Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅರೆಭಾಷೆಯಲ್ಲಿ ಮೊದಲ ಛಂದೋಬದ್ಧ ಯಕ್ಷಗಾನ...

ಅರೆಭಾಷೆಯಲ್ಲಿ ಮೊದಲ ಛಂದೋಬದ್ಧ ಯಕ್ಷಗಾನ ಪ್ರಸಂಗ ಸಿದ್ಧ

ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ನೇತೃತ್ವ

ವಾರ್ತಾಭಾರತಿವಾರ್ತಾಭಾರತಿ21 Sept 2020 4:59 PM IST
share
ಅರೆಭಾಷೆಯಲ್ಲಿ ಮೊದಲ ಛಂದೋಬದ್ಧ ಯಕ್ಷಗಾನ ಪ್ರಸಂಗ ಸಿದ್ಧ

ಮಂಗಳೂರು, ಸೆ.21: ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಯ ಪ್ರಾದೇಶಿಕ ಉಪಭಾಷೆಯಾದ ಅರೆಭಾಷೆಯಲ್ಲಿ ಇದೇ ಮೊದಲ ಬಾರಿಗೆ ಛಂದೋಬದ್ಧ ಯಕ್ಷಗಾನ ಪ್ರಸಂಗ ರಚನೆಗೊಂಡಿದ್ದು, ತಾಳಮದ್ದಳೆಯ ಮೊದಲ ಪ್ರಯೋಗ ಯಶಸ್ವಿಯಾಗಿದೆ. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವಿನಂತಿ ಮೇರೆಗೆ ಯಕ್ಷಗಾನ ಯುವ ಭಾಗವತರಾದ ಭವ್ಯಶ್ರೀ ಕುಲ್ಕುಂದ ಅರೆಭಾಷೆಯಲ್ಲಿ ಯಕ್ಷಗಾನ ಪ್ರಸಂಗ ರಚಿಸಿದ್ದಾರೆ.

ಅರೆಭಾಷೆಯಲ್ಲಿ ಯಕ್ಷಗಾನ, ತಾಳಮದ್ದಳೆ ಪ್ರಯೋಗ ಈಗಾಗಲೇ ನಡೆದಿದೆ. ಆದರೆ, ಪ್ರಸಂಗ ಸಾಹಿತ್ಯ ಕನ್ನಡದಲ್ಲಿದೆ. ಅರೆಭಾಷೆಯಲ್ಲೇ ಪ್ರಸಂಗ ಸಾಹಿತ್ಯವೂ ದೊರೆಯಬೇಕು ಎಂಬ ಅಕಾಡೆಮಿಯ ಯೋಜನೆಯಂತೆ ಭವ್ಯಶ್ರೀ ಅವರು ಕನ್ನಡದಿಂದ ಐದು ಪ್ರಸಂಗಗಳನ್ನು ಅರೆಭಾಷೆಗೆ ಅನುವಾದಿಸುತ್ತಿದ್ದಾರೆ. ಈಗಾಗಲೇ ಶರಸೇತು ಬಂಧನ ಮತ್ತು ಪಂಚವಟಿ ಪ್ರಸಂಗದ ಅನುವಾದ ಪೂರ್ಣಗೊಂಡಿದೆ. ಈ ಪೈಕಿ ಶರಸೇತು ಬಂಧನ ಪ್ರಸಂಗ ‘ಬಾಣದ ಪಾಲ’ ಹೆಸರಿನಲ್ಲಿ ತಾಳಮದ್ದಳೆ ವಿಡಿಯೊ, ಆಡಿಯೊ ರೆಕಾರ್ಡಿಂಗ್ ನಡೆದಿದೆ.

‘ಅರೆಭಾಷೆಯಲ್ಲಿ ಯಕ್ಷಗಾನ ಪ್ರಸಂಗ ರಚಿಸಬೇಕು ಎಂಬ ಪ್ರಯತ್ನಕ್ಕೆ ಮುಂದಾದಾಗ ಬರೆಯುವವರು ಯಾರು ಎಂಬ ಪ್ರಶ್ನೆ ಎದುರಾಯಿತು. ಈಗಾಗಲೇ ಛಂದೋಬದ್ದವಾಗಿ ಕನ್ನಡ ಪದ್ಯ ರಚನೆಯ ಪ್ರಯತ್ನ ನಡೆಸುತ್ತಿರುವ ಭಾಗವತರಾದ ಭವ್ಯಶ್ರೀ ಅವರ ಬಗ್ಗೆ ತಿಳಿದು, ಅವರನ್ನು ಸಂಪರ್ಕಿಸಿ ಅರೆಭಾಷೆಗೆ ಯಕ್ಷಗಾನ ಪ್ರಸಂಗವನ್ನು ಅನುವಾದಿಸಲು ವಿನಂತಿಸಲಾಯಿತು. ಯಕ್ಷಗಾನ ಪ್ರದರ್ಶನಕ್ಕೆ ಹೊಂದಿಕೆಯಾಗುವ ಮೂರು ಪ್ರಸಂಗ ಹಾಗೂ ತಾಳಮದ್ದಳೆಗೆ ಎರಡು ಪ್ರಸಂಗ ರಚನೆಗೆ ಮನವಿ ಮಾಡಲಾಗಿತ್ತು. ಮುಂದಿನ ದಿನಗಳಲ್ಲಿ ಐದು ಪ್ರಸಂಗಗಳು ಅರೆಭಾಷೆಯಲ್ಲಿ ಲಭ್ಯವಾಗಲಿವೆ. ಇದು ಭಾಷೆಯ ಬೆಳವಣಿಗೆಗೆ ಪೂರಕವಾಗಲಿದೆ ಎಂದು ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡಮಿ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ ತಿಳಿಸಿದ್ದಾರೆ.

