Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಒಳಚರಂಡಿಯಲ್ಲಿ ಸಮಸ್ಯೆ: ಬಾಂಬ್...

ಒಳಚರಂಡಿಯಲ್ಲಿ ಸಮಸ್ಯೆ: ಬಾಂಬ್ ನಿಷ್ಕ್ರಿಯ ದಳಕ್ಕೆ ಕರೆ ಮಾಡಿದ ಜನರು!

ಕಾರಣವೇನು ಗೊತ್ತಾ?

ವಾರ್ತಾಭಾರತಿವಾರ್ತಾಭಾರತಿ29 Sept 2020 11:59 PM IST
share
ಒಳಚರಂಡಿಯಲ್ಲಿ ಸಮಸ್ಯೆ: ಬಾಂಬ್ ನಿಷ್ಕ್ರಿಯ ದಳಕ್ಕೆ ಕರೆ ಮಾಡಿದ ಜನರು!

ಬಿಜಾಪುರ: ನಗರದ ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆಯ ಬಾಂಬ್ ನಿಷ್ಕ್ರಿಯ ದಳಕ್ಕೆ ಇಲ್ಲಿನ ನಿವಾಸಿಗಳಿಂದ ಇತ್ತೀಚೆಗೆ ವಿಚಿತ್ರ ಮನವಿಯೊಂದು ಬಂದಿತ್ತು. ಸಾಮಾನ್ಯವಾಗಿ ಬಾಂಬ್ ಅಥವಾ ಸ್ಫೋಟಕ ವಸ್ತುಗಳ ಪತ್ತೆ ಹಾಗು ಗಣ್ಯರ ಸುರಕ್ಷತೆಯ ಮುನ್ನೆಚ್ಚರಿಕೆ ವಹಿಸುವ ಕೆಲಸ ಮಾಡುವ ಈ ಬಾಂಬ್ ನಿಷ್ಕ್ರಿಯ ದಳಕ್ಕೆ ಇಲ್ಲಿನ ನಿವಾಸಿಗಳು ಕರೆ ಮಾಡಿದ್ದು, ಯಾವುದೇ ಸ್ಫೋಟಕವನ್ನು ಪತ್ತೆ ಹಚ್ಚುವುದಕ್ಕಲ್ಲ, ಬದಲಾಗಿ, ನಗರದ ಒಳಚರಂಡಿಯ ಮ್ಯಾನ್ ಹೋಲ್ ಗಳನ್ನು ಪತ್ತೆಹಚ್ಚುವುದಕ್ಕಾಗಿ.

ಸಾಮಾಜಿಕ ಕಾರ್ಯಕರ್ತ ಅಝೀಮ್ ಇನಾಂದಾರ್ ಅವರ ಸಹಾಯದಿಂದ ನಗರದ ಮೂರು ಪ್ರದೇಶಗಳ ನಿವಾಸಿಗಳು ಸಶಸ್ತ್ರ ಮೀಸಲು ಪೊಲೀಸ್ ಪಡೆಗೆ ಈ ವಿಚಿತ್ರ ಮನವಿ ಸಲ್ಲಿಸಿದ್ದರು.

ನಾಲ್ಕು ಪ್ರದೇಶಗಳನ್ನು ಸಂಪರ್ಕಿಸುವ ಒಳಚರಂಡಿ ವ್ಯವಸ್ಥೆಯ ಮ್ಯಾನ್ ಹೋಲ್ ಸಮಸ್ಯೆಯೇ ಬಾಂಬ್ ನಿಷ್ಕ್ರಿಯ ದಳಕ್ಕೆ ಈ ಮನವಿ ಹೋಗಲು ಕಾರಣ.

