Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ತಗ್ಗಿದ ಮಳೆ, ಇಳಿದ ನೆರೆ

ಉಡುಪಿ: ತಗ್ಗಿದ ಮಳೆ, ಇಳಿದ ನೆರೆ

ವಾರ್ತಾಭಾರತಿವಾರ್ತಾಭಾರತಿ21 Sept 2020 10:34 AM IST
share
ಉಡುಪಿ: ತಗ್ಗಿದ ಮಳೆ, ಇಳಿದ ನೆರೆ

ಉಡುಪಿ, ಸೆ.21: ಕಳೆದ ಎರಡು ದಿನಗಳಿಂದ ಸುರಿದ ಭಾರೀ ಮಳೆಯಿಂದ ತತ್ತರಿಸಿದ್ದ ಉಡುಪಿ ಜಿಲ್ಲೆಯಲ್ಲಿ ಸದ್ಯ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ನೆರೆ ಇಳಿಮುಖವಾಗಿದೆ. ರಾತ್ರಿ ಮಳೆಯಾಗಿದ್ದರೂ ಬೆಳಗ್ಗೆಯಿಂದ ಮಳೆಯ ಪ್ರಮಾಣ ಇಳಿಕೆಯಾಗಿದೆ.

ನಿನ್ನೆ ಉಂಟಾಗಿದ್ದ ಜಲಪ್ರಳಯದಿಂದ ಅಸ್ತವ್ಯಸ್ತಗೊಂಡಿದ್ದ ಜನರ ಜೀವನ ಇದೀಗ ಸಹಜ ಸ್ಥಿತಿಗೆ ಮರಳುತ್ತಿದೆ. ಜಿಲ್ಲೆಯ ನಾಲ್ಕೂ ತಾಲೂಕುಗಳ ಹಲವು ಗ್ರಾಮಗಳಲ್ಲಿ ನೆರೆ ನೀರಿನ ಪ್ರಮಾಣ ತಗ್ಗಿರುವ ಬಗ್ಗೆ ವರದಿಯಾಗಿದೆ. ಇದರಿಂದ ಹಲವು ಕುಟುಂಬಗಳು ಮರಳಿ ಮನೆಗೆ ಬಂದಿವೆ, ಇನ್ನು ಕೆಲವು ಕುಟುಂಬಗಳು ಪರಿಹಾರ ಕೇಂದ್ರದಲ್ಲಿ ನೆಲೆನಿಂತಿವೆ. ಆದರೆ ನೆರೆಯಿಂದ ಮನೆಗಳ ಒಳಗೆಲ್ಲ ಕೆಸರು ತುಂಬಿದೆ. 

ರಾತ್ರಿ ನಿರಂತರವಾಗಿ ಮಳೆಯಾಗಿದ್ದು, ಉಡುಪಿ ನಗರದ ಸಂಕ ತೋಡು ತುಂಬಿ ಹರಿಯುತ್ತಿವೆ. ಆದರೆ ಮಠದ ಬೆಟ್ಟು ಬನ್ನಂಜೆ ಗರಡಿ ರಸ್ತೆಯಲ್ಲಿ ಶೇ.50ರಷ್ಟು ನೆರೆ ಪ್ರಮಾಣ ತಗ್ಗಿದೆ. ಮಠದಬೆಟ್ಟುಕೊಪ್ಪರತೋಟ ಎಂಬಲ್ಲಿ ಕೃಷ್ಣಪ್ಪ ಪೂಜಾರಿ ಎಂಬವರ ದನದ ಕೊಟ್ಟಿಗೆ ನಿನ್ನೆ ಸುರಿದ ಮಳೆಯಿಂದ ಭಾಗಶಃ ಕುಸಿದಿದೆ.

ಉಡುಪಿ ಜಿಲ್ಲೆಯ ಕಳೆದ ಕೆಲವು ದಶಕಗಳ ಇತಿಹಾಸದಲ್ಲಿ ಕಂಡು ಕೇಳರಿಯದ ರೀತಿಯಲ್ಲಿ ಕಳೆದ ಎರಡು ದಿನಗಳಲ್ಲಿ ಸತತವಾಗಿ ಭಾರೀ ಮಳೆ ಸುರಿದಿತ್ತು. ಇದರಿಂದ ರವಿವಾರ ಜಿಲ್ಲೆಯ ಬಹುಭಾಗ ಜಲಪ್ರಳಯದಿಂದ ತತ್ತರಿಸಿತ್ತು. ಉಡುಪಿ, ಬ್ರಹ್ಮಾವರ, ಕಾಪು ಹಾಗೂ ಕಾರ್ಕಳ ತಾಲೂಕುಗಳಾದ್ಯಂತ ಜಲಪ್ರವಾಹವೇ ಸೃಷ್ಟಿಯಾಗಿತ್ತು. ನೆರೆಯಿಂದ ಸಾವಿರಕ್ಕೂ ಹೆಚ್ಚು ಮನೆಗಳು ಜಲಾವೃತಗೊಂಡಿದ್ದವು. ನೂರಾರು ಮನೆಗಳು ಹಾನಿಗೊಳಗಾಗಿವೆ.

ಉಡುಪಿಯ ಸ್ವರ್ಣಾನದಿ, ಸೀತಾನದಿ, ಉದ್ಯಾವರದ ಪಾಪನಾಶಿನಿ ನದಿಗಳು ರವಿವಾರ ಮೈದುಂಬಿ ಹರಿದ ಪರಿಣಾಮ ತೀರ ಪ್ರದೇಶಗಳನ್ನೆಲ್ಲ ಜಲಾವೃತಗೊಂಡಿದ್ದವು. ಸದ್ಯ ಈ ನದಿಗಳಲ್ಲಿ ನೀರಿನ ಪ್ರಮಾಣ ತಗ್ಗಿದ್ದು, ನೆರೆ ಇಳಿಮುಖವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X