Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಂಧಿತ ಪತ್ರಕರ್ತ ರಾಜೀವ್ ಶರ್ಮಾ ಹಿಂದೆ...

ಬಂಧಿತ ಪತ್ರಕರ್ತ ರಾಜೀವ್ ಶರ್ಮಾ ಹಿಂದೆ ದೊಡ್ಡ ತಿಮಿಂಗಿಲಗಳಿವೆ: ಎಸ್‍ಡಿಪಿಐ

ವಾರ್ತಾಭಾರತಿವಾರ್ತಾಭಾರತಿ22 Sept 2020 11:20 PM IST
share
ಬಂಧಿತ ಪತ್ರಕರ್ತ ರಾಜೀವ್ ಶರ್ಮಾ ಹಿಂದೆ ದೊಡ್ಡ ತಿಮಿಂಗಿಲಗಳಿವೆ: ಎಸ್‍ಡಿಪಿಐ

ಹೊಸದಿಲ್ಲಿ, ಸೆ.22: ಈ ವರ್ಷದ ಎಪ್ರಿಲ್ ದ್ವಿತೀಯಾರ್ಧದಿಂದ ಭಾರತೀಯ ಭೂಪ್ರದೇಶದೊಳಗೆ ಒಳನುಗ್ಗಲು ಚೀನಾ ಪ್ರಾರಂಭಿಸಿದೆ ಮತ್ತು ಸುಮಾರು 38,000 ಚದರ ಕಿ.ಮೀ. ಭಾರತೀಯ ಭೂಮಿಯನ್ನು ಈಗ ಚೀನಾ ಆಕ್ರಮಿಸಿಕೊಂಡಿದೆ ಎಂದು ಎಸ್‍ಡಿಪಿಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ.ಎಚ್.ಅಬ್ದುಲ್ ಮಜೀದ್ ತಿಳಿಸಿದ್ದಾರೆ.

ಈ ವಿಷಯದಲ್ಲಿ ಭಾರತ ಈಗಾಗಲೇ ತನ್ನ 20 ಸೈನಿಕರ ಅಮೂಲ್ಯ ಜೀವಗಳನ್ನು ತ್ಯಾಗ ಮಾಡಿದೆ. ಕೇಂದ್ರ ಸರಕಾರವು ತನ್ನ ಪುಕ್ಕಲು ಆಡಂಬರದ ಮಾತುಗಳು ಮತ್ತು ಚೀನೀ ಉತ್ಪನ್ನಗಳನ್ನು ನಿಷೇಧಿಸುವ ತಮಾಷೆಯ ಕ್ರಿಯೆಯ ಹೊರತಾಗಿ ದೇಶದ ಭೂಪ್ರದೇಶವನ್ನು ರಕ್ಷಿಸಲು ಯಾವುದೇ ಗಂಭೀರ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು ಅವರು ಕಿಡಿಗಾರಿದ್ದಾರೆ.

ಚೀನಾ ಸೈನಿಕರಿಂದ, ಭಾರತೀಯ ಭೂ ಪ್ರದೇಶದ ಆಕ್ರಮಣದ ಮಧ್ಯೆ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ನೇತೃತ್ವದ ಸಂಘಿ ಥಿಂಕ್ ಟ್ಯಾಂಕ್ ಆಗಿರುವ ವಿವೇಕಾನಂದ ಇಂಟರ್ ನ್ಯಾಷನಲ್ ಫೌಂಡೇಶನ್ (ವಿಐಎಫ್) ಜೊತೆ ಸಂಬಂಧ ಹೊಂದಿರುವ ಪತ್ರಕರ್ತ ರಾಜೀವ್ ಶರ್ಮಾ ಎಂಬವರನ್ನು ಚೀನಾದ ಮಹಿಳೆಯೊಂದಿಗೆ ಭಾರತೀಯ ಸೈನ್ಯದ ವರ್ಗೀಕೃತ ದಾಖಲೆಗಳೊಂದಿಗೆ ಬಂಧಿಸಲಾಗಿದೆ. ಬಂಧನಕ್ಕೊಳಗಾಗಿರುವ ರಾಜೀವ್ ಶರ್ಮಾ ಕೇವಲ ಒಂದು ಸಣ್ಣ ಇಣುಕು ಮಾತ್ರವಾಗಿದ್ದು, ಅವರ ಹಿಂದೆ ದೊಡ್ಡ ತಿಮಿಂಗಿಲಗಳಿವೆ ಎಂದು ಹೇಳಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಬೇಹುಗಾರಿಕೆ ಪ್ರಕರಣದಲ್ಲಿ ಭಾಗಿಯಾದ ದೊಡ್ಡ ಶಾರ್ಕ್‍ಗಳ ಪಾತ್ರವನ್ನು ಹೊರಗೆ ತರಲು ನಿಷ್ಪಕ್ಷಪಾತ ತನಿಖೆ ಮತ್ತು ವಿಚಾರಣೆ ನಡೆಸಬೇಕಾಗಿದೆ. ನಿರ್ದಿಷ್ಟ ಸಮುದಾಯವನ್ನು ಗುರಿಪಡಿಸುವುದು, ದೇಶದ್ರೋಹದ ಆರೋಪ ಮತ್ತು ಅವರ ದೇಶಪ್ರೇಮವನ್ನು ಪ್ರಶ್ನಿಸುವುದು ಸಂಘಿಗಳ ಧರ್ಮಾಂಧತೆಯ ಚಾಳಿಯಾಗಿದೆ ಎಂದು ಅಬ್ದುಲ್ ಮಜೀದ್ ಕಿಡಿಗಾರಿದ್ದಾರೆ.

