Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಾರ್ಮಿಕರ ಹಕ್ಕುಗಳನ್ನು ಕಸಿದುಕೊಳ್ಳಲು...

ಕಾರ್ಮಿಕರ ಹಕ್ಕುಗಳನ್ನು ಕಸಿದುಕೊಳ್ಳಲು ಕಾರ್ಮಿಕ ಮಸೂದೆಗಳ ಜಾರಿ: ಐಎನ್‍ಟಿಯುಸಿ

ವಾರ್ತಾಭಾರತಿವಾರ್ತಾಭಾರತಿ25 Sept 2020 4:18 PM IST
share
ಕಾರ್ಮಿಕರ ಹಕ್ಕುಗಳನ್ನು ಕಸಿದುಕೊಳ್ಳಲು ಕಾರ್ಮಿಕ ಮಸೂದೆಗಳ ಜಾರಿ: ಐಎನ್‍ಟಿಯುಸಿ

ಮಡಿಕೇರಿ, ಸೆ.25: ಕಾರ್ಮಿಕರ ಹಕ್ಕುಗಳನ್ನು ಕಸಿದುಕೊಳ್ಳುವ ಪ್ರಯತ್ನವಾಗಿ ಕೇಂದ್ರ ಸರ್ಕಾರ ನೂತನ ಕಾರ್ಮಿಕ ಮಸೂದೆಗಳನ್ನು ಜಾರಿಗೆ ತಂದಿದೆ ಎಂದು ಆರೋಪಿಸಿರುವ ಐಎನ್‍ಟಿಯುಸಿ ಸಂಘಟನೆಯ ರಾಜ್ಯ ಉಪಾಧ್ಯಕ್ಷ ನಾಪಂಡ ಮುತ್ತಪ್ಪ ಅವರು ಕಾರ್ಮಿಕ ಸಂಘಟನೆಗಳನ್ನು ಒಗ್ಗೂಡಿಸಿ ಹೋರಾಟ ನಡೆಸುವ ಎಚ್ಚರಿಕೆ ನೀಡಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಹಲವು ದಶಕಗಳ ಕಾರ್ಮಿಕ ಸಮುದಾಯದ ಹೋರಾಟದ ಫಲವಾಗಿ ಜಾರಿಯಲ್ಲಿದ್ದ ಕಾರ್ಮಿಕ ಹಕ್ಕುಗಳ ಪರವಾದ ಮಸೂದೆಗಳಿಗೆ ಕೇಂದ್ರ ಸರ್ಕಾರ ತಿದ್ದುಪಡಿ ತರುವ ಮೂಲಕ ಮಾಲಕರಿಗೆಗೆ ಅನುಕೂಲ ಕಲ್ಪಿಸಿಕೊಟ್ಟಿದೆ ಎಂದು ಆರೋಪಿಸಿದರು. 

