Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೃಷಿ ಉತ್ಪನ್ನ ಮಾರಾಟ ಮಸೂದೆ ರೈತರ ಪಾಲಿನ...

ಕೃಷಿ ಉತ್ಪನ್ನ ಮಾರಾಟ ಮಸೂದೆ ರೈತರ ಪಾಲಿನ ಮರಣ ಶಾಸನ: ವಿಪಕ್ಷ ನಾಯಕ ಸಿದ್ದರಾಮಯ್ಯ

"ಬಿಜೆಪಿಯಿಂದ ಪ್ರಜಾಪ್ರಭುತ್ವದ ಕಗ್ಗೊಲೆ"

ವಾರ್ತಾಭಾರತಿವಾರ್ತಾಭಾರತಿ21 Sept 2020 5:59 PM IST
share
ಕೃಷಿ ಉತ್ಪನ್ನ ಮಾರಾಟ ಮಸೂದೆ ರೈತರ ಪಾಲಿನ ಮರಣ ಶಾಸನ: ವಿಪಕ್ಷ ನಾಯಕ ಸಿದ್ದರಾಮಯ್ಯ

ಬೆಂಗಳೂರು, ಸೆ. 21: ಸಂಸತ್‍ನಲ್ಲಿ ವಿರೋಧ ಪಕ್ಷಗಳ ಅಭಿವ್ಯಕ್ಕಿ ಸ್ವಾತಂತ್ರ್ಯದ ಕೊರಳನ್ನು ಹಿಚುಕಿ, ರೈತರ ಪಾಲಿಗೆ ಮರಣ ಶಾಸನವಾಗಿರುವ ಕೃಷಿ ಉತ್ಪನ್ನ ಮಾರಾಟ ಮತ್ತು ವಾಣಿಜ್ಯ(ಉತ್ತೇಜನ ಮತ್ತು ಸೌಲಭ್ಯ) ಮಸೂದೆಗೆ ಬಲಾತ್ಕಾರದಿಂದ ಅಂಗೀಕಾರ ಪಡೆಯುವ ಮೂಲಕ ಬಿಜೆಪಿ ಸರಕಾರ ಸಂಸದೀಯ ಪ್ರಜಾಪ್ರಭುತ್ವದ ಕಗ್ಗೊಲೆ ನಡೆಸಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಸೋಮವಾರ ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕೊರೋನ ರೋಗವನ್ನು ನಿಯಂತ್ರಿಸಲಾಗದೆ ಮಂಡಿ ಊರಿ ದೇಶದ ಜನರನ್ನು ಸಾವು-ನೋವಿನ ದವಡೆಗೆ ನೂಕುತ್ತಿರುವ ಅಸಮರ್ಥ ಸರಕಾರ, ಈ ಅವಕಾಶವನ್ನು ದುರ್ಬಳಕೆ ಮಾಡಿಕೊಂಡು ಕೊರೊನೋತ್ತರ ಭಾರತದ ಏಕೈಕ ಆಶಾಕಿರಣವಾದ ಕೃಷಿ ಕ್ಷೇತ್ರವನ್ನು ಸರ್ವನಾಶ ಮಾಡಲು ಹೊರಟಿರುವುದು ದುರಂತ ಎಂದು ಲೇವಡಿ ಮಾಡಿದ್ದಾರೆ.

