Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸೋಮವಾರವೂ ವಾಡಿಕೆಗಿಂತ 101ಮಿ.ಮೀ ಅಧಿಕ...

ಸೋಮವಾರವೂ ವಾಡಿಕೆಗಿಂತ 101ಮಿ.ಮೀ ಅಧಿಕ ಮಳೆ: ಉಡುಪಿ ಜಿಲ್ಲೆಯಲ್ಲಿ ಒಟ್ಟು 67 ಮನೆಗಳಿಗೆ ಹಾನಿ

ವಾರ್ತಾಭಾರತಿವಾರ್ತಾಭಾರತಿ21 Sept 2020 7:39 PM IST
share
ಸೋಮವಾರವೂ ವಾಡಿಕೆಗಿಂತ 101ಮಿ.ಮೀ ಅಧಿಕ ಮಳೆ: ಉಡುಪಿ ಜಿಲ್ಲೆಯಲ್ಲಿ ಒಟ್ಟು 67 ಮನೆಗಳಿಗೆ ಹಾನಿ

ಉಡುಪಿ, ಸೆ.21: ಉಡುಪಿ ಜಿಲ್ಲೆಯಾದ್ಯಂತ ರವಿವಾರ ಬೆಳಗ್ಗೆ 8:30ರಿಂದ ಸೋಮವಾರ ಬೆಳಗ್ಗೆ 8:30ರವರೆಗೆ 24 ಗಂಟೆಗಳ ಅವಧಿಯಲ್ಲಿ ವಾಡಿಕೆ ಮಳೆಗಿಂತ 101ಮಿ.ಮೀ. (10.1ಸೆ.ಮಿ) ಅಧಿಕ ಮಳೆ ಸುರಿದಿದೆ.

ಸೆ.21ರಂದು ಜಿಲ್ಲೆಯ ವಾಡಿಕೆ ಮಳೆ 10ಮಿ.ಮೀ. ಆಗಿದೆ. ಆದರೆ ಜಿಲ್ಲೆಯ ಏಳು ತಾಲೂಕುಗಳಲ್ಲಿ ಇಂದು ಸುರಿದಿದ್ದು 111ಮಿ.ಮೀ. ಮಳೆಯಾ ಗಿದೆ. ಅಂದರೆ ದಿನದಲ್ಲಿ ವಾಡಿಕೆಗಿಂತ 101 ಮಿ.ಮೀ. ಮಳೆ ಅಧಿಕ ಸುರಿದಿದೆ.

ಉಡುಪಿ ತಾಲೂಕಿನಲ್ಲಿ ಇಂದಿನ ವಾಡಿಕೆ ಮಳೆ 10ಮಿ.ಮೀ.,ಆದರೆ ಸುರಿದಿರುವುದು 87ಮಿ.ಮೀ. ಮಳೆ. ಅಂದರೆ ವಾಡಿಕೆಗಿಂತ 77ಮಿ.ಮೀ. ಅಧಿಕ ಮಳೆ. ಅದೇ ರೀತಿ ಕುಂದಾಪುರ ತಾಲೂಕಿನಲ್ಲಿ ವಾಡಿಕೆ 7ಮಿ.ಮೀ. ಇಂದು ಬಂದಿರುವುದು 124 ಮಿ.ಮೀ. ಅಧಿಕ 117ಮಿ.ಮೀ., ಕಾರ್ಕಳದಲ್ಲಿ 12-124-112, ಬ್ರಹ್ಮಾವರದಲ್ಲಿ 06-102-96,ಬೈಂದೂರಿನಲ್ಲಿ 12-144-122, ಕಾಪು ತಾಲೂಕಿನಲ್ಲಿ 07-102-95, ಹೆಬ್ರಿ ತಾಲೂಕಿನಲ್ಲಿ 14-97-83ಮಿ.ಮೀ. ಮಳೆಯಾಗಿದೆ.

