Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಮ್ಮು-ಕಾಶ್ಮೀರ: ಪ್ರವಾಸೋದ್ಯಮ,ಇತರ...

ಜಮ್ಮು-ಕಾಶ್ಮೀರ: ಪ್ರವಾಸೋದ್ಯಮ,ಇತರ ಕ್ಷೇತ್ರಗಳ ಉತ್ತೇಜನಕ್ಕಾಗಿ 1,350 ಕೋ.ರೂ.ಗಳ ಪ್ಯಾಕೇಜ್

ವಾರ್ತಾಭಾರತಿವಾರ್ತಾಭಾರತಿ19 Sept 2020 11:55 PM IST
share
ಜಮ್ಮು-ಕಾಶ್ಮೀರ: ಪ್ರವಾಸೋದ್ಯಮ,ಇತರ ಕ್ಷೇತ್ರಗಳ ಉತ್ತೇಜನಕ್ಕಾಗಿ 1,350 ಕೋ.ರೂ.ಗಳ ಪ್ಯಾಕೇಜ್

ಶ್ರೀನಗರ,ಸೆ.19: ಕೋವಿಡ್-19 ಸಾಂಕ್ರಾಮಿಕ ಮತ್ತು ಭದ್ರತಾ ಸ್ಥಿತಿಯಿಂದಾಗಿ ಆರ್ಥಿಕ ಹಿಂಜರಿತಕ್ಕೆ ಒಳಗಾಗಿರುವ ಪ್ರವಾಸೋದ್ಯಮ ಮತ್ತು ಇತರ ಕ್ಷೇತ್ರಗಳಿಗೆ ಅತ್ಯಂತ ಅಗತ್ಯವಾಗಿರುವ ಉತ್ತೇಜನವನ್ನು ಒದಗಿಸಲು ಜಮ್ಮು-ಕಾಶ್ಮೀರದ ಲೆ.ಗ.ಮನೋಜ ಸಿನ್ಹಾ ಅವರು ಶನಿವಾರ 1,350 ಕೋ.ರೂ.ಗಳ ಆರ್ಥಿಕ ಪ್ಯಾಕೇಜ್‌ನ್ನು ಪ್ರಕಟಿಸಿದರು.

ಪ್ಯಾಕೇಜ್‌ನ ಅಂಗವಾಗಿ ಜಮ್ಮು-ಕಾಶ್ಮೀರದಾದ್ಯಂತ ಒಂದು ವರ್ಷ ಅವಧಿಗೆ ವಿದ್ಯುತ್ ಮತ್ತು ನೀರಿನ್ ಬಿಲ್‌ಗಳಲ್ಲಿ ಶೇ.50ರಷ್ಟನ್ನು ಸರಕಾರವು ಮನ್ನಾ ಮಾಡಿದೆ.

  ಉದ್ಯಮ ರಂಗಕ್ಕೆ ನೆರವಾಗಲು ‘ಐತಿಹಾಸಿಕ ’ ಪ್ಯಾಕೇಜೊಂದರ ಬಗ್ಗೆ ಕೇಂದ್ರವು ಪರಿಶೀಲಿಸುತ್ತಿದೆ ಎಂಬ ಸುಳಿವು ನೀಡಿದ ಸಿನ್ಹಾ,ಇದು ಜಮ್ಮು-ಕಾಶ್ಮೀರದ ಉದ್ಯಮ ಮತ್ತು ಕೈಗಾರಿಕಾ ರಂಗಕ್ಕೆ ಭಾರೀ ಉತ್ತೇಜನವನ್ನು ನೀಡಲಿದೆ ಎಂದರು. ಉದ್ಯಮಗಳ ಸಾಲಗಳ ಮೇಲಿನ ಬಡ್ಡಿಯಲ್ಲಿ ಶೇ.5ರಷ್ಟು ವಿನಾಯಿತಿ ನೀಡಲಾಗಿದೆ ಮತ್ತು ಮುಂದಿನ ವರ್ಷದ ಮಾರ್ಚ್‌ವರೆಗೆ ಎಲ್ಲ ಸಾಲಗಳಿಗೆ ಸ್ಟಾಂಪ್ ಡ್ಯೂಟಿಯನ್ನು ಮನ್ನಾ ಮಾಡಲಾಗಿದೆ ಎಂದ ಅವರು,ಈ ಪ್ಯಾಕೇಜ್ ಪ್ರಧಾನಿ ನರೇಂದ್ರ ಮೋದಿ ಅವರು ಆತ್ಮನಿರ್ಭರ ಭಾರತ ಅಭಿಯಾನದಡಿ ಪ್ರಕಟಿಸಿರುವ ಪ್ಯಾಕೇಜ್‌ನಿಂದ ಪ್ರತ್ಯೇಕವಾಗಿದೆ. ನೂತನ ಆರ್ಥಿಕ ಪ್ಯಾಕೇಜಿಗೆ ಜಮ್ಮು-ಕಾಶ್ಮೀರ ಆಡಳಿತವು 950 ಕೋ.ರೂ.ನೇರ ಬೆಂಬಲವನ್ನು ಒದಗಿಸಲಿದೆ ಎಂದರು.

ಆತ್ಮನಿರ್ಭರ ಭಾರತ ಅಭಿಯಾನದಡಿ ಜಮ್ಮು-ಕಾಶ್ಮೀರ ಬ್ಯಾಂಕಿನ ಮೂಲಕ ಜನರಿಗೆ ಈಗಾಗಲೇ 1,400 ಕೋ,ರೂ.ಗಳನ್ನು ಒದಗಿಸಲಾಗಿದೆ ಎಂದ ಅವರು,ಟ್ಯಾಕ್ಸಿ ಚಾಲಕರು,ಸಾಗಾಣಿಕೆದಾರರು,ಆಟೋ ಚಾಲಕರು.ಹೌಸ್‌ಬೋಟ್ ಮಾಲಿಕರು,ಶಿಖರ್‌ವಾಲಾಗಳು (ಬೋಟ್‌ಗಳ ನಾವಿಕರು) ಮತ್ತು ಇತರ ಬಾಧಿತ ಜನರಿಗೆ ಪ್ಯಾಕೇಜೊಂದನ್ನು ಸರಕಾರವು ರೂಪಿಸುತ್ತಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X