ಕೃಷಿಕ್ಷೇತ್ರಕ್ಕೆ ಸಂಬಂಧಿಸಿದ ಮೂರು ಪ್ರಮುಖ ಮಸೂದೆಗಳ ಬಗ್ಗೆ ಉಭಯ ಸದನಗಳಲ್ಲಿ ವಿಸ್ತೃತ ಚರ್ಚೆಗೆ ಅವಕಾಶ ನೀಡಬೇಕು ಮತ್ತು ಮಸೂದೆಗಳನ್ನು ಆಯ್ಕೆ ಸಮಿತಿಯ ಪರಿಶೀಲನೆಗೊಳಪಡಿಸಬೇಕು ಎಂಬ ವಿರೋಧಪಕ್ಷಗಳ ಬೇಡಿಕೆಯನ್ನು ಈಡೇರಿಸಲು ಕೇಂದ್ರ ಸರಕಾರ ಹಿಂದೇಟು ಹಾಕುತ್ತಿರುವುದು ಏಕೆ ಎಂದು ಪ್ರಶ್ನಿಸಿದ ಅವರು, ದುರ್ಬಲರು, ಅಸಹಾಯಕರು ಮತ್ತು ಅಸಂಘಟಿತರಾಗಿರುವ ಶೇ.80ರಷ್ಟಿರುವ ಸಣ್ಣ ಮತ್ತು ಮಧ್ಯಮ ರೈತರಿಗೆ ಕೃಷಿ ಮಾರುಕಟ್ಟೆಯನ್ನು ಸರಕಾರದ ನೆರವಿಲ್ಲದೆ ಸ್ವಯಂ ನಿಯಂತ್ರಿಸಲಾರರು. ಆ ಕೆಲಸ ಮಾಡುತ್ತಿದ್ದ ಎಪಿಎಂಸಿ ನಾಶಮಾಡುವುದೆಂದರೆ ಪೂರ್ಣ ಕೃಷಿ ಕ್ಷೇತ್ರವನ್ನು ಮಣ್ಣುಪಾಲು ಮಾಡುವುದು ಎಂದು ವಾಗ್ದಾಳಿ ನಡೆಸಿದ್ದಾರೆ.

ಎಪಿಎಂಸಿಗಳ ನಿಯಂತ್ರಣವಿಲ್ಲದೆ  ಸ್ವತಂತ್ರವಾಗಿ ವ್ಯಾಪಾರ ನಡೆಸುವ ಅವಕಾಶಕ್ಕಾಗಿ ಪ್ರಯತ್ನಿಸುತ್ತಲೇ ಬಂದಿರುವ ಖಾಸಗಿ ಕಂಪೆನಿಗಳಿಗೆ ಹೆಬ್ಬಾಗಿಲು ತೆರೆಯುವುದೇ ಕೃಷಿ ಉತ್ಪನ್ನ ಮಾರಾಟ ಮತ್ತು ವಾಣಿಜ್ಯ(ಉತ್ತೇಜನ ಮತ್ತು ಸೌಲಭ್ಯ) ಮಸೂದೆಯ ದುರುದ್ದೇಶ. ಇದು ನಮ್ಮ ಆರ್ಥಿಕತೆಯ ಬೆನ್ನೆಲುಬಾಗಿರುವ ರೈತರ ಬೆನ್ನು ಮುರಿಯುವ ಮನೆಹಾಳು ಕೆಲಸ. ಕೃಷಿ ಮಾರುಕಟ್ಟೆಯ ಮೇಲಿನ ಸರಕಾರದ ನಿಯಂತ್ರಣವನ್ನು ಬಿಟ್ಟುಕೊಟ್ಟು ಎಪಿಎಂಸಿಗಳನ್ನು ಖಾಸಗಿ ಧಣಿಗಳಿಗೆ ಪಾದಕ್ಕೊಪ್ಪಿಸಿ ರೈತರನ್ನು ಅವರನ್ನು ಜೀತದಾಳುಗಳಾಗಿ ಮಾಡಲು ಹೊರಟಿರುವ ಬಿಜೆಪಿ ಸರಕಾರದ ಹುನ್ನಾರವನ್ನು ರೈತ ಬಂಧುಗಳು ಅರಿತುಕೊಳ್ಳಬೇಕು. ರೈತರ ಬೆಳೆಗೆ ಉತ್ಪಾದನಾ ವೆಚ್ಚಕ್ಕೆ ತಕ್ಕ ಬೆಲೆ ಸಿಗದಿರುವುದೇ ಕೃಷಿಕ್ಷೇತ್ರದ ಮೂಲ ಸಮಸ್ಯೆ. ಇದಕ್ಕಾಗಿಯೇ ಬೆಂಬಲ ಬೆಲೆಯನ್ನು ನೀಡಲಾಗುತ್ತಿದೆ. ಕೇಂದ್ರ ಸರಕಾರದ ಹೊಸ ತಿದ್ದುಪಡಿ ಕಾನೂನಿನಲ್ಲಿ ಬೆಂಬಲಬೆಲೆಯ ರಕ್ಷಣೆಯನ್ನು ಕಿತ್ತೊಗೆದು ರೈತರನ್ನು ಅನಾಥರನ್ನಾಗಿ ಮಾಡಲಾಗಿದೆ. ಎಪಿಎಂಸಿಯ ಹೊಸ ತಿದ್ದುಪಡಿ ಕಾಯ್ದೆ ಜಾರಿಗೆ ಬಂದ ನಂತರ ರಾಜ್ಯ ಸರಕಾರಕ್ಕೆ ಎಂಪಿಎಂಸಿಯಿಂದ ಹೊರಗಿರುವ ವರ್ತಕರ ಮೇಲೆ ಯಾವ ನಿಯಂತ್ರಣವೂ ಇರುವುದಿಲ್ಲ. ಅವರ ವ್ಯವಹಾರದ ಮೇಲೆ ನಿಗಾ ಇಡುವಂತಿಲ್ಲ, ಶುಲ್ಕ, ಸೆಸ್, ಲೆವಿ ಸಂಗ್ರಹಿಸುವಂತಿಲ್ಲ. ಇದು ಸರಕಾರದ ಸಂಪೂರ್ಣ ಶರಣಾಗತಿ ಎಂದು ಟೀಕಿಸಿದ್ದಾರೆ.

