Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬೆಳ್ತಂಗಡಿ : ವಿವಿಧ ಸಂಘಟನೆಗಳ...

ಬೆಳ್ತಂಗಡಿ : ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ28 Sept 2020 10:11 PM IST
share
ಬೆಳ್ತಂಗಡಿ : ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ

ಬೆಳ್ತಂಗಡಿ :  ರೈತ ವಿರೋಧಿ, ಕಾರ್ಮಿಕ ವಿರೋಧಿಯಾಗಿ ಗೋಮುಖ ವ್ಯಾಘ್ರನಂತೆ ವರ್ತಿಸುವ ಬಿಜೆಪಿ ಸರಕಾರದ ನಿಜ ಬಣ್ಣ ಈಗ ಬಯಲಾ ಗುತ್ತಿದೆ ಎಂದು ಮಾಜಿ ಸಚಿವರೂ ಕಾಂಗ್ರೆಸ್ ನ ಹಿರಿಯ ಮುಖಂಡ ಗಂಗಾಧರ ಗೌಡ ಅವರು ಹೇಳಿದರು.

ಅವರು ಇಂದು ಬೆಳ್ತಂಗಡಿ ಯಲ್ಲಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ರೈತ ವಿರೋಧಿ ಮಸೂದೆಗಳನ್ನು ತರುತ್ತಿರುವ ಬಿಜೆಪಿ ಸರಕಾರಗಳ ವಿರುದ್ಧ ನಡೆಸಿದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು.

ಉಳುವವನೇ ಹೊಲದೊಡೆಯ ಎಂದು ಭೂಸುದರಣಾ ಕಾಯ್ದೆ ಜಾರಿ ಮಾಡಿದ ಕಾಂಗ್ರೇಸನ ನೀತಿಯನ್ನು ಈ ಬಿಜೆಪಿ ಸಂಘ ಪರಿವಾರಗಳು ಯಾವತ್ತೂ ಒಪ್ಪಿಕೊಳ್ಳಲಿಲ್ಲ. ಅಂದು ದೇವರಾಜ ಅರಸು  ಅವರು ಉಳುವವನೇ ಹೊಲದಡೆಯ ಎಂದಿದ್ದರೆ ಇಂದು ಬಿಜೆಪಿ ಉಳ್ಳವನಿಗೆ ಹೊಲ ಎಂದು ಬಡವರ ಭೂಮಿ ಕಸಿಯಲು ಹೊರಟಿದೆ. ಅಂದು ಭೂಮಿ ಪಡೆದ ರೈತರ ಮಕ್ಕಳಿಂದು ಅಂದಿನ ನೋವು ಕಷ್ಟಗಳನ್ನು ತಿಳಿಯದೇ, ಕೋಮುವಾದದ ವಿಷ ಬೀಜವನ್ನುಣ್ಣಿಸಿ ರೈತರಿಗೆ ಭೂಮಿ ಸಿಗಲು ವಿರೋಧವಿದ್ದ ಸಂಘ ಪರಿವಾರದ ಜೊತೆ ಸೇರುವಂತೆ ಮಾಡಿಕೊಂಡು ಇಂದು ರೈತರ ವಿರೋಧಿಯಾಗಿ ಕಾನೂನು ತಿದ್ದುಪಡಿ ಮಾಡುತ್ತಿದೆ ಎಂದು ಟೀಕಿಸಿದರು.

ಬಿಜೆಪಿ ಸರಕಾರದ ವಿರುದ್ಧ ರೈತಕಾರ್ಮಿಕರ ಆಂದೋಲನ ನಡೆಯಬೇಕು ಎಂದರು. ರಾಜ್ಯದಲ್ಲಿ ಬಿಜೆಪಿ ಸರಕಾರ ಆಧಿಕಾರಕ್ಕೆ ಬಂದಿರುವುದು ಜನರ ಮತಗಳಿಂದಲ್ಲ ಹಣದ ಮದದಿಂದಾಗಿದೆ. ಶಾಸಕರನ್ನು ಖರೀಧಿಸಿ ಅಧಿಕಾರಕ್ಕೆ ಬಂದಿರುವ ಸರಕಾರ ಅವರ ಪರವಾಗಿಯೇ ಕೆಲಸ ಮಾಡುತ್ತಿದೆ ಎಂದರು.

