Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಚಾಲಕರಿಗೆ ಪರಿಹಾರ ವಿತರಣೆ ವಿಚಾರ: ರಾಜ್ಯ...

ಚಾಲಕರಿಗೆ ಪರಿಹಾರ ವಿತರಣೆ ವಿಚಾರ: ರಾಜ್ಯ ಸರಕಾರದ ವಿರುದ್ಧ ವಿಪಕ್ಷ ಸದಸ್ಯರ ವಾಗ್ದಾಳಿ

ವಾರ್ತಾಭಾರತಿವಾರ್ತಾಭಾರತಿ24 Sept 2020 10:41 PM IST
share
ಚಾಲಕರಿಗೆ ಪರಿಹಾರ ವಿತರಣೆ ವಿಚಾರ: ರಾಜ್ಯ ಸರಕಾರದ ವಿರುದ್ಧ ವಿಪಕ್ಷ ಸದಸ್ಯರ ವಾಗ್ದಾಳಿ

ಬೆಂಗಳೂರು, ಸೆ.24: ರಾಜ್ಯ ಸರಕಾರವು ಕೊರೋನ ಲಾಕ್‍ಡೌನ್ ಸಂದರ್ಭದಲ್ಲಿ 7.50 ಲಕ್ಷ ಆಟೊ ಹಾಗೂ ಟ್ಯಾಕ್ಸಿ ಚಾಲಕರಿಗೆ ತಲಾ 5000 ರೂ.ಪರಿಹಾರ ನೀಡುವುದಾಗಿ ಘೋಷಿಸಿದ್ದ ಪ್ಯಾಕೇಜ್‍ನಲ್ಲಿ ಕೇವಲ 2.14 ಲಕ್ಷ ಚಾಲಕರಿಗೆ ಮಾತ್ರ ಪರಿಹಾರ ವಿತರಣೆ ಮಾಡಿದ್ದು ಏಕೆ? ಉಳಿದ ಚಾಲಕರ ಪ್ರಶ್ನೆ ಏನು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದರು.

ಗುರುವಾರ ವಿಧಾನಸಭೆಯಲ್ಲಿ ಪೂರಕ ಅಂದಾಜು ಮಂಡಿಸಿದ ಬಳಿಕ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ನೀಡಿದ ಅಂಕಿ ಅಂಶಗಳು ವಿಪಕ್ಷಗಳ ಸದಸ್ಯರನ್ನು ಕೆರಳುವಂತೆ ಮಾಡಿತು.

ಸರಕಾರ ಯಾವ ಆಧಾರದ ಮೇಲೆ 7.50 ಲಕ್ಷ ಚಾಲಕರು ಎಂದು ಹೇಳಿದೆ. 97 ಕೋಟಿ ರೂ.ಗಳ ಈ ಪ್ಯಾಕೇಜ್ ಘೋಷಣೆ ಮಾಡಿ ಆರು ತಿಂಗಳು ಕಳೆದರೂ ಕೇವಲ 2.14 ಲಕ್ಷ ಚಾಲಕರಿಗೆ ಮಾತ್ರ ಪರಿಹಾರ ನೀಡಿದೆ. ಇನ್ನುಳಿದ 5 ಲಕ್ಷ ಚಾಲಕರಿಗೆ ಯಾವಾಗ ಪರಿಹಾರ ನೀಡುತ್ತಾರೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ಸರಕಾರ ಮಂಡಿಸಿರುವ ಪೂರಕ ಅಂದಾಜಿಗೆ ಒಪ್ಪಿಗೆ ನೀಡುವುದಕ್ಕೆ ನಮ್ಮ ವಿರೋಧವಿಲ್ಲ. ಆದರೆ ನೀವು ಪ್ರಸ್ತಾಪಿಸಿದ 97 ಕೋಟಿ ರೂ.ವಿಚಾರದಲ್ಲಿ ಮಾತ್ರ ಆಕ್ಷೇಪವಿದೆ. ಸಹಾಯ ಮಾಡುವುದಕ್ಕೆ ಮನಸು ಮುಖ್ಯ, ಚಾಲಕರು ಅರ್ಜಿ ಹಾಕಿಲ್ಲ, ಬ್ಯಾಡ್ಜ್ ಇಲ್ಲ ಇತ್ಯಾದಿ ತಾಂತ್ರಿಕ ಕಾರಣಗಳು ಮುಖ್ಯವಲ್ಲ. ಆಟೊ ಚಾಲಕರು, ಟ್ಯಾಕ್ಸಿ ಚಾಲಕರ ಸಂಘದವರನ್ನು ಕರೆಸಿ ಸಭೆ ಮಾಡಿ ಅವರಿಗೆಲ್ಲ ಪರಿಹಾರ ಸಿಗುವಂತೆ ಮಾಡಿ ಎಂದು ಅವರು ಹೇಳಿದರು.

ನಾವು ಪರಿಹಾರ ವಿತರಣೆ ಮಾಡಲು ಅರ್ಜಿ ಆಹ್ವಾನಿಸಿದೆವು, 2.45 ಲಕ್ಷ ಅರ್ಜಿಗಳು ಬಂದಿವೆ. ಈ ಪೈಕಿ 2.14 ಲಕ್ಷ ಮಂದಿಗೆ ಪರಿಹಾರ ನೀಡಿದ್ದೇವೆ. ಇನ್ನು ಬಾಕಿ 30 ಸಾವಿರ ಮಂದಿಗೂ ಶೀಘ್ರವೆ ಪರಿಹಾರ ವಿತರಣೆ ಮಾಡಲಾಗುವುದು. ಇನ್ನೂ ಯಾರಾದರೂ ಅರ್ಹರು ಇದ್ದರೆ ಅರ್ಜಿ ಸಲ್ಲಿಸಿದರೆ ಸರಕಾರ ಪರಿಗಣಿಸಲಿದೆ ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದರು.