ಆದಾಗ್ಯೂ, ಇಲ್ಲಿಯವರೆಗೆ ವಿದೇಶಗಳಿಗೆ ಬೇಹುಗಾರಿಕೆ ಮಾಡಿದ ವಿಷಯದಲ್ಲಿ ಪ್ರಕರಣ ದಾಖಲಾಗಿರುವ ಎಲ್ಲ ಅಪರಾಧಿಗಳು ಸ್ವಯಂಘೋಷಿತ ದೇಶಭಕ್ತರೇ ಆಗಿದ್ದಾರೆ. ಸೇನೆಯ ವರ್ಗೀಕೃತ ದಾಖಲೆಗಳನ್ನು ಚೀನಾಕ್ಕೆ ಹಸ್ತಾಂತರಿಸುವಲ್ಲಿ ಸಂಘಿ ಥಿಂಕ್ ಟ್ಯಾಂಕ್  ಆಗಿರುವ ವಿವೇಕಾನಂದ ಫೌಂಡೇಶನ್‍ನೊಂದಿಗೆ ನಿಕಟ ಸಂಬಂಧ ಹೊಂದಿರುವ ವ್ಯಕ್ತಿಯ ಪಾಲ್ಗೊಳ್ಳುವಿಕೆ ಅತ್ಯಂತ ಆತಂಕಕಾರಿಯಾಗಿದೆ. ಸಂಘಿಗಳಿಗೆ ದೇಶಭಕ್ತಿ ಎಂಬುದು ರಾಷ್ಟ್ರ ವಿರೋಧಿ ಚಟುವಟಿಕೆಗಳನ್ನು ನಡೆಸಲು ಮತ್ತೊಂದು ಜುಮ್ಲಾವಾಗಿದೆ ಎಂದು ಅವರು ತಿಳಿಸಿದ್ದಾರೆ.

ಈ ಬೇಹುಗಾರಿಕೆ ವಿಷಯದಲ್ಲಿ ಪ್ರಧಾನಮಂತ್ರಿಗಳ ಕಚೇರಿಯ (ಪಿಎಂಒ) ಪಾತ್ರವನ್ನು ತನಿಖೆ ನಡೆಸಬೇಕು. ಏಕೆಂದರೆ ಲಡಾಖ್‍ನಲ್ಲಿ ಚೀನಾದೊಂದಿಗಿನ ಸಂಘರ್ಷ ಉದ್ವಿಗ್ನಗೊಂಡಾಗ, ಭಾರತವು ಬೀಜಿಂಗ್ ಮೂಲದ ಏಷ್ಯನ್ ಇನ್ಫ್ರಾಸ್ಟ್ರಕ್ಚರ್ ಇನ್ವೆಸ್‍ಮೆಂಟ್ ಬ್ಯಾಂಕ್ (ಎಐಐಬಿ) ಎಂದು ಕರೆಯಲ್ಪಡುವ ಬಹುಪಕ್ಷೀಯ ಅಭಿವೃದ್ಧಿ ಬ್ಯಾಂಕಿನಿಂದ 9,202 ಕೋಟಿ ರೂ.ಸಾಲವನ್ನು ಪಡೆದುಕೊಂಡಿದೆ ಎಂದು ಅಬ್ದುಲ್ ಮಜೀದ್ ತಿಳಿಸಿದ್ದಾರೆ.

ಮೌನ ಅಥವಾ ವಿರೋಧ ಪಕ್ಷಗಳ ಅತ್ಯಂತ ನಿಷ್ಕ್ರಿಯ ಪ್ರತಿಕ್ರಿಯೆ ದೇಶವನ್ನು ಹಾಳುಮಾಡಲು ಮೋದಿ ಮತ್ತು ಅವರ ತಂಡಕ್ಕೆ ಇನ್ನಷ್ಟು ಸಹಾಯ ಮಾಡಲಿವೆ. ವಿರೋಧ ಪಕ್ಷಗಳು ತಮ್ಮ ಉದಾಸೀನತೆ, ಮೌನ ಮತ್ತು ನಿಷ್ಕ್ರಿಯತೆಯನ್ನು ಬಿಟ್ಟು ಎಚ್ಚೆತ್ತುಕೊಳ್ಳದಿದ್ದರೆ, ಭಾರತ ಎಂಬ ಒಂದು ಸುಂದರ ದೇಶವು ಆರೆಸ್ಸೆಸ್ ಮತ್ತು ಸಂಘ ಪರಿವಾರದ ಕೈಯಲ್ಲಿ ಅಪಾಯಕ್ಕೆ ಒಳಗಾಗುವುದಕ್ಕೆ ಭಾರತೀಯರು ಸಾಕ್ಷಿಯಾಗಬೇಕಾಗಬಹುದು ಎಂದು ಅಬ್ದುಲ್ ಮಜೀದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X