Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿಶ್ವಸಂಸ್ಥೆಯ ನಿರ್ಣಯ ಮಂಡಳಿಯಿಂದ...

ವಿಶ್ವಸಂಸ್ಥೆಯ ನಿರ್ಣಯ ಮಂಡಳಿಯಿಂದ ಇನ್ನೆಷ್ಟು ದಿನ ಭಾರತವನ್ನು ಹೊರಗಿಡಲಾಗುತ್ತದೆ?

ವಿಶ್ವಸಂಸ್ಥೆಯ ಸಾಮಾನ್ಯಸಭೆ ಮಹಾಧಿವೇಶನದಲ್ಲಿ ಪ್ರಧಾನಿ ಮೋದಿ ಪ್ರಶ್ನೆ

ವಾರ್ತಾಭಾರತಿವಾರ್ತಾಭಾರತಿ26 Sept 2020 9:10 PM IST
share
ವಿಶ್ವಸಂಸ್ಥೆಯ ನಿರ್ಣಯ ಮಂಡಳಿಯಿಂದ ಇನ್ನೆಷ್ಟು ದಿನ ಭಾರತವನ್ನು ಹೊರಗಿಡಲಾಗುತ್ತದೆ?

ಹೊಸದಿಲ್ಲಿ,ಸೆ.26: ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಖಾಯಂ ಸದಸ್ಯ ರಾಷ್ಟ್ರವಾಗಿ ಭಾರತದ ಸೇರ್ಪಡೆಗಾಗಿ ಶನಿವಾರ ಬಲವಾಗಿ ಪ್ರತಿಪಾದಿಸಿದ ಪ್ರಧಾನಿ ನರೇಂದ್ರ ಮೋದಿ ಅವರು,ವಿಶ್ವಸಂಸ್ಥೆಯ ನಿರ್ಧಾರಗಳನ್ನು ಕೈಗೊಳ್ಳುವ ಸಂರಚನೆಗಳಿಂದ ಭಾರತವನ್ನು ಇನ್ನೆಷ್ಟು ಕಾಲ ಹೊರಗಿಡಲಾಗುತ್ತದೆ ಎಂದು ಖಾರವಾಗಿ ಪ್ರಶ್ನಿಸಿದರು.

ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ವಿಶ್ವಸಂಸ್ಥೆ ಸಾಮಾನ್ಯ ಸಭೆಯ 75ನೇ ಮಹಾಧಿವೇಶನದಲ್ಲಿ ಪಾಲ್ಗೊಂಡು ಮಾತನಾಡಿದ ಮೋದಿ,ಈ ಜಾಗತಿಕ ಸಂಸ್ಥೆಗೆ ದೇಶದ ಕೊಡುಗೆಗಳನ್ನು ಗಮನಿಸಿರುವ ಪ್ರತಿಯೊಬ್ಬ ಭಾರತೀಯನೂ ವಿಶ್ವಸಂಸ್ಥೆಯಲ್ಲಿ ಭಾರತದ ವಿಸ್ತರಿತ ಪಾತ್ರಕ್ಕಾಗಿ ಹಾತೊರೆಯುತ್ತಿದ್ದಾನೆ ಎಂದು ಹೇಳಿದರು. ಕೊರೋನ ವೈರಸ್ ಸಾಂಕ್ರಾಮಿಕದ ನಡುವೆಯೇ ವರ್ಚುವಲ್ ರೂಪದಲ್ಲಿ ನಡೆಯುತ್ತಿರುವ ಮಹಾಧಿವೇಶನಕ್ಕಾಗಿ ನ್ಯೂಯಾರ್ಕ್‌ನಲ್ಲಿಯ ವಿಶ್ವಸಂಸ್ಥೆ ಸಾಮಾನ್ಯ ಸಭೆಯ ಸಭಾಂಗಣದಲ್ಲಿ ಪ್ರಸಾರಿಸಲಾದ ತನ್ನ ಪೂರ್ವ ಮುದ್ರಿತ ವೀಡಿಯೊ ಭಾಷಣದಲ್ಲಿ ವಿಶ್ವಸಂಸ್ಥೆಯ ಸುಧಾರಣಾ ಪ್ರಕ್ರಿಯೆ ಎಂದಾದರೂ ತನ್ನ ತಾರ್ಕಿಕ ಅಂತ್ಯವನ್ನು ಕಾಣುತ್ತದೆಯೇ ಎಂದು ಭಾರತೀಯರು ಕಳವಳಗೊಂಡಿದ್ದಾರೆ ಎಂದು ಮೋದಿ ಹೇಳಿದರು.