ಪ್ರಾಸ್ತಾವಿಕವಾಗಿ ಮಾತಾಡಿದ ಕಾರ್ಮಿಕ ಮುಖಂಡರಾದ ನ್ಯಾಯವಾದಿ ಬಿ.ಎಂ.ಭಟ್ ಬಿಜೆಪಿ ಸರಕಾರ ಇಂದು ಭೂಸುಧಾರಣೆಗೆ ತಿದ್ದುಪಡಿ ತಂದು ಬಡ ರೈತರ ಕೈಯಿಂದ ಭೂಮಿ ಕಿತ್ತುಕೊಳ್ಳಲು ಹಾಗೂ ಗುತ್ತಿಗೆ ಕೃಷಿ ಪದ್ಧತಿ ಮೂಲಕ 5 ಎಕ್ರೆ ಒಳಗಿನ ರೈತರ ಭೂಮಿಯನ್ನು ಕಾರ್ಪರೇಟ್ ಕಂಪೆನಿಗಳು ಲೀಸಿಗೆ ಪಡೆಯಲು ಅನುವು ಮಾಡಿಕೊಟ್ಟಿದೆ ಎಂದರು.

ರೈತ ಸಂಘದ ಜಿಲ್ಲಾಧ್ಯಕ್ಷರಾದ ಸುರೇಶ್ ಭಟ್ ಸವಣಾಲು ಮಾತಾಡುತ್ತಾ ರೈತರಿಗೆ ಮರಣ ಶಾಸನ ಬರೆಯಲು ಹೊರಟ ಬಿಜೆಪಿಯ ಮರಣ ಶಾಸನವನ್ನು ದೇಶದ ರೈತ ಕಾರ್ಮಿಕರು ಬರೆಯಲಿದ್ದಾರೆ ಎಂದರು. ವಿದ್ಯುತ್ ಖಾಸಗೀಕರಣದಿಂದ ರೈತ ಕೃಷಿಗೆ ಉಚಿತ ವಿದ್ಯುತ್ ಸೌಲಭ್ಯದಿಂದ ವಂಚಿತರಾಗುವಂತೆ ಮಾಡಿದ ಬಿಜೆಪಿ ಸರಕಾರವನ್ನು ತರಾಟೆಗೆ ತೆಗೆದುಕೊಂಡರು.  ರೈತ ಮುಖಂಡ ಶ್ಯಾಮರಾಜ್ ಪಟ್ರಮೆ ಸ್ವಾಗತಿಸಿ ಕೊನೆಗೆ ಕಾರ್ಮಿಕ ಮುಖಂಡರಾದ ಎಲ್ ಮಂಜುನಾಥ್ ವಂದಿಸಿದರು. ಈ ಸಂದರ್ಭ ಪ್ರತಿಭಟನಾಕಾರರು ಕರ್ನಾಟಕ ಬಂದ್ ಬೆಂಬಲಿಸಿ ಬೆಳ್ತಂಗಡಿ ನಗರದಲ್ಲಿ ರಸ್ತೆ ತಡೆ ಮಾಡಿದರು. ಪೊಲೀಸರು ತರುವಾಯ ತೆರವುಗೊಳಿಸಿದರು.

ಪ್ರತಿಭಟನೆಯಲ್ಲಿ ಪ್ರದೇಶ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷರಾದ ರಂಜನ್ ಗೌಡ, ಜಿಲ್ಲಾ ಪಂಚಾಯತು ಸದಸ್ಯರುಗಳಾದ ದರಣೇಂದ್ರ ಕುಮಾರ್, ಶೇಖರ ಕುಕ್ಕೇಡಿ, ನಮಿತ, ತಾಲೂಕು ಪಂಚಾಯತ್ ಸದಸ್ಯರಾದ ವಿಟಿ ಸಭಾಸ್ಟೀನ್, ಎಪಿಎಂಸಿ ಸದಸ್ಯ ಕೇಶವ ಗೌಡ, ಕಾಂಗ್ರೆಸ್ ಪಕ್ಷದ ಮುಖಂಡರುಗಳಾದ ಪ್ರವೀಣ್ ಬಿ.ಜಿ, ಅಶ್ರಫ್ ನೆರಿಯ, ದಯಾನಂದ ಬೆಳಾಲು, ಅನಿಲ್ ಪೈ,  ಮನೋಹರ, ಜಗದೀಶ್, ಗಫೂರ್ ಅಬ್ದುಲ್ ರಹಿಮಾನ್ ಪಡ್ಪು, ರಾಜ್ಯ ರೈತ ಸಂಘದ ತಾಲೂಕು ಮುಖಂಡರು, ಕಾರ್ಮಿಕ ಮುಖಂಡರುಗಳಾದ ಲೋಕೇಶ್, ಜಯರಾಮ ಮಯ್ಯ, ಜಯಶ್ರೀ, ಪುಷ್ಪಾ, ನೆಬಿಸಾ, ರಾಮಚಂದ್ರ, ಕುಮಾರಿ, ಧನಂಜಯ ಗೌಡ,  ಈಶ್ವರಿ, ಶೇಖರ ವಿಜಿ, ಗಣೇಶ ಪ್ರಸಾದ್ ಮೊದಲಾದವರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X