ಯುಪಿಎ ಸರಕಾರ ಜಾರಿಗೊಳಿಸಿದ್ದ ಆಹಾರ ಭದ್ರತೆ ಮಸೂದೆಯ ಮೂರು ಸ್ತಂಭಗಳಾದ ಬೆಂಬಲ ಬೆಲೆ, ರೈತರಿಂದ ಬೆಳೆ ಖರೀದಿ ಮತ್ತು ಪಡಿತರ ವ್ಯವಸ್ಥೆಯನ್ನು ನಾಶಗೊಳಿಸುವ ಮೂಲಕ ಕೃಷಿ ಕ್ಷೇತ್ರವನ್ನು ಖಾಸಗಿಯವರಿಗೆ ಮಾರಾಟ ಮಾಡಲು ಹೊರಟಿದೆ. ಪ್ರಸ್ತುತ ರಾಜ್ಯದಲ್ಲಿ ಅನುಷ್ಠಾನದಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆ(ನಿಯಂತ್ರಣ ಮತ್ತು ಅಭಿವೃದ್ಧಿ) ಕಾಯ್ದೆ ರೈತರ ಹಿತಾಸಕ್ತಿ ರಕ್ಷಣೆಗೆ ಬದ್ಧವಾಗಿದೆ. ಸೆಕ್ಷನ್ 8ರ ಪ್ರಕಾರ ಎಪಿಎಂಸಿ ಮಾರುಕಟ್ಟೆ ಯಾರ್ಡ್ ಒಳಗೆ ಇಲ್ಲವೆ ಹೊರಗೆ ಯಾರೂ ಅಧಿಕೃತ ಲೈಸೆನ್ಸ್ ಇಲ್ಲದೆ ವ್ಯಾಪಾರ ನಡೆಸುವಂತಿಲ್ಲ. ಇದಕ್ಕೆ ತಿದ್ದುಪಡಿ ಮಾಡಲಾಗಿದೆ ಎಂದಿದ್ದಾರೆ.

ಸೆಕ್ಷನ್ 66 ಮತ್ತು 67ರ ಪ್ರಕಾರ ಯಾರ್ಡ್‍ನ ಮಾರುಕಟ್ಟೆ ವ್ಯಾಪ್ತಿಯಲ್ಲಿ ಅಕ್ರಮ ವ್ಯಾಪಾರ, ಕಾಳಸಂತೆ ಮತ್ತು ಅಕ್ರಮ ದಾಸ್ತಾನು ನಿಯಂತ್ರಿಸಲು ಅವಕಾಶವಿದೆ. ಈಸೆಕ್ಷನ್‍ಗೂ ತಿದ್ದುಪಡಿ ಮಾಡಲಾಗಿದೆ. ರೈತರಿಗೆ ನ್ಯಾಯಬದ್ಧ ಬೆಲೆ ಸಿಗುವಂತೆ ಮಾಡಲು ಖಾಸಗಿ ಸಂಸ್ಥೆಗಳ ಲೆಕ್ಕಪತ್ರ ಪರಿಶೀಲಿಸಬಹುದು. ಸೆಕ್ಷನ್ 114, 116 ಮತ್ತು 117ರಡಿಯಲ್ಲಿ ತಪ್ಪಿತಸ್ಥರಿಗೆ ಆರು ತಿಂಗಳ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ ಅವಕಾಶ ಇದೆ. ಈ ಆರೂ ಸೆಕ್ಷನ್‍ಗಳನ್ನು ತಿದ್ದುಪಡಿ ಮೂಲಕ ಬದಲಾಯಿಸಲು ಕೇಂದ್ರ ಮತ್ತು ರಾಜ್ಯ ಸರಕಾರಗಳು ನಿರ್ಧರಿಸಿವೆ.