ನೆರೆ ನೀರು ಇಳಿತ: ಕಳೆದ ಮೂರು ದಿನಗಳ ಮಳೆಯಿಂದಾದ ನೆರೆ ನೀರಿನ ಪ್ರಮಾಣ ಇಂದು ತಗ್ಗಿದೆ. ಜಿಲ್ಲೆಯ ಒಟ್ಟು ಏಳು ಕಡೆಗಳಲ್ಲಿ ಮಾತ್ರ ಕಾಳಜಿ ಕೇಂದ್ರ ಕಾರ್ಯಾಚರಿಸುತಿದ್ದು, ಒಟ್ಟು 137 ಮಂದಿ ಇನ್ನೂ ಇದರಲ್ಲಿ ಆಶ್ರಯ ಪಡೆದಿದ್ದಾರೆ. ಒಟ್ಟು 1064 ಮಂದಿ ತಮ್ಮ ಪ್ರದೇಶದಲ್ಲಿ ನೆರೆ ನೀರು ಇಳಿದಿರುವುದರಿಂದ ಮನೆಗಳಿಗೆ ತೆರಳಿದ್ದಾರೆ.

ಉಡುಪಿ ತಾಲೂಕಿನಲ್ಲಿ 2 ಕೇಂದ್ರಗಳಲ್ಲಿ 65 ಮಂದಿ (30 ಪುರುಷರು, 35 ಮಹಿಳೆಯರು), ಬ್ರಹ್ಮಾವರದ 3 ಕೇಂದ್ರಗಳಲ್ಲಿ 26 (10-16), ಕಾಪುವಿನ 2 ಕೇಂದ್ರಗಳಲ್ಲಿ 46 (22-24) ಮಂದಿ ಉಳಿದುಕೊಂಡಿದ್ದಾರೆ.

ಜಿಲ್ಲೆಯಲ್ಲಿ ಒಟ್ಟು 67 ಮನೆಗಳಿಗೆ ಹಾನಿಯಾದ ಬಗ್ಗೆ ವರದಿಯಾಗಿದೆ. ಇವುಗಳಲ್ಲಿ ಉಡುಪಿ-36, ಕುಂದಾಪುರ-6, ಬ್ರಹ್ಮಾವರ-8, ಕಾಪು-14, ಕಾರ್ಕಳ-3 ಮನೆಗಳಿಗೆ ಹಾನಿಯಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ನಿಯಂತ್ರಣ ಕೇಂದ್ರ ತಿಳಿಸಿದೆ.

ಸಹಜ ಸ್ಥಿತಿಯತ್ತ ಜನಜೀವ: ಜಿಲ್ಲೆಯ ಇತಿಹಾಸದ ಅಭೂತಪೂರ್ವ ಜಲಪ್ರಳಯದಿಂದ ಅಸ್ತವ್ಯಸ್ತಗೊಂಡಿದ್ದ ಜನಜೀವನ ಇಂದು ನಿಧಾನವಾಗಿ ಸಹಜ ಸ್ಥಿತಿಗೆ ಬರುತ್ತಿದೆ. ನೆರೆ ಪೀಡಿತವಾಗಿದ್ದ ನಾಲ್ಕು ತಾಲೂಕುಗಳ ಹೆಚ್ಚಿನ ಗ್ರಾಮಗಳ ನೆರೆ ನೀರು ಇಳಿಮುಖವಾಗಿದೆ. ಜನರು ತಮ್ಮ ಮನೆ ಗಳಿಗೆ ಮರಳಿ, ನೆರೆ ನೀರು ನುಗ್ಗಿ ಕೆಸರುಮಯವಾದ ಮನೆಯನ್ನು ಸಹಜ ಸ್ಥಿತಿಗೆ ತರುವ ಪ್ರಯತ್ನದಲ್ಲಿ ತೊಡಗಿದ್ದಾರೆ.

ಜಿಲ್ಲೆಯ ಹೆಚ್ಚಿನೆಲ್ಲಾ ನದಿಗಳ ನೀರು ಇಳಿದು ನೆಲಮಟ್ಟಕ್ಕೆ ಸಮನಾಗಿ ಹರಿಯುತ್ತಿದೆ. ಜಲಾವೃತಗೊಂಡಿದ್ದ ಗದ್ದೆ, ಬಯಲು, ತೋಟಗಳ ನೀರು ಸಹ ಹರಿದುಹೋಗಿದ್ದು, ನೆರೆ ನೀರು ತಂದು ಹಾಕಿದ ಕೆಸರು, ಮಣ್ಣು ಅಲ್ಲೀಗ ಗೋಚರಿಸುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X