Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಪ್ಪಾಳೆ ತಟ್ಟಿ, ಗಂಟೆ ಬಾರಿಸಿ, ದೀಪ...

ಚಪ್ಪಾಳೆ ತಟ್ಟಿ, ಗಂಟೆ ಬಾರಿಸಿ, ದೀಪ ಆರಿಸಿದರೂ ಮೃತದೇಹ ಸಾಗಿಸಲು ಆಂಬುಲೆನ್ಸ್ ಸಿಗಲಿಲ್ಲ

ಕೇಂದ್ರ-ರಾಜ್ಯ ಸರಕಾರಗಳ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ವಾರ್ತಾಭಾರತಿವಾರ್ತಾಭಾರತಿ22 Sept 2020 8:22 PM IST
share
ಚಪ್ಪಾಳೆ ತಟ್ಟಿ, ಗಂಟೆ ಬಾರಿಸಿ, ದೀಪ ಆರಿಸಿದರೂ ಮೃತದೇಹ ಸಾಗಿಸಲು ಆಂಬುಲೆನ್ಸ್ ಸಿಗಲಿಲ್ಲ

ಬೆಂಗಳೂರು, ಸೆ. 22: `ಪ್ರಧಾನಿ ಮೋದಿಯವರ ಮಾತು ಕೇಳಿ ಜನ ಕೊರೋನ ನಿಯಂತ್ರಣಕ್ಕೆ ಚಪ್ಪಾಳೆ ತಟ್ಟಿದವರು, ಗಂಟೆ ಬಾರಿಸಿದವರು, ದೀಪ ಆರಿಸಿದವರ ಕುಟುಂಬಗಳ ಸದಸ್ಯರಿಗೇ ಕೊರೋನ ಸೋಂಕು ಬಂದಾಗ ಆಸ್ಪತ್ರೆಗಳಲ್ಲಿ ಹಾಸಿಗೆ(ಬೆಡ್)ಗಳು ಸಿಗಲಿಲ್ಲ. ಜೀವ ಉಳಿಸುವ ವೆಂಟಿಲೇಟರ್ ಗಳು ದೊರೆಯಲಿಲ್ಲ. ಸೋಂಕಿತರನ್ನು ಆಸ್ಪತ್ರೆಗಳಿಗೆ ಕರೆದೊಯ್ಯಲು-ಮೃತದೇಹ ಸಾಗಿಸಲು ಆಂಬುಲೆನ್ಸ್ ಗಳೂ ಸಿಗಲಿಲ್ಲ. ಸೋಂಕಿತರಿಗೆ ಸೂಕ್ತ ಚಿಕಿತ್ಸೆ ನೀಡುವುದಿರಲಿ, ಪರೀಕ್ಷೆ ಮಾಡಿಸಿಕೊಳ್ಳುವುದಕ್ಕೂ ದಿನಗಟ್ಟಲೆ ಕಾಯುವ ಸ್ಥಿತಿ ಬಂದೊದಗಿತ್ತು' ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಇಂದಿಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಮಂಗಳವಾರ ವಿಧಾನಸಭೆಯಲ್ಲಿ ನಿಯಮ 69ರಡಿ ಕೊರೋನ ಸೋಂಕಿನ ನಿರ್ವಹಣೆ ಹಾಗೂ ನಿಯಂತ್ರಣದಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರಗಳ ವೈಫಲ್ಯಗಳನ್ನು ಪ್ರಸ್ತಾಪಿಸಿದ ಅವರು, ಸೋಂಕು ಪರೀಕ್ಷೆ ಮಾಡಿಸಿಕೊಂಡರೂ ವರದಿ ಬರಲು ವಾರಗಟ್ಟಲೆ ಸಮಯ ಬೇಕಾಯಿತು. ಅಲ್ಲಿವರೆಗೂ ಸೋಂಕಿತರು ನರಳುತ್ತಲೆ ಇತರರಿಗೂ ಸೋಂಕು ಹರಡಿತು. ಸೋಂಕಿತರನ್ನು ನಡೆಸಿಕೊಳ್ಳುತ್ತಿದ್ದ ರೀತಿ, ಆಸ್ಪತ್ರೆಗಳ ಅವ್ಯವಸ್ಥೆ, ಬೆಡ್‍ಗಳು ಸಿಗದಿರುವುದು, ಆಸ್ಪತ್ರೆಗಳಿಂದ ಆಸ್ಪತ್ರೆಗಳಿಗೆ ಅಲೆದಾಟ, ಆಂಬುಲೆನ್ಸ್ ಗಾಗಿ ಕಾಯುತ್ತಾ ರಸ್ತೆಯಲ್ಲೇ ಗಂಟೆಗಟ್ಟಲೆ ಸೋಂಕಿತರು ಕಾಯುತ್ತಾ ನರಳುತ್ತಿದ್ದರೂ ಸರಕಾರ, ಮಂತ್ರಿಗಳ ಹೃದಯ ಕೆಲಸ ಮಾಡಲಿಲ್ಲ. ಕೇವಲ ಬಾಯಿ ಮಾತಿನ ಹೇಳಿಕೆಗಳಲ್ಲೇ ನಾಲ್ಕೈದು ತಿಂಗಳು ಕಳೆದವು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜನವರಿ ತಿಂಗಳಲ್ಲೆ ಪ್ರಪಂಚದ ಹಲವು ಕಡೆಗಳಲ್ಲಿ ಸೋಂಕು ಕಾಣಿಸಿಕೊಂಡರೂ, ಫೆ.24-25ಕ್ಕೆ ನಮಸ್ತೆ ಟ್ರಂಪ್ ಕಾರ್ಯಕ್ರಮ ಗುಜರಾತ್‍ನ ಅಹಮದಾಬಾದ್‍ನ ಸರ್ಧಾರ್ ಪಟೇಲ್ ಕ್ರೀಡಾಂಗಣದಲ್ಲಿ ನಡೆಯಿತು. ಅಲ್ಲಿ ಒಂದು ಲಕ್ಷದಷ್ಟು ಮಂದಿ ಸೇರಿದ್ದರು. ದಿಲ್ಲಿಯ ನಿಜಾಮುದ್ದೀನ್ ಮರ್ಕಝ್ ನಲ್ಲಿ ತಬ್ಲೀಗಿ ಧಾರ್ಮಿಕ ಸಭೆ ಮಾ.10ರಿಂದ 13ರ ವರೆಗೆ ನಡೆಸಲು ಅವಕಾಶ ನೀಡಲಾಯಿತು. ಕೇಂದ್ರ ಆರೋಗ್ಯ ಸಚಿವಾಲಯ ಮಾ.13ರಂದು, `ಕೊರೋನ ಬಗ್ಗೆ ಜನ ಆತಂಕ ಪಡುವ ಅಗತ್ಯವಿಲ್ಲ. ಕೊರೋನ ತುರ್ತ ನಿಗಾ ವಹಿಸಬೇಕಾದ ಸಂಗತಿ ಅಲ್ಲ' ಎಂದು ಹೇಳಿಕೆ ನೀಡಿತ್ತು.

