Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಂಚಾರಕ್ಕೆ ಅಯೋಗ್ಯವಾದ ಸಜಿಪ ಮೂಡ ಕೋಮಾಲಿ...

ಸಂಚಾರಕ್ಕೆ ಅಯೋಗ್ಯವಾದ ಸಜಿಪ ಮೂಡ ಕೋಮಾಲಿ ರಸ್ತೆ

ಗ್ರಾಪಂ ಕಚೇರಿ ಮುಂದೆ ಪ್ರತಿಭಟನೆಯ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ23 Sept 2020 8:21 PM IST
share
ಸಂಚಾರಕ್ಕೆ ಅಯೋಗ್ಯವಾದ ಸಜಿಪ ಮೂಡ ಕೋಮಾಲಿ ರಸ್ತೆ

ಬಂಟ್ವಾಳ, ಸೆ. 23: ತಾಲೂಕಿನ ಸಜಿಪ ಮೂಡ ಗ್ರಾಮದ ಬೊಳ್ಳಾಯಿ, ಮಂಚಿ, ಕಲ್ಲಡ್ಕ ಅಮ್ಟೂರು ಸಂಪರ್ಕ ಕಲ್ಪಿಸುವ ರಸ್ತೆಯ ಕೋಮಾಲಿ ಎಂಬಲ್ಲಿ ಅವೈಜ್ಞಾನಿಕ ಕಾಮಗಾರಿಯಿಂದ ಇಲ್ಲಿನ ರಸ್ತೆ ಸಂಪೂರ್ಣ ಹದಗೆಟ್ಟಿದ್ದು ಸಂಚಾರಕ್ಕೆ ತೀರ ಅಯೋಗ್ಯವಾಗಿದೆ.

ಬೊಳ್ಳಾಯಿಯಿಂದ ಕೋಮಾಲಿ ವರೆಗೆ ಡಾಂಬರು ರಸ್ತೆ ಇದೆ. ಕೋಮಾಲಿಯಲ್ಲಿ ರಸ್ತೆ ಬದಿ ಅವೈಜ್ಞಾನಿಕವಾಗಿ ಚರಂಡಿ ನಿರ್ಮಾಣ ಮಾಡಿರುವ ಹಿನ್ನೆಲೆಯಲ್ಲಿ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದೆ. ಅಲ್ಲದೆ ಎಪ್ರಿಲ್ ತಿಂಗಳಲ್ಲಿ ಇಲ್ಲಿನ ರಸ್ತೆಗೆ ಮಣ್ಣು ಹಾಕಿ ಎತ್ತರಗೊಳಿಸಲಾಗಿತ್ತು. ಮಳೆಗಾಲ ಆರಂಭದಲ್ಲೇ ರಸ್ತೆ ಕೆಸರುಮಯಗೊಂಡಿದ್ದು ಪ್ರಸಕ್ತ ರಸ್ತೆ ಸಂಪೂರ್ಣ ಹದಗೆಟ್ಟಿದ್ದು ವಾಹನಗಳ ಸಂಚಾರ ಸಂಪೂರ್ಣ ನಿಂತಿದೆ. ಜನರ ಸಂಚಾರ ಕೂಡಾ ಕಷ್ಟಕರವಾಗಿದೆ.

ರಸ್ತೆಗೆ ತಾಗಿಕೊಂಡು ಆಳವಾದ ಚರಂಡಿ ನಿರ್ಮಾಣ ಮಾಡಲಾಗಿದೆ. ಚರಂಡಿಯಲ್ಲಿ ಮಳೆ ನೀರು ತುಂಬಿ ರಸ್ತೆಯಲ್ಲೇ ಹರಿಯುತ್ತಿದೆ. ಒಂದೆಡೆ ಚರಂಡಿ ನೀರು ಹರಿಯಳೆಂದು ಸಿಮೆಂಟ್ ಕೊಳವೆಯೊಂದನ್ನು ಅಳವಡಿಸಿದ್ದರೂ ಕೊಳವೆ ಚರಂಡಿಗಿಂತ ಎತ್ತರದಲ್ಲಿ ಇದೆ. ಈ ಕೊಳವೆಯನ್ನು ಅಳವಡಿಸಿಯೂ ಯಾವುದೇ ಪ್ರಯೋಜನ ಇಲ್ಲದಂತಾಗಿದೆ. ಇನ್ನೊಂದೆಡೆ ಅಳವಡಿಸಿರುವ ಕೊಳವೆಯಿಂದ ಮತ್ತೊಂದು ರಸ್ತೆ ಮತ್ತು ಕಿರು ಸೇತುವೆಯೊಂದು ಹಾನಿಗೊಳ್ಳುವ ಅಪಾಯವನ್ನು ಎದುರಿಸುತ್ತಿದೆ.

