Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದಂಡ ರಹಿತ ಪಾವತಿಗೆ ಮತ್ತೆ 1 ತಿಂಗಳ...

ದಂಡ ರಹಿತ ಪಾವತಿಗೆ ಮತ್ತೆ 1 ತಿಂಗಳ ಕಾಲಾವಕಾಶ: ಮೇಯರ್ ದಿವಾಕರ ಪಾಂಡೇಶ್ವರ

ಮನಪಾ ಆಸ್ತಿ ತೆರಿಗೆ

ವಾರ್ತಾಭಾರತಿವಾರ್ತಾಭಾರತಿ30 Sept 2020 2:01 PM IST
share
ದಂಡ ರಹಿತ ಪಾವತಿಗೆ ಮತ್ತೆ 1 ತಿಂಗಳ ಕಾಲಾವಕಾಶ: ಮೇಯರ್ ದಿವಾಕರ ಪಾಂಡೇಶ್ವರ

ಮಂಗಳೂರು, ಸೆ.30: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪಾವತಿಯನ್ನು ದಂಡ ರಹಿತವಾಗಿ ಪಾವತಿಸಲು ಮತ್ತೆ ಒಂದು ತಿಂಗಳ ಕಾಲಾವಕಾಶ ನೀಡಲಾಗುತ್ತಿದೆ ಎಂದು ಮೇಯರ್ ದಿವಾಕರ ಪಾಂಡೇಶ್ವರ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿಂದು ಈ ಮಾಹಿತಿ ನೀಡಿದ ಅವರು, ಆಸ್ತಿ ತೆರಿಗೆ ಪಾವತಿಗೆ ಕೊರೋನ ಹಿನ್ನೆಲೆಯಲ್ಲಿ ಸೆಪ್ಟಂಬರ್ 30ರವರೆಗೆ ನೀಡಲಾಗಿದ್ದ ದಂಡ ರಹಿತ ಪಾವತಿಯ ಅವಕಾಶವನ್ನು ಅಕ್ಟೋಬರ್ ಅಂತ್ಯದವರೆಗೆ ವಿಸ್ತರಿಸಲಾಗಿದೆ. ನವೆಂಬರ್ 1ರಿಂದ ದಂಡ ವಿಧಿಸಲಾಗುವುದು ಎಂದು ಹೇಳಿದರು.

ಮನಪಾ ಆಯುಕ್ತ ಅಕ್ಷಯ್ ಶ್ರೀಧರ್‌ ಅವರು ಈ ಕುರಿತು ಮಾಹಿತಿ ನೀಡಿ, ಸ್ವಯಂ ಘೋಷಿತ ಪದ್ಧತಿಯಲ್ಲಿ ಆಸ್ತಿ ತೆರಿಗೆ ವ್ಯವಸ್ಥೆಯಿದೆ. ಕಟ್ಟಡ ಮಾಲಕರು, ಕಟ್ಟಡ ನಿರ್ಮಾಣಕ್ಕೆ ಬಳಸಿದ ವಸ್ತುಗಳು ಹಾಗೂ ವಿಸ್ತೀರ್ಣವನ್ನು ನಿಖರವಾಗಿ ನೀಡಿದ್ದಲ್ಲಿ ಆಸ್ತಿ ತೆರಿಗೆಯ ಮಾಪನ ಸರಿಯಾಗಿ ನಡೆಯುತ್ತದೆ. ಆದರೆ ಕೆಲವರು ಆಸ್ತಿ ತೆರಿಗೆಯಲ್ಲಿ ತಪ್ಪು ಮಾಹಿತಿ ನೀಡಿ ಆಸ್ತಿ ತೆರಿಗೆ ಬಗ್ಗೆ ವಂಚನೆ ಮಾಡಿರುವುದು ಕಂಡು ಬರುತ್ತಿದೆ. ಈ ಬಗ್ಗೆ ಸಾರ್ವಜನಿಕರು ಗಮನ ಹರಿಸಬೇಕು ಎಂದು ಸಲಹೆ ನೀಡಿದರು.

ಪಾಲಿಕೆ ವ್ಯಾಪ್ತಿಯಲ್ಲಿ ಎಲ್ಲೆಂದರಲ್ಲಿ ಜಾಹೀರಾತು, ಕಟೌಟ್, ಫ್ಲೆಕ್ಸ್‌ಗಳನ್ನು ಪರವಾನಿಗೆ ರಹಿತವಾಗಿ ಹಾಕಲು ಅವಕಾಶ ಇಲ್ಲವಾಗಿದ್ದು, ಈಗಾಗಲೇ ಈ ಬಗ್ಗೆ ಕಾರ್ಯಾಚರಣೆ ಆರಂಭಿಸಲಾಗಿದೆ. ಸಾರ್ವಜನಿಕರು ಅಕ್ರಮವಾಗಿ ಹಾಕಿರುವ ಫ್ಲೆಕ್ಸ್, ಕಟೌಟ್‌ಗಳ ಬಗ್ಗೆ ಮಾಹಿತಿ ನೀಡಿದ್ದಲ್ಲಿ ಕ್ರಮ ವಹಿಸಲಾಗುವುದು ಎಂದು ಮನಪಾ ಆಯುಕ್ತ ಅಕ್ಷಯ್ ಶ್ರೀಧರ್ ತಿಳಿಸಿದರು.

