Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಯೆಸ್ ಬ್ಯಾಂಕ್ ಹಗರಣ: 127 ಕೋ.ರೂ....

ಯೆಸ್ ಬ್ಯಾಂಕ್ ಹಗರಣ: 127 ಕೋ.ರೂ. ಮೌಲ್ಯದ ರಾಣಾ ಕಪೂರ್ ಫ್ಲ್ಯಾಟ್ ಜಪ್ತಿ

ವಾರ್ತಾಭಾರತಿವಾರ್ತಾಭಾರತಿ25 Sept 2020 7:14 PM IST
share
ಯೆಸ್ ಬ್ಯಾಂಕ್ ಹಗರಣ: 127 ಕೋ.ರೂ. ಮೌಲ್ಯದ ರಾಣಾ ಕಪೂರ್ ಫ್ಲ್ಯಾಟ್ ಜಪ್ತಿ

ಹೊಸದಿಲ್ಲಿ,ಸೆ.25: ಅಕ್ರಮ ಹಣ ವರ್ಗಾವಣೆ ಆರೋಪವನ್ನೆದುರಿಸುತ್ತಿರುವ ಯೆಸ್ ಬ್ಯಾಂಕಿನ ಮಾಜಿ ಅಧ್ಯಕ್ಷ ಹಾಗೂ ಆಡಳಿತ ನಿರ್ದೇಶಕ ರಾಣಾ ಕಪೂರ್ ಅವರಿಗೆ ಸೇರಿದ ಲಂಡನ್ ನಲ್ಲಿಯ 127 ಕೋ.ರೂ.ಮೌಲ್ಯದ ಫ್ಲಾಟ್ ಅನ್ನು ಜಾರಿ ನಿರ್ದೇಶನಾಲಯ (ಈ.ಡಿ.)ವು ತಾತ್ಕಾಲಿಕವಾಗಿ ವಶಪಡಿಸಿಕೊಂಡಿದೆ.

ರಾಣಾ 2017ರಲ್ಲಿ ಈ ಫ್ಲಾಟ್‌ನ್ನು 93 ಕೋ.ರೂ.ಗಳಿಗೆ ಡುಇಟ್ ಕ್ರಿಯೇಷನ್ಸ್ ಜೆರ್ಸಿ ಲಿ.ನ ಹೆಸರಿನಲ್ಲಿ ಖರೀದಿಸಿದ್ದರು. ಅವರು ಸದ್ರಿ ಫ್ಲ್ಯಾಟ್‌ನ ಮಾರಾಟಕ್ಕೆ ಪ್ರಯತ್ನಿಸುತ್ತಿದ್ದರು ಎಂದು ಈ.ಡಿ.ಅಧಿಕಾರಿಗಳು ಶುಕ್ರವಾರ ತಿಳಿಸಿದರು.

 ಸಿಬಿಐ ಕಳೆದ ಮಾರ್ಚ್‌ನಲ್ಲಿ ಕಪೂರ್ ವಿರುದ್ಧ ಎರಡು ಭ್ರಷ್ಟಾಚಾರದ ಪ್ರಕರಣಗಳನ್ನು ದಾಖಲಿಸಿಕೊಂಡ ಬಳಿಕ ಅಕ್ರಮ ಹಣ ವರ್ಗಾವಣೆ ಆರೋಪಗಳ ಕುರಿತು ಈ.ಡಿ.ತನಿಖೆಯನ್ನು ಆರಂಭಿಸಿತ್ತು. ಯೆಸ್ ಬ್ಯಾಂಕ್ 2018 ರ ಎಪ್ರಿಲ್-ಜೂನ್ ನಡುವಿನ ಅವಧಿಯಲ್ಲಿ ದಿವಾನ ಹೌಸಿಂಗ್ ಫೈನಾನ್ಸ್ ಕಾರ್ಪೊರೇಷನ್ (ಡಿಎಚ್‌ಎಫ್‌ಎಲ್)ನ ಅಲ್ಪಾವಧಿಯ ಸಾಲಪತ್ರಗಳಲ್ಲಿ 3,700 ಕೋ.ರೂ.ಗಳನ್ನು ತೊಡಗಿಸಿತು. ಇದಕ್ಕೆ ಪ್ರತಿಯಾಗಿ ರಾಣಾ ಡಿಎಚ್‌ಎಫ್‌ಎಲ್‌ನ ಪ್ರವರ್ತಕರಾದ ವಾಧ್ವಾನ್ ಸೋದರರಿಂದ 600 ಕೋ.ರೂ.ಗಳ ಕಮಿಷನ್ ಸ್ವೀಕರಿಸಿದ್ದರು ಎಂದು ಆರೋಪಿಸಲಾಗಿದೆ.

ಎರಡನೇ ಪ್ರಕರಣದಲ್ಲಿ ರಾಣಾ ಮತ್ತು ಅವರ ಪತ್ನಿ ಬಿಂದು ಅವಂತಾ ಗ್ರೂಪ್‌ನ ಪ್ರವರ್ತಕ ಗೌತಮ್ ಥಾಪರ್ ಅವರಿಂದ ಬಂಗಲೆಯೊಂದನ್ನು ಮಾರುಕಟ್ಟೆ ವೌಲ್ಯಕ್ಕಿಂತ ಅತಿ ಕಡಿಮೆ ಬೆಲೆಯಲ್ಲಿ ಖರೀದಿಸಿದ್ದರು.

ತನಿಖೆಯ ಬಳಿಕ ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಕಪೂರ್ ದಂಪತಿ ಮತ್ತು ಅವರ ಮೂವರು ಪುತ್ರಿಯರ ವಿರುದ್ದ ಈ.ಡಿ.ಆರೋಪಪಟ್ಟಿಯನ್ನು ದಾಖಲಿಸಿದೆ.

ವಾಧ್ವಾನ್ ಸೋದರರಿಗೆ ಸೇರಿದ 1411 ಕೋ,.ರೂ.ಮೌಲ್ಯದ ಆಸ್ತಿ ಮತ್ತು ಕಪೂರ್ ಸ್ವೀಕರಿಸಿದ್ದ ಲಂಚದ ಹಣ 600 ಕೋ.ರೂಗಳನ್ನು ಈ.ಡಿ ಜಪ್ತಿ ಮಾಡಿದೆ. ಅಕ್ರಮ ಹಣ ವರ್ಗಾವಣೆ (ತಡೆ) ಕಾಯ್ದೆಯಡಿ ಪ್ರತ್ಯೇಕ ಪ್ರಕರಣದಲ್ಲಿ ಕಪೂರ್‌ಗೆ ಸೇರಿದ 307 ಕೋ.ರೂ.ಮೌಲ್ಯದ ಆಸ್ತಿಯನ್ನೂ ಈ.ಡಿ.ವಶಪಡಿಸಿಕೊಂಡಿದೆ.

                  

share
ವಾರ್ತಾಭಾರತಿ
ವಾರ್ತಾಭಾರತಿ
Next Story
X