Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ಭಾರತದ ಜಾರ್ಜ್ ಫ್ಲಾಯ್ಡ್ ಘಟನೆ’:...

‘ಭಾರತದ ಜಾರ್ಜ್ ಫ್ಲಾಯ್ಡ್ ಘಟನೆ’: ಹತ್ರಸ್ ಯುವತಿಯ ಅತ್ಯಾಚಾರ, ಅಂತ್ಯಕ್ರಿಯೆ ಬಗ್ಗೆ ವಿಪಕ್ಷಗಳ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ30 Sept 2020 4:47 PM IST
share
‘ಭಾರತದ ಜಾರ್ಜ್ ಫ್ಲಾಯ್ಡ್ ಘಟನೆ’: ಹತ್ರಸ್ ಯುವತಿಯ ಅತ್ಯಾಚಾರ, ಅಂತ್ಯಕ್ರಿಯೆ ಬಗ್ಗೆ ವಿಪಕ್ಷಗಳ ಆಕ್ರೋಶ

ಹೊಸದಿಲ್ಲಿ: ಹತ್ರಸ್  ಗ್ರಾಮದ 19 ವರ್ಷದ ದಲಿತ ಯುವತಿಯ ಅತ್ಯಾಚಾರ ಮತ್ತು ಸಾವು ಪ್ರಕರಣಕ್ಕೆ ಸಂಬಂಧಿಸಿ ಯುವತಿಯ  ಅಂತ್ಯಕ್ರಿಯೆಯನ್ನು ಅವಸರವಸರವಾಗಿ ಪೊಲೀಸರು ನಡೆಸಿದ ಕ್ರಮವನ್ನು ಖಂಡಿಸಿರುವ ಸ್ವರಾಜ್ ಇಂಡಿಯಾ ಅಧ್ಯಕ್ಷ ಯೋಗೇಂದ್ರ ಯಾದವ್ ಈ ಘಟನೆಯನ್ನು ಭಾರತದ ‘ಜಾರ್ಜ್ ಫ್ಲಾಯ್ಡ್ ಘಟನೆ’ ಎಂದು ಬಣ್ಣಿಸಿದ್ದಾರೆ.

“ಅಪರಾಧಿಗಳ ಅಂತ್ಯಕ್ರಿಯೆಯನ್ನು ಕೂಡ ಗೌರವದಿಂದ ನಡೆಸಲಾಗುತ್ತದೆ. ಆದರೆ ಇಲ್ಲಿ ಅತ್ಯಾಚಾರ ಸಂತ್ರಸ್ತೆಯ  ಅಂತ್ಯಸಂಸ್ಕಾರವನ್ನು ಪೊಲೀಸರೇ 2.30ಕ್ಕೆ ಕುಟುಂಬ ಸದಸ್ಯರ ಅನುಪಸ್ಥಿಯಲ್ಲಿ ನಡೆಸಿದ್ದಾರೆ. ಆ ಕುಟುಂಬ ದಲಿತ ಸಮುದಾಯಕ್ಕೆ ಸೇರಿಲ್ಲದೇ ಇದ್ದರೆ ಹೀಗಾಗುತ್ತಿತ್ತೇ?, ಇದು ನಾಚಿಕೆಗೇಡಿನ ವಿಷಯ. ನಮ್ಮ ಸ್ವಂತ ಜಾರ್ಜ್ ಫ್ಲಾಯ್ಡ್ ಕ್ಷಣ'' ಎಂದು  ಅಮೆರಿಕಾದಲ್ಲಿ ಕರಿಯ ಜನಾಂಗದ ಜಾರ್ಜ್ ಫ್ಲಾಯ್ಡ್ ಎಂಬವರನ್ನು ಪೊಲೀಸರು ಹತ್ಯೆಗೈದ ಘಟನೆ ಹಾಗೂ ನಂತರದ ಪ್ರತಿಭಟನೆಗಳನ್ನು ಉಲ್ಲೇಖಿಸಿ ಹೇಳಿದ್ದಾರೆ.