ಆದರೆ, ವಿಶ್ವ ಆರೋಗ್ಯ ಸಂಸ್ಥೆ ಮಾ.11ರಂದೇ ಕೋವಿಡ್-19 ಸಾಂಕ್ರಾಮಿಕ ಎಂದು ಘೋಷಿಸಿತ್ತು. ವಿಶ್ವ ಆರೋಗ್ಯ ಸಂಸ್ಥೆ ಸಾಂಕ್ರಾಮಿಕ ಎಂದು ಘೋಷಿಸಿದ ಎರಡು ದಿನದ ಬಳಿಕವೂ ಕೇಂದ್ರ ಆರೋಗ್ಯ ಸಚಿವಾಲಯ ಕೊರೋನ ಬಗ್ಗೆ ಬೇಜವಾಬ್ದಾರಿ ಹೇಳಿಕೆ ನೀಡಿದ್ದು ಸರಕಾರ ಮೈ ಮರೆತಿತ್ತು ಎನ್ನುವುದಕ್ಕೆ ಉದಾಹರಣೆ. ಕೊರೋನ ದೇಶಾದ್ಯಂತ ವ್ಯಾಪಿಸಲು ಶುರು ಮಾಡಿದಾಗ ದೇಶದ ಪ್ರಧಾನಿ ಮೋದಿ ದೇಶದ ಜನಕ್ಕೆ ಚಪ್ಪಾಳೆ ತಟ್ಟಲು ಕರೆ ಕೊಟ್ಟರು. ಮಾ.22ರಂದು ಚಪ್ಪಾಳೆ ತಟ್ಟಿದ್ದೂ ಆಯಿತು ಎಂದು ಲೇವಡಿ ಮಾಡಿದರು.

