Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಹಾಲಿ ಚಾಂಪಿಯನ್ ನಡಾಲ್ ಗೆ ಸೋಲಿನ ಆಘಾತ

ಹಾಲಿ ಚಾಂಪಿಯನ್ ನಡಾಲ್ ಗೆ ಸೋಲಿನ ಆಘಾತ

ಇಟಾಲಿಯನ್ ಓಪನ್ ಟೆನಿಸ್ ಟೂರ್ನಮೆಂಟ್

ವಾರ್ತಾಭಾರತಿವಾರ್ತಾಭಾರತಿ20 Sept 2020 11:17 PM IST
share
ಹಾಲಿ ಚಾಂಪಿಯನ್ ನಡಾಲ್ ಗೆ ಸೋಲಿನ ಆಘಾತ

ರೋಮ್, ಸೆ.20: ಅರ್ಜೆಂಟೀನದ ಡಿಯಾಗೊ ಶ್ವಾರ್ಟ್ಜ್‌ಮನ್ ವಿರುದ್ಧ ನೇರ ಸೆಟ್‌ಗಳ ಅಂತರದಿಂದ ಆಘಾತಕಾರಿ ಸೋಲುಂಡಿರುವ ಹಾಲಿ ಚಾಂಪಿಯನ್ ರಫೆಲ್ ನಡಾಲ್ ಇಟಾಲಿಯನ್ ಓಪನ್ ಟೆನಿಸ್ ಟೂರ್ನಮೆಂಟ್‌ನಿಂದ ನಿರ್ಗಮಿಸಿದ್ದಾರೆ.

 ಇಲ್ಲಿ ಶನಿವಾರ ನಡೆದ ಪುರುಷರ ಸಿಂಗಲ್ಸ್‌ನ ಕ್ವಾರ್ಟರ್ ಫೈನಲ್‌ನಲ್ಲಿ ನಡಾಲ್ ಅವರು ಡಿಯಾಗೊ ವಿರುದ್ಧ 2-6, 5-7 ಸೆಟ್‌ಗಳ ಅಂತರದಿಂದ ಸೋತಿದ್ದಾರೆ. 9 ಬಾರಿ ರೋಮ್ ಚಾಂಪಿಯನ್ ಆಗಿರುವ, ಕಳೆದ 9 ಪಂದ್ಯಗಳಲ್ಲಿ ಡಿಯಾಗೊರನ್ನು ಮಣಿಸಿದ್ದ ನಡಾಲ್ ಕ್ವಾರ್ಟರ್ ಫೈನಲ್ ಪಂದ್ಯದುದ್ದಕ್ಕೂ ತನ್ನ ಹಿಂದಿನ ಲಯ ಕಂಡುಕೊಳ್ಳಲು ಪರದಾಟ ನಡೆಸಿದರು. ಸತತವಾಗಿ ಅನಗತ್ಯ ತಪ್ಪೆಸಗಿದರು. ಇದು ಅವರ ಗೆಲುವಿನ ಮೇಲೆ ಪರಿಣಾಮಬೀರಿತು. ಸ್ಪೇನ್ ಆಟಗಾರ ನಡಾಲ್ ಏಳು ತಿಂಗಳುಗಳ ಬಳಿಕ ಆಡುತ್ತಿರುವ ಮೊದಲ ಟೆನಿಸ್ ಟೂರ್ನಮೆಂಟ್ ಇದಾಗಿದೆ.