ರಾಜ್ಯ ಪೊಲೀಸರ ಕ್ರಮ ಖಂಡಿಸಿರುವ ದಲಿತ ನಾಯಕಿ ಹಾಗೂ ಬಿಎಸ್ಪಿಯ ವರಿಷ್ಠೆ ಮಾಯಾವತಿ, ಪೊಲೀಸರ ಕ್ರಮ ಸಂದೇಹ ಹಾಗೂ ಅಸಮಾಧಾನವನ್ನು ಸೃಷ್ಟಿಸಿದೆ ಎಂದು ಟ್ವೀಟ್ ಮಾಡಿದ್ದಾರೆ. ‘‘ಭೂಗತ ಪಾತಕಿ (ವಿಕಾಸ್ ದುಬೆ)ಗೆ ಕೂಡ ಕುಟುಂಬದ ಸದಸ್ಯರ ಸಮ್ಮುಖದಲ್ಲಿ ಅಂತ್ಯಕ್ರಿಯೆ ನಡೆಸುವ ಮೂಲಭೂತ ಗೌರವವನ್ನು ನೀಡಲಾಗಿದೆ. ಹಾಥರಸ್ ಸಂತ್ರಸ್ತೆಯ ಪೋಷಕರೊಂದಿಗೆ ಈ ರೀತಿ ಅನುಚಿತವಾಗಿ ವರ್ತಿಸಿರುವುದು ಯಾಕೆ? ಒಂದು ವೇಳೆ ಜಾತಿ ಹಾಗೂ ವರ್ಗ ತಾರತಮ್ಯಕ್ಕೆ ಪೇಟೆಂಟ್ ಇಲ್ಲದಿದ್ದರೆ, ಇದೇನು ?’’ ಎಂದು ಪ್ರಶ್ನಿಸಿ ಎಐಎಂಐಎಂನ ಅಧ್ಯಕ್ಷ ಅಸದುದ್ದೀನ್ ಉವೈಸಿ ಟ್ವೀಟ್ ಮಾಡಿದ್ದಾರೆ. ಈ ನಡುವೆ ದಿಲ್ಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್, ಹಾಥ್ರಸ್ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ಸ್ವಯಂಪ್ರೇರಿತವಾಗಿ ವಿಚಾರಣೆ ನಡೆಸುವಂತೆ, ತಪ್ಪೆಸಗಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ, ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ, ಮಹಿಳೆಯರ ಮೇಲಿನ ಅಪರಾಧಗಳನ್ನು ತಡೆಯಲು ಕಠಿಣ ಕಾನೂನು ರೂಪಿಸುವಂತೆ ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೊಬ್ಡೆ ಹಾಗೂ ಇತರ ಉನ್ನತ ನ್ಯಾಯಮೂರ್ತಿಗಳಲ್ಲಿ ಮನವಿ ಮಾಡಿದ್ದಾರೆ.

“ಅತ್ಯಾಚಾರ ಸಂತ್ರಸ್ತೆಯ ಅಂತ್ಯಕ್ರಿಯೆ ನಡೆಸಿದ ರೀತಿ ಅವಮಾನಕಾರಿ ಮತ್ತು ಅನ್ಯಾಯದಿಂದ ಕೂಡಿದೆ. ಭಾರತದ ಪುತ್ರಿಯನ್ನು ಅತ್ಯಾಚಾರಗೈದು ಕೊಲೆಗೈಯ್ಯಲಾಗಿದೆ, ವಾಸ್ತವವನ್ನು ಮುಚ್ಚಿ ಹಾಕಲಾಗಿದೆ ಹಾಗೂ ಅಂತಿಮವಾಗಿ ಅಂತ್ಯಕ್ರಿಯೆ ನಡೆಸುವ ಹಕ್ಕುಗಳನ್ನೂ ಸೆಳೆಯಲಾಗಿದೆ'' ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಿಡಿ ಕಾರಿದ್ದಾರೆ.

ಎಐಎಂಐಎಂ ಅಧ್ಯಕ್ಷ ಅಸಾಸುದ್ದೀನ್ ಒವೈಸಿ ಪ್ರತಿಕ್ರಿಯಿಸಿ ``ವಿಕಾಸ್ ದುಬೆಯಂತಹ ಗ್ಯಾಂಗ್‍ ಸ್ಟರ್ ನ ಅಂತ್ಯಕ್ರಿಯೆ ಕೂಡ  ಕುಟುಂಬ ಸದಸ್ಯರ ಸಮ್ಮುಖದಲ್ಲಿ ನಡೆದಿದೆ. ಆದರೆ ಹತ್ರಸ್ ಸಂತ್ರಸ್ತೆಯ ಕುಟುಂಬವನ್ನು ಏಕೆ ಅವಮಾನಿಸಲಾಯಿತು?  ಇದು ಜಾತಿ ತಾರತಮ್ಯವಲ್ಲದೆ ಮತ್ತಿನ್ನೇನು?'' ಎಂದು ಪ್ರಶ್ನಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X