ಪ್ರಸ್ತುತ ಶೇ.6ರಷ್ಟು ರೈತರು ಮಾತ್ರ ಎಪಿಎಂಸಿಗಳಲ್ಲಿ ಬೆಳೆ ಮಾರಾಟ ಮಾಡುತ್ತಿದ್ದು ಶೇ.94ರಷ್ಟು ರೈತರಿಗೆ ಮಾರುಕಟ್ಟೆ ಸೌಲಭ್ಯಗಳಿಲ್ಲ. ರೈತರಿಗೆ ನೆರವಾಗುವ ಉದ್ದೇಶ ಸರಕಾರಕ್ಕಿದ್ದರೆ ಮಾರುಕಟ್ಟೆಗಳಿಲ್ಲದ ಕಡೆಗಳಲ್ಲಿ ಎಪಿಎಂಸಿಯಿಂದ ಪರವಾನಿಗೆ ಪಡೆದು ಮಾರುಕಟ್ಟೆಗಳನ್ನು ಸ್ಥಾಪಿಸಲು ಸರಕಾರ ಉತ್ತೇಜನ ನೀಡಬಹುದಾಗಿದೆ. ನಮ್ಮಲ್ಲಿ ಪ್ರತಿ ತಾಲೂಕು ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಪ್ರಜಾಸತ್ತಾತ್ಮಕವಾಗಿ ಚುನಾವಣೆಯಲ್ಲಿ ಆಯ್ಕೆಯಾದ ರೈತ ಪ್ರತಿನಿಧಿಗಳನ್ನೊಳಗೊಂಡ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಿವೆ. ಕೇಂದ್ರ ಸರಕಾರ ನಿಗದಿಪಡಿಸಿರುವ ಬೆಂಬಲ ಬೆಲೆಯ ಅನುಷ್ಟಾನದ ಮೂಲಕ ಕೃಷಿ ಉತ್ಪನ್ನಗಳ ಬೆಲೆ ನಿರ್ಧರಿಸಿರುವ ಪ್ರಕ್ರಿಯೆಯಲ್ಲಿ ಎಪಿಎಂಸಿಗಳ ಪಾತ್ರ ನಿರ್ಣಾಯಕ ಎಂದಿದ್ದಾರೆ.

ಇಲ್ಲಿ ರೈತರು ಮಧ್ಯವರ್ತಿಗಳ ಕಾಟ ಇಲ್ಲದೆ ನೇರವಾಗಿ ವರ್ತಕರಿಗೆ ತಮ್ಮ ಬೆಳೆಯನ್ನು ಮಾರಾಟ ಮಾಡಲು ಅವಕಾಶ ಇದೆ. ಇದರ ಜೊತೆಗೆ ತಮ್ಮ ಉತ್ಪನ್ನಗಳನ್ನು ಅಡಮಾನ ಇಟ್ಟು ಸಾಲ ಪಡೆಯಬಹುದು, ದಾಸ್ತಾನು ಮಳಿಗೆ, ವಿಶ್ರಾಂತಿ ಗೃಹಗಳ ಸೌಲಭ್ಯಗಳೂ ಇವೆ. ಬಹಳ ಮುಖ್ಯವಾಗಿ  ರೈತರು ಸಂಘಟಿತರಾಗಲು ಇದು ವೇದಿಕೆ ಒದಗಿಸಿದೆ. ಒಮ್ಮೆ ಈ ಬಹುರಾಷ್ಟ್ರೀಯ ಕಂಪೆನಿಗಳು ಕಾಯ್ದೆ ತಿದ್ದುಪಡಿ ಮೂಲಕ ಮೀಸೆ ತುರುಕಿಸಿ ಒಳಪ್ರವೇಶಿಸಿದರೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳನ್ನು ಅಪ್ರಸ್ತುತ ಗೊಳಿಸಿ, ನಾಶ ಮಾಡಲು ಬಹಳ ದಿನಗಳು ಬೇಕಾಗಲಾರದು ಎಂದು ಎಚ್ಚರಿಸಿದ್ದಾರೆ.