ಸೋಂಕಿನ ಭೀತಿಯಿಂದ ಜನ ಸರಕಾರವನ್ನು, ಆಸ್ಪತ್ರೆಗಳನ್ನು ಕಂಡರೆ ಭಯ ಬೀಳಲು ಆರಂಭ ಮಾಡಿದರು. ಕೊರೋನ ಸಂದರ್ಭದಲ್ಲಿ ಸರಕಾರ ಮತ್ತು ಮಂತ್ರಿಗಳು ಕನಿಷ್ಠವಾದರೂ ಹೃದಯಂತಿಕೆಯಿಂದ ವರ್ತಿಸಬೇಕಿತ್ತು. ಮಕ್ಕಳ ಬಗ್ಗೆ ಪೋಷಕರು, ಪೋಷಕರ ಬಗ್ಗೆ ಮಕ್ಕಳು, ಹಿರಿಯ ನಾಗರಿಕರೆಲ್ಲಾ ಒಂದಲ್ಲಾ ಒಂದು ರೀತಿಯ ಆತಂಕ, ಸಂಕಟ, ದುಗುಡದಲ್ಲಿ ಮುಳುಗಿದ್ದಾಗ ಮಂತ್ರಿಗಳು ಪಾಲು ಹಂಚಿಕೆಗಾಗಿ ಕಚ್ಚಾಡುತ್ತಿದ್ದರು. ಇಡೀ ಸಮಾಜ ಒಂದು ಸಣ್ಣ ಭರವಸೆ, ಆಸರೆಗಾಗಿ ಸರಕಾರದ ಕಡೆ ಮುಖ ಮಾಡಿದ್ದರೆ ಸರಕಾರ ಜನರಿಗೆ ಬೆನ್ನು ತೋರಿಸಿ ಇಡೀ ಸಮಾಜದಲ್ಲಿ ಅನಾಥ ಪ್ರಜ್ಞೆ ಕಾಡುವಂತಾಯಿತು ಎಂದು ಟೀಕಿಸಿದರು.

ನ್ಯಾಯಾಂಗ ತನಿಖೆಗೆ ಒತ್ತಾಯ: ಕೊರೋನ ಸೋಂಕನ್ನು ತಡೆಗಟ್ಟುವಲ್ಲಿ ರಾಜ್ಯ ಮತ್ತು ಕೇಂದ್ರ ಸರಕಾರ ಸಂಪೂರ್ಣ ವಿಫಲವಾಗಿದ್ದು, ವೆಂಟಿಲೇಟರ್, ಪಿಪಿಇ ಕಿಟ್, ಮಾಸ್ಕ್, ಸ್ಯಾನಿಟೈಸರ್ ಸೇರಿ ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ನಡೆದಿರುವ ಅವ್ಯವಹಾರಗಳ ಕುರಿತು ಅಂಕಿ-ಅಂಶಗಳನ್ನು ದಾಖಲೆಗಳ ಸಮೇತ ಬಹಿರಂಗಪಡಿಸಿದ್ದು, ಈ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಸಿದ್ದರಾಮಯ್ಯ ಇದೇ ಸಂದರ್ಭದಲ್ಲಿ ಸರಕಾರವನ್ನು ಆಗ್ರಹಿಸಿದರು.

ವೈದ್ಯಕೀಯ ಉಪಕರಣಗಳ ಖರೀದಿ ಹಗರಣ ದೊಡ್ಡದಿದೆ. ಇಲ್ಲಿ ಪಾರದರ್ಶಕತೆ ಇಲ್ಲ. ಉಪಕರಣ ಖರೀದಿಗೆ ಎರಡು, ಮೂರು, ನಾಲ್ಕು ಪಟ್ಟು ಹೆಚ್ಚಿನ ಮೊತ್ತವನ್ನು ನೀಡಲಾಗಿದೆ. ಸಾರ್ವಜನಿಕರ ತೆರಿಗೆ ಹಣವನ್ನು ಮನಸೋ ಇಚ್ಛೆ ವೆಚ್ಚ ಮಾಡಲಾಗಿದ್ದು, ಇದಕ್ಕೆ ಸರಕಾರ ಉತ್ತರ ನೀಡಬೇಕು. ಆದರೆ, ಈ ವರೆಗೂ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಸರಕಾರ ಯಾವುದೇ ಉತ್ತರ ನೀಡಿಲ್ಲ. ಹೀಗಾಗಿ ಈ ಹಗರಣವನ್ನು ನ್ಯಾಯಾಂಗ ತನಿಖೆ ಒಪ್ಪಿಸಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದರು.

ತನಿಖೆ ನಡೆಸಿದರೆ ತಪ್ಪಿತಸ್ಥರು ಯಾರು ಎಂಬುದನ್ನು ಪತ್ತೆಹಚ್ಚಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು. ನ್ಯಾಯಾಂಗ ತನಿಖೆಯಾಗದಿದ್ದರೆ ತಪ್ಪಿತಸ್ಥರ ಪತ್ತೆ ಸಾಧ್ಯವಿಲ್ಲ. ಸತ್ಯಾಂಶ ಹೊರ ಬರುವುದಿಲ್ಲ. ನ್ಯಾಯಾಂಗ ತನಿಖೆ ಅಗತ್ಯ. ಇಲ್ಲದಿದ್ದರೆ ಹಣ್ಣು ತಿಂದುವರು ಬಚಾವಾಗುತ್ತಾರೆ. ಸಿಪ್ಪೆ ತಿಂದವರು ಸಿಕ್ಕಿ ಹಾಕಿಕೊಳ್ಳುವಂತಾಗುತ್ತದೆ. ಆದುದರಿಂದ ಈ ಪ್ರಕರಣ ಬಗ್ಗೆ ನ್ಯಾಯಾಂಗ ತನಿಖೆ ಆಗಲೇಬೇಕು ಎಂದು ಸಿದ್ದರಾಮಯ್ಯ ಮನವಿ ಮಾಡಿದರು.

