Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಆರ್ಮೇನಿಯ, ಅಝರ್‌ಬೈಜಾನ್ ನಡುವೆ ಯುದ್ಧ...

ಆರ್ಮೇನಿಯ, ಅಝರ್‌ಬೈಜಾನ್ ನಡುವೆ ಯುದ್ಧ ಸ್ಫೋಟ

ವಾರ್ತಾಭಾರತಿವಾರ್ತಾಭಾರತಿ27 Sept 2020 10:01 PM IST
share
ಆರ್ಮೇನಿಯ, ಅಝರ್‌ಬೈಜಾನ್ ನಡುವೆ ಯುದ್ಧ ಸ್ಫೋಟ

ಯೆರೆವಾನ್ (ಆರ್ಮೇನಿಯ), ಸೆ. 27: ಆರ್ಮೇನಿಯ ಮತ್ತು ಅಝರ್‌ಬೈಜಾನ್ ದೇಶಗಳ ಸೇನೆಗಳ ನಡುವೆ ವಿವಾದಾಸ್ಪದ ನಗೊರ್ನೊ-ಕರಬಾಖ್ ವಲಯದಲ್ಲಿ ರವಿವಾರ ಸಂಘರ್ಷ ಸ್ಫೋಟಿಸಿದೆ. ಎರಡೂ ಕಡೆಗಳಲ್ಲಿ ಸೈನಿಕರು ಮತ್ತು ನಾಗರಿಕರು ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಅಝರ್‌ಬೈಜಾನ್ ವಾಯು ಮತ್ತು ಫಿರಂಗಿ ದಾಳಿ ನಡೆಸಿದೆ ಎಂದು ಆರ್ಮೇನಿಯ ಆರೋಪಿಸಿದೆ. ಬಳಿಕ ಅದು ದೇಶದಲ್ಲಿ ಸೇನಾಡಳಿತವನ್ನು ಘೋಷಿಸಿತು ಹಾಗೂ ಸೇನಾ ಜಮಾವಣೆಗೆ ಆದೇಶ ನೀಡಿತು.

ಸಂಘರ್ಷಕ್ಕೆ ಆರ್ಮೇನಿಯವನ್ನು ದೂರಿರುವ ಅಝರ್‌ಬೈಜಾನ್, ಗಡಿಯಲ್ಲಿ ನಡೆಯುತ್ತಿರುವ ಶೆಲ್ ದಾಳಿಗಳಿಗೆ ತಾನು ಪ್ರತಿಕ್ರಿಯೆ ಮಾತ್ರ ನೀಡುತ್ತ್ತಿದ್ದೇನೆ ಎಂದು ಹೇಳಿದೆ.

ಎರಡು ದೇಶಗಳ ನಡುವೆ ನಗೊರ್ನೊ-ಕರಬಾಖ್ ಎಂಬ ವಲಯದ ಒಡೆತನದ ವಿಚಾರದಲ್ಲಿ ಸುದೀರ್ಘಾವಧಿಯಿಂದ ನಡೆದುಕೊಂಡು ಬಂದಿರುವ ಸಂಘರ್ಷವು ಇತ್ತೀಚಿನ ತಿಂಗಳುಗಳಲ್ಲಿ ಸ್ಫೋಟಿಸಿದೆ.

ಆರ್ಮೇನಿಯ ಮತ್ತು ಅಝರ್‌ಬೈಜಾನ್ ದೇಶಗಳೆರಡೂ ಸೋವಿಯತ್ ಒಕ್ಕೂಟದ ಭಾಗಗಳಾಗಿದ್ದವು. 1991ರಲ್ಲಿ ಸೋವಿಯತ್ ಒಕ್ಕೂಟ ಕುಸಿದ ಬಳಿಕ ಅವುಗಳು ಸ್ವತಂತ್ರ ದೇಶಗಳಾದವು.

ನಗೊರ್ನೊ-ಕರಬಾಖ್‌ಗಾಗಿ ಎರಡು ದೇಶಗಳು ಅಂದಿನಿಂದಲೂ ಸಂಘರ್ಷದಲ್ಲಿ ತೊಡಗಿವೆ. ಮೂರು ದಶಕಗಳಾದರೂ ವಿವಾದ ಬಗೆಹರಿದಿಲ್ಲ.

ಈ ವಲಯವು ಅಝರ್‌ಬೈಜಾನ್‌ನ ಭಾಗವಾಗಿದೆ, ಆದರೆ ಆರ್ಮೇನಿಯನ್ ಜನಾಂಗೀಯರ ನಿಯಂತ್ರಣದಲ್ಲಿದೆ ಎಂಬುದಾಗಿ ಅಂತರ್‌ರಾಷ್ಟ್ರೀಯ ಸಮುದಾಯ ಮಾನ್ಯ ಮಾಡಿದೆ.

► ರಕ್ತಸಿಕ್ತ ಇತಿಹಾಸ

1990ರ ದಶಕದಲ್ಲಿ ನಡೆದ ಯುದ್ಧದಲ್ಲಿ ಆರ್ಮೇನಿಯನ್ ಜನಾಂಗೀಯ ಪ್ರತ್ಯೇಕತಾವಾದಿಗಳು ನಗೋರ್ನಿ-ಕರಬಾಖ್ ವಲಯವನ್ನು ಅಝರ್‌ಬೈಜಾನ್‌ನಿಂದ ವಶಪಡಿಸಿಕೊಂಡಿದ್ದರು. ಅಂದಿನ ಯುದ್ಧದಲ್ಲಿ 30,000ಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದರು.

2016ರ ಎಪ್ರಿಲ್‌ನಲ್ಲಿ ಅಲ್ಲಿ ಮತ್ತೊಮ್ಮೆ ಭೀಕರ ಸಂಘರ್ಷ ನಡೆದಿದ್ದು, ಸುಮಾರು 110 ಮಂದಿ ಹತರಾಗಿದ್ದರು. ನಗೋರ್ನಿ-ಕರಬಾಖ್ ಭೂಭಾಗಕ್ಕಾಗಿ ಈ ವರ್ಷದ ಜುಲೈ ತಿಂಗಳಲ್ಲೂ ಸಂಘರ್ಷ ನಡೆದಿದ್ದು, ಕನಿಷ್ಠ 16 ಮಂದಿ ಮೃತಪಟ್ಟಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X