ಸುಮಾರು ನೂರಕ್ಕೂ ಅಧಿಕ ಮನೆಗಳು ಈ ಭಾಗದಲ್ಲಿವೆ. ಕೃಷಿಕರೇ ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ. ಕೋಮಾಲಿಯ ಮಧ್ಯ ಭಾಗದಲ್ಲಿ ರಸ್ತೆ ಹದಗೆಟ್ಟಿದ್ದರಿಂದ ಕೆಲಸ ಕಾರ್ಯಗಳಿಗೆ ಬೊಳ್ಳಾಯಿಗೆ ಸುತ್ತುವರಿದು ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ರಸ್ತೆಯನ್ನು ದುರಸ್ತಿ ಮಾಡು ವಂತೆ ಸ್ಥಳೀಯ ಸಜಿಪ ಮೂಡ ಗ್ರಾಮ ಪಂಚಾಯತ್ ಗೆ ಹಲವು ಬಾರಿ ಮನವಿ ಸಲ್ಲಿಸಲಾಗಿದೆ. ಸ್ಥಳೀಯ ಜನಪ್ರತಿನಿಧಿಗಳಿಗೂ ಮನವಿ ಮಾಡಲಾಗಿದೆ. ಆದರೆ ಯಾರಿಂದಲೂ ಯಾವುದೇ ಸ್ಪಂದನೆ ಸಿಕ್ಕಿಲ್ಲ ಎಂದು ಸ್ಥಳೀಯರು ದೂರಿದ್ದಾರೆ.

ರಸ್ತೆ ಹದಗೆಟ್ಟಿರುವುದರಿಂದ ಯಾವುದೇ ವಾಹನಗಳು ಈ ಕಡೆ ಬರುತ್ತಿಲ್ಲ. ಕೆಲವು ದಿನಗಳ ಹಿಂದೆ ಇಲ್ಲಿ ಗ್ಯಾಸ್ ಸಿಲಿಂಡರ್ ಸಾಗಟದ ಲಾರಿ ಕೆಸರಿನಲ್ಲಿ ಸಿಲುಕಿತ್ತು. ಬಳಿಕ ಜೆಸಿಬಿ ಯಂತ್ರ ತರಿಸಿ ಲಾರಿಯನ್ನು ಮೇಲಕ್ಕೆತ್ತಲಾಯಿತು. ಜೀಪ್, ಆಟೋ ರಿಕ್ಷಾ ಹೀಗೆ ಪ್ರತಿದಿನ ಒಂದಲ್ಲೊಂದು ವಾಹನ ಕೆಸರಿನಲ್ಲಿ ಸಿಲುತ್ತಿವೆ. ಹೀಗಾಗಿ ಈಗ ಎಲ್ಲರೂ ತಮ್ಮ ವಾಹನವನ್ನು ಅರ್ಥ ದಾರಿಯಲ್ಲಿ ಬಿಟ್ಟು ಮನೆಗೆ ಹೋಗುತ್ತಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ರಸ್ತೆಗೆ ತಾಗಿಕೊಂಡೇ ಚಂರಂಡಿ ನಿರ್ಮಿಸಿರುವುದರಿಂದ ರಸ್ತೆಗೆ ಹಾಕಿರುವ ಮಣ್ಣು ಕೊಚ್ಚಿ ಚಂರಂಡಿ ಸೇರುತ್ತಿದೆ. ಎಲ್ಲಾ ಕಾಮಗಾರಿಯೂ ಸಂಪೂರ್ಣ ಅವೈಜ್ಞಾನಿಕವಾಗಿದೆ. ರಸ್ತೆ ಕೆಸರುಮಯಗೊಂಡಿರುವ ಹಿನ್ನೆಲೆಯಲ್ಲಿ ಕೋಮಾಲಿಯಿಂದ ಬೊಳ್ಳಾಯಿಗೆ ಸುತ್ತುವರಿದು ಹೋಗ ಬೇಕಾದ ದುಸ್ಥಿತಿ ನಿರ್ಮಾಣವಾಗಿದೆ‌ ಎಂದು ಕೋಮಾಲಿ ನಿವಾಸಿಗಳು ತಮ್ಮ ಅಳಲನ್ನು ಹೇಳಿದರು.

ಪಂಚಾಯತ್ ಅಧಿಕಾರಿಗಳು ಕಾಮಗಾರಿ ನಡೆಸಲು ನಮ್ಮಲ್ಲಿ ಹಣವಿಲ್ಲ ಎಂದು ಹೇಳುತ್ತಾರೆ. ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ ಬಳಿಕ ಪಂಚಾಯತ್ ನವರು ಇಂದು ಒಂದು ಲೋಡ್ ಕೆಂಪು ಕಲ್ಲು ತಂದು ಹಾಕಿದ್ದಾರೆ. ಕಲ್ಲು ಹಾಕಿದರೆ ರಸ್ತೆ ದುರಸ್ಥಿಯಾಗದು. ಸಾರ್ವಜನಿಕರ ಹಣ ವನ್ನು ನೀರಿಗೆ ಹಾಕಿದಂತೆ ಆಗುತ್ತದೆ. ಈ ರಸ್ತೆ ಕಾಂಕ್ರೀಟ್ ಮಾಡಿದರೆ ಮಾತ್ರ ದುರಸ್ತಿ ಆಗಲಿದೆ.‌ ಆದ್ದರಿಂದ ಅಧಿಕಾರಿಗಳು ಮತ್ತು ಜನಪ್ರತಿ ನಿಧಿಗಳು ಈ ಗಮನ ಹರಿಸಬೇಕು. ವಾರದ ಒಳಗೆ ಸಮಸ್ಯೆಗೆ ಪರಿಹಾರ ಕಾಣದಿದ್ದರೆ ಪಂಚಾಯತ್ ಮುಂದೆ ಪ್ರತಿಭಟನೆ ಹಮ್ಮಿಕೊಳ್ಳಲಾಗು ವುದು ಎಂದು ಸ್ಥಳೀಯರು ಎಚ್ಚರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X