Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸೋಮವಾರ ಕರ್ನಾಟಕ ಬಂದ್: ಏನಿರುತ್ತೆ ?...

ಸೋಮವಾರ ಕರ್ನಾಟಕ ಬಂದ್: ಏನಿರುತ್ತೆ ? ಏನಿರಲ್ಲ ? ಇಲ್ಲಿದೆ ವಿವರ

ವಾರ್ತಾಭಾರತಿವಾರ್ತಾಭಾರತಿ27 Sept 2020 8:28 PM IST
share
ಸೋಮವಾರ ಕರ್ನಾಟಕ ಬಂದ್: ಏನಿರುತ್ತೆ ? ಏನಿರಲ್ಲ ? ಇಲ್ಲಿದೆ ವಿವರ

ಬೆಂಗಳೂರು, ಸೆ.27: ಕೇಂದ್ರ ಮತ್ತು ರಾಜ್ಯ ಸರಕಾರಗಳು ಜಾರಿಗೆ ಹೊರಟಿರುವ ಭೂ ಸುಧಾರಣೆ, ಎಪಿಎಂಸಿ ತಿದ್ದುಪಡಿ ಕಾಯ್ದೆ ಸೇರಿ ಇನ್ನಿತರೆ ಕಾಯ್ದೆಗಳ ಸುಗ್ರೀವಾಜ್ಞೆಗಳ ವಿರುದ್ಧ ರೈತ ದಲಿತ ಕಾರ್ಮಿಕ ಐಕ್ಯ ಹೋರಾಟ ಸಮಿತಿ ನಾಳೆ(ಸೆ.28) ಕರ್ನಾಟಕ ಬಂದ್‍ಗೆ ಕರೆ ನೀಡಿದ್ದು, ಹಲವು ಸೇವೆಗಳಲ್ಲಿ ಏರುಪೇರಾಗುವ ಸಾಧ್ಯತೆ ದಟ್ಟವಾಗಿದೆ.

ಹಾಲು, ಹಣ್ಣು, ತರಕಾರಿ, ಆರೋಗ್ಯ ಸೇವೆ, ಔಷಧಿ ಅಂಗಡಿಗಳು, ಪೆಟ್ರೋಲ್ ಬಂಕ್‍ಗಳು, ಮಾರುಕಟ್ಟೆಗಳು ತೆರೆದಿರುತ್ತವೆ. ಗ್ರಾಹಕರ ಹಿತದೃಷ್ಟಿಯಿಂದ ಹೊಟೇಲ್‍ಗಳನ್ನು ಮುಚ್ಚುವುದಿಲ್ಲ ಎಂದು ಹೊಟೇಲ್ ಮಾಲಕರ ಸಂಘ ಹೇಳಿದೆ. ಆದರೂ ಪರಿಸ್ಥಿತಿ ಅನುಗುಣವಾಗಿ ಈ ಸೇವೆಗಳಲ್ಲಿ ಬದಲಾವಣೆ ಸಾಧ್ಯತೆ ಇದೆ.

ಇನ್ನು, ಸಾರಿಗೆ ನಿಗಮಗಳ ಸಿಬ್ಬಂದಿ ಬಂದ್‍ಗೆ ನೈತಿಕ ಬೆಂಬಲ ವ್ಯಕ್ತಪಡಿಸಿದ್ದಾರೆ. ಆದರೆ, ಕೆಲಸಕ್ಕೆ ಗೈರಾಗಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಸಂಘದ ಪ್ರಮುಖರು ತಿಳಿಸಿದ್ದಾರೆ. ಮತ್ತೊಂದೆಡೆ ನಗರ ಮತ್ತು ಸಾರಿಗೆ ಸಂಸ್ಥೆ ಬಸ್‍ಗಳು ಎಂದಿನಂತೆ ಸಂಚರಿಸಲಿವೆ ಎಂದು ಸರಕಾರದ ಮೂಲಗಳು ಹೇಳಿವೆ.

