Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರೇಸ್‍ಕೋರ್ಸ್ ಸ್ಥಳಾಂತರಕ್ಕೆ ವಿಪಕ್ಷಗಳ...

ರೇಸ್‍ಕೋರ್ಸ್ ಸ್ಥಳಾಂತರಕ್ಕೆ ವಿಪಕ್ಷಗಳ ಆಗ್ರಹ: ಆಡಳಿತ ಪಕ್ಷದ ಕೆಲ ಸದಸ್ಯರ ಬೆಂಬಲ

ವಾರ್ತಾಭಾರತಿವಾರ್ತಾಭಾರತಿ23 Sept 2020 10:08 PM IST
share
ರೇಸ್‍ಕೋರ್ಸ್ ಸ್ಥಳಾಂತರಕ್ಕೆ ವಿಪಕ್ಷಗಳ ಆಗ್ರಹ: ಆಡಳಿತ ಪಕ್ಷದ ಕೆಲ ಸದಸ್ಯರ ಬೆಂಬಲ

ಬೆಂಗಳೂರು, ಸೆ.23: ರೇಸ್‍ಕೋರ್ಸ್ ಅನ್ನು ನಗರದ ಹೃದಯಭಾಗದಿಂದ ಹೊರ ವಲಯಕ್ಕೆ ಸ್ಥಳಾಂತರ ಮಾಡಬೇಕು ಎಂದು ವಿರೋಧ ಪಕ್ಷದ ಸದಸ್ಯರಿಂದು ವಿಧಾನಪರಿಷತ್‍ನಲ್ಲಿ ಒತ್ತಾಯಿಸಿದರು.

ಬುಧವಾರ ವಿಧಾನಪರಿಷತ್‍ನಲ್ಲಿ ಕರ್ನಾಟಕ ರೇಸ್‍ಕೋರ್ಸ್ ಗಳಿಗೆ ಪರವಾನಿಗೆ ನೀಡುವ(ತಿದ್ದುಪಡಿ) ವಿಧೇಯಕ-2020 ಕುರಿತ ಚರ್ಚೆಯ ವೇಳೆ, ಕಾಂಗ್ರೆಸ್ ಸದಸ್ಯ ಬಿ.ಕೆ.ಹರಿಪ್ರಸಾದ್, ಇಬ್ರಾಹಿಂ, ಎಂ.ನಾರಾಯಣಸ್ವಾಮಿ, ಜೆಡಿಎಸ್ ತಿಪ್ಪೇಸ್ವಾಮಿ, ಬಸವರಾಜ ಹೊರಟ್ಟಿ ಸೇರಿದಂತೆ ಅನೇಕರು ರೇಸ್‍ಕೋರ್ಸ್ ಸ್ಥಳಾಂತರ ಮಾಡಿ ಎಂದು ಆಗ್ರಹಿಸಿದರು. ಇದಕ್ಕೆ ಆಡಳಿತ ಪಕ್ಷದ ಕೆಲ ಸದಸ್ಯರು ಬೆಂಬಲ ವ್ಯಕ್ತಪಡಿಸಿದರು.

ಕಾಂಗ್ರೆಸ್ ಸದಸ್ಯ ಬಿ.ಕೆ.ಹರಿಪ್ರಸಾದ್ ಮಾತನಾಡಿ, ರೇಸ್‍ಕೋರ್ಸ್ ಅನ್ನು ನಗರದ ಹೃದಯಭಾಗದಿಂದ ಹೊರ ವಲಯಕ್ಕೆ ಸ್ಥಳಾಂತರ ಮಾಡುವ ಸಂಬಂಧ ಹಲವು ಬಾರಿ ಚರ್ಚೆಯಾಗಿದ್ದರೂ, ಅದು ಸಾಧ್ಯವಾಗಿಲ್ಲ. ಸಿಲಿಕಾನ್ ಸಿಟಿಯು ಹಸಿರಿನ ಪ್ರಮಾಣವೇ ಕಡಿದುಕೊಳ್ಳುತ್ತಿದೆ. ಹೀಗಾಗಿ, ರೇಸ್‍ಕೋರ್ಸ್ ಸ್ಥಳಾಂತರ ಮಾಡುವ ಮೂಲಕ ಇಲ್ಲಿ ಹಸಿರಿನ ಉದ್ಯಾನವನ ನಿರ್ಮಾಣವಾಗಬೇಕು ಎಂದು ಅವರು ಹೇಳಿದರು. ಇದಕ್ಕೆ ಸಿ.ಎನ್.ನಿಂಗಪ್ಪ ಧ್ವನಿಗೂಡಿಸಿ, ನಗರದಲ್ಲಿ ಮಾಲಿನ್ಯ ಪ್ರಮಾಣ ನೋಡಿದರೆ ಹಸಿರು ವಲಯ ಹೆಚ್ಚಾಗಬೇಕಿದ್ದು, ಆ ನಿಟ್ಟಿನಲ್ಲಿ ಇದನ್ನು 20-25 ಕಿ.ಮೀ. ದೂರಕ್ಕೆ ಕಳುಹಿಸಬೇಕು ಎಂದರು.