ಪೈಪ್ ಲೈನ್ ನಲ್ಲಿ ಬ್ಲಾಕ್ ಸಮಸ್ಯೆಯಿಂದಾಗಿ ನಗರದ ಹಳ್ಳಿ ಕಾಲನಿ, ಟಿಪ್ಪು ನಗರ, ಅಲಿಕ ರೋಝ, ಬಾಲ್ಸಿಂಗ್ ಕಾಲನಿ ಮತ್ತು ನೌಭಾಗ್ ನ ಸುಮಾರು 2000 ಮನೆಗಳಿಗೆ ನೀರು ನುಗ್ಗುತ್ತಿದ್ದು, ಇದರಿಂದ ನಿವಾಸಿಗಳಿಗೆ ಭಾರೀ ಸಮಸ್ಯೆಯಾಗಿತ್ತು ಎಂದು ಅಝೀಮ್ ಇನಾಂದಾರ್ ಹೇಳುತ್ತಾರೆ.

ಒಳಚರಂಡಿಗೆ ಪೈಪ್ ಲೈನ್ ಅಳವಡಿಸಿದ ನಂತರ ಗುತ್ತಿಗೆದಾರ ಮ್ಯಾನ್ ಹೋಲ್ ಎತ್ತರವನ್ನು ರಸ್ತೆಯ ಎತ್ತರಕ್ಕೆ ಸಮನಾಗಿ ಮಾಡದೆ ಅದನ್ನು ಮುಚ್ಚಿದ್ದಾರೆ. ಮ್ಯಾನ್ ಹೋಲ್ ಗಳನ್ನು ಗುರುತಿಸಲು ಅವುಗಳನ್ನು ರಸ್ತೆಗಳಷ್ಟೇ ಎತ್ತರಕ್ಕೆ ಏರಿಸಲಾಗಿದೆಯೇ ಎಂದು ಪರೀಕ್ಷಿಸುವುದು ಮಹಾನಗರಪಾಲಿಕೆ ಕೆಲಸವಾಗಿತ್ತು. ಆದರೆ ಪಾಲಿಕೆ ಅದನ್ನು ಮಾಡದ ಕಾರಣ ಗುತ್ತಿಗೆದಾರ ಮ್ಯಾನ್ ಹೋಲ್ ಗಳು ಕಾಣಿಸದ ಹಾಗೆ ಮುಚ್ಚಿದ್ದಾರೆ ಎಂದವರು ಆರೋಪಿಸಿದ್ದಾರೆ.

ಇದರಿಂದಾಗಿ ಮ್ಯಾನ್ ಹೋಲ್ ಗಳನ್ನು ಗುರುತಿಸುವುದು ಕಷ್ಟಸಾಧ್ಯವಾದಾಗ ಮೆಟಲ್ ಡಿಟೆಕ್ಟರ್ ಗಾಗಿ ಬಾಂಬ್ ಪತ್ತೆ ದಳಕ್ಕೆ ಕರೆ ಮಾಡಲಾಗಿದೆ. ಕೊನೆಗೆ ಮೆಟಲ್ ಡಿಟೆಕ್ಟರ್ ನ ಸಹಾಯದಿಂದ 2 ಮ್ಯಾನ್ ಹೋಲ್ ಗಳನ್ನು ಗುರುತಿಸಲಾಗಿದ್ದರೆ, ಒಂದು ಮ್ಯಾನ್ ಹೋಲನ್ನು ಗುರುತಿಸಲು ಸಾಧ್ಯವಾಗಿಲ್ಲ.

ಈ ಬಗ್ಗೆ ಪ್ರತಿಕ್ರಿಯಿಸಿದ ಸಿಟಿ ಕಾರ್ಪೊರೇಶನ್ ಕಮಿಷನರ್ ಹರ್ಷ ಶೆಟ್ಟಿ, “ಈಗಾಗಲೇ ಮ್ಯಾನ್ ಹೋಲ್ ಗಳನ್ನು ಗುರುತಿಸಲಾಗಿದೆ. ಹಿಂದಿನ ಅಧಿಕಾರಿಗಳು ಮ್ಯಾನ್ ಹೋಲ್ ಗಳು ಕಾಣಿಸುತ್ತಿದೆಯೇ ಎಂದು ಪರೀಕ್ಷಿಸಬೇಕಾಗಿತ್ತು. ಈಗ ನಾವು ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುತ್ತೇವೆ” ಎಂದಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X