Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಆಫ್ರಿಕದ ಗಿಡಮೂಲಿಕೆ ಕೊರೋನಕ್ಕೆ ಔಷಧಿ?

ಆಫ್ರಿಕದ ಗಿಡಮೂಲಿಕೆ ಕೊರೋನಕ್ಕೆ ಔಷಧಿ?

ಕ್ಲಿನಿಕಲ್ ಟ್ರಯಲ್‌ಗೆ ವಿಶ್ವ ಆರೋಗ್ಯ ಸಂಸ್ಥೆ ಅಸ್ತು

ವಾರ್ತಾಭಾರತಿವಾರ್ತಾಭಾರತಿ20 Sept 2020 10:08 PM IST
share
ಆಫ್ರಿಕದ ಗಿಡಮೂಲಿಕೆ ಕೊರೋನಕ್ಕೆ ಔಷಧಿ?

  ಬ್ರಾಝ್‌ವಿಲ್ಲೆ (ಕಾಂಗೊ),ಸೆ.20: ಕೊರೋನ ವೈರಸ್ ಮತ್ತಿತರ ಸಾಂಕ್ರಾಮಿಕ ರೋಗಗಳ ಸಂಭಾವ್ಯ ಚಿಕಿತ್ಸೆಗಾಗಿ ಆಫ್ರಿಕದ ಗಿಡಮೂಲಿಕೆ ಔಷಧಿಗಳ  ಪರೀಕ್ಷೆಯನ್ನು ನಡೆಸುವ ಕುರಿತಾದ ಶಿಷ್ಟಾಚಾರ ಸಂಹಿತೆಗೆ ವಿಶ್ವ ಆರೋಗ್ಯ ಸಂಸ್ಥೆ (ಡಬ್ಲುಎಚ್‌ಓ) ಶನಿವಾರ ಅನುಮೋದನೆ ನೀಡಿದೆ.

   ಕೋವಿಡ್-19 ಸೋಂಕಿಗೆ ಸೂಕ್ತ ಲಸಿಕೆ ಕಂಡುಹಿಡಿಯಲು ಈ ವರೆಗೆ ಸಾಧ್ಯವಾಗದೆ ಇರುವುದು, ಈ ರೀತಿಯ ಸಾಂಕ್ರಾಮಿಕ ರೋಗಗಳ ಚಿಕಿತ್ಸೆಗೆ ಸಾಂಪ್ರದಾಯಿಕ ಔಷಧಿಗಳ ಬಳಕೆಯ ಸಾಧ್ಯತೆಯ ಬಗ್ಗೆ ವಿವಿಧ ರಾಷ್ಟ್ರಗಳು ಗಮನಹರಿಸುವಂತೆ ಮಾಡಿದೆ.

 ಕೋವಿಡ್-19 ಚಿಕಿತ್ಸೆಗಾಗಿ ಗಿಡಮೂಲಿಕೆ ಔಷಧಿಗಳ ಮೂರನೆ ಹಂತದ ಕ್ಲಿನಿಕಲ್ ಟ್ರಯಲ್ ನಡೆಸುವ ಕುರಿತಾದ ಶಿಷ್ಟಾಚಾರದ ಸಂಹಿತೆಗೆ ವಿಶ್ವ ಆರೋಗ್ಯ ಸಂಸ್ಥೆಯ ತಜ್ಞರು ಹಾಗೂ ಇನ್ನೆರಡು ಸಂಸ್ಥೆಗಳ ಪರಿಣಿತರು ಅನುಮೋದನೆ ನೀಡಿದ್ದಾರೆ.