 ಪ್ಯಾರಿಸ್‌ಗೆ ತೆರಳಲಿರುವ ನಡಾಲ್ 13ನೇ ಬಾರಿ ಫ್ರೆಂಚ್ ಓಪನ್ ಪ್ರಶಸ್ತಿ ಜಯಿಸಿ ದಾಖಲೆ ಮುಂದುವರಿಸುವತ್ತ ಚಿತ್ತ ಹರಿಸಿದ್ದಾರೆ. ನಡಾಲ್ ವಿರುದ್ಧ ಜಯಶಾಲಿಯಾಗಿರುವ ಡಿಯಾಗೊ ಸೆಮಿ ಫೈನಲ್ ಸುತ್ತಿನಲ್ಲಿ ಡೆನಿಸ್ ಶಪೊವಾಲೊವ್‌ರನ್ನು ಎದುರಿಸಲಿದ್ದಾರೆ. ಮತ್ತೊಂದು ಕ್ವಾರ್ಟರ್ ಫೈನಲ್‌ನಲ್ಲಿ ಕೆನಡಾದ ಶಪೊವಾಲೊವ್ ಅವರು ಗ್ರೆಗೊರ್ ಡಿಮಿಟ್ರೊವ್‌ರನ್ನು 6-2, 3-6, 6-2 ಸೆಟ್‌ಗಳಿಂದ ಮಣಿಸಿದರು. ಇದು ಟೂರ್ ಹಂತದಲ್ಲಿ ಶಪೊವಾಲೊವ್ ದಾಖಲಿಸಿರುವ 100ನೇ ಗೆಲುವಾಗಿದೆ. ಇದೇ ವೇಳೆ ವಿಶ್ವದ ನಂ.1 ಆಟಗಾರ ನೊವಾಕ್ ಜೊಕೊವಿಕ್ ಪಂದ್ಯದ ಮಧ್ಯಭಾಗದಲ್ಲಿ ಎಡವಿದರೂ 6-3, 4-6, 6-3 ಸೆಟ್‌ಗಳ ಅಂತರದಿಂದ ಜರ್ಮನಿಯ ಶ್ರೇಯಾಂಕರಹಿತ ಡೊಮಿನಿಕ್ ಕೋಪ್‌ಫೆರ್‌ರನ್ನು ಸೋಲಿಸಿದರು.

ಅಗ್ರ ರ್ಯಾಂಕಿನ ಸರ್ಬಿಯ ಆಟಗಾರ ಕಳೆದ ಎರಡು ಸುತ್ತಿನ ಪಂದ್ಯದಲ್ಲಿ ಆಡದೇ ನೇರವಾಗಿ ಮೂರನೇ ಸುತ್ತಿಗೆ ತೇರ್ಗಡೆಯಾದರು. ಯುಎಸ್ ಓಪನ್‌ನ ಅಂತಿಮ-16ರ ಸುತ್ತಿನ ಪಂದ್ಯದಲ್ಲಿ ಅಂಪೈರ್‌ರತ್ತ ಆಕಸ್ಮಿಕವಾಗಿ ಚೆಂಡಿನಿಂದ ಜೋರಾಗಿ ಹೊಡೆದು ಪಂದ್ಯದಿಂದ ಅಮಾನತುಗೊಂಡ ಬಳಿಕ ಮೊದಲ ಪಂದ್ಯ ಆಡಿದರು.

ತನ್ನ ಏಕಾಗ್ರತೆಯನ್ನು ಮರಳಿ ಪಡೆದಿರುವ ಜೊಕೊವಿಕ್ 36ನೇ ಎಟಿಪಿ ಮಾಸ್ಟರ್ಸ್ ಪ್ರಶಸ್ತಿ ಗೆಲ್ಲುವ ವಿಶ್ವಾಸದಲ್ಲಿದ್ದಾರೆ. ಜೊಕೊವಿಕ್ ಮುಂದಿನ ಸುತ್ತಿನಲ್ಲಿ ಕಾಸ್ಪೆರ್ ರುಡ್‌ರನ್ನು ಎದುರಿಸಲಿದ್ದಾರೆ. ನಾರ್ವೆಯ ರುಡ್ ನಾಲ್ಕನೇ ಶ್ರೇಯಾಂಕದ ಫ್ರೆಂಚ್ ಆಟಗಾರ ಮ್ಯಾಟಿಯೊ ಬೆರ್ರೆಟ್ಟಿನೊರನ್ನು ಅಂತಿಮ-8ರ ಹಣಾಹಣಿಯಲ್ಲಿ 4-6, 6-3, 7-6(5) ಸೆಟ್‌ಗಳ ಅಂತರದಿಂದ ಮಣಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X