ಖಾಸಗಿ ವಾಹನಗಳ ಚಾಲಕರ ಸಂಘ ಸೇರಿದಂತೆ ಹಲವು ಸಂಘಟನೆಗಳು ಬಂದ್‍ಗೆ ಬೆಂಬಲ ವ್ಯಕ್ತಪಡಿಸಿರುವುದರಿಂದ ಟ್ಯಾಕ್ಸಿ ಮತ್ತು ಆಟೊ ಸಂಚಾರದಲ್ಲಿ ವ್ಯತ್ಯಯವಾಗುವ ಸಂಭವವಿದೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಜತೆ ಸೆ.25ರಂದು ನಡೆದ ಮಾತುಕತೆ ವಿಫಲವಾಗಿರುವ ಹಿನ್ನೆಲೆ ರಾಜ್ಯದ 110ಕ್ಕೂ ಅಧಿಕ ಜನಪರ ಹೋರಾಟದ ಸಂಘಟನೆಗಳು ಈ ಕರ್ನಾಟಕ ಬಂದ್ ಹೋರಾಟದಲ್ಲಿ ದುಮುಕಿವೆ. ಜತೆಗೆ, ಕಾಂಗ್ರೆಸ್, ಜೆಡಿಎಸ್ ಸೇರಿದಂತೆ ಇನ್ನಿತರೆ ರಾಜಕೀಯ ಪಕ್ಷಗಳು ಬೆಂಬಲ ಸೂಚಿಸಿವೆ.

ಸೋಮವಾರ ಬೆಳಗ್ಗೆ 6ಗಂಟೆಯಿಂದಲೇ ಶಾಂತಿಯುತ ಸ್ವಯಂಪ್ರೇರಣೆಯ ಬಂದ್ ನಡೆಯುತ್ತದೆ. ಪ್ರಮುಖವಾಗಿ ಬೆಂಗಳೂರಿನ ಪುರಭವನ ಬಳಿ ಬೆಳಗ್ಗೆ 10 ಗಂಟೆಗೆ ಜಮಾಯಿಸಿ, ಮೈಸೂರು ಬ್ಯಾಂಕ್ ವೃತ್ತದವರೆಗೂ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಿದ್ದೇವೆ ಎಂದು ಐಕ್ಯ ಸಮಿತಿಯ ಪ್ರಮುಖರಾದ ಕುರುಬೂರು ಶಾಂತಕುಮಾರ್ ‘ವಾರ್ತಾಭಾರತಿ’ಗೆ ತಿಳಿಸಿದರು.

ಬಂದ್ ಹಿನ್ನೆಲೆಯಲ್ಲಿ ಅಹಿತಕರ ಘಟನೆಗಳು ನಡೆಯದಂತೆ ವ್ಯಾಪಕ ಬಂದೋಬಸ್ತ್ ಮಾಡಲಾಗಿದೆ ಎಂದು ಪೊಲೀಸ್ ಮೂಲಗಳು ಹೇಳಿವೆ.

ಬೈಕ್ ರ‍್ಯಾಲಿ: ರಾಜ್ಯ ರೈತ ಸಂಘದ ಅಧ್ಯಕ್ಷ ಗಿರೀಶ್ ಗೌಡ ಅವರ ನೇತೃತ್ವದಲ್ಲಿ ಬೆಳಗ್ಗೆ 9ಗಂಟೆಗೆ ಇಲ್ಲಿನ ಸುಮ್ನಳ್ಳಿ ವೃತ್ತ, ಮಾಗಡಿ ರಸ್ತೆ ಮಾರ್ಗವಾಗಿ ಪುರಭವನದವರೆಗೂ ಬೃಹತ್ ಬೈಕ್ ರ‍್ಯಾಲಿ ಹಮ್ಮಿಕೊಳ್ಳಲಾಗಿದೆ.

