Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಹಾಮಳೆಗೆ ಉಡುಪಿ ನಗರ ತತ್ತರ: ಹಲವು ಮನೆ...

ಮಹಾಮಳೆಗೆ ಉಡುಪಿ ನಗರ ತತ್ತರ: ಹಲವು ಮನೆ ಅಂಗಡಿಗಳಿಗೆ ಹಾನಿ

ವಾರ್ತಾಭಾರತಿವಾರ್ತಾಭಾರತಿ20 Sept 2020 10:28 PM IST
share
ಮಹಾಮಳೆಗೆ ಉಡುಪಿ ನಗರ ತತ್ತರ: ಹಲವು ಮನೆ ಅಂಗಡಿಗಳಿಗೆ ಹಾನಿ

ಉಡುಪಿ, ಸೆ.20: ನಗರದಲ್ಲಿ ಸತತವಾಗಿ ಸುರಿದ ದಶಕದ ಮಹಾಮಳೆಗೆ ಉಡುಪಿ ನಗರ ತತ್ತರಿಸಿ ಹೋಗಿದ್ದು, ಹಲವು ಮನೆಗಳು, ಅಂಗಡಿಗಳು ಜಲಾ ವೃತಗೊಂಡಿವೆ.

ಕಲ್ಸಂಕ ತೋಡಿನಲ್ಲಿ ಇಂದ್ರಾಣಿ ನದಿ ಉಕ್ಕಿದ ಹರಿದ ಪರಿಣಾಮ ಬೈಲಕೆರೆ, ಶ್ರೀಕೃಷ್ಣ ಮಠದ ರಾಜಾಂಗಣ ಹಿಂಬದಿಯ ಪಾರ್ಕಿಂಗ್ ಪ್ರದೇಶ, ಗೀತಾಂಜಲಿ ಮಾರ್ಗ, ಬಡಗುಪೇಟೆ, ಮಠದ ಬೆಟ್ಟು, ಬನ್ನಂಜೆ ಗರಡಿ ರಸ್ತೆಗಳಲ್ಲಿರುವ ಮನೆ ಹಾಗೂ ಅಂಗಡಿ ಮುಗ್ಗಟ್ಟುಗಳು ಸಂಪೂರ್ಣ ಜಲಾವೃತಗೊಂಡಿವೆ. ಇದರಿಂದ ಬಡಗುಪೇಟೆಯಲ್ಲಿ ಅಂಗಡಿ, ಮುಗ್ಗಟ್ಟುಗಳಲ್ಲಿದ್ದ ಸಾಮಾಗ್ರಿಗಳಿಗೆ ಹಾನಿಯಾಗಿ ಲಕ್ಷಾಂತರ ರೂ. ನಷ್ಟ ಉಂಟಾಗಿದೆ.

ಕಲ್ಸಂಕ ಸುತ್ತಮುತ್ತಲಿನ ರಸ್ತೆಗಳು ಜಲಾವೃತಗೊಂಡು ಸಂಚಾರಕ್ಕೆ ಅಡ್ಡಿ ಯಾಗಿದೆ. ಮಧ್ಯಾಹ್ನದವರೆಗೆ ಉಡುಪಿ- ಮಣಿಪಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಒಂದು ಬದಿಯ ರಸ್ತೆಯಲ್ಲಿ ಮಾತ್ರ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಬೈಲಕೆರೆ, ಮಠದಬೆಟ್ಟು, ಮಣ್ಣುಪಳ್ಳ, ಕಲ್ಸಂಕ, ಗುಂಡಿಬೈಲು ಸೇರಿದಂತೆ ವಿವಿಧ ಪ್ರದೇಶದ ನೂರಾರು ಮಂದಿಯನ್ನು ದೋಣಿ, ತೆಪ್ಪ, ಟ್ಯೂಬ್‌ಗಳಲ್ಲಿ ರಕ್ಷಣೆ ಮಾಡಲಾಯಿತು. ಕೆಲವು ಕಡೆ ಅಗತ್ಯ ಬಿದ್ದಲ್ಲಿ ಕ್ರೇನ್ ಬಳಕೆ ಮಾಡಿ ಜನರನ್ನು ರಕ್ಷಿಸಲಾಯಿತು.

ಬಡಗುಪೇಟೆ, ಗೀತಾಂಜಲಿ ಮಾರ್ಗ, ಮಠ ಪಾರ್ಕಿಂಗ್ ಪ್ರದೇಶ, ಮಥುರಾ ಛತ್ರ, ರಸ್ತೆ ಬದಿಗಳಲ್ಲಿ ಹಾಗೂ ಮನೆಗಳ ಆವರಣದಲ್ಲಿ ನಿಲ್ಲಿಸ ಲಾಗಿದ್ದ 25ಕ್ಕೂ ಅಧಿಕ ಕಾರು ಹಾಗೂ ಇತರ ವಾಹನ ಗಳು ನೆರೆಯ ನೀರಿನಲ್ಲಿ ಭಾಗಶಃ ಮುಳುಗಡೆಯಾಗಿದೆ. ಮನೆಯೊಳಗೆ ನೀರು ನುಗ್ಗಿದ ಪರಿಣಾಮ ಅಪಾರ ಹಾನಿ ಸಂಭವಿಸಿದೆ. ಬೆಂಗಳೂರು, ತಮಿಳುನಾಡು ಸೇರಿದಂತೆ ವಿವಿಧ ಕಡೆಗಳಿಂದ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ್ಧ ಭಕ್ತರು ತೊಂದರೆ ಅನುಭವಿಸಿದರು.