ಕಾರ್ಮಿಕರಿಗೆ ಸಿಗಬೇಕಾದ ಯಾವುದೇ ಸೌಲಭ್ಯಗಳನ್ನು ನೀಡದೆ ಏಕಾಏಕಿ ಕಾರ್ಖಾನೆಗಳನ್ನು ಮುಚ್ಚಲು ದಾರಿ ಸುಗಮ ಮಾಡಿಕೊಡಲಾಗಿದೆ. ದಿನಕ್ಕೆ 13 ಗಂಟೆ ದುಡಿಸಿಕೊಳ್ಳಲು ಮತ್ತು ಹೆಚ್ಚುವರಿ ಕೆಲಸದ ವೇತನ ನೀಡದೆ ಇರಲು ಪರೋಕ್ಷವಾಗಿ ಬೆಂಬಲ ಸೂಚಿಸಲಾಗಿದೆ. 7-8 ಹೆಸರುಗಳಲ್ಲಿ ಸಂಸ್ಥೆಗಳನ್ನು ನೋಂದಣಿ ಮಾಡಿಕೊಂಡು ಯಾವುದೇ ಸೌಲಭ್ಯಗಳನ್ನು ನೀಡದೆ 200- 300 ಮಂದಿ ಕಾರ್ಮಿಕರನ್ನು ದುಡಿಸಿಕೊಳ್ಳಬಹುದಾದ ಮಾಲಕರಿಗೆ ತೆರಿಗೆ ವಂಚನೆಯಂತಹ ಹಗಲು ದರೋಡೆಗೆ ಸರ್ಕಾರವೇ ಅವಕಾಶ ಕಲ್ಪಿಸಿದೆ. ಕನಿಷ್ಠ ವೇತನ 14 ಸಾವಿರ ರೂ. ಗಳನ್ನು ಪಾವತಿಸುವಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗದ ಸರ್ಕಾರ ಇರುವ ಸೌಲಭ್ಯಗಳನ್ನೇ ಕಸಿದುಕೊಳ್ಳುವ ಮಸೂದೆಗಳನ್ನು ಜಾರಿಗೆ ತರುವ ಮೂಲಕ ಕಾರ್ಮಿಕ ಸಮುದಾಯವನ್ನು ಜೀತ ಪದ್ಧತಿಗೆ ದೂಡಿದೆ. ಈ ರೀತಿಯ ಕಾನೂನು ಬ್ರಿಟಿಷರ ಕಾಲದಲ್ಲೂ ಜಾರಿಯಾಗಿರಲಿಲ್ಲ ಎಂದು ಮುತ್ತಪ್ಪ ಟೀಕಿಸಿದರು. ತಕ್ಷಣ ಕಾಯ್ದೆಯನ್ನು ರದ್ದು ಪಡಿಸಿ ಕಾರ್ಮಿಕರ ಪರವಾದ ನೀತಿಗಳನ್ನು ಜಾರಿಗೆ ತಾರದಿದ್ದಲ್ಲಿ ಹೋರಾಟವನ್ನು ತೀವ್ರಗೊಳಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಸಂಘ ಪರಿವಾರದ ಕಾರ್ಮಿಕ ಸಂಘಟನೆ ಭಾರತೀಯ ಮಜ್ದೂರ್ ಸಂಘ ಕೂಡ ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ಮಸೂದೆಯನ್ನು ವಿರೋಧಿಸಿದೆ. ಈ ಸಂಘಟನೆಯೊಂದಿಗೂ ಐಎನ್‍ಟಿಯುಸಿ ಚರ್ಚಿಸಿ ಹೋರಾಟದ ರೂಪು ರೇಷೆ ಸಿದ್ಧಪಡಿಸುವುದಾಗಿ ಹೇಳಿದರು. 

ಕೋವಿಡ್ ಪರಿಸ್ಥಿತಿಯಿಂದಾಗಿ ಕೊಡಗು ಜಿಲ್ಲೆಯಲ್ಲಿ 60 ಸಾವಿರಕ್ಕೂ ಅಧಿಕ ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿದ್ದು, 25 ಸಾವಿರ ಕಾರ್ಮಿಕರು ಕೆಲಸ ಕಳೆದುಕೊಂಡಿದ್ದಾರೆ ಎಂದರು.

ಕೇಂದ್ರದ ಕೃಷಿ ನೀತಿ ವಿರುದ್ಧ ರೈತ ಸಂಘಟನೆಗಳು ಸೆ.28 ರಂದು ನಡೆಸುತ್ತಿರುವ ಪ್ರತಿಭಟನೆಗೆ ಐಎನ್‍ಟಿಯುಸಿ ಸಂಘಟನೆ ನೈತಿಕ ಬೆಂಬಲ ನೀಡಲಿದೆ ಎಂದು ಮುತ್ತಪ್ಪ ತಿಳಿಸಿದರು.

ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷ ಕೆ.ಇ.ಮ್ಯಾಥ್ಯು ಮಾತನಾಡಿ, ಕೇಂದ್ರ ಸರ್ಕಾರ ಕಾರ್ಮಿಕರು, ರೈತರು ಹಾಗೂ ಜನಸಾಮಾನ್ಯರ ಶೋಷಣೆಯಲ್ಲಿ ತೊಡಗಿದೆ ಎಂದು ಆರೋಪಿಸಿದರು. ಅಧಿಕಾರಕ್ಕೆ ಬರುವ ಸಂದರ್ಭ ನೀಡಿದ ಭರವಸೆಗಳೆಲ್ಲವೂ ಹುಸಿಯಾಗಿದ್ದು, ದೇಶದ ಜನ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಟೀಕಿಸಿದರು.

ಸುದ್ದಿಗೋಷ್ಠಿಯಲ್ಲಿ ಕಾರ್ಮಿಕ ಘಟಕದ ರಾಜ್ಯ ಕಾರ್ಯದರ್ಶಿ ಅಜ್ಜಳ್ಳಿ ರವಿ, ಐಎನ್‍ಟಿಯುಸಿ ಜಿಲ್ಲಾಧ್ಯಕ್ಷ ಗೋವಿಂದರಾಜ್ ದಾಸ್ ಹಾಗೂ ಎನ್‍ಎಸ್‍ಯುಐ ಜಿಲ್ಲಾಧ್ಯಕ್ಷ ತ್ರಿನೇಶ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X