ಈ ವೇಳೆ ಮಧ್ಯಪ್ರವೇಶಿಸಿದ ಮಾಜಿ ಸಚಿವರಾದ ಆರ್.ವಿ.ದೇಶಪಾಂಡೆ, ಪಿ.ಟಿ.ಪರಮೇಶ್ವರ್ ನಾಯ್ಕ್, ತುಕಾರಾಂ, ಡಾ.ಅನ್ನದಾನಿ, ಪ್ರಿಯಾಂಕ್ ಖರ್ಗೆ ಸೇರಿದಂತೆ ಇನ್ನಿತರರು ಸಚಿವರ ಪ್ರತಿಕ್ರಿಯೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

ಆಗ ಬಿಜೆಪಿ ಸದಸ್ಯ ರಘುಪತಿ ಭಟ್ ಮಾತನಾಡಿ, ಚಾಲಕರಿಗೆ ಅರ್ಜಿ ಸಲ್ಲಿಸಲು ಸಮಸ್ಯೆ ಇರುವುದು ನಿಜ. ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸುವಾಗ ಚಾಲಕ/ಮಾಲಕ(ಓನರ್ ಕಮ್ ಡ್ರೈವರ್), ಬ್ಯಾಡ್ಜ್ ತೆಗೆದು ಹಾಕಿದರೆ ಹೆಚ್ಚು ಚಾಲಕರಿಗೆ ಇದರ ಪ್ರಯೋಜನ ಸಿಗುತ್ತದೆ. ಕೇಂದ್ರ ಸರಕಾರ, ಸುಪ್ರೀಂಕೋರ್ಟ್ ಬ್ಯಾಡ್ಜ್ ಅನ್ನು ಕಡ್ಡಾಯ ಮಾಡುವಂತಿಲ್ಲ ಎಂದು ಹೇಳಿದೆ. ಸರಕಾರವು ಈ ಬಗ್ಗೆ ಗಮನ ಹರಿಸಬೇಕು ಎಂದರು.

ಸದಸ್ಯರ ಆಗ್ರಹಕ್ಕೆ ಸಹಮತ ವ್ಯಕ್ತಪಡಿಸಿದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತನಾಡಿ, ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಿ, ಚಾಲಕರು, ಮಾಲಕರ ಸಂಘದ ಸದಸ್ಯರ ಜತೆ ಸಭೆ ನಡೆಸಿ, ಸಮಸ್ಯೆಯನ್ನು ಬಗೆಹರಿಸುವಂತೆ ಸರಕಾರಕ್ಕೆ ಸೂಚಿಸಿದರು.

4008 ಕೋಟಿ ರೂ.ಪೂರಕ ಅಂದಾಜಿಗೆ ಒಪ್ಪಿಗೆ

ವಿಧಾನಸಭೆಯಲ್ಲಿ 4008 ಕೋಟಿ ರೂ.ಗಳ ಪೂರಕ ಅಂದಾಜಿಗೆ ವಿಧಾನಸಭೆಯಲ್ಲಿ ಗುರುವಾರ ಒಪ್ಪಿಗೆ ನೀಡಲಾಯಿತು. ಸರಕಾರಿ ಆಸ್ಪತ್ರೆಗಳಿಗೆ ಕೊರೋನ ಉಪಕರಣಗಳಿಗಾಗಿ 1090 ಕೋಟಿ ರೂ., ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಗೆ 400 ಕೋಟಿ ರೂ., ಕೆಎಸ್ಸಾರ್ಟಿಸಿ, ಈಶಾನ್ಯ ಸಾರಿಗೆ, ವಾಯುವ್ಯ ಸಾರಿಗೆ, ಬಿಎಂಟಿಸಿಗೆ ಸರಕಾರದಿಂದ ವೇತನ ನೀಡಲು 543 ಕೋಟಿ ರೂ., ವೈದ್ಯ ಕಾಲೇಜುಗಳಲ್ಲಿ ಸಿವಿಲ್ ಕಾಮಗಾರಿಗೆ 165 ಕೋಟಿ ರೂ., ಆಟೋ, ಟ್ಯಾಕ್ಸಿ ಚಾಲಕರಿಗೆ 97.51 ಕೋಟಿ ರೂ., ಅಂಗನವಾಡಿ ಕಟ್ಟಡಗಳ ಕಾಮಗಾರಿಗೆ 87 ಕೋಟಿ ರೂ., ಸಂಗೊಳ್ಳಿ ರಾಯಣ್ಣ ಪ್ರಾಧಿಕಾರಕ್ಕೆ 57 ಕೋಟಿ ರೂ., ವಾರ್ತಾ ಇಲಾಖೆಗೆ 56 ಕೋಟಿ ರೂ., ರಾಷ್ಟ್ರೀಯ ಆರೋಗ್ಯ ಮಿಷನ್‍ಗೆ 53 ಕೋಟಿ ರೂ., ಗ್ರಾಮೀಣ ನೀರು ಪೂರೈಕೆಗೆ 54 ಕೋಟಿ ರೂ. ಸೇರಿದಂತೆ ಇನ್ನಿತರ ಯೋಜನೆಗಳಿಗಾಗಿ ಅಂದಾಜು ಮಾಡಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X