Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹೆಜಮಾಡಿಯ : ಎಮ್‌ಬಿಸಿ ರಸ್ತೆ...

ಹೆಜಮಾಡಿಯ : ಎಮ್‌ಬಿಸಿ ರಸ್ತೆ ಟೋಲ್‌ಪ್ಲಾಝಾ ತೆರವಿಗೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ26 Sept 2020 9:40 PM IST
share

ಪಡುಬಿದ್ರಿ : ಹೆಜಮಾಡಿಯ ಹಳೇ ಎಮ್‌ಬಿಸಿ ರಸ್ತೆಯಲ್ಲಿ ನವಯುಗ್ ಟೋಲ್ ಕಂಪನಿಯು ನಿರ್ಮಿಸಿರುವ ಟೋಲ್ ವಸೂಲಾತಿ ಕೇಂದ್ರವು ಕಾನೂನು ಬಾಹಿರವಾಗಿದ್ದು, ಕೂಡಲೇ ಅದನ್ನು ತೆರವುಗೊಳಿಸಬೇಕು ಎಂದು ಹೆಜಮಾಡಿಯ ವಿವಿಧ ಸಂಘಟನೆಗಳು ಆಗ್ರಹಿಸಿದೆ.

ಈ ಬಗ್ಗೆ ಹೆಜಮಾಡಿಯ ಇಪ್ಪತ್ತು ಸಂಘ ಸಂಸ್ಥೆಗಳು ಲೋಕೋಪಯೋಗಿ ಇಲಾಖೆಗೆ ಸಹಿತ ಜನಪ್ರತಿನಿಧಿಗಳಿಗೆ ಹಾಗೂ ಸಂಬಂಧಪಟ್ಟ ಎಲ್ಲರೂ ಈ ಸಬ್ ಟೋಲನ್ನು ತೆರವು ಗೊಳಿಸಿ ಜನರಿಗಾಗುವ ಕಷ್ಟನಷ್ಟಗಳನ್ನು ನಿವಾರಿಸಬೇಕೆಂದು ಮನವಿಯಲ್ಲಿ ಕೇಳಿಕೊಂಡಿದ್ದಾರೆ.

ಸುಂಕ ವಸೂಲಾತಿಯ ಗುತ್ತಿಗೆದಾರರಾದ ನವಯುಗ ಉಡುಪಿ ಟೋಲ್ ವೇ ಪ್ರೈವೇಟ್ ಲಿಮಿಟೆಡ್ ನವರು ಕರ್ನಾಟಕ ರಾಜ್ಯ ಸರ್ಕಾರದ ಲೋಕೋಪಯೋಗಿ ಇಲಾಖೆಗೆ ಸೇರಿದ ಮುಖ್ಯ ರಸ್ತೆಯಾದ ಹೆಜಮಾಡಿ ಹಳೇ ಎಂಬಿಸಿ ರಸ್ತೆಯ ಜಾಗದಲ್ಲಿ (ರಾಷ್ಟ್ರೀಯ ಹೆದ್ದಾರಿಯಿಂದ ಹಜಮಾಡಿ ಸರ್ವೀಸ್ ಬಸ್ ಸ್ಟ್ಯಾಂಡ್‌ಗೆ ಹಾದು ಹೋಗುವಲ್ಲಿ) ಸುಂಕ ವಸೂಲಾತಿಗೆ ತಡೆ ನಿರ್ಮಾಣವನ್ನು ಇಲಾಖೆಯ ಅನುಮತಿ ಪಡೆಯದೆ ಕಾನೂನು ಬಾಹಿರವಾಗಿ ಸ್ಥಾಪಿಸಿ ಹೆಜಮಾಡಿಯ ಗ್ರಾಮಸ್ಥರಿಗೆ ಮತ್ತು ಹೆಜಮಾಡಿ ಕೋಡಿ ಹಾಗೂ ಸಮುದ್ರ ಕರಾವಳಿಯ ಜನತೆಗೆ ತೊಂದರೆ ಯುಂಟು ಮಾಡುತ್ತಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮುಖ್ಯಟೋಲ್‌ಗೇಟ್ ಸ್ಥಾಪಿಸಿರುವುದು ಅವೈಜ್ಞಾಕವಾಗಿದ್ದು, ಅದರ ಪರಿಣಾಮದಿಂದ ಈ ಭಾಗದಲ್ಲಿ ಬಹು ಸಂಖ್ಯೆ ಯಲ್ಲಿ ವಾಸಿಸುತ್ತಿರುವ ಬಿಲ್ಲವ, ಮೊಗವೀರ, ಮುಸ್ಲಿಂ, ದಲಿತರು, ಹಿಂದುಳಿದವರು ಕಷ್ಟನಷ್ಟ ವನ್ನು ಅನುಭವಿಸುವಂತಾಗಿದೆ. ಈ ಭಾಗದ ಮೀನುಗಾರರು ಮಾಡುತ್ತಿರುವ ಮೀನಿನ ವ್ಯಾಪಾರಕ್ಕೆ ಹೊರಗಿನ ಪ್ರದೇಶದಿಂದ ವಾಹನಗಳಲ್ಲಿ ಬರುವ ಖರೀದಿದಾರರು ಸುಂಕ ತೆರಬೇಕಾದು ದರಿಂದ ಸಮುದಾಯದ ಜನರಿಗೆ ತೊಂದರೆಯುಂತಾಗುತ್ತಿದೆ. ಸಣ್ಣ ಕಾಮಗಾರಿಗಳಿಗೂ ಕಷ್ಟನಷ್ಟಗಳಾಗುತ್ತಿವೆ. ಹೆಜಮಾಡಿ, ನಡಿಕುದ್ರು ಹಾಗೂ ಆಸುಪಾಸಿನ ಗ್ರಾಮಗಳಲ್ಲಿ ಹಲವು ಮಂದಿರ, ಮಸೀದಿ, ಭೂತ ದೈವಸ್ಥಾನ, ಕುಟುಂಬ ಮೂಲಸ್ಥಾನಗಳಿವೆ. ಇಲ್ಲಿಗೆ ಹೊರಗಿನಿಂದ ಬರುವ ಯಾತ್ರಾರ್ಥಿಗಳೂ ಸುಂಕದ ಕಿರಿಕಿರಿಯಿಂದ ಬರಲಾಗದ ಸ್ಥಿತಿಯಲ್ಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X