ಪ್ರವಾಹದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್, ಕಲ್ಸಂಕ ಸೇರಿದಂತೆ ಹಲವು ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀ ಲನೆ ನಡೆಸಿದರು. ಅದೇ ರೀತಿ ಉಡುಪಿ ಶಾಸಕ ಕೆ.ರಘುಪತಿ ಭಟ್ ಅವರು ಕೂಡ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದರು.

ಮಳೆಯಿಂದಾಗಿ ಉಡುಪಿ ಜಿಲ್ಲೆಯಲ್ಲಿ 105 ವಿದ್ಯುತ್ ಕಂಬಗಳು, ಐದು ಟ್ರಾನ್ಸ್ ಫಾರ್ಮರ್‌ಗಳು, 3.1ಕಿ.ಮೀ. ಉದ್ದದ ವಿದ್ಯುತ್ ತಂತಿಗಳು ಹಾನಿ ಯಾಗಿ ಸುಮಾರು 12ಲಕ್ಷ ರೂ. ನಷ್ಟ ಉಂಟಾಗಿದೆ ಎಂದು ಮೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.

ಸೂಕ್ತ ಸಮಯಕ್ಕೆ ಸಹಾಯ ದೊರೆಯದೆ ಪರದಾಡಿದ ಸಂತ್ರಸ್ತರು!

ರೆಡ್ ಅರ್ಲಟ್ ಘೋಷಣೆಯಾಗಿದ್ದರೂ ಜಿಲ್ಲಾಡಳಿತ ಯಾವುದೇ ಪೂರ್ವ ಸಿದ್ಧತೆ ನಡೆಸದ ಪರಿಣಾಮ ಪ್ರವಾಹ ಪೀಡಿತ ಪ್ರದೇಶ ನೂರಾರು ಮಂದಿ ಸಕಾಲಕ್ಕೆ ಸಹಾಯ ದೊರಕದೆ ಪರದಾಡುತ್ತಿರುವುದು ಕಂಡುಬಂದಿದೆ. ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು ಹಾಗೂ ಜನಪ್ರತಿ ನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ನಸುಕಿನ ವೇಳೆ ಮನೆಯೊಳಗೆ ನೀರು ನುಗ್ಗಿದ್ದರೂ ಆತಂಕದ ಸ್ಥಿತಿಯಲ್ಲಿದ್ದ ವೃದ್ಧರು, ಅನಾರೋಗ್ಯ ಪೀಡಿತರು, ಮಹಿಳೆಯರನ್ನು ಮಧ್ಯಾಹ್ನ ದವರೆಗೆ ರಕ್ಷಣೆ ಮಾಡುವ ಕಾರ್ಯ ಕೆಲವು ಕಡೆಗಳಲ್ಲಿ ನಡೆದಿಲ್ಲ. ಅಧಿಕಾರಿಗಳು ಸರಿಯಾಗಿ ಸ್ಪಂದಿಸದ ಹಿನ್ನೆಲೆಯಲ್ಲಿ ಸ್ಥಳೀಯ ಯುವಕರೇ ಟ್ಯೂಬ್ ಬಳಕೆ ಮಾಡಿ ತಮ್ಮ ಗ್ರಾಮದ ಮನೆಮಂದಿಯನ್ನು ಸ್ಥಳಾಂತರಿಸುವ ಕೆಲಸ ಮಾಡಿದರು.

ಪ್ರವಾಹದ ಸಮಯದಲ್ಲಿ ಸಹಾಯವಾಣಿಗೆ ಕರೆ ಮಾಡಿದರೂ ಸೂಕ್ತ ಸ್ಪಂದನೆ ಸಿಕ್ಕಿಲ್ಲ. ನೂರಾರು ಮನೆಗಳು ಜಲಾವೃತಗೊಂಡರೂ ಸರಿಯಾದ ಸಮಯಕ್ಕೆ ರಕ್ಷಣಾ ಕಾರ್ಯ ನಡೆದಿಲ್ಲ. ಇದರಿಂದ ಸಂತ್ರಸ್ತರು ಗಂಟೆಗಟ್ಟಲೆ ಮನೆಯೊಳಗೆ ಇರಬೇಕಾಯಿತು ಎಂದು ಬನ್ನಂಜೆ ಗರಡಿ ರಸ್ತೆಯ ಸಂತ್ರಸ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X