ಶರಸೇತು ಬಂಧನ ಪ್ರಸಂಗ ಅರೆಭಾಷೆಯಲ್ಲಿ ‘ಬಾಣದ ಪಾಲ’ ಹೆಸರಿನಲ್ಲಿ ತಾಳಮದ್ದಳೆಯಾಗಿ ಈಗಾಗಲೇ ರೆಕಾರ್ಡಿಂಗ್ ಆಗಿದೆ. ಭಾಗವತಿಕೆಯಲ್ಲಿ ಭವ್ಯಶ್ರೀ ಕುಲ್ಕುಂದ, ಚೆಂಡೆಯಲ್ಲಿ ಮುರಾರಿ ಕಡಂಬಳಿತ್ತಾಯ, ಮದ್ದಳೆಯಲ್ಲಿ ಅಕ್ಷಯ್ ರಾವ್ ವಿಟ್ಲ, ಅರ್ಥಧಾರಿಗಳಾಗಿ ಕೊಳ್ತಿಗೆ ನಾರಾಯಣ ಗೌಡ, ಜಬ್ಬಾರ್ ಸಮೊ ಸಂಪಾಜೆ, ಜಯಾನಂದ ಸಂಪಾಜೆ ಭಾಗವಹಿಸಿದ್ದಾರೆ.

ಅರೆಭಾಷೆಯಲ್ಲಿ ಯಕ್ಷಗಾನ ಪ್ರಸಂಗ ರಚಿಸುವ ಬಗ್ಗೆ ಅಕಾಡೆಮಿ ತಜ್ಞರ ಸಲಹೆ ಪಡೆದು ಪ್ರಯತ್ನ ಆರಂಭಿಸಿತು. ಇದೀಗ ಎರಡು ಪ್ರಸಂಗ ರಚನೆಗೊಂಡಿದೆ. ರೆಕಾರ್ಡಿಂಗ್ ಆದ ತಾಳಮದ್ದಳೆಯನ್ನು ಸದ್ಯದಲ್ಲೇ ಅಕಾಡೆಮಿಯ ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್‌ಲೋಡ್ ಮಾಡಲಾಗುವುದು. ಮುಂದಕ್ಕೆ ಐದು ಪ್ರಸಂಗಗಳು ಅರೆಭಾಷೆಯಲ್ಲಿ ಲಭ್ಯವಾಗಲಿವೆ.

- ಲಕ್ಷ್ಮೀನಾರಾಯಣ ಕಜೆಗದ್ದೆ, ಅಧ್ಯಕ್ಷರು, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ.

ಅರೆಭಾಷೆಯಲ್ಲಿ ಅರ್ಧಪದಗಳ ಬಳಕೆ ಹೆಚ್ಚು. ಇದನ್ನು ಛಂದಸ್ಸಿಗೆ ಹೊಂದಿಸುವುದು ಸವಾಲಿನ ಕೆಲಸ. ಲಾಕ್‌ಡೌನ್ ಅವಧಿಯಲ್ಲಿ ಪ್ರಸಂಗ ಅನುವಾದ ಆರಂಭಿಸಿದೆ. ಅಕಾಡೆಮಿ ನೇತೃತ್ವದಲ್ಲಿ ಹೊಸ ಪ್ರಯೋಗಕ್ಕೆ ಕೈಜೋಡಿಸಿದ ಖುಷಿ ಇದೆ. ಪದ್ಯ ರಚನೆ ಸಂದರ್ಭ ನನ್ನ ಮೊದಲ ಗುರುಗಳಾದ ವಿಶ್ವವಿನೋದ ಬನಾರಿ ಅವರು ಪ್ರೋತ್ಸಾಹ ನೀಡಿದ್ದಾರೆ. ಗುರುಗಳಾದ ಗಣೇಶ ಕೊಲೆಕಾಡಿ ಅವರು ಛಂದಸ್ಸಿನ ಬಗ್ಗೆ ಮಾರ್ಗ ದರ್ಶನ ನೀಡಿದ್ದಾರೆ. ಭಾಗವತರಾದ ಸುಬ್ರಾಯ ಸಂಪಾಜೆ ಭಾಷೆ ಬಗ್ಗೆ ಸಲಹೆ, ಮಾರ್ಗದರ್ಶನ ನೀಡಿದ್ದಾರೆ. ಅಕಾಡೆಮಿ ಅಧ್ಯಕ್ಷ ಲಕ್ಷ್ಮೀ ನಾರಾಯಣ ಕಜೆಗದ್ದೆ, ಸರ್ವ ಸದಸ್ಯರು, ಜಬ್ಬಾರ್ ಸಮೊ ಅವರು ಪ್ರೋತ್ಸಾಹ ನೀಡಿದ್ದಾರೆ.

ಭವ್ಯಶ್ರೀ ಕುಲ್ಕುಂದ, ಯಕ್ಷಗಾನ ಭಾಗವತರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X