Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ಇಗ್ನೊಬೆಲ್’ ಪ್ರಶಸ್ತಿಗೆ ಪಾತ್ರರಾದ...

‘ಇಗ್ನೊಬೆಲ್’ ಪ್ರಶಸ್ತಿಗೆ ಪಾತ್ರರಾದ ದೇಶದ ಎರಡನೇ ಪ್ರಧಾನಿ ಮೋದಿ

ಈ ವಿಚಿತ್ರ ಪ್ರಶಸ್ತಿಯ ವಿಶೇಷತೆಯೇನು ಗೊತ್ತಾ?

ವಾರ್ತಾಭಾರತಿವಾರ್ತಾಭಾರತಿ20 Sept 2020 8:56 PM IST
share
‘ಇಗ್ನೊಬೆಲ್’ ಪ್ರಶಸ್ತಿಗೆ ಪಾತ್ರರಾದ ದೇಶದ ಎರಡನೇ ಪ್ರಧಾನಿ ಮೋದಿ

ಹೊಸದಿಲ್ಲಿ,ಸೆ.20: ವೈದ್ಯಕೀಯ ಶಿಕ್ಷಣಕ್ಕೆ ತನ್ನ ‘ಕೊಡುಗೆ ’ಗಳಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ‘ಇಗ್ನೊಬೆಲ್’ ಪ್ರಶಸ್ತಿಯನ್ನು ಪ್ರದಾನಿಸಲಾಗಿದೆ. ಬ್ರೆಝಿಲ್, ಬ್ರಿಟನ್, ಮೆಕ್ಸಿಕೋ, ಬೆಲಾರೂಸ್, ಅಮೆರಿಕ, ಟರ್ಕಿ, ರಷ್ಯಾ ಮತ್ತು ತುರ್ಕಮೆನಿಸ್ತಾನ್ ಸರಕಾರಗಳ ಮುಖ್ಯಸ್ಥರೂ ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ.

 ವಿಶೇಷವಾಗಿ ಹಾಸ್ಯದ ಧಾಟಿಯುಳ್ಳ ವರದಿಗಳು ಮತ್ತು ವೈಜ್ಞಾನಿಕ ಬೆಳವಣಿಗೆಗಳ ಬಗ್ಗೆ ಚರ್ಚೆಗಳನ್ನು ಪ್ರಕಟಿಸುವ ‘ಅನಲ್ಸ್ ಆಫ್ ಇಂಪ್ರೊಬೇಬಲ್ ರೀಸರ್ಚ್ ’ಹೆಸರಿನ ಮ್ಯಾಗಝಿನ್ ಈ ವಿಡಂಬನಾತ್ಮಕ ಪ್ರಶಸ್ತಿಗಳನ್ನು ಪ್ರದಾನಿಸುತ್ತದೆ.

ಪ್ರಶಸ್ತಿಯ ಹೆಸರು ‘ಇಗ್ನೊಬೆಲ್ ’ ಪ್ರತಿಷ್ಠಿತ ನೊಬೆಲ್ ಅನ್ನೇ ಹೋಲುತ್ತಿದ್ದು, ಅದನ್ನು ಅಣಕಿಸುತ್ತಿದೆ. ಸಾಮಾನ್ಯವಾಗಿ ಈ ಪ್ರಶಸ್ತಿಗಳನ್ನು ಪ್ರತಿವರ್ಷ ಹಾರ್ವರ್ಡ್ ವಿವಿಯ ಸ್ಯಾಂಡರ್ಸ್ ಥಿಯೇಟರ್‌ನಲ್ಲಿ ಭವ್ಯ, ಆದರೆ ವಿಲಕ್ಷಣ ಸಮಾರಂಭದಲ್ಲಿ ನೊಬೆಲ್ ಪ್ರಶಸ್ತಿ ಪುರಸ್ಕೃತರು ಪ್ರದಾನಿಸುತ್ತಾರೆ. ಪ್ರಶಸ್ತಿ ಸ್ವೀಕರಿಸಿ ಮಾತನಾಡಲು ಪುರಸ್ಕೃತರಿಗೆ ಸರಿಯಾಗಿ 60 ಸೆಕೆಂಡ್‌ಗಳ ಕಾಲಾವಕಾಶವಿರುತ್ತದೆ. ಈ ಬಗ್ಗೆ ನಿಗಾ ವಹಿಸಲು ಸಿಡುಕುಮೋರೆಯ ಎಂಟರ ಹರೆಯದ ಬಾಲಕಿಯನ್ನು ನಿಯೋಜಿಸಲಾಗುತ್ತದೆ. 60 ಸೆಕೆಂಡ್‌ಗಳ ನಿಯಮ ಉಲ್ಲಂಘನೆಯಾದಾಗ ಈ ಬಾಲಕಿ ವೇದಿಕೆಗೆ ಬಂದು ‘ದಯವಿಟ್ಟು ನಿಲ್ಲಿಸಿ,ನಿಮ್ಮ ಭಾಷಣ ನನಗೆ ಬೇಸರ ಹುಟ್ಟಿಸಿದೆ ’ಎಂದು ಹೇಳುತ್ತಾಳೆ. ಸಾವಿರಕ್ಕೂ ಅಧಿಕ ವೀಕ್ಷಕರು ಕಾರ್ಯಕ್ರಮದಲ್ಲಿ ಹಾಜರಿರುತ್ತಾರೆ ಮತ್ತು ವೇದಿಕೆಯ ಮೇಲೆ ಪೇಪರ್ ಬಾಣಗಳನ್ನು ತೂರಲು ಅವರಿಗೆ ಅವಕಾಶ ನೀಡಲಾಗುತ್ತದೆ. ಈ ಕಾರ್ಯಕ್ರಮವನ್ನು ಇಂಟರ್ನೆಟ್‌ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ. ಆದರೆ ಈ ವರ್ಷ ಕೋವಿಡ್ ಬಿಕ್ಕಟ್ಟಿನಿಂದಾಗಿ ಇಡೀ ಕಾರ್ಯಕ್ರಮ ಆನ್‌ಲೈನ್‌ನಲ್ಲಿ ನಡೆದಿದೆ.