ಕಾಂಗ್ರೆಸ್ ಸದಸ್ಯ ನಾರಾಯಣಸ್ವಾಮಿ ಮಾತನಾಡಿ, 64 ಎಕರೆ ಪ್ರದೇಶವನ್ನು ಕೇವಲ 60 ಸಾವಿರ ರೂ.ಗಳಿಗೆ ಟರ್ಫ್ ಕ್ಲಬ್‍ಗೆ ಬಿಟ್ಟುಕೊಡಲಾಗಿದೆ. ಅದನ್ನು ಸ್ಥಳಾಂತರ ಮಾಡಬೇಕು ಎಂದು ಯಾರಾದರೂ ಕೈ ಹಾಕಿದರೂ ಆ ಸರಕಾರ ಪತನವಾಗುತ್ತದೆ ಎನ್ನುತ್ತಿದ್ದಂತೆಯೇ ಮಧ್ಯಪ್ರವೇಶಿಸಿದ ಸಚಿವ ಮಾಧುಸ್ವಾಮಿ, ಕೇವಲ 300 ಜನರಿರುವ ಒಂದು ಕ್ಲಬ್ ಮೂರು ಕೋಟಿ ಜನರನ್ನು ಆಕರ್ಷಿಸುತ್ತದೆ ಎಂದರೆ ಒಪ್ಪಲಾಗದು ಎಂದು ನುಡಿದರು.

ಇದಕ್ಕೆ ಉತ್ತರಿಸಿದ ಸಚಿವ ಮಾಧುಸ್ವಾಮಿ, ಸುಪ್ರೀಂಕೋರ್ಟ್ ನಲ್ಲಿ ಪ್ರಕರಣ ಬಾಕಿಯಿರುವುದರಿಂದ ರೇಸ್‍ಕೋರ್ಸ್ ಅನ್ನು ನಗರದ ಹೊರವಲಯಕ್ಕೆ ಸ್ಥಳಾಂತರ ಮಾಡಿಸಲು ಸದ್ಯಕ್ಕೆ ಸಾಧ್ಯವಾಗುವುದಿಲ್ಲ. ಆದರೆ, ರೇಸ್‍ಕೋರ್ಸ್ ಗಳಿಗೆ ಸಂಬಂಧಿಸಿದಂತೆ ಕೆಲವು ನಿಯಮಗಳನ್ನು ತಿದ್ದುಪಡಿ ಮಾಡಲಾಗಿದೆ. ಪರವಾನಿಗೆ ಇಲ್ಲದೇ ರೇಸ್ ನಡೆಸಿದರೆ ಹಾಗೂ ರೇಸ್‍ನಲ್ಲಿ ಪಾಲ್ಗೊಂಡರೆ, ನಿಯಮಗಳನ್ನು ಉಲ್ಲಂಘಿಸಿದರೆ ಪ್ರಸ್ತುತವಿರುವ ದಂಡದ ಮೊತ್ತ ಹೆಚ್ಚಿಸಿದ್ದು, 500 ಇದ್ದದ್ದನ್ನು 50 ಸಾವಿರಕ್ಕೆ ಹಾಗೂ 1 ಸಾವಿರ ಇದ್ದ ದಂಡದ ಮೊತ್ತವನ್ನು ಒಂದು ಲಕ್ಷಕ್ಕೆ ಹೆಚ್ಚಳ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ದಂಡದ ಮೊತ್ತವನ್ನು ಒಂದು ಸಾವಿರ ಪಟ್ಟು ಅಧಿಕ ಮಾಡಲಾಗಿದೆ. ಅದಕ್ಕಿಂತಲೂ ಹೆಚ್ಚಳ ಮಾಡಿದರೆ ಟ್ರರ್ಫ್ ಕ್ಲಬ್ ಆಡಳಿತ ಮಂಡಳಿ ನ್ಯಾಯಾಲಯದ ಮೂಲಕ ತಡೆಯಾಜ್ಞೆ ತರುತ್ತದೆ. ಹೀಗಾಗಿ, ಸದ್ಯಕ್ಕಿಷ್ಟು ದಂಡದ ಪ್ರಮಾಣವಿದ್ದು, ಮುಂದಿನ ಅವಧಿಗೆ ಮತ್ತಷ್ಟು ಹೆಚ್ಚಿಸೋಣ. ದಂಡ ವಿಧಿಸಿ, ವಸೂಲಿ ಮಾಡಲು ಹಾಗೂ ನ್ಯಾಯಾಲಯದಲ್ಲಿ ತಗಾದೆಗಳನ್ನು ಎದುರಿಸಲು ಸಕ್ಷಮ ಅಧಿಕಾರಿಯನ್ನು ನಿಯೋಜನೆ ಮಾಡಲಾಗುತ್ತದೆ ಎಂದರು.

