Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದಲಿತ ಯುವಕನಿಗೆ ಹಲ್ಲೆ ಪ್ರಕರಣ:...

ದಲಿತ ಯುವಕನಿಗೆ ಹಲ್ಲೆ ಪ್ರಕರಣ: ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಲು ಎಸ್ಸಿ-ಎಸ್ಟಿ ಕಲ್ಯಾಣ ಸಮಿತಿ ಶಿಫಾರಸ್ಸು

ವಾರ್ತಾಭಾರತಿವಾರ್ತಾಭಾರತಿ24 Sept 2020 10:15 PM IST
share

ಬೆಂಗಳೂರು, ಸೆ. 24: `ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯ ವೀರಾಪುರ ಗ್ರಾಮದ ದೇವಸ್ಥಾನದ ಆವರಣದಲ್ಲಿ 2019ರ ಜೂನ್ 15ರಂದು ನಡೆದಿದ್ದ ದಲಿತ ಯುವಕನ ಮೇಲೆ ಹಲ್ಲೆ, ಬೆತ್ತಲೆ ಮೆರವಣಿಗೆ ಪ್ರಕರಣ ಸಂಬಂಧ ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಬೇಕು' ಎಂದು ವಿಧಾನ ಮಂಡಲ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿ ಶಿಫಾರಸ್ಸು ಮಾಡಿದೆ.

ಗುರುವಾರ ವಿಧಾನಸಭೆಯಲ್ಲಿ ಸಮಿತಿ ಅಧ್ಯಕ್ಷ ಎಸ್.ಅಂಗಾರ ಈ ಸಂಬಂಧ ವರದಿಯನ್ನು ಮಂಡಿಸಿದ್ದು, ಪ್ರಕರಣ ಸಂಬಂಧಿಸಿದಂತೆ ಐಜಿಪಿ ಮತ್ತು ಜಿಲ್ಲಾಧಿಕಾರಿಯವರು ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಲು ಕ್ರಮ ವಹಿಸಬೇಕು. ದಲಿತ ಯುವಕ ಪ್ರತಾಪನ ಚಿಕಿತ್ಸೆ ಪೂರ್ಣವಾಗುವವರೆಗೆ ವೈದ್ಯಕೀಯ ರಸೀದಿಗಳನ್ನು ಸಂಗ್ರಹಿಸಿ ವೈದ್ಯಕೀಯ ವೆಚ್ಚ ಮರುಪಾವತಿಯನ್ನು ಸಮಾಜ ಕಲ್ಯಾಣ ಇಲಾಖೆಯಿಂದ ಭರಿಸಬೇಕು ಮತ್ತು ತಕ್ಷಣ ಸೂಕ್ತ ಪರಿಹಾರವನ್ನು ನೀಡಬೇಕು ಎಂದು ಸೂಚಿಸಲಾಗಿದೆ.

