Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜನರ ಹಣದಿಂದ ರಾಜನಿಗೆ ಕಾಣಿಕೆ...

ಜನರ ಹಣದಿಂದ ರಾಜನಿಗೆ ಕಾಣಿಕೆ ನೀಡುತ್ತಿರುವ ಹೊಗಳುಭಟರು: ಪಿಎಂ ಕೇರ್ಸ್ ವಿರುದ್ಧ ಮಹುವಾ ಮೊಯಿತ್ರ ವಾಗ್ದಾಳಿ

ವಾರ್ತಾಭಾರತಿವಾರ್ತಾಭಾರತಿ20 Sept 2020 8:16 PM IST
share
ಜನರ ಹಣದಿಂದ ರಾಜನಿಗೆ ಕಾಣಿಕೆ ನೀಡುತ್ತಿರುವ ಹೊಗಳುಭಟರು: ಪಿಎಂ ಕೇರ್ಸ್ ವಿರುದ್ಧ ಮಹುವಾ ಮೊಯಿತ್ರ ವಾಗ್ದಾಳಿ

ಹೊಸದಿಲ್ಲಿ,ಸೆ.20: ತೃಣಮೂಲ ಕಾಂಗ್ರೆಸ್ ನಾಯಕಿ ಮಹುವಾ ಮೊಯಿತ್ರಾ ಅವರು ಶನಿವಾರ ಲೋಕಸಭೆಯಲ್ಲಿ ಪಿಎಂ ಕೇರ್ಸ್ ನಿಧಿಯ ವಿರುದ್ಧ ತೀವ್ರ ದಾಳಿ ನಡೆಸಿದರಲ್ಲದೆ, ಅದು ಜಿಎಸ್‌ಟಿ ವ್ಯವಸ್ಥೆಯಡಿ ನೀಡಲಾದ ಶಾಸನಬದ್ಧ ಭರವಸೆಗಳನ್ನು ಕಿತ್ತುಕೊಳ್ಳುತ್ತಿದೆ ಮತ್ತು ಸಾರ್ವಜನಿಕ ರಂಗದ ಹಣವನ್ನು ಸಂಗ್ರಹಿಸುವ ಮೂಲಕ ರಾಜ್ಯ ಪರಿಹಾರ ನಿಧಿಗಳನ್ನು ದುರ್ಬಲಗೊಳಿಸುತ್ತದೆ ಎಂದು ಪ್ರತಿಪಾದಿಸಿದರು.

ಪಿಎಂ ಕೇರ್ಸ್ ನಿಧಿಗೆ ದೇಣಿಗೆ ಸಲ್ಲಿಸಲು ಪೈಪೋಟಿಗೆ ಬಿದ್ದಿರುವ ಸಾರ್ವಜನಿಕ ಕ್ಷೇತ್ರದ ಉದ್ಯಮ (ಪಿಎಸ್‌ಯು)ಗಳನ್ನು ಸಾರ್ವಜನಿಕರ ಹಣದಿಂದ ರಾಜನಿಗೆ ಕಾಣಿಕೆಗಳನ್ನು ನೀಡಲು ಪೈಪೋಟಿ ನಡೆಸುವ ಹೊಗಳುಭಟ ಆಸ್ಥಾನಿಕರಿಗೆ ಹೋಲಿಸಿದ ಮೊಯಿತ್ರಾ, ಚೀನಾದ ಕಂಪನಿಗಳಿಂದ ದೇಣಿಗೆಗಳನ್ನು ಸ್ವೀಕರಿಸುತ್ತಿರುವುದಕ್ಕಾಗಿ ಸರಕಾರವನ್ನು ತರಾಟೆಗೆತ್ತಿಕೊಂಡರು. ಮರಣಶಯ್ಯೆಯಲ್ಲಿರುವ ಯಾವುದೇ ಭಾರತೀಯ ಶತ್ರು ರಾಷ್ಟ್ರದ ಹಣದಿಂದ ಖರೀದಿಸಿರುವ ವೆಂಟಿಲೇಟರ್‌ನಲ್ಲಿರಲು ಬಯಸುವುದಿಲ್ಲ ಎಂದು ಹೇಳಿದರು.

ತೆರಿಗೆ ಮತ್ತು ಇತರ ಕಾನೂನುಗಳು (ಸಡಿಲಿಕೆ ಮತ್ತು ಕೆಲವು ನಿಯಮಗಳ ತಿದ್ದುಪಡಿ) ಮಸೂದೆಯ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಜ್ಯಗಳಿಗೆ ಜಿಎಸ್‌ಟಿ ಪಾಲನ್ನು ಪಾವತಿಸುವ ತನ್ನ ಹೊಣೆಗಾರಿಕೆಯಿಂದ ಕೇಂದ್ರವು ನುಣುಚಿಕೊಳ್ಳುವಂತಿಲ್ಲ. ಅದು ಸಾಲ ಮಾಡಿಯಾದರೂ 2.35 ಕೋ.ರೂ.ಗಳನ್ನು ಪಾವತಿಸಲೇಬೇಕು ಎಂದರು.

