Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸರಕಾರದ ಹಣಕಾಸಿನ ವ್ಯವಹಾರಗಳ...

ಸರಕಾರದ ಹಣಕಾಸಿನ ವ್ಯವಹಾರಗಳ ಲೆಕ್ಕಪರಿಶೋಧನಾ ವರದಿ ಮಂಡನೆ

ಹಣವಿಲ್ಲವೆಂದು ಸಾಲ ಎತ್ತುವ ಕ್ರಮಕ್ಕೆ ಸಿಎಜಿ ತೀವ್ರ ಆಕ್ಷೇಪ

ವಾರ್ತಾಭಾರತಿವಾರ್ತಾಭಾರತಿ22 Sept 2020 10:26 PM IST
share
ಸರಕಾರದ ಹಣಕಾಸಿನ ವ್ಯವಹಾರಗಳ ಲೆಕ್ಕಪರಿಶೋಧನಾ ವರದಿ ಮಂಡನೆ

ಬೆಂಗಳೂರು, ಸೆ. 22: ಆಯವ್ಯಯದ ಹೊರತಾಗಿ ಇತರೆ ಮೂಲಗಳಿಂದ(ನಿಗಮ ಮಂಡಳಿ, ಪ್ರಾಧಿಕಾರ, ಸ್ಥಳೀಯ ಸಂಸ್ಥೆಗಳು) ಸಾಲ ಪಡೆದಿರುವ ಸರಕಾರದ ಕ್ರಮದಿಂದ, ರಾಜ್ಯ ವಿತ್ತೀಯ ಹೊಣೆಗಾರಿಕೆ ಕಾಯ್ದೆಯ ಮಾನದಂಡಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ ಎಂಬ ಗಂಭೀರವಾದ ಅಂಶವನ್ನು ಮಹಾಲೆಕ್ಕಪರಿಶೋಧಕರ (ಸಿಎಜಿ) ವರದಿ ಇಂದಿಲ್ಲಿ ಬಹಿರಂಗಪಡಿಸಿದೆ.

ಮಂಗಳವಾರ ವಿಧಾನಸಭೆಯಲ್ಲಿ ಸಿಎಜಿ ವರದಿ ಮಂಡನೆಯಾಗಿದ್ದು, ರಾಜ್ಯ ಸರಕಾರ ತನ್ನ ಬಳಿ ಹಣವಿದ್ದರೂ ಸಾಲ ಎತ್ತುವ ಕ್ರಮಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. 2019ರ ಮಾರ್ಚ್ ಅಂತ್ಯಕ್ಕೆ ಕೊನೆಗೊಂಡ ಆರ್ಥಿಕ ವರ್ಷದ ರಾಜ್ಯ ಹಣಕಾಸು ಲೆಕ್ಕಪರಿಶೋಧನೆಯ ಮೊದಲ ವರದಿಯಲ್ಲಿ ಈ ಬಗ್ಗೆ ಪ್ರಸ್ತಾಪಿಸಿರುವ ಸಿಎಜಿ, 2018-19ರ ಸಾಲಿನಲ್ಲಿ ರಾಜ್ಯದ ಒಟ್ಟು ಸಾಲದ (2,85,238 ಕೋಟಿ ರೂ) ಇದರ ಶೇ.5ರಷ್ಟು ಅಂದರೆ 14,862 ಕೋಟಿ ರೂ.ಗಳಷ್ಟನ್ನು ಬಜೆಟ್ ಹೊರತಾದ ಮೂಲಗಳಿಂದ ಎತ್ತಲಾಗಿದೆ ಎಂದು ಸಿಎಜಿ ಉಲ್ಲೇಖಿಸಿದೆ.

ಸರಕಾರದ ಖಾತರಿಯ ಮೇಲೆ ತನ್ನ ಅಧೀನದಲ್ಲಿರುವ ಸಂಸ್ಥೆಗಳು ಸಾಲ ತೆಗೆದುಕೊಳ್ಳುವುದಕ್ಕೆ ಕಡಿವಾಣ ಹಾಕಬೇಕು. ಮನಸೋ ಇಚ್ಛೆ ಸಾಲ ತೆಗೆಯುತ್ತಿರುವುದರಿಂದ ರಾಜ್ಯಕ್ಕೆ ನಿಗದಿ ಪಡಿಸಿರುವ ವಿತ್ತೀಯ ಕೊರತೆ ಮಿತಿ ಮುರಿದು ಬೀಳಬಹುದು. ರಾಜ್ಯದಲ್ಲಿ ಈಗಾಗಲೇ ವಿತ್ತೀಯ ಕೊರತೆ ಮತ್ತು ರಾಜ್ಯದ ಒಟ್ಟು ಆಂತರಿಕ ಉತ್ಪನ್ನ ಸೂಚ್ಯಂಕ(ಜಿಎಸ್‍ಡಿಪಿ)ದ ದರ ಈಗಾಗಲೇ ಹೆಚ್ಚುತ್ತಿದೆ ಎಂದು ಪ್ರಧಾನ ಮಹಾಲೇಕ್ಕಪಾಲರಾದ ನಿವೇದಿತಾ ಅವರು ಸುದ್ದಿಗೋಷ್ಟಿಯಲ್ಲಿ ಎಚ್ಚರಿಕೆ ನೀಡಿದ್ದಾರೆ.