ವಾಸ್ತವದಲ್ಲಿ ಭಾರತದ 130 ಕೋಟಿ ಜನರು ವಿಶ್ವಸಂಸ್ಥೆಯಲ್ಲಿ ಇಟ್ಟಿರುವ ವಿಶ್ವಾಸ ಮತ್ತು ಗೌರವಕ್ಕೆ ಸಾಟಿಯಿಲ್ಲ ಎಂದು ತನ್ನ 22 ನಿಮಿಷಗಳ ಹಿಂದಿ ಭಾಷಣದಲ್ಲಿ ಹೇಳಿದ ಅವರು,ನಾವು ಬಲಿಷ್ಠರಾಗಿದ್ದಾಗ ನಾವೆಂದೂ ವಿಶ್ವಕ್ಕೆ ಬೆದರಿಕೆಯಾಗಿರಲಿಲ್ಲ. ನಾವು ದುರ್ಬಲರಾಗಿದ್ದಾಗ ನಾವೆಂದೂ ವಿಶ್ವಕ್ಕೆ ಹೊರೆಯಾಗಿರಲಿಲ್ಲ. ನೂರಾರು ಭಾಷೆಗಳು,ನೂರಾರು ಉಪಭಾಷೆಗಳು ಮತ್ತು ಹಲವಾರು ಸಿದ್ಧಾಂತಗಳನ್ನು ಹೊಂದಿರುವ ಮತ್ತು ಶತಮಾನಗಳಿಂದಲೂ ಪ್ರಮುಖ ಜಾಗತಿಕ ಆರ್ಥಿಕತೆಯಾಗಿರುವ ಹಾಗೂ ನೂರಾರು ವರ್ಷಗಳ ಕಾಲ ವಿದೇಶಿ ಆಡಳಿತವನ್ನು ಸಹಿಸಿರುವ ಒಂದು ದೇಶದಲ್ಲಿ ನಡೆಯುತ್ತಿರುವ ಪರಿವರ್ತನಾತ್ಮಕ ಬದಲಾವಣೆಗಳು ಬಹ್ವಂಶ ಜಗತ್ತಿನ ಮೇಲೆ ಪರಿಣಾಮವನ್ನು ಬೀರುತ್ತಿರುವಾಗ ಆ ದೇಶವು ನಿರ್ದಿಷ್ಟವಾಗಿ ಎಷ್ಟು ಕಾಲ ಕಾಯಬೇಕು ಎಂದು ಪ್ರಶ್ನಿಸಿದರು.

ದಶಕಗಳ ಕಾಲ ಸುಮಾರು 50 ವಿಶ್ವಸಂಸ್ಥೆ ಶಾಂತಿ ಅಭಿಯಾನಗಳಿಗೆ ಭಾರತದ ಕೊಡುಗೆಗಳನ್ನೂ ಅವರು ಪ್ರಸ್ತಾಪಿಸಿದರು.

ಚೀನಾವನ್ನು ಹೊರತುಪಡಿಸಿ ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಎಲ್ಲ ನಾಲ್ಕೂ ಖಾಯಂ ಸದಸ್ಯ ರಾಷ್ಟ್ರಗಳು ಮಂಡಳಿಯಲ್ಲಿ ಖಾಯಂ ಸ್ಥಾನಕ್ಕಾಗಿ ಭಾರತದ ಉಮೇದುವಾರಿಕೆಯನ್ನು ಬೆಂಬಲಿಸಿವೆ.

2021,ಜ.1ರಂದು ಭಾರತವು ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಚುನಾಯಿತ ಖಾಯಂ ಅಲ್ಲದ ಸದಸ್ಯ ರಾಷ್ಟ್ರವಾಗಿ ಎರಡು ವರ್ಷಗಳ ಅವಧಿಗೆ ಅಧಿಕಾರವನ್ನು ಸ್ವೀಕರಿಸುವ ಮುನ್ನ ಮೋದಿಯವರ ಖಡಕ್ ಮಾತುಗಳು ಹೊರಹೊಮ್ಮಿವೆ.

 ವಿಶ್ವಸಂಸ್ಥೆಯು ತನ್ನನ್ನು ಬದಲಿಸಿಕೊಳ್ಳುವ ಅಗತ್ಯವನ್ನು ಪ್ರತಿಪಾದಿಸಿದ ಅವರು,ನಾವಿಂದು ವಿಭಿನ್ನ ಯುಗದಲ್ಲಿ ಒಂದಾಗಿದ್ದೇವೆ. ಆಗಿನ ಸಂದರ್ಭಗಳಡಿ ಸ್ಥಾಪನೆಯಾಗಿದ್ದ ವಿಶ್ವಸಂಸ್ಥೆಯು ಇಂದಿಗೂ ಸುಸಂಗತವಾಗಿದೆಯೇ ಎಂಬ ಪ್ರಶ್ನೆ ಇಡೀ ಜಾಗತಿಕ ಸಮುದಾಯವನ್ನು ಕಾಡುತ್ತಿದೆ. ಕಳೆದ 75 ವರ್ಷಗಳಲ್ಲಿ ವಿಶ್ವಸಂಸ್ಥೆಯು ಬಹಳಷ್ಟು ಸಾಧನೆಗಳನ್ನು ಮಾಡಿದೆ. ವಿಶ್ವಸಂಸ್ಥೆಯ ಎದುರಿನಲ್ಲಿ ಗಂಭೀರ ಆತ್ಮವಿಮರ್ಶೆಗೆ ಕರೆ ನೀಡುವ ಅನೇಕ ಉದಾಹರಣೆಗಳೂ ಇವೆ. ವಿಶ್ವಸಂಸ್ಥೆಯು ತನ್ನನ್ನು ತಾನು ಬದಲಿಸಿಕೊಳ್ಳುವುದು ಈಗಿನ ಅಗತ್ಯವಾಗಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X