ಮಾರುಕಟ್ಟೆಯನ್ನು ತಮ್ಮ ನಿಯಂತ್ರಣಕ್ಕೆ ಪಡೆದು ನಿಧಾನವಾಗಿ ಎಪಿಎಂಸಿಗಳನ್ನು ಅಪ್ರಸ್ತುತಗೊಳಿಸುವುದು ಇದರ ಹಿಂದಿನ ನಿಜವಾದ ದುರುದ್ದೇಶ ಎನ್ನವುದನ್ನು ರೈತರು ಅರ್ಥಮಾಡಿಕೊಳ್ಳಬೇಕು. ಎಪಿಎಂಸಿ ಕಾಯ್ದೆಗೆ ತಿದ್ದುಪಡಿಯನ್ನು ತರಲು ಹೊರಟಿರುವ ವಿಧಾನವೇ ಪ್ರಜಾಪ್ರಭುತ್ವ ವಿರೋಧಿಯಾದುದು. ರೈತರಿಗೆ ನೆರವಾಗುವ ಉದ್ದೇಶದಿಂದಲೇ ಕೇಂದ್ರ ಸರಕಾರ ಈ ತಿದ್ದುಪಡಿಯನ್ನು ತಂದಿದ್ದರೆ ಇದನ್ನು ಮೊದಲು ವಿಸ್ತೃತ ಚರ್ಚೆಗೊಳಪಡಿಸಬೇಕಿತ್ತು. ರೈತ ಪ್ರತಿನಿಧಿಗಳು, ಎಪಿಎಂಸಿ ಪದಾಧಿಕಾರಿಗಳು ಮತ್ತು ವರ್ತಕರ ಅಭಿಪ್ರಾಯ ಪಡೆದು ಈ ತಿದ್ದುಪಡಿಯನ್ನು ರೂಪಿಸಬೇಕಾಗಿತ್ತು ಎಂದು ಸಿದ್ಧರಾಮಯ್ಯ ಸಲಹೆ ಮಾಡಿದ್ದಾರೆ.

`ಕೇಂದ್ರ ಸರಕಾರದ ತಿದ್ದುಪಡಿ ಕಾಯ್ದೆಯನ್ನು ಕೃಷಿ ಉತ್ಪನ್ನ ಮಾರುಕಟ್ಟೆ(ನಿಯಂತ್ರಣ ಮತ್ತು ಅಭಿವೃದ್ಧಿ)ಕಾಯ್ದೆ ತಿದ್ದುಪಡಿ ಮಸೂದೆಯ ಮೂಲಕ ಅನುಮೋದಿಸಲು ರಾಜ್ಯ ಸರಕಾರ ಹೊರಡಿದೆ. ಇದರೊಳಗೆ ಅಡಕವಾಗಿರುವ ರೈತ ವಿರೋಧಿ ಹುನ್ನಾರಗಳನ್ನು ಕಾಂಗ್ರೆಸ್ ಪಕ್ಷ ವಿಧಾನ ಮಂಡಲದ ಎರಡೂ ಸದನಗಳಲ್ಲಿ ಎಳೆಎಳೆಯಾಗಿ ಬಿಡಿಸಿ ವಿರೋಧಿಸಲಿದೆ. ಯಾವುದೇ ಕಾರಣಕ್ಕೂ ಈ ಮಸೂದೆಯ ಅಂಗೀಕಾರಕ್ಕೆ ಅವಕಾಶ ನೀಡುವುದಿಲ್ಲ'
-ಸಿದ್ದರಾಮಯ್ಯ, ವಿಪಕ್ಷ ನಾಯಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X