ಉತ್ತರ ಕರ್ನಾಟಕಕ್ಕೆ ಕಡಿಮೆ ಅನುದಾನ: ಸ್ಥಳೀಯ ಸಂಸ್ಥೆಗಳು, ನಿಗಮ, ಮಂಡಳಿ, ಪ್ರಾಧಿಕಾರಗಳ ಸಾಲ ಮಾಡುವ ಚಾಳಿಗೆ ಕಡಿವಾಣ ಹಾಕಬೇಕು. ಹಾಗೆಯೇ ನಿಗಮ, ಮಂಡಳಿಗಳ ಈ ಬಜೆಟ್ ಹೊರತಾದ ಬಾಧ್ಯತೆಯನ್ನು ಸ್ಪಷ್ಟವಾಗಿ ಗುರುತಿಸಿ, ವರದಿ ಮಾಡಬೇಕು. ರಾಜ್ಯವು ಕೇರಳ, ತಮಿಳುನಾಡುಗಳಿಗೆ ಹೋಲಿಸಿದರೆ ಆರೋಗ್ಯ ಮತ್ತು ಶಿಕ್ಷಣ ವಲಯಕ್ಕೆ ಕಡಿಮೆ ಖರ್ಚು ಮಾಡುತ್ತಿದೆ. ಆದರಲ್ಲೂ ಉತ್ತರ ಕರ್ನಾಟಕದ ಜಿಲ್ಲೆಗಳತ್ತ ಇನ್ನಷ್ಟು ಕಡಿಮೆ ಅನುದಾನ ನೀಡುತ್ತಿದೆ ಎಂಬ ಅಂಶವನ್ನು ಪತ್ತೆ ಮಾಡಿದೆ.

2018-19ರ ಸಾಲಿನಲ್ಲಿ 15,400 ಕೋಟಿ ರೂ.ಸಬ್ಸಿಡಿ ರೂಪದಲ್ಲಿ ವಿನಿಯೋಗಿಸಿದ್ದು ಇದರಲ್ಲಿ ಸಿಂಹಪಾಲು ಇಂಧನದ ಸಬ್ಸಿಡಿಯದಾಗಿದೆ. ವಿದ್ಯುತ್ (7,593 ಕೋಟಿ ರೂ.), ಆಹಾರ (2,402 ಕೋಟಿ ರೂ), ಕೃಷಿ ಮತ್ತು ಕೃಷಿಗೆ ಸಂಬಂಧ ಪಟ್ಟ ಚಟುವಟಿಕೆ (2,336ಕೋಟಿ ರೂ.), ಸಹಕಾರ (777 ಕೋಟಿ ರೂ.)ರಷ್ಟು ಸಬ್ಸಿಡಿ ನೀಡಲಾಗಿದೆ. ಅಂದರೆ ರಾಜ್ಯದ ಒಟ್ಟು ಸಬ್ಸಿಡಿಯ ಅರ್ಧದಷ್ಟು ವಿದ್ಯುತ್ ಸಬ್ಸಿಡಿಯ ರೂಪದಲ್ಲಿದೆ. ಹಾಗೆಯೇ ನಷ್ಟ ಉಂಟು ಮಾಡುವ ಸಂಸ್ಥೆಗಳಲ್ಲಿ ಹಣ ಹೂಡುವ ರಾಜ್ಯ ಸರಕಾರದ ಕ್ರಮ ಸರಿಯಲ್ಲ ಎಂದು ಸಿಎಜಿ ತಕರಾರು ತೆಗೆದಿದೆ

ಆದಾಯ ಸಂಗ್ರಹಕ್ಕೆ ಸೂಚನೆ: ತೆರಿಗೆಯೇತರ ಮೂಲಗಳಿಂದ ರಾಜ್ಯಕ್ಕೆ ಬರುತ್ತಿರುವ ಆದಾಯ ಬಹಳ ಕಡಿಮೆ. ಹೀಗಾಗಿ ತೆರಿಗೇಯೇತರ ಮೂಲಗಳಿಂದ ಆದಾಯ ಸಂಗ್ರಹಿಸುವಂತೆ ಖರ್ಚು ಸುಧಾರಣಾ ಸಮಿತಿ ಶಿಫಾರಸ್ಸು ಮಾಡಿದೆ. 2014-19ರ ಸಾಲಿನಲ್ಲಿ ತೆರಿಗೇಯತರ ಮೂಲಗಳಿಂದ ಕೇವಲ ಶೇ.0.48 ರಿಂದ ಶೇ.0.52ರಷ್ಟು ಮಾತ್ರ ಆದಾಯ ಸಂಗ್ರಹವಾಗಿದೆ. ಆದ್ದರಿಂದ ತೆರಿಗೇಯೇತರ ಮೂಲಗಳಿಂದ ಹೆಚ್ಚು ಆದಾಯ ಸಂಗ್ರಹ ಮಾಡಲು ಸರಕಾರ ಮುಂದಾಗಬೇಕು ಎಂದು ಸಿಎಜಿ ಸೂಚಿಸಿದೆ.   

share
ವಾರ್ತಾಭಾರತಿ
ವಾರ್ತಾಭಾರತಿ
Next Story
X