ಮೊದಲ ‘ಇಗ್ನೊಬೆಲ್’ ಪ್ರಶಸ್ತಿಗಳನ್ನು 1991ರಲ್ಲಿ ಪ್ರದಾನಿಸಲಾಗಿತ್ತು.

 ಮೋದಿ ಈ ಪ್ರಶಸ್ತಿಗೆ ಪಾತ್ರರಾದ ಮೊದಲ ವ್ಯಕ್ತಿಯಲ್ಲ. ಅಣ್ವಸ್ತ್ರದ ‘ಆಕ್ರಮಣಕಾರಿ ಶಾಂತಿಯುತ ’ನಿಷ್ಕ್ರಿಯತೆಗಾಗಿ 1998ರಲ್ಲಿ ಆಗಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಆ ವರ್ಷದ ಶಾಂತಿ ಪ್ರಶಸ್ತಿಯನ್ನು ನೀಡಲಾಗಿತ್ತು. ವಯಸ್ಕರು ಆಗಾಗ್ಗೆ ಮೂಗಿನಲ್ಲಿ ಬೆರಳು ತೂರಿಸುತ್ತಿರುತ್ತಾರೆ ಎನ್ನುವುದನ್ನು ಕಂಡು ಹಿಡಿದಿದ್ದಕ್ಕಾಗಿ ಚಿತ್ತರಂಜನ ಅಂದ್ರಾದೆ ಮತ್ತು ಬಿ.ಎಸ್.ಶ್ರೀಹರಿ ಅವರಿಗೆ 2001ರಲ್ಲಿ ಸಾರ್ವಜನಿಕ ಆರೋಗ್ಯ ಪ್ರಶಸ್ತಿಯನ್ನು, ಆನೆಗಳ ಮೇಲ್ಮೈ ವಿಸ್ತೀರ್ಣವನ್ನು ಅಂದಾಜಿಸಿದ್ದಕ್ಕೆ ಕೆ.ಪಿ.ಶ್ರೀಕುಮಾರ ಮತ್ತು ಜಿ.ನಿರ್ಮಲನ್ ಅವರಿಗೆ 2002ರಲ್ಲಿ ಗಣಿತ ಪ್ರಶಸ್ತಿಯನ್ನು ಮತ್ತು ಮೃತ ವ್ಯಕ್ತಿಗಳ ಸಂಘವನ್ನು ಸೃಷ್ಟಿಸಿದ್ದಕ್ಕಾಗಿ ಲಾಲ್ ಬಿಹಾರಿಯವರಿಗೆ 2003ರ ಶಾಂತಿ ಪ್ರಶಸ್ತಿಯನ್ನು ನೀಡಲಾಗಿತ್ತು. ಭಾರತದೊಂದಿಗೆ ಗುರುತಿಸಿಕೊಂಡಿರುವ ಇನ್ನೂ ಹಲವರು ಇಗ್ನೊಬೆಲ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X