ಪರಿಸ್ಥಿತಿ ಅವಲೋಕಿಸಿ ತೀರ್ಮಾನ

ಸಾರಿಗೆ ನಿಗಮಗಳ ಸಿಬ್ಬಂದಿ ನೈತಿಕ ಬೆಂಬಲ ನೀಡಿದ್ದರೂ ಬಂದ್‍ನಲ್ಲಿ ಭಾಗವಹಿಸುವುದಿಲ್ಲ. ಗಲಭೆಗಳು ನಡೆದರೆ ಪರಿಸ್ಥಿತಿ ನೋಡಿಕೊಂಡು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಾರಿಗೆ ಇಲಾಖೆ ಮೂಲಗಳು ಹೇಳಿವೆ.

ರಾಜ್ಯ ಬಂದ್: ವಿವಿಧ ಪರೀಕ್ಷೆ ಮುಂದೂಡಿಕೆ

ಕರ್ನಾಟಕ ಬಂದ್ ಹಿನ್ನೆಲೆ ಎಸೆಸೆಲ್ಸಿ ಪೂರಕ ಪರೀಕ್ಷೆ ಸೇರಿದಂತೆ ಸೆ.28ರಂದು ನಡೆಯಬೇಕಿದ್ದ ಎಲ್ಲ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಎಸೆಸೆಲ್ಸಿಯ ವಿಜ್ಞಾನ, ರಾಜ್ಯ ಶಾಸ್ತ್ರ, ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ ವಿಷಯಗಳ ಪರೀಕ್ಷೆ ಸೋಮವಾರ ನಡೆಸಲು ದಿನಾಂಕ ನಿಗದಿಯಾಗಿತ್ತು.

ಅದೇ ರೀತಿ, ಬೆಂಗಳೂರು ವಿಶ್ವವಿದ್ಯಾಲಯ, ವಿಜಯಪುರದ ಮಹಿಳಾ ವಿಶ್ವವಿದ್ಯಾಲಯ ಸೇರಿದಂತೆ ಹಲವು ವಿಶ್ವವಿದ್ಯಾಲಯಗಳಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಗಳು ನಡೆಯಬೇಕಿತ್ತು. ಪರೀಕ್ಷೆಗೆ ಹಾಜರಾಗಲು ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗಬಹುದೆಂಬ ಕಾರಣಕ್ಕೆ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಹಾಗೂ ವಿಶ್ವವಿದ್ಯಾಲಯಗಳು ತಿಳಿಸಿವೆ.

ಏನೇನಿರುತ್ತದೆ?

* ಹಾಲು, ತರಕಾರಿ ಹಾಗೂ ದಿನಸಿ ಅಂಗಡಿಗಳು

* ಆಸ್ಪತ್ರೆಗಳು, ಔಷಧ ಅಂಗಡಿಗಳು, ದಿನಪತ್ರಿಕೆ

* ಹೋಟೆಲ್‍ಗಳು, ಮೆಟ್ರೊ ರೈಲು, ವಿಮಾನ ಸೇವೆ

ಏನಿರುವುದಿಲ್ಲ?

* ಆಟೊ–ಟ್ಯಾಕ್ಸಿ ಸೇವೆ ಇರುವುದಿಲ್ಲ

* ಬಿಎಂಟಿಸಿ ಕೆಎಸ್ಸಾರ್ಟಿಸಿ ಬಸ್ ಸೇವೆ ಇರಲಿದೆ ಎಂದು ಸರಕಾರ ಹೇಳಿದೆ. ಆದರೆ, ಈ ನಿಗಮಗಳ ನೌಕರರ ಸಂಘ ಬಂದ್ ಬೆಂಬಲ ವ್ಯಕ್ತಪಡಿಸಿರುವುದರಿಂದ ವ್ಯತ್ಯಯವಾಗುವ ಸಾಧ್ಯತೆ ಇದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X