ವ್ಯಕ್ತಿಯೊಬ್ಬನನ್ನು ಸಾರ್ವಜನಿಕವಾಗಿ ಬೆತ್ತಲೆಯಾಗಿ ಮಾಡಿ, ಮರಕ್ಕೆ ಕಟ್ಟಿಹಾಕಿ ಹಲ್ಲೆ ಮಾಡುವುದು ಅಮಾನುಷ. ಅದರಲ್ಲಿಯೂ ಪ್ರತಾಪ್ ಎಂಬ ವ್ಯಕ್ತಿ ಪರಿಶಿಷ್ಟ ಜಾತಿಯವನೆಂದು ಗೊತ್ತಾದ ಮೇಲೆ ಮರಕ್ಕೆ ಕಟ್ಟಿ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವುದು, ಆತನಿಗೆ ಪ್ರಥಮ ಚಿಕಿತ್ಸೆ ಕೊಡಿಸುವ ಬದಲು ಪೊಲೀಸ್‍ನವರು ಕಾಲಿನಿಂದ ಒದ್ದು ಜೀಪ್ ಹತ್ತಿಸಿದ ವರ್ತನೆ ಖಂಡನೀಯ. ಹಲ್ಲೆ ನಡೆದಿರುವ ಬಗ್ಗೆ ಗೊತ್ತಿದ್ದರೂ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುವವರೆಗೂ ಎಫ್‍ಐಆರ್ ದಾಖಲಿಸಿಕೊಳ್ಳದೆ ಉದ್ದೇಶಪೂರ್ವಕವಾಗಿ ಎಸ್‍ಐರಿಂದ ಡಿವೈಎಸ್‍ಪಿ ವರೆಗಿನ ಅಧಿಕಾರಿಗಳು ಕರ್ತವ್ಯ ನಿರ್ವಹಣೆಯಲ್ಲಿ ಲೋಪ ಮತ್ತು ಕಾನೂನು ಉಲ್ಲಂಘನೆ ಮಾಡಲಾಗಿದೆ. ಕಾನೂನಿನ ಚೌಕಟ್ಟಿನಲ್ಲಿ ಕರ್ತವ್ಯ ನಿರ್ವಹಿಸದಿರುವುದರಿಂದ ಕೂಡಲೇ ಸಂಬಂಧಿಸಿದವರ ಮೇಲೆ ಕಾನೂನು ರೀತಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಮಿತಿಯು ನಿರ್ದೇಶನ ನೀಡಿದೆ.

ಅಮಾನತ್ತಿಗೆ ಸೂಚನೆ: ಪ್ರಕರಣದಲ್ಲಿ ಎಸ್‍ಐ ಒಬ್ಬರನ್ನು ಅಮಾನತು ಮಾಡಿ ಉಳಿದವರನ್ನು ಬಿಡುವುದು ಸರಿಯಾದ ಕ್ರಮವಲ್ಲ. ಅಲ್ಲದೆ, ವಿಚಾರಣೆ ವಿಳಂಬವಾದಷ್ಟು ಪ್ರಕರಣ ಬೇರೆ ರೀತಿಯ ತಿರುವು ಪಡೆಯುವ ಸಾಧ್ಯತೆ ಇರುವುದರಿಂದ ಎಸ್ಪಿಯಿಂದ ವರದಿ ಪಡೆದು ಪೊಲೀಸ್ ಇಲಾಖೆ ಮತ್ತು ಜಿಲ್ಲಾಧಿಕಾರಿಗಳು ಪ್ರಕರಣದಲ್ಲಿ ದಿಟ್ಟ ನಿಲುವು ತೆಗೆದುಕೊಂಡು ತಪ್ಪಿತಸ್ಥರ ವಿರುದ್ಧ ಕೂಡಲೇ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಮಿತಿ ಶಿಫಾರಸ್ಸು ಮಾಡಿದೆ.

ಚಾಮರಾಜನಗರ ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಅಧಿಕಾರಿಗಳು ಸೇರಿದಂತೆ ಈ ವಿಚಾರಕ್ಕೆ ಸಂಬಂಧಿಸಿದ ಸರಕಾರದ ವಿವಿಧ ಸಂಸ್ಥೆಗಳು ಸಕಾಲದಲ್ಲಿ ಕ್ರಮವಹಿಸಿದ್ದರೆ ಇಂತಹ ಘಟನೆ ನಡೆಯುತ್ತಿರಲಿಲ್ಲ. ಇಂತಹ ಘಟನೆ ಪುನರಾವರ್ತನೆಯಾಗದಂತೆ ನೋಡಿಕೊಂಡು ಪರಸ್ಪರ ಶಾಂತಿ, ಸಹಬಾಳ್ವೆ ವಿಶ್ವಾಸದಿಂದ ಮತ್ತು ಮಾನವೀಯತೆಯಿಂದ ಜೀವನ ನಡೆಸಬೇಕು ಎಂದು ಸಮಿತಿ ಗ್ರಾಮಸ್ಥರಲ್ಲಿ ಮನವಿ ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X