇಟಾಲಿಯನ್ ಕಂಪನಿ ಆಗಸ್ಟಾ ವೆಸ್ಟ್‌ಲ್ಯಾಂಡ್ ಮಿಷೆಲ್‌ಗೆ 42 ಮಿ.ಯುರೋ (295 ಕೋ.ರೂ.)ಗಳನ್ನು ಪಾವತಿಸಿತ್ತೆನ್ನಲಾಗಿದೆ.

ಆಗಾಗ್ಗೆ ಭಾರತಕ್ಕೆ ಭೇಟಿ ನೀಡುತ್ತಿದ್ದ ಮಿಷೆಲ್ ಐಎಎಫ್ ಮತ್ತು ರಕ್ಷಣಾ ಸಚಿವಾಲಯದಲ್ಲಿಯ ತನ್ನ ಜಾಲದ ಮೂಲಕ ರಕ್ಷಣಾ ಖರೀದಿಗಳಲ್ಲಿ ಮಧ್ಯವರ್ತಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ. ರಕ್ಷಣಾ ಖರೀದಿ ಕಡತಗಳ ಚಲನವಲನಗಳ ಮೇಲೆ ನಿಗಾಯಿಡುತ್ತಿದ್ದ ಆತ ಆಗಸ್ಟಾ ವೆಸ್ಟ್‌ಲ್ಯಾಂಡ್‌ನೊಂದಿಗೆ ಸಂಪರ್ಕ ಹೊಂದಿದ್ದ ಆರೋಪಿಗಳಿಗೆ ನಿಯಮಿತವಾಗಿ ಮಾಹಿತಿಗಳನ್ನು ಒದಗಿಸುತ್ತಿದ್ದ ಎಂದು ಸಿಬಿಐ ಅಧಿಕಾರಿಯೋರ್ವರು ತಿಳಿಸಿದರು.

 ಇತರ ಇಬ್ಬರು ಮಧ್ಯವರ್ತಿಗಳಾದ ರಾಲ್ಫ್ ಗಿಡೊ ಹ್ಯಾಷ್ಕೆ ಮತ್ತು ಕಾರ್ಲೊ ಜೆರೋಸಾ ಅವರಿಗೆ ಹೆಲಿಕಾಪ್ಟರ್‌ಗಳ ಬಗ್ಗೆ ನಿರ್ದಿಷ್ಟ ಜ್ಞಾನವಿಲ್ಲದ್ದರಿಂದ ಅವರ ಮೇಲಿನ ನಿಯಂತ್ರಣವನ್ನು ಮಿಷೆಲ್‌ಗೆ ನೀಡಲಾಗಿತ್ತು ಎಂದು ಇನ್ನೋರ್ವ ಸಿಬಿಐ ಅಧಿಕಾರಿ ಹೇಳಿದರು.

ವಿವಿಐಪಿ ಹೆಲಿಕಾಪ್ಟರ್‌ಗಳ ಖರೀದಿಯಲ್ಲಿ ಅಕ್ರಮ ಕಮಿಷನ್ ಅನ್ನು ಕಾನೂನುಬದ್ಧಗೊಳಿಸಲು ಮಿಷೆಲ್ ತನ್ನ ಎರಡು ಸಂಸ್ಥೆಗಳ ಮೂಲಕ ಆಗಸ್ಟ್ ವೆಸ್ಟ್‌ಲ್ಯಾಂಡ್,ಅದರ ಮಾತೃಸಂಸ್ಥೆ ಇಟಲಿಯ ಫಿನ್‌ಮೆಕ್ಯಾನಿಕಾ,ವೆಸ್ಟ್‌ಲ್ಯಾಂಡ್ ಹೆಲಿಕಾಪ್ಟರ್ಸ್ ಯುಕೆ ಇತ್ಯಾದಿಗಳೊಂದಿಗೆ 12 ಒಪ್ಪಂದಗಳನ್ನು ಮಾಡಿಕೊಂಡಿದ್ದ ಮತ್ತು ಲಂಚದ ಹಣವಾಗಿ 295 ಕೋ.ರೂ.ಗಳನ್ನು ಈ ಸಂಸ್ಥೆಗಳಿಗೆ ಪಾವತಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದರು.

ಮಿಷೆಲ್ ತಯಾರಿಸಿದ್ದ ಟಿಪ್ಪಣಿಯೊಂದರಲ್ಲಿ ರಾಜಕಾರಣಿಗಳಿಗೆ ಮತ್ತು ಅಧಿಕಾರಿಗಳಿಗೆ ಸಲ್ಲಬೇಕಿದ್ದ ಲಂಚದ ಹಣವನ್ನು ಉಲ್ಲೇಖಿಸಿದ್ದ. ಟಿಪ್ಪಣಿಯಲ್ಲಿ ಆತ ಅವರನ್ನು ಸಂಕೇತಾಕ್ಷರಗಳಿಂದ ಗುರುತಿಸಿದ್ದ. ಮಧ್ಯವರ್ತಿಗಳ ಮೂಲಕ ಭಾರತೀಯರಿಗೆ ನೀಡಲಾದ ಶಂಕಿತ 452 ಕೋ.ರೂ.ಲಂಚದ ಪೈಕಿ 415 ಕೋ.ರೂ.ಗಳ ಜಾಡನ್ನು ತಾನು ಗುರುತಿಸಿದ್ದೇನೆ ಎಂದು ಸಿಬಿಐ ತನ್ನ ಮೊದಲ ಆರೋಪಪಟ್ಟಿಯಲ್ಲಿ ತಿಳಿಸಿತ್ತು.

ಆಗಸ್ಟ್ಟಾ ವೆಸ್ಟ್‌ಲ್ಯಾಂಡ್‌ಗೆ 3,726.9 ಕೋ.ರೂ.ಗಳ ಗುತ್ತಿಗೆ ನೀಡುವಲ್ಲಿ ಅಕ್ರಮಗಳಿಂದಾಗಿ ಸರಕಾರಕ್ಕೆ ಅಂದಾಜು 2,666 ಕೋ.ರೂ.ಗಳ ನಷ್ಟ ಉಂಟಾಗಿದೆ ಎಂದು ಸಿಬಿಐ ಹೇಳಿದೆ.

ಆಗಸ್ಟಾ ವೆಸ್ಟ್‌ಲ್ಯಾಂಡ್‌ನೊಂದಿಗಿನ ಗುತ್ತಿಗೆಯನ್ನು ಜನವರಿ,2014ರಲ್ಲಿ ರದ್ದುಗೊಳಿಸಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X