ಸಕ್ಷಮ ಅಧಿಕಾರಿ ನಿಯೋಜನೆ ಮಾಡಲಾಗುತ್ತದೆ ಎಂಬ ಹೇಳಿಕೆಗೆ ವಿಪಕ್ಷದ ಸದಸ್ಯರು ವಿರೋಧ ವ್ಯಕ್ತಪಡಿಸಿದರು. ಟರ್ಫ್ ಕ್ಲಬ್ ಚುನಾವಣೆ ಸಂಸದರ ಚುನಾವಣೆಯ ಹಾಗೆ ನಡೆಯುತ್ತದೆ ಎಂದು ಕಾಂಗ್ರೆಸ್ ಸದಸ್ಯ ಬಿ.ಕೆ.ಹರಿಪ್ರಸಾದ್ ಹೇಳಿದರು. ಇದಕ್ಕೆ ಸಮ್ಮತಿ ಸೂಚಿಸಿದ ವಿರೋಧ ಪಕ್ಷದ ಮುಖ್ಯ ಸಚೇತಕ ಎಂ.ನಾರಾಯಣಸ್ವಾಮಿ, ಟರ್ಫ್ ಕ್ಲಬ್ ದೊಡ್ಡ ದಂಧೆಯ ತಾಣವಾಗಿದೆ. ಅಲ್ಲಿ ಒಬ್ಬರು ಸದಸ್ಯರಾಗಲು ಚುನಾವಣೆಗಾಗಿಯೇ ಕೋಟ್ಯಾಂತರ ರೂ.ಗಳು ಹಣ ವ್ಯಯ ಮಾಡಲಾಗುತ್ತಿದೆ ಎಂದು ಅಪಾದಿಸಿದರು.

ಟರ್ಫ್ ಕ್ಲಬ್‍ಗೆ ಒಬ್ಬರೇ ಅಧಿಕಾರಿ ನಿಯೋಜನೆ ಮಾಡಬಾರದು. ಅದರ ಬದಲಿಗೆ ನಾಲ್ಕೈದು ಜನರ ತಂಡವನ್ನು ನಿಯೋಜನೆ ಮಾಡಬೇಕು. ಆ ಮೂಲಕ ಅದರೊಳಗೆ ನಡೆಯುವ ಅಕ್ರಮಗಳನ್ನು ತಡೆಯಲು ಸಾಧ್ಯವಾಗುತ್ತದೆ ಎಂದು ಬಿ.ಕೆ.ಹರಿಪ್ರಸಾದ್ ಅಭಿಪ್ರಾಯಪಟ್ಟರು.

ಬಿಜೆಪಿ ಸದಸ್ಯೆ ತೇಜಸ್ವಿನಿ ಪ್ರತಿಕ್ರಿಯಿಸಿ, ಜೂಜು ಎಂಬುದು ದೊಡ್ಡ ವ್ಯವಸ ಹಾಗೂ ಇದು ಖಂಡನೀಯ. ಹೀಗಾಗಿ, ರೇಸ್‍ಕೋರ್ಸ್ ಅನ್ನು ಬೇರೆ ಕಡೆಗೆ ಸ್ಥಳಾಂತರ ಮಾಡಿ, ಆ ಸ್ಥಳದಲ್ಲಿ ವಾಹನ ಪಾರ್ಕಿಂಗ್, ಮಂತ್ರಿಗಳ ನಿವಾಸ, ದೊಡ್ಡ ಸಭಾಂಗಣವನ್ನು ನಿರ್ಮಾಣ ಮಾಡಬೇಕು ಎಂದು ಆಗ್ರಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X