  ಪಿಎಂ ಕೇರ್ಸ್ ನಿಧಿ ಮತ್ತು ರಾಜ್ಯ ಪರಿಹಾರ ನಿಧಿಗಳಿಗೆ ದೇಣಿಗೆಗಳು ಒಂದೇ ವಿಧವಾಗಿದ್ದರೂ ಅವುಗಳನ್ನು ವಿಭಿನ್ನವಾಗಿ ಪರಿಗಣಿಸುತ್ತಿರುವುದು ಸಾರ್ವಜನಿಕ ಹಿತಾಸಕ್ತಿ, ಸಾರ್ವಜನಿಕ ನೀತಿಗೆ ವಿರುದ್ಧವಾಗಿದೆ ಮತ್ತು ರಾಜ್ಯ ನಿಧಿಗಳಿಗೆ ಕಾರ್ಪೊರೇಟ್ ದೇಣಿಗೆಗಳನ್ನು ಅನುತ್ತೇಜಿಸುತ್ತಿದೆ. ಶುಕ್ರವಾರ ಸದನದಲ್ಲಿ ಮಸೂದೆಯನ್ನು ಮಂಡಿಸಿದ್ದ ಸಚಿವರು ತಮ್ಮ ಉಳಿತಾಯದ ಸಣ್ಣ ಮೊತ್ತಗಳನ್ನು ಪಿಎಂ ಕೇರ್ಸ್ ನಿಧಿಗೆ ದೇಣಿಗೆಯನ್ನಾಗಿ ನೀಡಿದ ಶಾಲಾಮಕ್ಕಳು ಮತ್ತು ಪಿಂಚಣಿದಾರರ ಉದ್ದಪಟ್ಟಿಯನ್ನೇ ಓದಿದ್ದಾರೆ, ಆದರೆ ನಿಧಿಗೆ 2,100 ಕೋ.ರೂ.ಗಿಂತ ಹೆಚ್ಚಿನ ದೇಣಿಗೆಗಳನ್ನು ನೀಡಿರುವ 38 ಪಿಎಸ್‌ಯುಗಳ ಬಗ್ಗೆ ಅವರು ಮೌನ ವಹಿಸಿದ್ದು ಅಚ್ಚರಿಯನ್ನು ಮೂಡಿಸಿದೆ. ನಿಧಿಯ ಶೇ.70ಕ್ಕೂ ಅಧಿಕ ಹಣ ಈ ಪಿಎಸ್‌ಯುಗಳಿಂದಲೇ ಬಂದಿದೆ. ಈ ಪಿಎಸ್‌ಯುಗಳು ಸಾರ್ವಜನಿಕ ಹಣದಿಂದ ದೇಣಿಗೆಗಳನ್ನು ನೀಡುತ್ತಿವೆ. ಇದಕ್ಕೆ ಯಾವುದೇ ಆಡಿಟ್ ಕೂಡ ಇಲ್ಲ, ಹಿತಾಸಕ್ತಿಗಳ ಸಂಘರ್ಷ ಢಾಳಾಗಿ ಎದ್ದು ಕಾಣುತ್ತಿದೆ ಎಂದು ಮೊಯಿತ್ರಾ ಹೇಳಿದರು.

ನಿಧಿಯು ಸರಕಾರಿ ಸಂಸ್ಥೆಯ ಸೋಗಿನಲ್ಲಿ ದೇಣಿಗೆಗಳನ್ನು ಸಂಗ್ರಹಿಸುತ್ತಿದೆ. ಪಿಎಂ ನಿಧಿ ಎಂಬ ಹೆಸರೇ ಜನರು ಇದು ಸರಕಾರಿ ವ್ಯವಸ್ಥೆ ಎಂದು ಭಾವಿಸುವಂತೆ ಮಾಡುತ್ತಿದೆ. ಈ ನಿಧಿಯು ಆರ್‌ಟಿಐ ವ್ಯಾಪ್ತಿಯಲ್ಲಿಲ್ಲ ಎಂದು ಹೇಳುವ ಮೂಲಕ ನೀವು (ಸರಕಾರ) ಸದಾ ಧ್ಯಾನಿಸುತ್ತಿರುವ ಪಾರದರ್ಶಕತೆಯಿಂದ ನುಣುಚಿಕೊಳ್ಳುತ್ತಿದ್ದೀರಿ ಎಂದು ಮೊಯಿತ್ರಾ ಚಾಟಿ ಬೀಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X