ಬೇಕಾಬಿಟ್ಟಿ ಖರ್ಚು: ಬೆಂಗಳೂರು ಮಹಾನಗರದಲ್ಲಿ `ಕಂಟೈನ್ಮೆಂಟ್ ಝೋನ್'ಗಳ ನಿಗದಿಯಲ್ಲೂ ಅವ್ಯವಹಾರಗಳು ನಡೆದಿವೆ. 34 ಸಾವಿರ ಕಂಟೈನ್ಮೆಂಟ್ ಝೋನ್‍ಗಳಿಗೆ ಯದ್ವಾತದ್ವಾ ಹಣ ವೆಚ್ಚವಾಗಿದೆ. ಈ ಬಗ್ಗೆಯೂ ತನಿಖೆಯಾಗಬೇಕು ಎಂದ ಅವರು, ರಾಜ್ಯ ಹಾಗೂ ಕೇಂದ್ರ ಸರಕಾರಗಳು ಸೂಕ್ತ ಸಂದರ್ಭದಲ್ಲಿ ಅಗತ್ಯ ಮುನ್ನಚ್ಚರಿಕೆ ಕೈಗೊಂಡಿದ್ದರೆ ಸೋಂಕು ನಿಯಂತ್ರಣ ಮಾಡಬಹುದಿತ್ತು. ಆದರೆ, ಸರಕಾರ ಸಂಪೂರ್ಣ ಎಡವಿದೆ ಎಂದು ದೂರಿದರು.

ಸೋಂಕಿಗೆ ಅತ್ಯಂತ ಶೀಘ್ರವೇ ಔಷಧಿ ಕಂಡು ಹಿಡಿಯಬೇಕು. ಜನಸಾಮಾನ್ಯರು ಕೊರೋನ ಸೋಂಕಿನ ಬಗ್ಗೆ ಎಚ್ಚರ ವಹಿಸಬೇಕಾಗಿದೆ. ಕೊರೋನ ಬಂದು ಹೋದ ಮೇಲೂ ಎಚ್ಚರಿಕೆಯಿಂದ ಇರಬೇಕು. ಯಾವುದೇ ಕಾರಣಕ್ಕೂ ಸೋಂಕಿನ ಬಗ್ಗೆ ನಿರ್ಲಕ್ಷ್ಯತೆ ಸರಿಯಲ್ಲ. ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಸೇರಿದಂತೆ ಹಲವು ಮಂದಿ ಜನಪ್ರತಿನಿಧಿಗಳು ಸೋಂಕಿಗೆ ಬಲಿಯಾಗಿದ್ದಾರೆ ಎಂದು ಸಿದ್ದರಾಮಯ್ಯ ಗಮನಸೆಳೆದರು.

ಪ್ಯಾಕೇಜ್ ಜನರಿಗೆ ತಲುಪಿಲ್ಲ: ಕೊರೋನ ಲಾಕ್‍ಡೌನ್ ಸಂದರ್ಭದಲ್ಲಿ ಸಂಕಷ್ಟದಲ್ಲಿ ಸಿಲುಕಿದ್ದ ರೈತರು ಸೇರಿದಂತೆ ಇನ್ನಿತರ ಸಮುದಾಯಗಳಿಗೆ ಸರಕಾರ ಪ್ಯಾಕೇಜ್ ಘೋಷಣೆ ಮಾಡಿತ್ತು. ಆದರೆ, ಅದು ಸಮರ್ಪಕವಾಗಿ ಜನರಿಗೆ ತಲುಪಿಲ್ಲ. ನಾನು ಸಿಎಂ ಸ್ಥಾನದಲ್ಲಿ ಇದ್ದಿದ್ದರೆ ಸಾಲ ಮಾಡಿಯಾದರೂ ಅಸಂಘಟಿತ ಕಾರ್ಮಿಕರು ಮತ್ತು ವಿವಿಧ ಸಮುದಾಯಗಳಿಗೆ ಕನಿಷ್ಠ 10 ಸಾವಿರ ರೂ.ನೆರವು ನೀಡುತ್ತಿದ್ದೆ ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X