Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ''35 ರೂ. ಟೋಲ್ ಪಾವತಿಸಿ ಪಡುಬಿದ್ರೆಯ...

''35 ರೂ. ಟೋಲ್ ಪಾವತಿಸಿ ಪಡುಬಿದ್ರೆಯ ಚಿನ್ನದ ರಸ್ತೆಯನ್ನು ಎಂಜಾಯ್ ಮಾಡಿ!''

ರಾಷ್ಟ್ರೀಯ ಹೆದ್ದಾರಿ ಅವ್ಯವಸ್ಥೆ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಹೀಗೊಂದು ಟ್ರೋಲ್

ವಾರ್ತಾಭಾರತಿವಾರ್ತಾಭಾರತಿ27 Sept 2020 1:47 PM IST
share
35 ರೂ. ಟೋಲ್ ಪಾವತಿಸಿ ಪಡುಬಿದ್ರೆಯ ಚಿನ್ನದ ರಸ್ತೆಯನ್ನು ಎಂಜಾಯ್ ಮಾಡಿ!

ಪಡುಬಿದ್ರೆ, ಸೆ.27: ''ಹೆಜಮಾಡಿ ಟೋಲ್ ಗೇಟ್‌ನಲ್ಲಿ 35 ರೂ. ಟೋಲ್ ಪಾವತಿಸಿ, ಪಡುಬಿದ್ರೆಯಲ್ಲಿ ಚಿನ್ನದ ರಸ್ತೆಯನ್ನು ಎಂಜಾಯ್ ಮಾಡಿ'' ಹೀಗೊಂದು ಟ್ರೋಲ್ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಚತುಷ್ಪಥ ರಾಷ್ಟ್ರೀಯ ಹೆದ್ದಾರಿ-66ರ ಎರ್ಮಾಳು-ಪಡುಬಿದ್ರೆ ಕಲ್ಸಂಕ ಕಿರು ಸೇತುವೆಯ ಕಾಮಗಾರಿ ಇನ್ನೂ ಪೂರ್ಣಗೊಳ್ಳದೆ ಇರುವುದರಿಂದ ಸಾರ್ವಜನಿಕರು ನಿತ್ಯ ಸಮಸ್ಯೆ ಎದುರಿಸುತ್ತಿದ್ದಾರೆ. ಇದರಿಂದ ಬೇಸತ್ತ ಸಾರ್ವಜನಿಕರು ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಮಾಡುತ್ತಿದ್ದಾರೆ.

ಈ ರಸ್ತೆ ಕಳೆದ ಇಂಜಿನಿಯರ್ಸ್‌ ದಿನದಂದು ಸಾಕಷ್ಟು ಟ್ರೋಲ್‌ಗೊಳಗಾಗಿದೆ. ''ಕಲ್ಸಂಕದ ಸೇತುವೆ ನಿರ್ಮಾಣದ ಇಂಜಿನಿಯರ್ ಹೊರತು ಮಿಕ್ಕುಳಿದ ಇಂಜಿನಿಯರ್‌ಗಳಿಗೆ ಇಂಜಿನಿಯರ್ಸ್‌ ದಿನದ ಶುಭಾಶಯ'' ಎನ್ನುವ ಟ್ರೋಲ್‌ನಿಂದ ಅಪೂರ್ಣ ಕಾಮಗಾರಿ ಅಪಹಾಸ್ಯಕ್ಕೊಳಗಾಗಿತ್ತು.

ಪಡುಬಿದ್ರೆಯಲ್ಲಿ ಬೈಪಾಸ್, ಪೇಟೆಯಲ್ಲಿ ಹೆದ್ದಾರಿ ವಿಸ್ತರಣೆ ಪರ ವಿರೋಧದ ನಡುವೆ ಹಲವು ವರ್ಷಗಳ ಬಳಿಕ 2015ರಲ್ಲಿ ಈ ಚತುಷ್ಪಥ ಕಾಮಗಾರಿ ಪಡುಬಿದ್ರೆಯಲ್ಲಿ ಆರಂಭಗೊಂಡಿತ್ತು. ಆ ಬಳಿಕ ಪಡುಬಿದ್ರೆಯ ರಾಷ್ಟ್ರೀಯ ಹೆದ್ದಾರಿ-66ರ ಚತುಷ್ಪಥ ಕಾಮಗಾರಿಯನ್ನು ಪೇಟೆ ಭಾಗದಲ್ಲಿ ಕೈಗೆತ್ತಿಕೊಳ್ಳಲಾಯಿತು. ಈ ಬಗ್ಗೆ ಗ್ರಾಮ ಪಂಚಾಯತ್ ಸೇರಿ ಹಲವು ಸಂಘಟನೆಗಳ ಪ್ರತಿಭಟನೆ ಬಳಿಕ ಶೇ.80 ಭಾಗ ಪೂರ್ಣಗೊಂಡಿವೆ. ಅದರಂತೆ ಎರ್ಮಾಳು ಕಲ್ಸಂಕ ಬಳಿ ಕಾಮಿನಿ ಹೊಳೆ ತೋಡಿಗೆ ಅಡ್ಡಲಾಗಿ ನಿರ್ಮಿಸಬೇಕಿದ್ದ ಕಿರು ಸೇತುವೆ ಕಾಮಗಾರಿ 2018ರಲ್ಲಿ ಪೂರ್ಣಗೊಳ್ಳಬೇಕಿತ್ತು. ಆದರೆ ಐದು ಮುಂಗಾರು ಕಳೆದರೂ ಕಾಮಗಾರಿ ಇನ್ನೂ ಕುಂಟುತ್ತಾ ಸಾಗಿದೆ. ಇದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಕಳೆದ ವಾರ ಸುರಿದ ಭಾರೀ ಮಳೆಗೆ ನವಯುಗ ಕಂಪೆನಿಯ ಅಪೂರ್ಣ ಕಾಮಗಾರಿಯಿಂದ ಹೆದ್ದಾರಿಯ ಬದಿಯ ಗದ್ದೆಯ ನೀರು ತುಂಬಿ ಹೆದ್ದಾರಿಯಲ್ಲಿ ಹರಿದು ಕೃತಕ ನೆರೆ ಉಂಟಾಗಿತ್ತು. ಇದರಿಂದ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು.

ಹೋರಾಟದ ಎಚ್ಚರಿಕೆ: ನವಯುಗ ಕಂಪೆನಿಯು ಕೂಡಲೇ ಆ ರಸ್ತೆಯನ್ನು ಸರಿಪಡಿಸಿ ಕೊಡಬೇಕು. ಈ ಬಗ್ಗೆ ಸರಕಾರ ಹಾಗೂ ಜಿಲ್ಲಾಡಳಿತ ಕಂಪೆನಿಗೆ ಶೀಘ್ರ ಕಾಮಗಾರಿ ಪೂರ್ಣಗೊಳಿಸಲು ಗಡುವು ನೀಡಬೇಕು. ಇಲ್ಲವಾದಲ್ಲಿ ಸಂಘಟನೆಯ ವತಿಯಿಂದ ಅನಿರ್ದಿಷ್ಟಾವಧಿ ಪ್ರತಿಭಟನೆಯನ್ನು ಹಮ್ಮಿಕೊಳ್ಳುವುದು ಅನಿವಾರ್ಯವಾದೀತು ಎಂದು ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಕುಮಾರ್ ಶೆಟ್ಟಿ ಬಣದ ಕಾಪು ತಾಲೂಕು ಘಟಕದ ಅಧ್ಯಕ್ಷ ಸೈಯದ್ ನಿಝಾಮುದ್ದೀನ್ ಎಚ್ಚರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X