ಬೆಂಗಳೂರು: ಕೃಷಿ ಮಸೂದೆ ವಿರುದ್ಧ ರೈತರ ಹೋರಾಟ ತೀವ್ರ
ಬೆಂಗಳೂರು, ಸೆ.25: ರೈತರಿಗೆ ಮಾರಕವಾಗುವ ಮಸೂದೆಗಳನ್ನು ಕೈಬಿಡುವಂತೆ ಆಗ್ರಹಿಸಿ ಹೋರಾಟ ತೀವ್ರಗೊಳಿಸಿರುವ ರೈತ, ಕಾರ್ಮಿಕ ಮತ್ತು ದಲಿತ ಸಂಘಟನೆಗಳ ಐಕ್ಯ ಹೋರಾಟ ನೇತೃತ್ವದಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಕಡೆಗಳಲ್ಲಿ ಹೆದ್ದಾರಿ ಬಂದ್ ಹಾಗೂ ಜೈಲ್ ಭರೋ ಚಳವಳಿ ಆರಂಭವಾಗಿದೆ.
ಇಲ್ಲಿನ ಮೈಸೂರು ಬ್ಯಾಂಕ್ ವೃತ್ತದ ಬಳಿ ಜಮಾಯಿಸಿರುವ ರೈತ ಮುಖಂಡರು, ಕೇಂದ್ರ ಮತ್ತು ರಾಜ್ಯ ಸರಕಾರಗಳ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ಮಾಡುತ್ತಿರುವ ಸಮಯದಲ್ಲಿ ಬಂಧನಕ್ಕೊಳಗಾಗಿದ್ದಾರೆ.
Next Story