ಗೋಷ್ಠಿಯಲ್ಲಿ ಮನಪಾ ಉಪ ಆಯುಕ್ತ ಡಾ. ಸಂತೋಷ್ ಕುಮಾರ್, ಕಂದಾಯ ಅಧಿಕಾರಿ ಬಿನಯ್, ಪರಿಸರ ಅಭಿಯಂತರ ಮಧು ಉಪಸ್ಥಿತರಿದ್ದರು.

ಉದ್ದಿಮೆ ಪರವಾನಿಗೆ ಆನ್‌ಲೈನ್ : ಅ.2ರಂದು ಪ್ರಾಯೋಗಿಕ ಚಾಲನೆ

ಪಾಲಿಕೆ ವ್ಯಾಪ್ತಿಯ ಎಲ್ಲಾ ಉದ್ದಿಮೆದಾರರಿಗೆ ವ್ಯಾಪಾರ ಪರವಾನಿಗೆಯನ್ನು ಆನ್‌ಲೈನ್ ಮೂಲಕ ನೀಡಲು ಸಾಫ್ಟ್‌ವೇರ್ ವ್ಯವಸ್ಥೆಯನ್ನು ಅಭಿವೃದ್ಧಿ ಪಡಿಸಲಾಗಿದೆ. ಕಳೆದ ಮನಪಾ ಸಭೆಯಲ್ಲಿ ಇದಕ್ಕೆ ಮಂಜೂರಾತಿ ದೊರಕಿದ್ದು, ಅಕ್ಟೋಬರ್ 2ರಿಂದ ಪ್ರಾಯೋಗಿಕ ಚಾಲನೆ ನೀಡಲಾಗುವುದು. ಉದ್ದಿಮೆದಾರರಿಗೆ ಹಾಗೂ ಅಧಿಕಾರಿಗಳಿಗೆ ವ್ಯಾಪಾರ ಪರವಾನಿಗೆಯ ಸಾಫ್ಟ್‌ವೇರ್ ತರಬೇತಿಯನ್ನು ಮುಂದಿನ ಒಂದು ವಾರದೊಳಗೆ ನಡೆಸಲಾಗುವುದು. ಸಾಫ್ಟ್‌ವೇರ್ ವ್ಯವಸ್ಥೆಯು ಹೊಸ ವ್ಯಾಪಾರ ಪರವಾನಿಗೆಗೆ ಅರ್ಜಿ ಸಲ್ಲಿಸುವುದು, ವ್ಯಾಪಾರ ಪರವಾನಿಗೆಯನ್ನು ನವೀಕರಿಸುವುದು, ವ್ಯಾಪಾರ ಪವಾನಿಗೆಯನ್ನು ರದ್ದುಪಡಿಸುವುದು, ದಾಖಲಾತಿಗಳನು ಹಾಗೂ ಉದ್ದಿಮೆಯ ಫೋಟೊ ಅಪ್‌ಲೋಡ್ ಮಾಡುವುದು, ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸುವುದು, ವ್ಯಾಪಾರ ಪರವಾನಿಗೆಯನ್ನು ಅನುಮೋದಿಸುವುದು, ವ್ಯಾಪಾರ ಪರವಾನಿಗೆಯನ್ನು ಮುದ್ರಿಸುವುದು, ವೆಬ್ ಪೋರ್ಟಲ್ ಮೂಲಕ ಪರವಾನಿಗೆಯ ಸ್ಥಿತಿಯನ್ನು ಪತ್ತೆಹಚ್ಚುವುದು, ಪ್ರತಿ ಉದ್ದಿಮೆಯನ್ನು ಗುರುತಿಸಲು ಜಿಯೋ ಟ್ಯಾಗಿಂಗ್ ವ್ಯವಸ್ಥೆ ಮೊದಲಾದ ವಿಶೇಷತೆಗಳನ್ನು ಸಾಫ್ಟ್‌ವೇರ್‌ನಲ್ಲಿ ಕಲ್ಪಿಸಲಾಗಿದೆ.

- ಅಕ್ಷಯ್ ಶ್ರೀಧರ್, ಆಯುಕ್ತರು, ಮಂಗಳೂರು ಮಹಾನಗರ ಪಾಲಿಕೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X