 ‘‘ ಒಂದು ವೇಳೆ ಕೋವಿಡ್-19 ಚಿಕಿತ್ಸೆಗೆ ಸಾಂಪ್ರದಾಯಿಕ ಔಷಧಿ ಉತ್ಪನ್ನವು ಸುರಕ್ಷಿತ, ಪರಿಣಾಮಕಾರಿ ಹಾಗೂ ಗುಣಮಟ್ಟದ ಖಾತರಿಯನ್ನು ಹೊಂದಿರುವುದು ದೃಢಪಟ್ಟಲ್ಲಿ ಅದನ್ನು ವಿಶ್ವ ಆರೋಗ್ಯ ಸಂಸ್ಥೆಯು ಅತ್ಯಂತ ತ್ವರಿತ ಹಾಗೂ ಬೃಹತ್ ಪ್ರಮಾಣದ ಸ್ಥಳೀಯ ಉತ್ಪಾದನೆಗೆ ಶಿಫಾರಸು ಮಾಡಲಿದೆ ’’ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಪ್ರಾದೇಶಿಕ ನಿರ್ದೇಶಕ ಪ್ರೊಸ್ಪರ್ ಟ್ಯುಮುಸಿಮ್ ತಿಳಿಸಿದ್ದಾರೆ.

   ಕೋವಿಡ್-19 ಚಿಕಿತ್ಸೆಗೆ ಸಾಂಪ್ರದಾಯಿಕ ಗಿಡಮೂಲಿಕೆಗಳ ಬಳಕೆ ಕುರಿತ ಕ್ಲಿನಿಕಲ್ ಟ್ರಯಲ್‌ಗೆ ರೋಗ ನಿಯಂತ್ರಣ ಹಾಗೂ ತಡೆಗಾಗಿನ ಆಫ್ರಿಕಾ ಕೇಂದ್ರ ಹಾಗೂ ಸಾಮಾಜಿಕ ವ್ಯವಹಾರಗಳ ಕುರಿತಾದ ಆಫ್ರಿಕ ಒಕ್ಕೂಟ ಆಯೋಗವು ಪಾಲುದಾರಿಕೆಯನ್ನು ಹೊಂದಿವೆ.

  ಪಶ್ಚಿಮ ಆಫ್ರಿಕಾದಲ್ಲಿ ಹಾವಳಿಯೆಬ್ಬಿಸಿದ ಎಬೋಲಾ ಸೋಂಕಿನ ಹಾಗೆ ಕೋವಿಡ್-19 ಸಾಂಕ್ರಾಮಿಕ ರೋಗವು, ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸಬೇಕಾದ ಅಗತ್ಯತೆಯ ಬಗ್ಗೆ ಬೆಳಕು ಚೆಲ್ಲಿದೆ ಹಾಗೂ ಸಾಂಪ್ರದಾಯಿಕ ಔಷಧಿಗಳ ಕುರಿತಾಗಿ ಸಂಶೋಧನೆ ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳನ್ನು ನಡೆಸುವುದಕ್ಕೆ ಉತ್ತೇಜನ ನೀಡಿದೆ ಎಂದು ಟ್ಯುಮುಸಿಮ್ ತಿಳಿಸಿದ್ದಾರೆ.

ಆದಾಗ್ಯೂ ಕೊರೋನ ವೈರಸ್‌ಸೋಂಕಿಗೆ ಪರಿಣಾಮಕಾರಿ ಔಷಧಿಯೆಂದು ಬಿಂಬಿಸಲಾಗುತ್ತಿರುವ ಮಡಗಾಸ್ಕರ್‌ನ ಪೇಯ ಕೋವಿಡ್-ಆರ್ಗಾನಿಕ್ಸ್ ಬಗ್ಗೆ ಅವರು ಯಾವುದೇ ಪ್ರಸ್ತಾವವನ್ನು ಮಾಡಿಲ್ಲ. ಕೋವಿಡ್-ಆರ್ಗಾನಿಕ್ಸ್ ಪೇಯವು, ಕೊರೋನ ಸೋಂಕಿಗೆ ದಿವ್ಯ ಔಷಧಿಯೆಂದು ಮಡಗಾಸ್ಕರ್ ಅಧ್ಯಕ್ಷ ಆ್ಯಂಡ್ರಿ ರ್ಯಾಜೊಲಿನಾ ಪ್ರತಿಪಾದಿಸಿದ್ದರು. ಈ ಪೇಯ ಮಡಗಾಸ್ಕರ್ ಸೇರಿದಂತೆ ಆಫ್ರಿಕ ಮತ್ತಿತರ ದೇಶಗಳಲ್ಲಿ ಭಾರೀ ಜನಪ್ರಿಯವಾಗಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X